Homeಅಂತರಾಷ್ಟ್ರೀಯರಿಯಲ್ ಎಸ್ಟೇಟ್ ಉದ್ಯಮಿಯ ಮರಣದಂಡನೆ ಎತ್ತಿಹಿಡಿದ ವಿಯೆಟ್ನಾಂ ನ್ಯಾಯಾಲಯ

ರಿಯಲ್ ಎಸ್ಟೇಟ್ ಉದ್ಯಮಿಯ ಮರಣದಂಡನೆ ಎತ್ತಿಹಿಡಿದ ವಿಯೆಟ್ನಾಂ ನ್ಯಾಯಾಲಯ

- Advertisement -
- Advertisement -

ಹನೋಯಿ: 12 ಬಿಲಿಯನ್ ಡಾಲರ್ ವಂಚನೆ ಪ್ರಕರಣದಲ್ಲಿ ದುರುಪಯೋಗ ಮತ್ತು ಲಂಚದ ಅಪರಾಧದಲ್ಲಿ ಸಿಲುಕಿರುವ ರಿಯಲ್ ಎಸ್ಟೇಟ್ ಉದ್ಯಮಿ ಟ್ರೂಂಗ್ ಮೈ ಲ್ಯಾನ್‌  ವಿರುದ್ಧದ ಮೇಲ್ಮನವಿಯನ್ನು ತಿರಸ್ಕರಿಸಿದ ನಂತರ ವಿಯೆಟ್ನಾಂನ ನ್ಯಾಯಾಲಯವು ವಿಧಿಸಿರುವ ಮರಣದಂಡನೆ ಶಿಕ್ಷೆಯನ್ನು ಮಂಗಳವಾರದಂದು ಮತ್ತೆ ಎತ್ತಿಹಿಡಿದಿದೆ ಎಂದು ರಾಜ್ಯ ಮಾಧ್ಯಮ ವರದಿ ಮಾಡಿದೆ.

ವಿಯೆಟ್ನಾಂನಲ್ಲಿ ದಾಖಲೆಯ ಅತಿದೊಡ್ಡ ಹಣಕಾಸು ವಂಚನೆ ಪ್ರಕರಣದಲ್ಲಿ ರಿಯಲ್ ಎಸ್ಟೇಟ್ ಡೆವಲಪರ್ ವ್ಯಾನ್ ಥಿನ್ ಫಾಟ್ ಹೋಲ್ಡಿಂಗ್ಸ್ ಗ್ರೂಪ್‌ನ ಅಧ್ಯಕ್ಷೆಯಾಗಿರುವ ಲ್ಯಾನ್ ಅವರ ಪಾತ್ರಕ್ಕಾಗಿ ನ್ಯಾಯಾಲಯವು ಇದೇ ಏಪ್ರಿಲ್‌ನಲ್ಲಿ ಅವರಿಗೆ ಮರಣದಂಡನೆ ವಿಧಿಸಿತ್ತು.

ದಕ್ಷಿಣ ಹೋ ಚಿ ಮಿನ್ಹ್ ನಗರದ ಹೈ ಪೀಪಲ್ಸ್ ಕೋರ್ಟ್ ಲ್ಯಾನ್ ಮರಣದಂಡನೆಯನ್ನುಕಡಿತಗೊಳಿಸಲು ಯಾವುದೇ ಆಧಾರಗಳಿಲ್ಲದ ಕಾರಣ ಈ ನಿರ್ಧಾರಕ್ಕೆ ಬಂದಿದೆ ಎಂದು ಆನ್‌ಲೈನ್ ಪತ್ರಿಕೆ VnExpress ವರದಿ ಮಾಡಿದೆ.

ಲ್ಯಾನ್ ಅವರು ವಂಚಿಸಿದ ಹಣದ ಮುಕ್ಕಾಲು ಭಾಗವನ್ನು ಹಿಂದಿರುಗಿಸಲು ಸಾಧ್ಯವಾದರೆ, ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸುವ ಸಾಧ್ಯತೆಯಿದೆ ಎಂದು ವರದಿ ಹೇಳಿದೆ.

“ಲ್ಯಾನ್  ಪ್ರಕರಣ ದೇಶದ ಇತಿಹಾಸದಲ್ಲಿ ಅಭೂತಪೂರ್ವವಾಗಿದೆ ಹಾಗೆಯೇ  ದುರುಪಯೋಗಪಡಿಸಿಕೊಂಡ ಹಣದ ಮೊತ್ತವು ಅಭೂತಪೂರ್ವವಾಗಿ ದೊಡ್ಡದಾಗಿದೆ. ಅದು ಎಷ್ಟೆಂದರೆ ಮರುಪಡೆಯಲಾಗದಷ್ಟು” ಎಂದು ಸರ್ಕಾರಿ ಆನ್‌ಲೈನ್ ಪತ್ರಿಕೆ ಹೇಳಿದೆ.

ಈ ಪ್ರಕರಣವು ಸಮಾಜ, ದೇಶದ ಹಣಕಾಸು ಮಾರುಕಟ್ಟೆ, ಆರ್ಥಿಕತೆಯ ಹಲವು ಅಂಶಗಳ ಮೇಲೆ ಪರಿಣಾಮ ಬೀರಿದೆ ಎಂದು ಅದು ತಿಳಿಸಿದೆ.

ಲ್ಯಾನ್ ತನ್ನ ತಪ್ಪನ್ನು  ಒಪ್ಪಿಕೊಂಡಿರುವುದು, ಪಶ್ಚಾತ್ತಾಪ ಪಡುವುದು ಮತ್ತು ದುರುಪಯೋಗಪಡಿಸಿಕೊಂಡ ಹಣದ ಒಂದು ಭಾಗವನ್ನು ಮರುಪಾವತಿ ಮಾಡುವುದರಿಂದ ಶಿಕ್ಷೆಯಿಂದ ಕೆಲ ರಿಯಾಯತಿ ಪಡೆಯಬಹುದಾಗಿದೆ ಎಂದು ಅವರ ವಕೀಲರ ಹೇಳಿಕೆಯನ್ನು ರಾಜ್ಯ ಮಾಧ್ಯಮವು ಉಲ್ಲೇಖಿಸಿದೆ, ಆದರೆ ಪ್ರಾಸಿಕ್ಯೂಟರ್‌ಗಳು ಇದಕ್ಕೆ ಸಾಕಾಗುವುದಿಲ್ಲ ಎಂದು ಅದು ಹೇಳಿದೆ.

ಲ್ಯಾನ್‌ನ ವಕೀಲರಿಂದ  ಹೆಚ್ಚಿನ ಹೇಳಿಕೆಗಳನ್ನು ಪಡೆಯಲು ಮಾಧ್ಯಮಗಳಿಗೆ ಇಲ್ಲಿಯವರೆಗೂ ಸಾಧ್ಯವಾಗುತ್ತಿಲ್ಲ.

ವಿಯೆಟ್ನಾಂನ ನ್ಯಾಯಾಲಯದಲ್ಲಿ ಮರುವಿಚಾರಣೆಯ ಕಾರ್ಯವಿಧಾನಗಳ ಅಡಿಯಲ್ಲಿ  ಇದನ್ನು ಇನ್ನಷ್ಟು ಪರಿಶೀಲಿಸುವ ಹಕ್ಕನ್ನು ಲ್ಯಾನ್ ಹೊಂದಿದ್ದಾರೆ.

ಠೇವಣಿ ಇರಿಸುವ ದೇಶದ ಅತಿದೊಡ್ಡ ಖಾಸಗಿ ಬ್ಯಾಂಕ್‌ಗಳಲ್ಲಿ ಒಂದಾದ ಸೈಗಾನ್ ಜಾಯಿಂಟ್ ಸ್ಟಾಕ್ ಕಮರ್ಷಿಯಲ್ ಬ್ಯಾಂಕ್ (SCB) ನಲ್ಲಿ  ವಂಚನೆಯ ಕಾರಣಕ್ಕಾಗಿ 2022ರಲ್ಲಿ ಲ್ಯಾನ್ ಅವರ ಬಂಧನ ದೇಶದಲ್ಲಿ ಭಾರೀ ಸಂಚಲನೆಯನ್ನುಂಟು ಮಾಡಿತ್ತು.

ಮರಣದಂಡನೆಯ ಹೊರತಾಗಿಯೂ, ವಂಚನೆ, ಮನಿ ಲಾಂಡರಿಂಗ್ ಮತ್ತು ಅಕ್ರಮ ಗಡಿಯಾಚೆಗಿನ ಹಣ ವರ್ಗಾವಣೆಯ ಮೂಲಕ ಅಪಾರ ಆಸ್ತಿ ಗಳಿಕೆ ಆರೋಪದ ಮೇಲೆ ಅಕ್ಟೋಬರ್‌ನಲ್ಲಿ ನಡೆದ ಪ್ರತ್ಯೇಕ ವಿಚಾರಣೆಯಲ್ಲಿ ಲ್ಯಾನ್‌ಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಲಾಯಿತು.

ಇದನ್ನೂ ಓದಿ…ಮಹಾರಾಷ್ಟ್ರ | ಚುನಾವಣಾ ಆಯೋಗಕ್ಕೆ ಸವಾಲು : ಗ್ರಾಮಸ್ಥರಿಂದ ಮರು ಮತದಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...