Homeಅಂತರಾಷ್ಟ್ರೀಯರಿಯಲ್ ಎಸ್ಟೇಟ್ ಉದ್ಯಮಿಯ ಮರಣದಂಡನೆ ಎತ್ತಿಹಿಡಿದ ವಿಯೆಟ್ನಾಂ ನ್ಯಾಯಾಲಯ

ರಿಯಲ್ ಎಸ್ಟೇಟ್ ಉದ್ಯಮಿಯ ಮರಣದಂಡನೆ ಎತ್ತಿಹಿಡಿದ ವಿಯೆಟ್ನಾಂ ನ್ಯಾಯಾಲಯ

- Advertisement -
- Advertisement -

ಹನೋಯಿ: 12 ಬಿಲಿಯನ್ ಡಾಲರ್ ವಂಚನೆ ಪ್ರಕರಣದಲ್ಲಿ ದುರುಪಯೋಗ ಮತ್ತು ಲಂಚದ ಅಪರಾಧದಲ್ಲಿ ಸಿಲುಕಿರುವ ರಿಯಲ್ ಎಸ್ಟೇಟ್ ಉದ್ಯಮಿ ಟ್ರೂಂಗ್ ಮೈ ಲ್ಯಾನ್‌  ವಿರುದ್ಧದ ಮೇಲ್ಮನವಿಯನ್ನು ತಿರಸ್ಕರಿಸಿದ ನಂತರ ವಿಯೆಟ್ನಾಂನ ನ್ಯಾಯಾಲಯವು ವಿಧಿಸಿರುವ ಮರಣದಂಡನೆ ಶಿಕ್ಷೆಯನ್ನು ಮಂಗಳವಾರದಂದು ಮತ್ತೆ ಎತ್ತಿಹಿಡಿದಿದೆ ಎಂದು ರಾಜ್ಯ ಮಾಧ್ಯಮ ವರದಿ ಮಾಡಿದೆ.

ವಿಯೆಟ್ನಾಂನಲ್ಲಿ ದಾಖಲೆಯ ಅತಿದೊಡ್ಡ ಹಣಕಾಸು ವಂಚನೆ ಪ್ರಕರಣದಲ್ಲಿ ರಿಯಲ್ ಎಸ್ಟೇಟ್ ಡೆವಲಪರ್ ವ್ಯಾನ್ ಥಿನ್ ಫಾಟ್ ಹೋಲ್ಡಿಂಗ್ಸ್ ಗ್ರೂಪ್‌ನ ಅಧ್ಯಕ್ಷೆಯಾಗಿರುವ ಲ್ಯಾನ್ ಅವರ ಪಾತ್ರಕ್ಕಾಗಿ ನ್ಯಾಯಾಲಯವು ಇದೇ ಏಪ್ರಿಲ್‌ನಲ್ಲಿ ಅವರಿಗೆ ಮರಣದಂಡನೆ ವಿಧಿಸಿತ್ತು.

ದಕ್ಷಿಣ ಹೋ ಚಿ ಮಿನ್ಹ್ ನಗರದ ಹೈ ಪೀಪಲ್ಸ್ ಕೋರ್ಟ್ ಲ್ಯಾನ್ ಮರಣದಂಡನೆಯನ್ನುಕಡಿತಗೊಳಿಸಲು ಯಾವುದೇ ಆಧಾರಗಳಿಲ್ಲದ ಕಾರಣ ಈ ನಿರ್ಧಾರಕ್ಕೆ ಬಂದಿದೆ ಎಂದು ಆನ್‌ಲೈನ್ ಪತ್ರಿಕೆ VnExpress ವರದಿ ಮಾಡಿದೆ.

ಲ್ಯಾನ್ ಅವರು ವಂಚಿಸಿದ ಹಣದ ಮುಕ್ಕಾಲು ಭಾಗವನ್ನು ಹಿಂದಿರುಗಿಸಲು ಸಾಧ್ಯವಾದರೆ, ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸುವ ಸಾಧ್ಯತೆಯಿದೆ ಎಂದು ವರದಿ ಹೇಳಿದೆ.

“ಲ್ಯಾನ್  ಪ್ರಕರಣ ದೇಶದ ಇತಿಹಾಸದಲ್ಲಿ ಅಭೂತಪೂರ್ವವಾಗಿದೆ ಹಾಗೆಯೇ  ದುರುಪಯೋಗಪಡಿಸಿಕೊಂಡ ಹಣದ ಮೊತ್ತವು ಅಭೂತಪೂರ್ವವಾಗಿ ದೊಡ್ಡದಾಗಿದೆ. ಅದು ಎಷ್ಟೆಂದರೆ ಮರುಪಡೆಯಲಾಗದಷ್ಟು” ಎಂದು ಸರ್ಕಾರಿ ಆನ್‌ಲೈನ್ ಪತ್ರಿಕೆ ಹೇಳಿದೆ.

ಈ ಪ್ರಕರಣವು ಸಮಾಜ, ದೇಶದ ಹಣಕಾಸು ಮಾರುಕಟ್ಟೆ, ಆರ್ಥಿಕತೆಯ ಹಲವು ಅಂಶಗಳ ಮೇಲೆ ಪರಿಣಾಮ ಬೀರಿದೆ ಎಂದು ಅದು ತಿಳಿಸಿದೆ.

ಲ್ಯಾನ್ ತನ್ನ ತಪ್ಪನ್ನು  ಒಪ್ಪಿಕೊಂಡಿರುವುದು, ಪಶ್ಚಾತ್ತಾಪ ಪಡುವುದು ಮತ್ತು ದುರುಪಯೋಗಪಡಿಸಿಕೊಂಡ ಹಣದ ಒಂದು ಭಾಗವನ್ನು ಮರುಪಾವತಿ ಮಾಡುವುದರಿಂದ ಶಿಕ್ಷೆಯಿಂದ ಕೆಲ ರಿಯಾಯತಿ ಪಡೆಯಬಹುದಾಗಿದೆ ಎಂದು ಅವರ ವಕೀಲರ ಹೇಳಿಕೆಯನ್ನು ರಾಜ್ಯ ಮಾಧ್ಯಮವು ಉಲ್ಲೇಖಿಸಿದೆ, ಆದರೆ ಪ್ರಾಸಿಕ್ಯೂಟರ್‌ಗಳು ಇದಕ್ಕೆ ಸಾಕಾಗುವುದಿಲ್ಲ ಎಂದು ಅದು ಹೇಳಿದೆ.

ಲ್ಯಾನ್‌ನ ವಕೀಲರಿಂದ  ಹೆಚ್ಚಿನ ಹೇಳಿಕೆಗಳನ್ನು ಪಡೆಯಲು ಮಾಧ್ಯಮಗಳಿಗೆ ಇಲ್ಲಿಯವರೆಗೂ ಸಾಧ್ಯವಾಗುತ್ತಿಲ್ಲ.

ವಿಯೆಟ್ನಾಂನ ನ್ಯಾಯಾಲಯದಲ್ಲಿ ಮರುವಿಚಾರಣೆಯ ಕಾರ್ಯವಿಧಾನಗಳ ಅಡಿಯಲ್ಲಿ  ಇದನ್ನು ಇನ್ನಷ್ಟು ಪರಿಶೀಲಿಸುವ ಹಕ್ಕನ್ನು ಲ್ಯಾನ್ ಹೊಂದಿದ್ದಾರೆ.

ಠೇವಣಿ ಇರಿಸುವ ದೇಶದ ಅತಿದೊಡ್ಡ ಖಾಸಗಿ ಬ್ಯಾಂಕ್‌ಗಳಲ್ಲಿ ಒಂದಾದ ಸೈಗಾನ್ ಜಾಯಿಂಟ್ ಸ್ಟಾಕ್ ಕಮರ್ಷಿಯಲ್ ಬ್ಯಾಂಕ್ (SCB) ನಲ್ಲಿ  ವಂಚನೆಯ ಕಾರಣಕ್ಕಾಗಿ 2022ರಲ್ಲಿ ಲ್ಯಾನ್ ಅವರ ಬಂಧನ ದೇಶದಲ್ಲಿ ಭಾರೀ ಸಂಚಲನೆಯನ್ನುಂಟು ಮಾಡಿತ್ತು.

ಮರಣದಂಡನೆಯ ಹೊರತಾಗಿಯೂ, ವಂಚನೆ, ಮನಿ ಲಾಂಡರಿಂಗ್ ಮತ್ತು ಅಕ್ರಮ ಗಡಿಯಾಚೆಗಿನ ಹಣ ವರ್ಗಾವಣೆಯ ಮೂಲಕ ಅಪಾರ ಆಸ್ತಿ ಗಳಿಕೆ ಆರೋಪದ ಮೇಲೆ ಅಕ್ಟೋಬರ್‌ನಲ್ಲಿ ನಡೆದ ಪ್ರತ್ಯೇಕ ವಿಚಾರಣೆಯಲ್ಲಿ ಲ್ಯಾನ್‌ಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಲಾಯಿತು.

ಇದನ್ನೂ ಓದಿ…ಮಹಾರಾಷ್ಟ್ರ | ಚುನಾವಣಾ ಆಯೋಗಕ್ಕೆ ಸವಾಲು : ಗ್ರಾಮಸ್ಥರಿಂದ ಮರು ಮತದಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...