Homeಅಂತರಾಷ್ಟ್ರೀಯರಿಯಲ್ ಎಸ್ಟೇಟ್ ಉದ್ಯಮಿಯ ಮರಣದಂಡನೆ ಎತ್ತಿಹಿಡಿದ ವಿಯೆಟ್ನಾಂ ನ್ಯಾಯಾಲಯ

ರಿಯಲ್ ಎಸ್ಟೇಟ್ ಉದ್ಯಮಿಯ ಮರಣದಂಡನೆ ಎತ್ತಿಹಿಡಿದ ವಿಯೆಟ್ನಾಂ ನ್ಯಾಯಾಲಯ

- Advertisement -
- Advertisement -

ಹನೋಯಿ: 12 ಬಿಲಿಯನ್ ಡಾಲರ್ ವಂಚನೆ ಪ್ರಕರಣದಲ್ಲಿ ದುರುಪಯೋಗ ಮತ್ತು ಲಂಚದ ಅಪರಾಧದಲ್ಲಿ ಸಿಲುಕಿರುವ ರಿಯಲ್ ಎಸ್ಟೇಟ್ ಉದ್ಯಮಿ ಟ್ರೂಂಗ್ ಮೈ ಲ್ಯಾನ್‌  ವಿರುದ್ಧದ ಮೇಲ್ಮನವಿಯನ್ನು ತಿರಸ್ಕರಿಸಿದ ನಂತರ ವಿಯೆಟ್ನಾಂನ ನ್ಯಾಯಾಲಯವು ವಿಧಿಸಿರುವ ಮರಣದಂಡನೆ ಶಿಕ್ಷೆಯನ್ನು ಮಂಗಳವಾರದಂದು ಮತ್ತೆ ಎತ್ತಿಹಿಡಿದಿದೆ ಎಂದು ರಾಜ್ಯ ಮಾಧ್ಯಮ ವರದಿ ಮಾಡಿದೆ.

ವಿಯೆಟ್ನಾಂನಲ್ಲಿ ದಾಖಲೆಯ ಅತಿದೊಡ್ಡ ಹಣಕಾಸು ವಂಚನೆ ಪ್ರಕರಣದಲ್ಲಿ ರಿಯಲ್ ಎಸ್ಟೇಟ್ ಡೆವಲಪರ್ ವ್ಯಾನ್ ಥಿನ್ ಫಾಟ್ ಹೋಲ್ಡಿಂಗ್ಸ್ ಗ್ರೂಪ್‌ನ ಅಧ್ಯಕ್ಷೆಯಾಗಿರುವ ಲ್ಯಾನ್ ಅವರ ಪಾತ್ರಕ್ಕಾಗಿ ನ್ಯಾಯಾಲಯವು ಇದೇ ಏಪ್ರಿಲ್‌ನಲ್ಲಿ ಅವರಿಗೆ ಮರಣದಂಡನೆ ವಿಧಿಸಿತ್ತು.

ದಕ್ಷಿಣ ಹೋ ಚಿ ಮಿನ್ಹ್ ನಗರದ ಹೈ ಪೀಪಲ್ಸ್ ಕೋರ್ಟ್ ಲ್ಯಾನ್ ಮರಣದಂಡನೆಯನ್ನುಕಡಿತಗೊಳಿಸಲು ಯಾವುದೇ ಆಧಾರಗಳಿಲ್ಲದ ಕಾರಣ ಈ ನಿರ್ಧಾರಕ್ಕೆ ಬಂದಿದೆ ಎಂದು ಆನ್‌ಲೈನ್ ಪತ್ರಿಕೆ VnExpress ವರದಿ ಮಾಡಿದೆ.

ಲ್ಯಾನ್ ಅವರು ವಂಚಿಸಿದ ಹಣದ ಮುಕ್ಕಾಲು ಭಾಗವನ್ನು ಹಿಂದಿರುಗಿಸಲು ಸಾಧ್ಯವಾದರೆ, ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸುವ ಸಾಧ್ಯತೆಯಿದೆ ಎಂದು ವರದಿ ಹೇಳಿದೆ.

“ಲ್ಯಾನ್  ಪ್ರಕರಣ ದೇಶದ ಇತಿಹಾಸದಲ್ಲಿ ಅಭೂತಪೂರ್ವವಾಗಿದೆ ಹಾಗೆಯೇ  ದುರುಪಯೋಗಪಡಿಸಿಕೊಂಡ ಹಣದ ಮೊತ್ತವು ಅಭೂತಪೂರ್ವವಾಗಿ ದೊಡ್ಡದಾಗಿದೆ. ಅದು ಎಷ್ಟೆಂದರೆ ಮರುಪಡೆಯಲಾಗದಷ್ಟು” ಎಂದು ಸರ್ಕಾರಿ ಆನ್‌ಲೈನ್ ಪತ್ರಿಕೆ ಹೇಳಿದೆ.

ಈ ಪ್ರಕರಣವು ಸಮಾಜ, ದೇಶದ ಹಣಕಾಸು ಮಾರುಕಟ್ಟೆ, ಆರ್ಥಿಕತೆಯ ಹಲವು ಅಂಶಗಳ ಮೇಲೆ ಪರಿಣಾಮ ಬೀರಿದೆ ಎಂದು ಅದು ತಿಳಿಸಿದೆ.

ಲ್ಯಾನ್ ತನ್ನ ತಪ್ಪನ್ನು  ಒಪ್ಪಿಕೊಂಡಿರುವುದು, ಪಶ್ಚಾತ್ತಾಪ ಪಡುವುದು ಮತ್ತು ದುರುಪಯೋಗಪಡಿಸಿಕೊಂಡ ಹಣದ ಒಂದು ಭಾಗವನ್ನು ಮರುಪಾವತಿ ಮಾಡುವುದರಿಂದ ಶಿಕ್ಷೆಯಿಂದ ಕೆಲ ರಿಯಾಯತಿ ಪಡೆಯಬಹುದಾಗಿದೆ ಎಂದು ಅವರ ವಕೀಲರ ಹೇಳಿಕೆಯನ್ನು ರಾಜ್ಯ ಮಾಧ್ಯಮವು ಉಲ್ಲೇಖಿಸಿದೆ, ಆದರೆ ಪ್ರಾಸಿಕ್ಯೂಟರ್‌ಗಳು ಇದಕ್ಕೆ ಸಾಕಾಗುವುದಿಲ್ಲ ಎಂದು ಅದು ಹೇಳಿದೆ.

ಲ್ಯಾನ್‌ನ ವಕೀಲರಿಂದ  ಹೆಚ್ಚಿನ ಹೇಳಿಕೆಗಳನ್ನು ಪಡೆಯಲು ಮಾಧ್ಯಮಗಳಿಗೆ ಇಲ್ಲಿಯವರೆಗೂ ಸಾಧ್ಯವಾಗುತ್ತಿಲ್ಲ.

ವಿಯೆಟ್ನಾಂನ ನ್ಯಾಯಾಲಯದಲ್ಲಿ ಮರುವಿಚಾರಣೆಯ ಕಾರ್ಯವಿಧಾನಗಳ ಅಡಿಯಲ್ಲಿ  ಇದನ್ನು ಇನ್ನಷ್ಟು ಪರಿಶೀಲಿಸುವ ಹಕ್ಕನ್ನು ಲ್ಯಾನ್ ಹೊಂದಿದ್ದಾರೆ.

ಠೇವಣಿ ಇರಿಸುವ ದೇಶದ ಅತಿದೊಡ್ಡ ಖಾಸಗಿ ಬ್ಯಾಂಕ್‌ಗಳಲ್ಲಿ ಒಂದಾದ ಸೈಗಾನ್ ಜಾಯಿಂಟ್ ಸ್ಟಾಕ್ ಕಮರ್ಷಿಯಲ್ ಬ್ಯಾಂಕ್ (SCB) ನಲ್ಲಿ  ವಂಚನೆಯ ಕಾರಣಕ್ಕಾಗಿ 2022ರಲ್ಲಿ ಲ್ಯಾನ್ ಅವರ ಬಂಧನ ದೇಶದಲ್ಲಿ ಭಾರೀ ಸಂಚಲನೆಯನ್ನುಂಟು ಮಾಡಿತ್ತು.

ಮರಣದಂಡನೆಯ ಹೊರತಾಗಿಯೂ, ವಂಚನೆ, ಮನಿ ಲಾಂಡರಿಂಗ್ ಮತ್ತು ಅಕ್ರಮ ಗಡಿಯಾಚೆಗಿನ ಹಣ ವರ್ಗಾವಣೆಯ ಮೂಲಕ ಅಪಾರ ಆಸ್ತಿ ಗಳಿಕೆ ಆರೋಪದ ಮೇಲೆ ಅಕ್ಟೋಬರ್‌ನಲ್ಲಿ ನಡೆದ ಪ್ರತ್ಯೇಕ ವಿಚಾರಣೆಯಲ್ಲಿ ಲ್ಯಾನ್‌ಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಲಾಯಿತು.

ಇದನ್ನೂ ಓದಿ…ಮಹಾರಾಷ್ಟ್ರ | ಚುನಾವಣಾ ಆಯೋಗಕ್ಕೆ ಸವಾಲು : ಗ್ರಾಮಸ್ಥರಿಂದ ಮರು ಮತದಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...