Homeಅಂತರಾಷ್ಟ್ರೀಯರಿಯಲ್ ಎಸ್ಟೇಟ್ ಉದ್ಯಮಿಯ ಮರಣದಂಡನೆ ಎತ್ತಿಹಿಡಿದ ವಿಯೆಟ್ನಾಂ ನ್ಯಾಯಾಲಯ

ರಿಯಲ್ ಎಸ್ಟೇಟ್ ಉದ್ಯಮಿಯ ಮರಣದಂಡನೆ ಎತ್ತಿಹಿಡಿದ ವಿಯೆಟ್ನಾಂ ನ್ಯಾಯಾಲಯ

- Advertisement -
- Advertisement -

ಹನೋಯಿ: 12 ಬಿಲಿಯನ್ ಡಾಲರ್ ವಂಚನೆ ಪ್ರಕರಣದಲ್ಲಿ ದುರುಪಯೋಗ ಮತ್ತು ಲಂಚದ ಅಪರಾಧದಲ್ಲಿ ಸಿಲುಕಿರುವ ರಿಯಲ್ ಎಸ್ಟೇಟ್ ಉದ್ಯಮಿ ಟ್ರೂಂಗ್ ಮೈ ಲ್ಯಾನ್‌  ವಿರುದ್ಧದ ಮೇಲ್ಮನವಿಯನ್ನು ತಿರಸ್ಕರಿಸಿದ ನಂತರ ವಿಯೆಟ್ನಾಂನ ನ್ಯಾಯಾಲಯವು ವಿಧಿಸಿರುವ ಮರಣದಂಡನೆ ಶಿಕ್ಷೆಯನ್ನು ಮಂಗಳವಾರದಂದು ಮತ್ತೆ ಎತ್ತಿಹಿಡಿದಿದೆ ಎಂದು ರಾಜ್ಯ ಮಾಧ್ಯಮ ವರದಿ ಮಾಡಿದೆ.

ವಿಯೆಟ್ನಾಂನಲ್ಲಿ ದಾಖಲೆಯ ಅತಿದೊಡ್ಡ ಹಣಕಾಸು ವಂಚನೆ ಪ್ರಕರಣದಲ್ಲಿ ರಿಯಲ್ ಎಸ್ಟೇಟ್ ಡೆವಲಪರ್ ವ್ಯಾನ್ ಥಿನ್ ಫಾಟ್ ಹೋಲ್ಡಿಂಗ್ಸ್ ಗ್ರೂಪ್‌ನ ಅಧ್ಯಕ್ಷೆಯಾಗಿರುವ ಲ್ಯಾನ್ ಅವರ ಪಾತ್ರಕ್ಕಾಗಿ ನ್ಯಾಯಾಲಯವು ಇದೇ ಏಪ್ರಿಲ್‌ನಲ್ಲಿ ಅವರಿಗೆ ಮರಣದಂಡನೆ ವಿಧಿಸಿತ್ತು.

ದಕ್ಷಿಣ ಹೋ ಚಿ ಮಿನ್ಹ್ ನಗರದ ಹೈ ಪೀಪಲ್ಸ್ ಕೋರ್ಟ್ ಲ್ಯಾನ್ ಮರಣದಂಡನೆಯನ್ನುಕಡಿತಗೊಳಿಸಲು ಯಾವುದೇ ಆಧಾರಗಳಿಲ್ಲದ ಕಾರಣ ಈ ನಿರ್ಧಾರಕ್ಕೆ ಬಂದಿದೆ ಎಂದು ಆನ್‌ಲೈನ್ ಪತ್ರಿಕೆ VnExpress ವರದಿ ಮಾಡಿದೆ.

ಲ್ಯಾನ್ ಅವರು ವಂಚಿಸಿದ ಹಣದ ಮುಕ್ಕಾಲು ಭಾಗವನ್ನು ಹಿಂದಿರುಗಿಸಲು ಸಾಧ್ಯವಾದರೆ, ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸುವ ಸಾಧ್ಯತೆಯಿದೆ ಎಂದು ವರದಿ ಹೇಳಿದೆ.

“ಲ್ಯಾನ್  ಪ್ರಕರಣ ದೇಶದ ಇತಿಹಾಸದಲ್ಲಿ ಅಭೂತಪೂರ್ವವಾಗಿದೆ ಹಾಗೆಯೇ  ದುರುಪಯೋಗಪಡಿಸಿಕೊಂಡ ಹಣದ ಮೊತ್ತವು ಅಭೂತಪೂರ್ವವಾಗಿ ದೊಡ್ಡದಾಗಿದೆ. ಅದು ಎಷ್ಟೆಂದರೆ ಮರುಪಡೆಯಲಾಗದಷ್ಟು” ಎಂದು ಸರ್ಕಾರಿ ಆನ್‌ಲೈನ್ ಪತ್ರಿಕೆ ಹೇಳಿದೆ.

ಈ ಪ್ರಕರಣವು ಸಮಾಜ, ದೇಶದ ಹಣಕಾಸು ಮಾರುಕಟ್ಟೆ, ಆರ್ಥಿಕತೆಯ ಹಲವು ಅಂಶಗಳ ಮೇಲೆ ಪರಿಣಾಮ ಬೀರಿದೆ ಎಂದು ಅದು ತಿಳಿಸಿದೆ.

ಲ್ಯಾನ್ ತನ್ನ ತಪ್ಪನ್ನು  ಒಪ್ಪಿಕೊಂಡಿರುವುದು, ಪಶ್ಚಾತ್ತಾಪ ಪಡುವುದು ಮತ್ತು ದುರುಪಯೋಗಪಡಿಸಿಕೊಂಡ ಹಣದ ಒಂದು ಭಾಗವನ್ನು ಮರುಪಾವತಿ ಮಾಡುವುದರಿಂದ ಶಿಕ್ಷೆಯಿಂದ ಕೆಲ ರಿಯಾಯತಿ ಪಡೆಯಬಹುದಾಗಿದೆ ಎಂದು ಅವರ ವಕೀಲರ ಹೇಳಿಕೆಯನ್ನು ರಾಜ್ಯ ಮಾಧ್ಯಮವು ಉಲ್ಲೇಖಿಸಿದೆ, ಆದರೆ ಪ್ರಾಸಿಕ್ಯೂಟರ್‌ಗಳು ಇದಕ್ಕೆ ಸಾಕಾಗುವುದಿಲ್ಲ ಎಂದು ಅದು ಹೇಳಿದೆ.

ಲ್ಯಾನ್‌ನ ವಕೀಲರಿಂದ  ಹೆಚ್ಚಿನ ಹೇಳಿಕೆಗಳನ್ನು ಪಡೆಯಲು ಮಾಧ್ಯಮಗಳಿಗೆ ಇಲ್ಲಿಯವರೆಗೂ ಸಾಧ್ಯವಾಗುತ್ತಿಲ್ಲ.

ವಿಯೆಟ್ನಾಂನ ನ್ಯಾಯಾಲಯದಲ್ಲಿ ಮರುವಿಚಾರಣೆಯ ಕಾರ್ಯವಿಧಾನಗಳ ಅಡಿಯಲ್ಲಿ  ಇದನ್ನು ಇನ್ನಷ್ಟು ಪರಿಶೀಲಿಸುವ ಹಕ್ಕನ್ನು ಲ್ಯಾನ್ ಹೊಂದಿದ್ದಾರೆ.

ಠೇವಣಿ ಇರಿಸುವ ದೇಶದ ಅತಿದೊಡ್ಡ ಖಾಸಗಿ ಬ್ಯಾಂಕ್‌ಗಳಲ್ಲಿ ಒಂದಾದ ಸೈಗಾನ್ ಜಾಯಿಂಟ್ ಸ್ಟಾಕ್ ಕಮರ್ಷಿಯಲ್ ಬ್ಯಾಂಕ್ (SCB) ನಲ್ಲಿ  ವಂಚನೆಯ ಕಾರಣಕ್ಕಾಗಿ 2022ರಲ್ಲಿ ಲ್ಯಾನ್ ಅವರ ಬಂಧನ ದೇಶದಲ್ಲಿ ಭಾರೀ ಸಂಚಲನೆಯನ್ನುಂಟು ಮಾಡಿತ್ತು.

ಮರಣದಂಡನೆಯ ಹೊರತಾಗಿಯೂ, ವಂಚನೆ, ಮನಿ ಲಾಂಡರಿಂಗ್ ಮತ್ತು ಅಕ್ರಮ ಗಡಿಯಾಚೆಗಿನ ಹಣ ವರ್ಗಾವಣೆಯ ಮೂಲಕ ಅಪಾರ ಆಸ್ತಿ ಗಳಿಕೆ ಆರೋಪದ ಮೇಲೆ ಅಕ್ಟೋಬರ್‌ನಲ್ಲಿ ನಡೆದ ಪ್ರತ್ಯೇಕ ವಿಚಾರಣೆಯಲ್ಲಿ ಲ್ಯಾನ್‌ಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಲಾಯಿತು.

ಇದನ್ನೂ ಓದಿ…ಮಹಾರಾಷ್ಟ್ರ | ಚುನಾವಣಾ ಆಯೋಗಕ್ಕೆ ಸವಾಲು : ಗ್ರಾಮಸ್ಥರಿಂದ ಮರು ಮತದಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...