Homeಮುಖಪುಟಮಹಿಳೆಯ ನಗ್ನತೆಯನ್ನು ಲೈಂಗಿಕ ದೃಷ್ಠಿಯಿಂದ ನೋಡುವುದು ಸರಿಯಲ್ಲ: ಕೇರಳ ಹೈಕೋರ್ಟ್

ಮಹಿಳೆಯ ನಗ್ನತೆಯನ್ನು ಲೈಂಗಿಕ ದೃಷ್ಠಿಯಿಂದ ನೋಡುವುದು ಸರಿಯಲ್ಲ: ಕೇರಳ ಹೈಕೋರ್ಟ್

- Advertisement -
- Advertisement -

ಮಹಿಳೆಯ ನಗ್ನತೆಯನ್ನು ಲೈಂಗಿಕ ದೃಷ್ಠಿಯಿಂದ ಅಥವಾ ಆಶ್ಲೀಲತೆಯ ಮನೋದೃಷ್ಟಿಯಿಂದ ನೋಡೋದು ಸರಿಯಲ್ಲ, ನಗ್ನತೆಯನ್ನು ಲೈಂಗಿಕತೆಯೊಂದಿಗೆ ಸಮೀಕರಿಸುವುದು ತಪ್ಪು ಎಂದು ಕೇರಳ ಹೈಕೋರ್ಟ್ ಹೇಳಿದೆ.

ಮಹಿಳಾ ಪರ ಕಾರ್ಯಕರ್ತೆ ರೆಹಾನಾ ಫಾತಿಮಾ ಅವರು ತನ್ನ ಅರೆನಗ್ನ ದೇಹದಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಚಿತ್ರ ಬಿಡಿಸಲು ಅವಕಾಶ ನೀಡಿದ್ದಲ್ಲದೇ, ಅದನ್ನು ವಿಡಿಯೋ ಮಾಡಿ ಪ್ರಸಾರ ಮಾಡಿದ್ದರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಕೇರಳ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ ಎಂದು ಪಿಟಿಐ ವರದಿ ಮಾಡಿದೆ.

2020 ರಲ್ಲಿ ರೆಹಾನಾ ಫಾತಿಮಾ ಅವರು ತನ್ನ ಅರೆ-ನಗ್ನ ದೇಹದ ಮೇಲೆ ಅಪ್ರಾಪ್ತ ಮಕ್ಕಳು ಚಿತ್ರಿ ಬಿಡಿಸುತ್ತಿರುವುದನ್ನು ವೀಡಿಯೊ ಮಾಡಿ, ಪ್ರಸಾರ ಮಾಡಿದ್ದರು. ಆ ನಂತರ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ನ್ಯಾಯಮೂರ್ತಿ ಕೌಸರ್ ಎಡಪ್ಪಗತ್ ಅವರ ಏಕಸದಸ್ಯ ಪೀಠವು ”ಮಹಿಳೆಯ ಅರೆ ನಗ್ನ ದೇಹವನ್ನು ಯಾವಾಗಲೂ ಲೈಂಗಿಕ ಅಥವಾ ಅಶ್ಲೀಲ ದೃಷ್ಟಿಯಿಂದ ನೋಡಬಾರದು. ಮಕ್ಕಳು ಚಿತ್ರ ಬಿಡಿಸಲು ಅವರಿಗೆ ತನ್ನ ದೇಹವನ್ನೇ ಕ್ಯಾನ್ವಾಸ್‌ ಆಗಿ ಬಳಸಲು ಅವಕಾಶ ನೀಡಿದರೆ ಅದು ತಪ್ಪಲ್ಲ” ಎಂದು ಹೇಳಿ ರೆಹನಾ ಫಾತಿಮಾ ಅವರ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಿದೆ.

”ಅರೆ ನಗ್ನ ದೇಹವನ್ನು ಲೈಂಗಿಕ ದೃಷ್ಟಿಯಲ್ಲಿ ನೋಡದೆ ಸಂವೇದನಾಶೀಲತೆ ಬೆಳೆಸುವ ಉದ್ದೇಶದಿಂದ ಮಕ್ಕಳಿಗೆ ಕ್ಯಾನ್ವಾಸ್‌ ರೀತಿಯಲ್ಲಿ ನಗ್ನ ಎದೆ ತೆರೆದಿಟ್ಟಿರುವುದು ತಪ್ಪಲ್ಲ” ಹೈಕೋರ್ಟ್ ಹೇಳಿದೆ.

”ಸ್ತ್ರೀಯರ ದೇಹದ ವಿಚಾರದಲ್ಲಿ ಪುರುಷಪ್ರಧಾನ ಸಮಾಜ ಹೊಂದಿರುವ ನಂಬಿಕೆ ಮತ್ತು ಕಲ್ಪನೆಯನ್ನು ಪ್ರಶ್ನಿಸಿಲು ಮತ್ತು ಮಕ್ಕಳಿಗೆ ಲೈಂಗಿಕ ಶಿಕ್ಷಣ ನೀಡುವ ಉದ್ದೇಶದಿಂದ ಈ ವಿಡಿಯೋ ಮಾಡಿದ್ದೇನೆ” ಎಂದು ಸಾಮಾಜಿಕ ಕಾರ್ಯಕರ್ತೆ ರೆಹನಾ ಫಾತಿಮಾ ಅವರು ಹೇಳಿದ್ದರು. ಅವರ ಈ ಹೇಳಿಕೆಯನ್ನು ಮಾನ್ಯ ಮಾಡಿದ ಹೈಕೋರ್ಟ್, ವಿಡಿಯೋ ಅಶ್ಲೀಲ ಉದ್ದೇಶದಿಂದ ಕೂಡಿಲ್ಲ ಎಂದು ತೀರ್ಪು ನೀಡಿತು.

“ನಗ್ನತೆಯನ್ನು ಲೈಂಗಿಕತೆಗೆ ಜೋಡಿಸಬಾರದು. ಮಹಿಳೆಯರ ಬೆತ್ತಲೆ ದೇಹದ ಮೇಲ್ಭಾಗದ ನೋಟವು ಪೂರ್ವನಿಯೋಜಿತವಾಗಿ ಲೈಂಗಿಕವಾಗಿದೆ ಎಂದು ಪರಿಗಣಿಸಬಾರದೆಂದು” ನ್ಯಾಯಮೂರ್ತಿ ಎಡಪ್ಪಗತ್ ಹೇಳಿದರು.

ಇದನ್ನೂ ಓದಿ: ಮೃತದೇಹದ ಮೇಲಿನ ಲೈಂಗಿಕ ದೌರ್ಜನ್ಯ ಅಪರಾಧವಲ್ಲ: ಆರೋಪಿಯನ್ನು ಖುಲಾಸೆಗೊಳಿಸಿದ ಕರ್ನಾಟಕ ಹೈಕೋರ್ಟ್

”ಸಾಮಾಜಿಕ ಕಾರ್ಯಕರ್ತೆ ಫಾತಿಮಾ ಅವರು ಮಕ್ಕಳನ್ನು ಯಾವುದೇ ಲೈಂಗಿಕ ಕ್ರಿಯೆಗಳಿಗೆ ಮತ್ತು ಲೈಂಗಿಕ ತೃಪ್ತಿಗಾಗಿ ಬಳಸಿಕೊಳ್ಳಲಾಗಿದೆ ಎಂದು ಊಹಿಸಲು ಸಾಧ್ಯವಿಲ್ಲ. ಫಾತಿಮಾ ತನ್ನ ದೇಹವನ್ನು ತನ್ನ ಮಕ್ಕಳಿಗೆ ಚಿತ್ರಿಸಲು ಕ್ಯಾನ್ವಾಸ್ ಆಗಿ ಬಳಸಿದ್ದಳು” ಎಂದು ನ್ಯಾಯಾಧೀಶರು ಹೇಳಿದರು.

”ಒಬ್ಬ ಮಹಿಳೆ ತನ್ನ ದೇಹದ ಬಗ್ಗೆ ಸ್ವಾಯತ್ತ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಕ್ಕು ಸಮಾನತೆ ಮತ್ತು ಗೌಪ್ಯತೆಯ ಮೂಲಭೂತ ಹಕ್ಕಿನ ತಿರುಳಾಗಿದೆ. ಇದು ಸಂವಿಧಾನದ 21 ನೇ ವಿಧಿಯಿಂದ ಖಾತರಿಪಡಿಸಿದ ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಯಲ್ಲಿ ಬರುತ್ತದೆ” ಎಂದು ನ್ಯಾಯಾಧೀಶರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಸೋಮವಾರದ ತೀರ್ಪಿನಲ್ಲಿ, ನ್ಯಾಯಾಲಯವು ಫಾತಿಮಾ ಅವರ ವಾದವನ್ನು ಒಪ್ಪಿಕೊಂಡಿತು ಮತ್ತು ಪುರುಷರ ಮೇಲಿನ ದೇಹದ ನಗ್ನ ಪ್ರದರ್ಶನವನ್ನು ಎಂದಿಗೂ ಅಶ್ಲೀಲ ಅಥವಾ ಅಸಭ್ಯವೆಂದು ಪರಿಗಣಿಸಲಾಗುವುದಿಲ್ಲ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಇದೇ ವೇಳೆ ಪ್ರಾಚೀನ ದೇವಾಲಯಗಳಲ್ಲಿ ಕೆತ್ತಿರುವ ಅರೆನಗ್ನ ಮೂರ್ತಿಗಳ ಬಗ್ಗೆಯೂ ಉಲ್ಲೇಖಿಸಿದ ಹೈಕೋರ್ಟ್‌, ಸಾರ್ವಜನಿಕ ಸ್ಥಳಗಳಲ್ಲಿ ಮುಕ್ತವಾಗಿ ಲಭ್ಯವಿರುವ ನಗ್ನ ಶಿಲ್ಪಗಳು ಮತ್ತು ವರ್ಣ ಚಿತ್ರಗಳನ್ನು ಕಲೆ ಎಂದು ಪರಿಗಣಿಸಲಾಗುತ್ತದೆ. ದೇವರ ಭಕ್ತಿಗೆ ದೇವಾಲಯಕ್ಕೆ ಹೋದಾಗಲು ಭಕ್ತರ ಮನಸ್ಸು ಅರೆನಗ್ನ ಮೂರ್ತಿಗಳನ್ನು ನೋಡೋವಾಗ ಅದನ್ನು ಕಲೆಯಾಗಿ ನೋಡಿ, ದೇವರನ್ನು ಪ್ರಾರ್ಥಿಸುತ್ತಾರೆ. ಆದರೆ ಲೈಂಗಿಕತೆಯ ದೃಷ್ಟಿಕೋನದಲ್ಲಿ ನೋಡುವುದಿಲ್ಲ’ ಎಂದು ಕೋರ್ಟ್ ಹೇಳಿದೆ.

“ಕೇರಳದ ತ್ರಿಶೂರ್‌ನಲ್ಲಿ ನಡೆಯುವ ‘ಪುಲಿಕಲಿ’ ಉತ್ಸವಗಳಲ್ಲಿ ಪುರುಷರ ದೇಹದ ಮೇಲೆ ಚಿತ್ರಿಸುವುದು ಅಂಗೀಕೃತ ಸಂಪ್ರದಾಯವಾಗಿದೆ” ಎಂದು ನ್ಯಾಯಮೂರ್ತಿ ಎಡಪ್ಪಗತ್ ಹೇಳಿದರು. ದೇವಾಲಯದಲ್ಲಿ ‘ತೆಯ್ಯಂ’ ಮತ್ತು ಇತರ ಆಚರಣೆಗಳನ್ನು ನಡೆಸಿದಾಗ, ಪುರುಷ ಕಲಾವಿದರ ದೇಹದ ಮೇಲೆ ಚಿತ್ರಕಲೆ ನಡೆಸಲಾಗುತ್ತದೆ. ಪುರುಷ ದೇಹವನ್ನು ಸಿಕ್ಸ್ ಪ್ಯಾಕ್ ಎಬಿಎಸ್, ಬೈಸೆಪ್ಸ್ ಇತ್ಯಾದಿಗಳ ರೂಪದಲ್ಲಿ ಪ್ರದರ್ಶಿಸಲಾಗುತ್ತದೆ. ಪುರುಷರು ಶರ್ಟ್ ಧರಿಸದೆ ತಿರುಗಾಡುವುದನ್ನು ನಾವು ಸಾಮಾನ್ಯವಾಗಿ ಕಾಣುತ್ತೇವೆ, ಆದರೆ ಈ ಕೃತ್ಯಗಳನ್ನು ಎಂದಿಗೂ ಅಶ್ಲೀಲ ಅಥವಾ ಅಸಭ್ಯವೆಂದು ಪರಿಗಣಿಸಲಾಗುವುದಿಲ್ಲ. ಆದರೆ ಕೆಲವು ಜನರು ಮಹಿಳೆಯ ಬೆತ್ತಲೆ ದೇಹವನ್ನು ಅತಿಯಾದ ಲೈಂಗಿಕತೆ ಅಥವಾ ಕೇವಲ ಬಯಕೆಯ ವಸ್ತು ಎಂದು ಪರಿಗಣಿಸುತ್ತಾರೆ ಎಂದು ನ್ಯಾಯಾಲಯವು ಹೇಳಿದೆ.

ನಗ್ನತೆಯನ್ನು ಅಶ್ಲೀಲ ಅಥವಾ ಅಸಭ್ಯ ಅಥವಾ ಅನೈತಿಕ ಎಂದು ವರ್ಗೀಕರಿಸುವುದೇ ಮೂಲಭೂತವಾಗಿ ತಪ್ಪು ಎಂದ ನ್ಯಾಯಮೂರ್ತಿ ಕೌಸರ್ ಎಡಪ್ಪಗತ್, ಕೆಲವು ಅಸ್ಪೃಶ್ಯ ಸಮುದಾಯದ ಮಹಿಳೆಯರು ತಮ್ಮ ಸ್ತನಗಳನ್ನು ಮುಚ್ಚುವ ಹಕ್ಕಿಗಾಗಿ ಹೋರಾಟ ನಡೆಸಿದ ರಾಜ್ಯ ಇದು. ಪುರುಷ ದೇಹದ ಸ್ವಾತಂತ್ರ್ಯವನ್ನು ಪ್ರಶ್ನಿಸುವ ಸಂಖ್ಯೆ ಕಡಿಮೆ. ಆದರೆ ಪಿತೃಪ್ರಧಾನ ವ್ಯವಸ್ಥೆಯಲ್ಲಿ ಹೆಣ್ಣು ತನ್ನ ದೇಹಕ್ಕೆ ಸಂಬಂಧಿಸಿದಂತೆ ತನ್ನದೇ ಆದ ಸ್ವತಂತ್ರ ಧೋರಣೆ ಹೊಂದುವುದಕ್ಕೆ ಅವಕಾಶ ನೀಡುವುದಿಲ್ಲ. ನಿರಂತರವಾಗಿ ಆಕೆಯನ್ನು ಬೆದರಿಸಲಾಗುತ್ತದೆ. ತಮ್ಮ ದೇಹ ಮತ್ತು ಜೀವನದ ಬಗ್ಗೆ ತಮ್ಮದೇ ಆದ ಆಯ್ಕೆಗಳನ್ನು ಮಾಡಿಕೊಳ್ಳುವುದಕ್ಕೆ ಹೆಣ್ಣಿಗೆ ಅವಕಾಶ ನೀಡುವುದಿಲ್ಲ” ಎಂದು ಹೇಳಿದರು.

ಮಹಿಳೆಯ ದೇಹದ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧ ಅಭಿಪ್ರಾಯ ರೂಪಿಸುವುದು ವೀಡಿಯೋದ ಉದ್ದೇಶವಾಗಿತ್ತು ಎಂದು ಕೋರ್ಟ್ ನಿರೂಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...