Homeಮುಖಪುಟಮಹಿಳೆಯ ನಗ್ನತೆಯನ್ನು ಲೈಂಗಿಕ ದೃಷ್ಠಿಯಿಂದ ನೋಡುವುದು ಸರಿಯಲ್ಲ: ಕೇರಳ ಹೈಕೋರ್ಟ್

ಮಹಿಳೆಯ ನಗ್ನತೆಯನ್ನು ಲೈಂಗಿಕ ದೃಷ್ಠಿಯಿಂದ ನೋಡುವುದು ಸರಿಯಲ್ಲ: ಕೇರಳ ಹೈಕೋರ್ಟ್

- Advertisement -
- Advertisement -

ಮಹಿಳೆಯ ನಗ್ನತೆಯನ್ನು ಲೈಂಗಿಕ ದೃಷ್ಠಿಯಿಂದ ಅಥವಾ ಆಶ್ಲೀಲತೆಯ ಮನೋದೃಷ್ಟಿಯಿಂದ ನೋಡೋದು ಸರಿಯಲ್ಲ, ನಗ್ನತೆಯನ್ನು ಲೈಂಗಿಕತೆಯೊಂದಿಗೆ ಸಮೀಕರಿಸುವುದು ತಪ್ಪು ಎಂದು ಕೇರಳ ಹೈಕೋರ್ಟ್ ಹೇಳಿದೆ.

ಮಹಿಳಾ ಪರ ಕಾರ್ಯಕರ್ತೆ ರೆಹಾನಾ ಫಾತಿಮಾ ಅವರು ತನ್ನ ಅರೆನಗ್ನ ದೇಹದಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಚಿತ್ರ ಬಿಡಿಸಲು ಅವಕಾಶ ನೀಡಿದ್ದಲ್ಲದೇ, ಅದನ್ನು ವಿಡಿಯೋ ಮಾಡಿ ಪ್ರಸಾರ ಮಾಡಿದ್ದರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಕೇರಳ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ ಎಂದು ಪಿಟಿಐ ವರದಿ ಮಾಡಿದೆ.

2020 ರಲ್ಲಿ ರೆಹಾನಾ ಫಾತಿಮಾ ಅವರು ತನ್ನ ಅರೆ-ನಗ್ನ ದೇಹದ ಮೇಲೆ ಅಪ್ರಾಪ್ತ ಮಕ್ಕಳು ಚಿತ್ರಿ ಬಿಡಿಸುತ್ತಿರುವುದನ್ನು ವೀಡಿಯೊ ಮಾಡಿ, ಪ್ರಸಾರ ಮಾಡಿದ್ದರು. ಆ ನಂತರ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ನ್ಯಾಯಮೂರ್ತಿ ಕೌಸರ್ ಎಡಪ್ಪಗತ್ ಅವರ ಏಕಸದಸ್ಯ ಪೀಠವು ”ಮಹಿಳೆಯ ಅರೆ ನಗ್ನ ದೇಹವನ್ನು ಯಾವಾಗಲೂ ಲೈಂಗಿಕ ಅಥವಾ ಅಶ್ಲೀಲ ದೃಷ್ಟಿಯಿಂದ ನೋಡಬಾರದು. ಮಕ್ಕಳು ಚಿತ್ರ ಬಿಡಿಸಲು ಅವರಿಗೆ ತನ್ನ ದೇಹವನ್ನೇ ಕ್ಯಾನ್ವಾಸ್‌ ಆಗಿ ಬಳಸಲು ಅವಕಾಶ ನೀಡಿದರೆ ಅದು ತಪ್ಪಲ್ಲ” ಎಂದು ಹೇಳಿ ರೆಹನಾ ಫಾತಿಮಾ ಅವರ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಿದೆ.

”ಅರೆ ನಗ್ನ ದೇಹವನ್ನು ಲೈಂಗಿಕ ದೃಷ್ಟಿಯಲ್ಲಿ ನೋಡದೆ ಸಂವೇದನಾಶೀಲತೆ ಬೆಳೆಸುವ ಉದ್ದೇಶದಿಂದ ಮಕ್ಕಳಿಗೆ ಕ್ಯಾನ್ವಾಸ್‌ ರೀತಿಯಲ್ಲಿ ನಗ್ನ ಎದೆ ತೆರೆದಿಟ್ಟಿರುವುದು ತಪ್ಪಲ್ಲ” ಹೈಕೋರ್ಟ್ ಹೇಳಿದೆ.

”ಸ್ತ್ರೀಯರ ದೇಹದ ವಿಚಾರದಲ್ಲಿ ಪುರುಷಪ್ರಧಾನ ಸಮಾಜ ಹೊಂದಿರುವ ನಂಬಿಕೆ ಮತ್ತು ಕಲ್ಪನೆಯನ್ನು ಪ್ರಶ್ನಿಸಿಲು ಮತ್ತು ಮಕ್ಕಳಿಗೆ ಲೈಂಗಿಕ ಶಿಕ್ಷಣ ನೀಡುವ ಉದ್ದೇಶದಿಂದ ಈ ವಿಡಿಯೋ ಮಾಡಿದ್ದೇನೆ” ಎಂದು ಸಾಮಾಜಿಕ ಕಾರ್ಯಕರ್ತೆ ರೆಹನಾ ಫಾತಿಮಾ ಅವರು ಹೇಳಿದ್ದರು. ಅವರ ಈ ಹೇಳಿಕೆಯನ್ನು ಮಾನ್ಯ ಮಾಡಿದ ಹೈಕೋರ್ಟ್, ವಿಡಿಯೋ ಅಶ್ಲೀಲ ಉದ್ದೇಶದಿಂದ ಕೂಡಿಲ್ಲ ಎಂದು ತೀರ್ಪು ನೀಡಿತು.

“ನಗ್ನತೆಯನ್ನು ಲೈಂಗಿಕತೆಗೆ ಜೋಡಿಸಬಾರದು. ಮಹಿಳೆಯರ ಬೆತ್ತಲೆ ದೇಹದ ಮೇಲ್ಭಾಗದ ನೋಟವು ಪೂರ್ವನಿಯೋಜಿತವಾಗಿ ಲೈಂಗಿಕವಾಗಿದೆ ಎಂದು ಪರಿಗಣಿಸಬಾರದೆಂದು” ನ್ಯಾಯಮೂರ್ತಿ ಎಡಪ್ಪಗತ್ ಹೇಳಿದರು.

ಇದನ್ನೂ ಓದಿ: ಮೃತದೇಹದ ಮೇಲಿನ ಲೈಂಗಿಕ ದೌರ್ಜನ್ಯ ಅಪರಾಧವಲ್ಲ: ಆರೋಪಿಯನ್ನು ಖುಲಾಸೆಗೊಳಿಸಿದ ಕರ್ನಾಟಕ ಹೈಕೋರ್ಟ್

”ಸಾಮಾಜಿಕ ಕಾರ್ಯಕರ್ತೆ ಫಾತಿಮಾ ಅವರು ಮಕ್ಕಳನ್ನು ಯಾವುದೇ ಲೈಂಗಿಕ ಕ್ರಿಯೆಗಳಿಗೆ ಮತ್ತು ಲೈಂಗಿಕ ತೃಪ್ತಿಗಾಗಿ ಬಳಸಿಕೊಳ್ಳಲಾಗಿದೆ ಎಂದು ಊಹಿಸಲು ಸಾಧ್ಯವಿಲ್ಲ. ಫಾತಿಮಾ ತನ್ನ ದೇಹವನ್ನು ತನ್ನ ಮಕ್ಕಳಿಗೆ ಚಿತ್ರಿಸಲು ಕ್ಯಾನ್ವಾಸ್ ಆಗಿ ಬಳಸಿದ್ದಳು” ಎಂದು ನ್ಯಾಯಾಧೀಶರು ಹೇಳಿದರು.

”ಒಬ್ಬ ಮಹಿಳೆ ತನ್ನ ದೇಹದ ಬಗ್ಗೆ ಸ್ವಾಯತ್ತ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಕ್ಕು ಸಮಾನತೆ ಮತ್ತು ಗೌಪ್ಯತೆಯ ಮೂಲಭೂತ ಹಕ್ಕಿನ ತಿರುಳಾಗಿದೆ. ಇದು ಸಂವಿಧಾನದ 21 ನೇ ವಿಧಿಯಿಂದ ಖಾತರಿಪಡಿಸಿದ ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಯಲ್ಲಿ ಬರುತ್ತದೆ” ಎಂದು ನ್ಯಾಯಾಧೀಶರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಸೋಮವಾರದ ತೀರ್ಪಿನಲ್ಲಿ, ನ್ಯಾಯಾಲಯವು ಫಾತಿಮಾ ಅವರ ವಾದವನ್ನು ಒಪ್ಪಿಕೊಂಡಿತು ಮತ್ತು ಪುರುಷರ ಮೇಲಿನ ದೇಹದ ನಗ್ನ ಪ್ರದರ್ಶನವನ್ನು ಎಂದಿಗೂ ಅಶ್ಲೀಲ ಅಥವಾ ಅಸಭ್ಯವೆಂದು ಪರಿಗಣಿಸಲಾಗುವುದಿಲ್ಲ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಇದೇ ವೇಳೆ ಪ್ರಾಚೀನ ದೇವಾಲಯಗಳಲ್ಲಿ ಕೆತ್ತಿರುವ ಅರೆನಗ್ನ ಮೂರ್ತಿಗಳ ಬಗ್ಗೆಯೂ ಉಲ್ಲೇಖಿಸಿದ ಹೈಕೋರ್ಟ್‌, ಸಾರ್ವಜನಿಕ ಸ್ಥಳಗಳಲ್ಲಿ ಮುಕ್ತವಾಗಿ ಲಭ್ಯವಿರುವ ನಗ್ನ ಶಿಲ್ಪಗಳು ಮತ್ತು ವರ್ಣ ಚಿತ್ರಗಳನ್ನು ಕಲೆ ಎಂದು ಪರಿಗಣಿಸಲಾಗುತ್ತದೆ. ದೇವರ ಭಕ್ತಿಗೆ ದೇವಾಲಯಕ್ಕೆ ಹೋದಾಗಲು ಭಕ್ತರ ಮನಸ್ಸು ಅರೆನಗ್ನ ಮೂರ್ತಿಗಳನ್ನು ನೋಡೋವಾಗ ಅದನ್ನು ಕಲೆಯಾಗಿ ನೋಡಿ, ದೇವರನ್ನು ಪ್ರಾರ್ಥಿಸುತ್ತಾರೆ. ಆದರೆ ಲೈಂಗಿಕತೆಯ ದೃಷ್ಟಿಕೋನದಲ್ಲಿ ನೋಡುವುದಿಲ್ಲ’ ಎಂದು ಕೋರ್ಟ್ ಹೇಳಿದೆ.

“ಕೇರಳದ ತ್ರಿಶೂರ್‌ನಲ್ಲಿ ನಡೆಯುವ ‘ಪುಲಿಕಲಿ’ ಉತ್ಸವಗಳಲ್ಲಿ ಪುರುಷರ ದೇಹದ ಮೇಲೆ ಚಿತ್ರಿಸುವುದು ಅಂಗೀಕೃತ ಸಂಪ್ರದಾಯವಾಗಿದೆ” ಎಂದು ನ್ಯಾಯಮೂರ್ತಿ ಎಡಪ್ಪಗತ್ ಹೇಳಿದರು. ದೇವಾಲಯದಲ್ಲಿ ‘ತೆಯ್ಯಂ’ ಮತ್ತು ಇತರ ಆಚರಣೆಗಳನ್ನು ನಡೆಸಿದಾಗ, ಪುರುಷ ಕಲಾವಿದರ ದೇಹದ ಮೇಲೆ ಚಿತ್ರಕಲೆ ನಡೆಸಲಾಗುತ್ತದೆ. ಪುರುಷ ದೇಹವನ್ನು ಸಿಕ್ಸ್ ಪ್ಯಾಕ್ ಎಬಿಎಸ್, ಬೈಸೆಪ್ಸ್ ಇತ್ಯಾದಿಗಳ ರೂಪದಲ್ಲಿ ಪ್ರದರ್ಶಿಸಲಾಗುತ್ತದೆ. ಪುರುಷರು ಶರ್ಟ್ ಧರಿಸದೆ ತಿರುಗಾಡುವುದನ್ನು ನಾವು ಸಾಮಾನ್ಯವಾಗಿ ಕಾಣುತ್ತೇವೆ, ಆದರೆ ಈ ಕೃತ್ಯಗಳನ್ನು ಎಂದಿಗೂ ಅಶ್ಲೀಲ ಅಥವಾ ಅಸಭ್ಯವೆಂದು ಪರಿಗಣಿಸಲಾಗುವುದಿಲ್ಲ. ಆದರೆ ಕೆಲವು ಜನರು ಮಹಿಳೆಯ ಬೆತ್ತಲೆ ದೇಹವನ್ನು ಅತಿಯಾದ ಲೈಂಗಿಕತೆ ಅಥವಾ ಕೇವಲ ಬಯಕೆಯ ವಸ್ತು ಎಂದು ಪರಿಗಣಿಸುತ್ತಾರೆ ಎಂದು ನ್ಯಾಯಾಲಯವು ಹೇಳಿದೆ.

ನಗ್ನತೆಯನ್ನು ಅಶ್ಲೀಲ ಅಥವಾ ಅಸಭ್ಯ ಅಥವಾ ಅನೈತಿಕ ಎಂದು ವರ್ಗೀಕರಿಸುವುದೇ ಮೂಲಭೂತವಾಗಿ ತಪ್ಪು ಎಂದ ನ್ಯಾಯಮೂರ್ತಿ ಕೌಸರ್ ಎಡಪ್ಪಗತ್, ಕೆಲವು ಅಸ್ಪೃಶ್ಯ ಸಮುದಾಯದ ಮಹಿಳೆಯರು ತಮ್ಮ ಸ್ತನಗಳನ್ನು ಮುಚ್ಚುವ ಹಕ್ಕಿಗಾಗಿ ಹೋರಾಟ ನಡೆಸಿದ ರಾಜ್ಯ ಇದು. ಪುರುಷ ದೇಹದ ಸ್ವಾತಂತ್ರ್ಯವನ್ನು ಪ್ರಶ್ನಿಸುವ ಸಂಖ್ಯೆ ಕಡಿಮೆ. ಆದರೆ ಪಿತೃಪ್ರಧಾನ ವ್ಯವಸ್ಥೆಯಲ್ಲಿ ಹೆಣ್ಣು ತನ್ನ ದೇಹಕ್ಕೆ ಸಂಬಂಧಿಸಿದಂತೆ ತನ್ನದೇ ಆದ ಸ್ವತಂತ್ರ ಧೋರಣೆ ಹೊಂದುವುದಕ್ಕೆ ಅವಕಾಶ ನೀಡುವುದಿಲ್ಲ. ನಿರಂತರವಾಗಿ ಆಕೆಯನ್ನು ಬೆದರಿಸಲಾಗುತ್ತದೆ. ತಮ್ಮ ದೇಹ ಮತ್ತು ಜೀವನದ ಬಗ್ಗೆ ತಮ್ಮದೇ ಆದ ಆಯ್ಕೆಗಳನ್ನು ಮಾಡಿಕೊಳ್ಳುವುದಕ್ಕೆ ಹೆಣ್ಣಿಗೆ ಅವಕಾಶ ನೀಡುವುದಿಲ್ಲ” ಎಂದು ಹೇಳಿದರು.

ಮಹಿಳೆಯ ದೇಹದ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧ ಅಭಿಪ್ರಾಯ ರೂಪಿಸುವುದು ವೀಡಿಯೋದ ಉದ್ದೇಶವಾಗಿತ್ತು ಎಂದು ಕೋರ್ಟ್ ನಿರೂಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...