Homeಮುಖಪುಟಮಹಿಳೆಯ ನಗ್ನತೆಯನ್ನು ಲೈಂಗಿಕ ದೃಷ್ಠಿಯಿಂದ ನೋಡುವುದು ಸರಿಯಲ್ಲ: ಕೇರಳ ಹೈಕೋರ್ಟ್

ಮಹಿಳೆಯ ನಗ್ನತೆಯನ್ನು ಲೈಂಗಿಕ ದೃಷ್ಠಿಯಿಂದ ನೋಡುವುದು ಸರಿಯಲ್ಲ: ಕೇರಳ ಹೈಕೋರ್ಟ್

- Advertisement -
- Advertisement -

ಮಹಿಳೆಯ ನಗ್ನತೆಯನ್ನು ಲೈಂಗಿಕ ದೃಷ್ಠಿಯಿಂದ ಅಥವಾ ಆಶ್ಲೀಲತೆಯ ಮನೋದೃಷ್ಟಿಯಿಂದ ನೋಡೋದು ಸರಿಯಲ್ಲ, ನಗ್ನತೆಯನ್ನು ಲೈಂಗಿಕತೆಯೊಂದಿಗೆ ಸಮೀಕರಿಸುವುದು ತಪ್ಪು ಎಂದು ಕೇರಳ ಹೈಕೋರ್ಟ್ ಹೇಳಿದೆ.

ಮಹಿಳಾ ಪರ ಕಾರ್ಯಕರ್ತೆ ರೆಹಾನಾ ಫಾತಿಮಾ ಅವರು ತನ್ನ ಅರೆನಗ್ನ ದೇಹದಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಚಿತ್ರ ಬಿಡಿಸಲು ಅವಕಾಶ ನೀಡಿದ್ದಲ್ಲದೇ, ಅದನ್ನು ವಿಡಿಯೋ ಮಾಡಿ ಪ್ರಸಾರ ಮಾಡಿದ್ದರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಕೇರಳ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ ಎಂದು ಪಿಟಿಐ ವರದಿ ಮಾಡಿದೆ.

2020 ರಲ್ಲಿ ರೆಹಾನಾ ಫಾತಿಮಾ ಅವರು ತನ್ನ ಅರೆ-ನಗ್ನ ದೇಹದ ಮೇಲೆ ಅಪ್ರಾಪ್ತ ಮಕ್ಕಳು ಚಿತ್ರಿ ಬಿಡಿಸುತ್ತಿರುವುದನ್ನು ವೀಡಿಯೊ ಮಾಡಿ, ಪ್ರಸಾರ ಮಾಡಿದ್ದರು. ಆ ನಂತರ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ನ್ಯಾಯಮೂರ್ತಿ ಕೌಸರ್ ಎಡಪ್ಪಗತ್ ಅವರ ಏಕಸದಸ್ಯ ಪೀಠವು ”ಮಹಿಳೆಯ ಅರೆ ನಗ್ನ ದೇಹವನ್ನು ಯಾವಾಗಲೂ ಲೈಂಗಿಕ ಅಥವಾ ಅಶ್ಲೀಲ ದೃಷ್ಟಿಯಿಂದ ನೋಡಬಾರದು. ಮಕ್ಕಳು ಚಿತ್ರ ಬಿಡಿಸಲು ಅವರಿಗೆ ತನ್ನ ದೇಹವನ್ನೇ ಕ್ಯಾನ್ವಾಸ್‌ ಆಗಿ ಬಳಸಲು ಅವಕಾಶ ನೀಡಿದರೆ ಅದು ತಪ್ಪಲ್ಲ” ಎಂದು ಹೇಳಿ ರೆಹನಾ ಫಾತಿಮಾ ಅವರ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಿದೆ.

”ಅರೆ ನಗ್ನ ದೇಹವನ್ನು ಲೈಂಗಿಕ ದೃಷ್ಟಿಯಲ್ಲಿ ನೋಡದೆ ಸಂವೇದನಾಶೀಲತೆ ಬೆಳೆಸುವ ಉದ್ದೇಶದಿಂದ ಮಕ್ಕಳಿಗೆ ಕ್ಯಾನ್ವಾಸ್‌ ರೀತಿಯಲ್ಲಿ ನಗ್ನ ಎದೆ ತೆರೆದಿಟ್ಟಿರುವುದು ತಪ್ಪಲ್ಲ” ಹೈಕೋರ್ಟ್ ಹೇಳಿದೆ.

”ಸ್ತ್ರೀಯರ ದೇಹದ ವಿಚಾರದಲ್ಲಿ ಪುರುಷಪ್ರಧಾನ ಸಮಾಜ ಹೊಂದಿರುವ ನಂಬಿಕೆ ಮತ್ತು ಕಲ್ಪನೆಯನ್ನು ಪ್ರಶ್ನಿಸಿಲು ಮತ್ತು ಮಕ್ಕಳಿಗೆ ಲೈಂಗಿಕ ಶಿಕ್ಷಣ ನೀಡುವ ಉದ್ದೇಶದಿಂದ ಈ ವಿಡಿಯೋ ಮಾಡಿದ್ದೇನೆ” ಎಂದು ಸಾಮಾಜಿಕ ಕಾರ್ಯಕರ್ತೆ ರೆಹನಾ ಫಾತಿಮಾ ಅವರು ಹೇಳಿದ್ದರು. ಅವರ ಈ ಹೇಳಿಕೆಯನ್ನು ಮಾನ್ಯ ಮಾಡಿದ ಹೈಕೋರ್ಟ್, ವಿಡಿಯೋ ಅಶ್ಲೀಲ ಉದ್ದೇಶದಿಂದ ಕೂಡಿಲ್ಲ ಎಂದು ತೀರ್ಪು ನೀಡಿತು.

“ನಗ್ನತೆಯನ್ನು ಲೈಂಗಿಕತೆಗೆ ಜೋಡಿಸಬಾರದು. ಮಹಿಳೆಯರ ಬೆತ್ತಲೆ ದೇಹದ ಮೇಲ್ಭಾಗದ ನೋಟವು ಪೂರ್ವನಿಯೋಜಿತವಾಗಿ ಲೈಂಗಿಕವಾಗಿದೆ ಎಂದು ಪರಿಗಣಿಸಬಾರದೆಂದು” ನ್ಯಾಯಮೂರ್ತಿ ಎಡಪ್ಪಗತ್ ಹೇಳಿದರು.

ಇದನ್ನೂ ಓದಿ: ಮೃತದೇಹದ ಮೇಲಿನ ಲೈಂಗಿಕ ದೌರ್ಜನ್ಯ ಅಪರಾಧವಲ್ಲ: ಆರೋಪಿಯನ್ನು ಖುಲಾಸೆಗೊಳಿಸಿದ ಕರ್ನಾಟಕ ಹೈಕೋರ್ಟ್

”ಸಾಮಾಜಿಕ ಕಾರ್ಯಕರ್ತೆ ಫಾತಿಮಾ ಅವರು ಮಕ್ಕಳನ್ನು ಯಾವುದೇ ಲೈಂಗಿಕ ಕ್ರಿಯೆಗಳಿಗೆ ಮತ್ತು ಲೈಂಗಿಕ ತೃಪ್ತಿಗಾಗಿ ಬಳಸಿಕೊಳ್ಳಲಾಗಿದೆ ಎಂದು ಊಹಿಸಲು ಸಾಧ್ಯವಿಲ್ಲ. ಫಾತಿಮಾ ತನ್ನ ದೇಹವನ್ನು ತನ್ನ ಮಕ್ಕಳಿಗೆ ಚಿತ್ರಿಸಲು ಕ್ಯಾನ್ವಾಸ್ ಆಗಿ ಬಳಸಿದ್ದಳು” ಎಂದು ನ್ಯಾಯಾಧೀಶರು ಹೇಳಿದರು.

”ಒಬ್ಬ ಮಹಿಳೆ ತನ್ನ ದೇಹದ ಬಗ್ಗೆ ಸ್ವಾಯತ್ತ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಕ್ಕು ಸಮಾನತೆ ಮತ್ತು ಗೌಪ್ಯತೆಯ ಮೂಲಭೂತ ಹಕ್ಕಿನ ತಿರುಳಾಗಿದೆ. ಇದು ಸಂವಿಧಾನದ 21 ನೇ ವಿಧಿಯಿಂದ ಖಾತರಿಪಡಿಸಿದ ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಯಲ್ಲಿ ಬರುತ್ತದೆ” ಎಂದು ನ್ಯಾಯಾಧೀಶರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಸೋಮವಾರದ ತೀರ್ಪಿನಲ್ಲಿ, ನ್ಯಾಯಾಲಯವು ಫಾತಿಮಾ ಅವರ ವಾದವನ್ನು ಒಪ್ಪಿಕೊಂಡಿತು ಮತ್ತು ಪುರುಷರ ಮೇಲಿನ ದೇಹದ ನಗ್ನ ಪ್ರದರ್ಶನವನ್ನು ಎಂದಿಗೂ ಅಶ್ಲೀಲ ಅಥವಾ ಅಸಭ್ಯವೆಂದು ಪರಿಗಣಿಸಲಾಗುವುದಿಲ್ಲ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಇದೇ ವೇಳೆ ಪ್ರಾಚೀನ ದೇವಾಲಯಗಳಲ್ಲಿ ಕೆತ್ತಿರುವ ಅರೆನಗ್ನ ಮೂರ್ತಿಗಳ ಬಗ್ಗೆಯೂ ಉಲ್ಲೇಖಿಸಿದ ಹೈಕೋರ್ಟ್‌, ಸಾರ್ವಜನಿಕ ಸ್ಥಳಗಳಲ್ಲಿ ಮುಕ್ತವಾಗಿ ಲಭ್ಯವಿರುವ ನಗ್ನ ಶಿಲ್ಪಗಳು ಮತ್ತು ವರ್ಣ ಚಿತ್ರಗಳನ್ನು ಕಲೆ ಎಂದು ಪರಿಗಣಿಸಲಾಗುತ್ತದೆ. ದೇವರ ಭಕ್ತಿಗೆ ದೇವಾಲಯಕ್ಕೆ ಹೋದಾಗಲು ಭಕ್ತರ ಮನಸ್ಸು ಅರೆನಗ್ನ ಮೂರ್ತಿಗಳನ್ನು ನೋಡೋವಾಗ ಅದನ್ನು ಕಲೆಯಾಗಿ ನೋಡಿ, ದೇವರನ್ನು ಪ್ರಾರ್ಥಿಸುತ್ತಾರೆ. ಆದರೆ ಲೈಂಗಿಕತೆಯ ದೃಷ್ಟಿಕೋನದಲ್ಲಿ ನೋಡುವುದಿಲ್ಲ’ ಎಂದು ಕೋರ್ಟ್ ಹೇಳಿದೆ.

“ಕೇರಳದ ತ್ರಿಶೂರ್‌ನಲ್ಲಿ ನಡೆಯುವ ‘ಪುಲಿಕಲಿ’ ಉತ್ಸವಗಳಲ್ಲಿ ಪುರುಷರ ದೇಹದ ಮೇಲೆ ಚಿತ್ರಿಸುವುದು ಅಂಗೀಕೃತ ಸಂಪ್ರದಾಯವಾಗಿದೆ” ಎಂದು ನ್ಯಾಯಮೂರ್ತಿ ಎಡಪ್ಪಗತ್ ಹೇಳಿದರು. ದೇವಾಲಯದಲ್ಲಿ ‘ತೆಯ್ಯಂ’ ಮತ್ತು ಇತರ ಆಚರಣೆಗಳನ್ನು ನಡೆಸಿದಾಗ, ಪುರುಷ ಕಲಾವಿದರ ದೇಹದ ಮೇಲೆ ಚಿತ್ರಕಲೆ ನಡೆಸಲಾಗುತ್ತದೆ. ಪುರುಷ ದೇಹವನ್ನು ಸಿಕ್ಸ್ ಪ್ಯಾಕ್ ಎಬಿಎಸ್, ಬೈಸೆಪ್ಸ್ ಇತ್ಯಾದಿಗಳ ರೂಪದಲ್ಲಿ ಪ್ರದರ್ಶಿಸಲಾಗುತ್ತದೆ. ಪುರುಷರು ಶರ್ಟ್ ಧರಿಸದೆ ತಿರುಗಾಡುವುದನ್ನು ನಾವು ಸಾಮಾನ್ಯವಾಗಿ ಕಾಣುತ್ತೇವೆ, ಆದರೆ ಈ ಕೃತ್ಯಗಳನ್ನು ಎಂದಿಗೂ ಅಶ್ಲೀಲ ಅಥವಾ ಅಸಭ್ಯವೆಂದು ಪರಿಗಣಿಸಲಾಗುವುದಿಲ್ಲ. ಆದರೆ ಕೆಲವು ಜನರು ಮಹಿಳೆಯ ಬೆತ್ತಲೆ ದೇಹವನ್ನು ಅತಿಯಾದ ಲೈಂಗಿಕತೆ ಅಥವಾ ಕೇವಲ ಬಯಕೆಯ ವಸ್ತು ಎಂದು ಪರಿಗಣಿಸುತ್ತಾರೆ ಎಂದು ನ್ಯಾಯಾಲಯವು ಹೇಳಿದೆ.

ನಗ್ನತೆಯನ್ನು ಅಶ್ಲೀಲ ಅಥವಾ ಅಸಭ್ಯ ಅಥವಾ ಅನೈತಿಕ ಎಂದು ವರ್ಗೀಕರಿಸುವುದೇ ಮೂಲಭೂತವಾಗಿ ತಪ್ಪು ಎಂದ ನ್ಯಾಯಮೂರ್ತಿ ಕೌಸರ್ ಎಡಪ್ಪಗತ್, ಕೆಲವು ಅಸ್ಪೃಶ್ಯ ಸಮುದಾಯದ ಮಹಿಳೆಯರು ತಮ್ಮ ಸ್ತನಗಳನ್ನು ಮುಚ್ಚುವ ಹಕ್ಕಿಗಾಗಿ ಹೋರಾಟ ನಡೆಸಿದ ರಾಜ್ಯ ಇದು. ಪುರುಷ ದೇಹದ ಸ್ವಾತಂತ್ರ್ಯವನ್ನು ಪ್ರಶ್ನಿಸುವ ಸಂಖ್ಯೆ ಕಡಿಮೆ. ಆದರೆ ಪಿತೃಪ್ರಧಾನ ವ್ಯವಸ್ಥೆಯಲ್ಲಿ ಹೆಣ್ಣು ತನ್ನ ದೇಹಕ್ಕೆ ಸಂಬಂಧಿಸಿದಂತೆ ತನ್ನದೇ ಆದ ಸ್ವತಂತ್ರ ಧೋರಣೆ ಹೊಂದುವುದಕ್ಕೆ ಅವಕಾಶ ನೀಡುವುದಿಲ್ಲ. ನಿರಂತರವಾಗಿ ಆಕೆಯನ್ನು ಬೆದರಿಸಲಾಗುತ್ತದೆ. ತಮ್ಮ ದೇಹ ಮತ್ತು ಜೀವನದ ಬಗ್ಗೆ ತಮ್ಮದೇ ಆದ ಆಯ್ಕೆಗಳನ್ನು ಮಾಡಿಕೊಳ್ಳುವುದಕ್ಕೆ ಹೆಣ್ಣಿಗೆ ಅವಕಾಶ ನೀಡುವುದಿಲ್ಲ” ಎಂದು ಹೇಳಿದರು.

ಮಹಿಳೆಯ ದೇಹದ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧ ಅಭಿಪ್ರಾಯ ರೂಪಿಸುವುದು ವೀಡಿಯೋದ ಉದ್ದೇಶವಾಗಿತ್ತು ಎಂದು ಕೋರ್ಟ್ ನಿರೂಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...