Homeಮುಖಪುಟಮಹಿಳೆಯ ನಗ್ನತೆಯನ್ನು ಲೈಂಗಿಕ ದೃಷ್ಠಿಯಿಂದ ನೋಡುವುದು ಸರಿಯಲ್ಲ: ಕೇರಳ ಹೈಕೋರ್ಟ್

ಮಹಿಳೆಯ ನಗ್ನತೆಯನ್ನು ಲೈಂಗಿಕ ದೃಷ್ಠಿಯಿಂದ ನೋಡುವುದು ಸರಿಯಲ್ಲ: ಕೇರಳ ಹೈಕೋರ್ಟ್

- Advertisement -
- Advertisement -

ಮಹಿಳೆಯ ನಗ್ನತೆಯನ್ನು ಲೈಂಗಿಕ ದೃಷ್ಠಿಯಿಂದ ಅಥವಾ ಆಶ್ಲೀಲತೆಯ ಮನೋದೃಷ್ಟಿಯಿಂದ ನೋಡೋದು ಸರಿಯಲ್ಲ, ನಗ್ನತೆಯನ್ನು ಲೈಂಗಿಕತೆಯೊಂದಿಗೆ ಸಮೀಕರಿಸುವುದು ತಪ್ಪು ಎಂದು ಕೇರಳ ಹೈಕೋರ್ಟ್ ಹೇಳಿದೆ.

ಮಹಿಳಾ ಪರ ಕಾರ್ಯಕರ್ತೆ ರೆಹಾನಾ ಫಾತಿಮಾ ಅವರು ತನ್ನ ಅರೆನಗ್ನ ದೇಹದಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಚಿತ್ರ ಬಿಡಿಸಲು ಅವಕಾಶ ನೀಡಿದ್ದಲ್ಲದೇ, ಅದನ್ನು ವಿಡಿಯೋ ಮಾಡಿ ಪ್ರಸಾರ ಮಾಡಿದ್ದರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಕೇರಳ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ ಎಂದು ಪಿಟಿಐ ವರದಿ ಮಾಡಿದೆ.

2020 ರಲ್ಲಿ ರೆಹಾನಾ ಫಾತಿಮಾ ಅವರು ತನ್ನ ಅರೆ-ನಗ್ನ ದೇಹದ ಮೇಲೆ ಅಪ್ರಾಪ್ತ ಮಕ್ಕಳು ಚಿತ್ರಿ ಬಿಡಿಸುತ್ತಿರುವುದನ್ನು ವೀಡಿಯೊ ಮಾಡಿ, ಪ್ರಸಾರ ಮಾಡಿದ್ದರು. ಆ ನಂತರ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ನ್ಯಾಯಮೂರ್ತಿ ಕೌಸರ್ ಎಡಪ್ಪಗತ್ ಅವರ ಏಕಸದಸ್ಯ ಪೀಠವು ”ಮಹಿಳೆಯ ಅರೆ ನಗ್ನ ದೇಹವನ್ನು ಯಾವಾಗಲೂ ಲೈಂಗಿಕ ಅಥವಾ ಅಶ್ಲೀಲ ದೃಷ್ಟಿಯಿಂದ ನೋಡಬಾರದು. ಮಕ್ಕಳು ಚಿತ್ರ ಬಿಡಿಸಲು ಅವರಿಗೆ ತನ್ನ ದೇಹವನ್ನೇ ಕ್ಯಾನ್ವಾಸ್‌ ಆಗಿ ಬಳಸಲು ಅವಕಾಶ ನೀಡಿದರೆ ಅದು ತಪ್ಪಲ್ಲ” ಎಂದು ಹೇಳಿ ರೆಹನಾ ಫಾತಿಮಾ ಅವರ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಿದೆ.

”ಅರೆ ನಗ್ನ ದೇಹವನ್ನು ಲೈಂಗಿಕ ದೃಷ್ಟಿಯಲ್ಲಿ ನೋಡದೆ ಸಂವೇದನಾಶೀಲತೆ ಬೆಳೆಸುವ ಉದ್ದೇಶದಿಂದ ಮಕ್ಕಳಿಗೆ ಕ್ಯಾನ್ವಾಸ್‌ ರೀತಿಯಲ್ಲಿ ನಗ್ನ ಎದೆ ತೆರೆದಿಟ್ಟಿರುವುದು ತಪ್ಪಲ್ಲ” ಹೈಕೋರ್ಟ್ ಹೇಳಿದೆ.

”ಸ್ತ್ರೀಯರ ದೇಹದ ವಿಚಾರದಲ್ಲಿ ಪುರುಷಪ್ರಧಾನ ಸಮಾಜ ಹೊಂದಿರುವ ನಂಬಿಕೆ ಮತ್ತು ಕಲ್ಪನೆಯನ್ನು ಪ್ರಶ್ನಿಸಿಲು ಮತ್ತು ಮಕ್ಕಳಿಗೆ ಲೈಂಗಿಕ ಶಿಕ್ಷಣ ನೀಡುವ ಉದ್ದೇಶದಿಂದ ಈ ವಿಡಿಯೋ ಮಾಡಿದ್ದೇನೆ” ಎಂದು ಸಾಮಾಜಿಕ ಕಾರ್ಯಕರ್ತೆ ರೆಹನಾ ಫಾತಿಮಾ ಅವರು ಹೇಳಿದ್ದರು. ಅವರ ಈ ಹೇಳಿಕೆಯನ್ನು ಮಾನ್ಯ ಮಾಡಿದ ಹೈಕೋರ್ಟ್, ವಿಡಿಯೋ ಅಶ್ಲೀಲ ಉದ್ದೇಶದಿಂದ ಕೂಡಿಲ್ಲ ಎಂದು ತೀರ್ಪು ನೀಡಿತು.

“ನಗ್ನತೆಯನ್ನು ಲೈಂಗಿಕತೆಗೆ ಜೋಡಿಸಬಾರದು. ಮಹಿಳೆಯರ ಬೆತ್ತಲೆ ದೇಹದ ಮೇಲ್ಭಾಗದ ನೋಟವು ಪೂರ್ವನಿಯೋಜಿತವಾಗಿ ಲೈಂಗಿಕವಾಗಿದೆ ಎಂದು ಪರಿಗಣಿಸಬಾರದೆಂದು” ನ್ಯಾಯಮೂರ್ತಿ ಎಡಪ್ಪಗತ್ ಹೇಳಿದರು.

ಇದನ್ನೂ ಓದಿ: ಮೃತದೇಹದ ಮೇಲಿನ ಲೈಂಗಿಕ ದೌರ್ಜನ್ಯ ಅಪರಾಧವಲ್ಲ: ಆರೋಪಿಯನ್ನು ಖುಲಾಸೆಗೊಳಿಸಿದ ಕರ್ನಾಟಕ ಹೈಕೋರ್ಟ್

”ಸಾಮಾಜಿಕ ಕಾರ್ಯಕರ್ತೆ ಫಾತಿಮಾ ಅವರು ಮಕ್ಕಳನ್ನು ಯಾವುದೇ ಲೈಂಗಿಕ ಕ್ರಿಯೆಗಳಿಗೆ ಮತ್ತು ಲೈಂಗಿಕ ತೃಪ್ತಿಗಾಗಿ ಬಳಸಿಕೊಳ್ಳಲಾಗಿದೆ ಎಂದು ಊಹಿಸಲು ಸಾಧ್ಯವಿಲ್ಲ. ಫಾತಿಮಾ ತನ್ನ ದೇಹವನ್ನು ತನ್ನ ಮಕ್ಕಳಿಗೆ ಚಿತ್ರಿಸಲು ಕ್ಯಾನ್ವಾಸ್ ಆಗಿ ಬಳಸಿದ್ದಳು” ಎಂದು ನ್ಯಾಯಾಧೀಶರು ಹೇಳಿದರು.

”ಒಬ್ಬ ಮಹಿಳೆ ತನ್ನ ದೇಹದ ಬಗ್ಗೆ ಸ್ವಾಯತ್ತ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಕ್ಕು ಸಮಾನತೆ ಮತ್ತು ಗೌಪ್ಯತೆಯ ಮೂಲಭೂತ ಹಕ್ಕಿನ ತಿರುಳಾಗಿದೆ. ಇದು ಸಂವಿಧಾನದ 21 ನೇ ವಿಧಿಯಿಂದ ಖಾತರಿಪಡಿಸಿದ ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಯಲ್ಲಿ ಬರುತ್ತದೆ” ಎಂದು ನ್ಯಾಯಾಧೀಶರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಸೋಮವಾರದ ತೀರ್ಪಿನಲ್ಲಿ, ನ್ಯಾಯಾಲಯವು ಫಾತಿಮಾ ಅವರ ವಾದವನ್ನು ಒಪ್ಪಿಕೊಂಡಿತು ಮತ್ತು ಪುರುಷರ ಮೇಲಿನ ದೇಹದ ನಗ್ನ ಪ್ರದರ್ಶನವನ್ನು ಎಂದಿಗೂ ಅಶ್ಲೀಲ ಅಥವಾ ಅಸಭ್ಯವೆಂದು ಪರಿಗಣಿಸಲಾಗುವುದಿಲ್ಲ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಇದೇ ವೇಳೆ ಪ್ರಾಚೀನ ದೇವಾಲಯಗಳಲ್ಲಿ ಕೆತ್ತಿರುವ ಅರೆನಗ್ನ ಮೂರ್ತಿಗಳ ಬಗ್ಗೆಯೂ ಉಲ್ಲೇಖಿಸಿದ ಹೈಕೋರ್ಟ್‌, ಸಾರ್ವಜನಿಕ ಸ್ಥಳಗಳಲ್ಲಿ ಮುಕ್ತವಾಗಿ ಲಭ್ಯವಿರುವ ನಗ್ನ ಶಿಲ್ಪಗಳು ಮತ್ತು ವರ್ಣ ಚಿತ್ರಗಳನ್ನು ಕಲೆ ಎಂದು ಪರಿಗಣಿಸಲಾಗುತ್ತದೆ. ದೇವರ ಭಕ್ತಿಗೆ ದೇವಾಲಯಕ್ಕೆ ಹೋದಾಗಲು ಭಕ್ತರ ಮನಸ್ಸು ಅರೆನಗ್ನ ಮೂರ್ತಿಗಳನ್ನು ನೋಡೋವಾಗ ಅದನ್ನು ಕಲೆಯಾಗಿ ನೋಡಿ, ದೇವರನ್ನು ಪ್ರಾರ್ಥಿಸುತ್ತಾರೆ. ಆದರೆ ಲೈಂಗಿಕತೆಯ ದೃಷ್ಟಿಕೋನದಲ್ಲಿ ನೋಡುವುದಿಲ್ಲ’ ಎಂದು ಕೋರ್ಟ್ ಹೇಳಿದೆ.

“ಕೇರಳದ ತ್ರಿಶೂರ್‌ನಲ್ಲಿ ನಡೆಯುವ ‘ಪುಲಿಕಲಿ’ ಉತ್ಸವಗಳಲ್ಲಿ ಪುರುಷರ ದೇಹದ ಮೇಲೆ ಚಿತ್ರಿಸುವುದು ಅಂಗೀಕೃತ ಸಂಪ್ರದಾಯವಾಗಿದೆ” ಎಂದು ನ್ಯಾಯಮೂರ್ತಿ ಎಡಪ್ಪಗತ್ ಹೇಳಿದರು. ದೇವಾಲಯದಲ್ಲಿ ‘ತೆಯ್ಯಂ’ ಮತ್ತು ಇತರ ಆಚರಣೆಗಳನ್ನು ನಡೆಸಿದಾಗ, ಪುರುಷ ಕಲಾವಿದರ ದೇಹದ ಮೇಲೆ ಚಿತ್ರಕಲೆ ನಡೆಸಲಾಗುತ್ತದೆ. ಪುರುಷ ದೇಹವನ್ನು ಸಿಕ್ಸ್ ಪ್ಯಾಕ್ ಎಬಿಎಸ್, ಬೈಸೆಪ್ಸ್ ಇತ್ಯಾದಿಗಳ ರೂಪದಲ್ಲಿ ಪ್ರದರ್ಶಿಸಲಾಗುತ್ತದೆ. ಪುರುಷರು ಶರ್ಟ್ ಧರಿಸದೆ ತಿರುಗಾಡುವುದನ್ನು ನಾವು ಸಾಮಾನ್ಯವಾಗಿ ಕಾಣುತ್ತೇವೆ, ಆದರೆ ಈ ಕೃತ್ಯಗಳನ್ನು ಎಂದಿಗೂ ಅಶ್ಲೀಲ ಅಥವಾ ಅಸಭ್ಯವೆಂದು ಪರಿಗಣಿಸಲಾಗುವುದಿಲ್ಲ. ಆದರೆ ಕೆಲವು ಜನರು ಮಹಿಳೆಯ ಬೆತ್ತಲೆ ದೇಹವನ್ನು ಅತಿಯಾದ ಲೈಂಗಿಕತೆ ಅಥವಾ ಕೇವಲ ಬಯಕೆಯ ವಸ್ತು ಎಂದು ಪರಿಗಣಿಸುತ್ತಾರೆ ಎಂದು ನ್ಯಾಯಾಲಯವು ಹೇಳಿದೆ.

ನಗ್ನತೆಯನ್ನು ಅಶ್ಲೀಲ ಅಥವಾ ಅಸಭ್ಯ ಅಥವಾ ಅನೈತಿಕ ಎಂದು ವರ್ಗೀಕರಿಸುವುದೇ ಮೂಲಭೂತವಾಗಿ ತಪ್ಪು ಎಂದ ನ್ಯಾಯಮೂರ್ತಿ ಕೌಸರ್ ಎಡಪ್ಪಗತ್, ಕೆಲವು ಅಸ್ಪೃಶ್ಯ ಸಮುದಾಯದ ಮಹಿಳೆಯರು ತಮ್ಮ ಸ್ತನಗಳನ್ನು ಮುಚ್ಚುವ ಹಕ್ಕಿಗಾಗಿ ಹೋರಾಟ ನಡೆಸಿದ ರಾಜ್ಯ ಇದು. ಪುರುಷ ದೇಹದ ಸ್ವಾತಂತ್ರ್ಯವನ್ನು ಪ್ರಶ್ನಿಸುವ ಸಂಖ್ಯೆ ಕಡಿಮೆ. ಆದರೆ ಪಿತೃಪ್ರಧಾನ ವ್ಯವಸ್ಥೆಯಲ್ಲಿ ಹೆಣ್ಣು ತನ್ನ ದೇಹಕ್ಕೆ ಸಂಬಂಧಿಸಿದಂತೆ ತನ್ನದೇ ಆದ ಸ್ವತಂತ್ರ ಧೋರಣೆ ಹೊಂದುವುದಕ್ಕೆ ಅವಕಾಶ ನೀಡುವುದಿಲ್ಲ. ನಿರಂತರವಾಗಿ ಆಕೆಯನ್ನು ಬೆದರಿಸಲಾಗುತ್ತದೆ. ತಮ್ಮ ದೇಹ ಮತ್ತು ಜೀವನದ ಬಗ್ಗೆ ತಮ್ಮದೇ ಆದ ಆಯ್ಕೆಗಳನ್ನು ಮಾಡಿಕೊಳ್ಳುವುದಕ್ಕೆ ಹೆಣ್ಣಿಗೆ ಅವಕಾಶ ನೀಡುವುದಿಲ್ಲ” ಎಂದು ಹೇಳಿದರು.

ಮಹಿಳೆಯ ದೇಹದ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧ ಅಭಿಪ್ರಾಯ ರೂಪಿಸುವುದು ವೀಡಿಯೋದ ಉದ್ದೇಶವಾಗಿತ್ತು ಎಂದು ಕೋರ್ಟ್ ನಿರೂಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...