HomeUncategorizedಚಪ್ಪಾಳೆ ಬದಲು ಜಾಗಟೆ, ದೀಪದ ಬದಲು ದೊಂದಿಗಳು : ಇದು ಯಾರ ಮುರ್ಖತನ?

ಚಪ್ಪಾಳೆ ಬದಲು ಜಾಗಟೆ, ದೀಪದ ಬದಲು ದೊಂದಿಗಳು : ಇದು ಯಾರ ಮುರ್ಖತನ?

ಕೆಲವು ಜನ ದೀಪ ಹಚ್ಚುವುದರ ಬದಲು ದೊಂದಿ ಹಿಡಿದು ಬೀದಿಗಿಳಿದರು. ಮನಸೋ ಇಚ್ಛೆ ಪಟಾಕಿ ಸಿಡಿಸಿದರು. ಗುಂಪು ಗುಂಪಾಗಿ ಸೇರಿ ಬೆಂಕಿ ಹಾಕಿ ಕೂಗಾಡಿದರು. ಒಟ್ಟಿನಲ್ಲಿ ಲಾಕ್‌ಡೌನ್‌ನ ಮುಖ್ಯ ಉದ್ದೇಶ ಸಾಮಾಜಿಕ ಅಂತರದಲ್ಲಿರಬೇಕಾದುದ್ದನ್ನು ಮಣ್ಣು ಪಾಲು ಮಾಡಿದರು.

- Advertisement -
- Advertisement -

ಒಂದೆಡೆ ದೇಶದಲ್ಲಿ ವೈದ್ಯಕೀಯ ಸಿಬ್ಬಂದಿಗಳ ಕೊರತೆಯಿದೆ. ದೇಶ ವೈದ್ಯಕೀಯ ಸಲಕರಣೆ ಮತ್ತು ಜೀವ ರಕ್ಷಕಗಳ ಕೊರತೆ ಎದುರಿಸುತ್ತಿದೆ. ಉಚಿತ ವೈದ್ಯಕೀಯ ಸೌಲಭ್ಯ ನೀಡುವಂತೆ ಜನ ಆಗ್ರಹಿಸುತ್ತಿದ್ದಾರೆ. ಕೊರೋನಾ ಮಹಾಮಾರಿ ವೈದ್ಯಕೀಯ ಸಿಬ್ಬಂದಿಗಳನ್ನು, ಐಎಎಸ್ ಅಧಿಕಾರಿಗಳನ್ನು ಕೂಡ ಬಿಡದೇ ವ್ಯಾಪಿಸುತ್ತಿದೆ. ಇಂತಹ ಸಂದರ್ಭದಲ್ಲಿ ಕೂಡಲೇ ಸಾಕಷ್ಟು ವೈದ್ಯಕೀಯ ಸಲಕರಣೆಗಳ ಒದಗಿಸಲು ಮುಂದಾಗಬೇಕಿದ್ದ ಪ್ರಧಾನಿಗಳು ಒಗ್ಗಟ್ಟಿನ ಮಂತ್ರದ ಹೆಸರಲ್ಲಿ ಜನರ ಜೀವವನ್ನು ಸಾವಿನೆಡೆಗೆ ತಳ್ಳುತ್ತಿದ್ದಾರೆ.

ಕೋವಿಡ್ -19 ಹಿನ್ನೆಲೆಯಲ್ಲಿ ಜನತಾ ಕರ್ಫ್ಯೂ ದಿನ ಚಪ್ಪಾಳೆ ತಟ್ಟಲು ಮೋದಿ ಕೋರಿದ್ದರು. ನಮ್ಮ ರಾಜ್ಯದ ರಾಜ್ಯಪಾಲರಾದ ವಜುಭಾಯಿ ವಾಲಾ ಸೇರಿದಂತೆ ಅನೇಕ ಶಾಸಕರು, ಸಚಿವರು, ಸಂಸದರು ಸಾಮಾಜಿಕ ಅಂತರವನ್ನು ಉಲ್ಲಂಘಿಸಿ ಮೋದಿಯ ಚಪ್ಪಾಳೆಯ ಕರೆಯಿಂದಾಗಿ ಬೀದಿಗಿಳಿದಿದ್ದರು. ಮನೆಯ ಬಾಲ್ಕನಿಯ ಮುಂದೆ ನಿಂತು ಚಪ್ಪಾಳೆ ತಟ್ಟಿ ಎಂದಿದ್ದಕ್ಕೆ ಈ ರೀತಿಯ ಮೂರ್ಖತನವನ್ನು ಜನ ಪ್ರದರ್ಶಿಸಿದ್ದರು.

ಸಾಮಾಜಿಕ ಅಂತರವನ್ನು ದೇಶದಾದ್ಯಂತ ಉಲ್ಲಂಘಿಸಿ. ಬೀದಿಯಲ್ಲಿ ಜಾಥಾ ಮಾಡಿ ತಟ್ಟೆ ಜಾಗಟೆಗಳನ್ನು ಬಡಿದಾಗಲಾದರೂ ದೇಶದ ಪ್ರಧಾನಿ ಮೋದಿಯವರು ಇದೆ ರೀತಿಯ ಇನ್ನೊಂದು ಕರೆ ಕೊಡುವ ಮುನ್ನ ಯೋಚಿಸಬೇಕಿತ್ತು. ಆದರೆ ಹಾಗಾಗಲಿಲ್ಲ. ಭಾರತದಲ್ಲಿ 4067 ಪ್ರಕರಣಗಳು ಬೆಳಕಿಗೆ ಬಂದಿವೆ. 109 ಮಂದಿ ಮೃತಪಟ್ಟಿದ್ದಾರೆ. ದಿನದಿಂದ ದಿನಕ್ಕೆ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಹೀಗಿದ್ದ ಪರಿಸ್ಥಿಯಲ್ಲಿ ಮತ್ತೆ ಮನೆ ಮುಂದೆ ದೀಪಗಳನ್ನು ಬೆಳಗಲು ಹೇಳಿದರೆ ಜನರು ಏನು ಮಾಡಬಹುದು ಎಂಬ ಊಹೆ ಪ್ರಧಾನಿ ಮೋದಿಯವರಿಗೆ ಇರಬೇಕಿತ್ತು. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಅವಶ್ಯಕತೆ ಮತ್ತು ಅನಿವಾರ್ಯತೆ ಇರುವ ಸಂದರ್ಭದಲ್ಲಿ ಈ ರೀತಿಯ ಕರೆ ಕೊಡುವುದು ಎಷ್ಟು ಸರಿ?

ಕೊನೆಗೂ ಪರಿಸ್ಥಿತಿ ಕೈಮೀರಿತು. ಕೆಲವು ಜನ ದೀಪ ಹಚ್ಚುವುದರ ಬದಲು ದೊಂದಿ ಹಿಡಿದು ಬೀದಿಗಿಳಿದರು. ಮನಸೋ ಇಚ್ಛೆ ಪಟಾಕಿ ಸಿಡಿಸಿದರು. ಗುಂಪು ಗುಂಪಾಗಿ ಸೇರಿ ಬೆಂಕಿ ಹಾಕಿ ಕೂಗಾಡಿದರು. ಒಟ್ಟಿನಲ್ಲಿ ಲಾಕ್‌ಡೌನ್‌ನ ಮುಖ್ಯ ಉದ್ದೇಶ ಸಾಮಾಜಿಕ ಅಂತರದಲ್ಲಿರಬೇಕಾದುದ್ದನ್ನು ಮಣ್ಣು ಪಾಲು ಮಾಡಿದರು. ಇದಕ್ಕೆ ನಾವು ಯಾರನ್ನು ದೂರೋಣ?

ಪ್ರಧಾನಿಗಳು ವೈದ್ಯಕೀಯ ಅಗತ್ಯಗಳೆಡೆ ಗಮನ ನೀಡಬೇಕು. ಜನರನ್ನು ರಕ್ಷಣೆ ಮಾಡಬೇಕು. ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿ ಹೇಳಬೇಕು. ಜಾಗೃತಿ ಮೂಡಿಸುವ ಬದಲಾಗಿ ಒಂದರ ಮೇಲೊಂದು ಕರೆ ಕೊಡುವುದು ಎಷ್ಟು ಸರಿ ? ದೇಶದ ಜನರನ್ನು ನಿಯಂತ್ರಿಸುವುದು ಎಷ್ಟು ಕಷ್ಟ ಎಂದು ಅರಿತ ಮೇಲು ದೇಶದ ಪ್ರಧಾನಿಯವರು ಹೀಗೆ ಮಾಡುತ್ತಾರೆ ಎಂದರೆ ಏನನ್ನುವುದು? ಇದು ಪ್ರಧಾನಿಯವರ ಮೂರ್ಖತನವೋ ಅಥವಾ ಜನರ ಮೂರ್ಖತನವೋ?

(ಲೇಖಕರು ಸಾಮಾಜಿಕ ಕಾರ್ಯಕರ್ತರು. ಅಭಿಪ್ರಾಯಗಳು ವಯಕ್ತಿಕವಾದವುಗಳು)


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...