HomeUncategorizedಚಪ್ಪಾಳೆ ಬದಲು ಜಾಗಟೆ, ದೀಪದ ಬದಲು ದೊಂದಿಗಳು : ಇದು ಯಾರ ಮುರ್ಖತನ?

ಚಪ್ಪಾಳೆ ಬದಲು ಜಾಗಟೆ, ದೀಪದ ಬದಲು ದೊಂದಿಗಳು : ಇದು ಯಾರ ಮುರ್ಖತನ?

ಕೆಲವು ಜನ ದೀಪ ಹಚ್ಚುವುದರ ಬದಲು ದೊಂದಿ ಹಿಡಿದು ಬೀದಿಗಿಳಿದರು. ಮನಸೋ ಇಚ್ಛೆ ಪಟಾಕಿ ಸಿಡಿಸಿದರು. ಗುಂಪು ಗುಂಪಾಗಿ ಸೇರಿ ಬೆಂಕಿ ಹಾಕಿ ಕೂಗಾಡಿದರು. ಒಟ್ಟಿನಲ್ಲಿ ಲಾಕ್‌ಡೌನ್‌ನ ಮುಖ್ಯ ಉದ್ದೇಶ ಸಾಮಾಜಿಕ ಅಂತರದಲ್ಲಿರಬೇಕಾದುದ್ದನ್ನು ಮಣ್ಣು ಪಾಲು ಮಾಡಿದರು.

- Advertisement -
- Advertisement -

ಒಂದೆಡೆ ದೇಶದಲ್ಲಿ ವೈದ್ಯಕೀಯ ಸಿಬ್ಬಂದಿಗಳ ಕೊರತೆಯಿದೆ. ದೇಶ ವೈದ್ಯಕೀಯ ಸಲಕರಣೆ ಮತ್ತು ಜೀವ ರಕ್ಷಕಗಳ ಕೊರತೆ ಎದುರಿಸುತ್ತಿದೆ. ಉಚಿತ ವೈದ್ಯಕೀಯ ಸೌಲಭ್ಯ ನೀಡುವಂತೆ ಜನ ಆಗ್ರಹಿಸುತ್ತಿದ್ದಾರೆ. ಕೊರೋನಾ ಮಹಾಮಾರಿ ವೈದ್ಯಕೀಯ ಸಿಬ್ಬಂದಿಗಳನ್ನು, ಐಎಎಸ್ ಅಧಿಕಾರಿಗಳನ್ನು ಕೂಡ ಬಿಡದೇ ವ್ಯಾಪಿಸುತ್ತಿದೆ. ಇಂತಹ ಸಂದರ್ಭದಲ್ಲಿ ಕೂಡಲೇ ಸಾಕಷ್ಟು ವೈದ್ಯಕೀಯ ಸಲಕರಣೆಗಳ ಒದಗಿಸಲು ಮುಂದಾಗಬೇಕಿದ್ದ ಪ್ರಧಾನಿಗಳು ಒಗ್ಗಟ್ಟಿನ ಮಂತ್ರದ ಹೆಸರಲ್ಲಿ ಜನರ ಜೀವವನ್ನು ಸಾವಿನೆಡೆಗೆ ತಳ್ಳುತ್ತಿದ್ದಾರೆ.

ಕೋವಿಡ್ -19 ಹಿನ್ನೆಲೆಯಲ್ಲಿ ಜನತಾ ಕರ್ಫ್ಯೂ ದಿನ ಚಪ್ಪಾಳೆ ತಟ್ಟಲು ಮೋದಿ ಕೋರಿದ್ದರು. ನಮ್ಮ ರಾಜ್ಯದ ರಾಜ್ಯಪಾಲರಾದ ವಜುಭಾಯಿ ವಾಲಾ ಸೇರಿದಂತೆ ಅನೇಕ ಶಾಸಕರು, ಸಚಿವರು, ಸಂಸದರು ಸಾಮಾಜಿಕ ಅಂತರವನ್ನು ಉಲ್ಲಂಘಿಸಿ ಮೋದಿಯ ಚಪ್ಪಾಳೆಯ ಕರೆಯಿಂದಾಗಿ ಬೀದಿಗಿಳಿದಿದ್ದರು. ಮನೆಯ ಬಾಲ್ಕನಿಯ ಮುಂದೆ ನಿಂತು ಚಪ್ಪಾಳೆ ತಟ್ಟಿ ಎಂದಿದ್ದಕ್ಕೆ ಈ ರೀತಿಯ ಮೂರ್ಖತನವನ್ನು ಜನ ಪ್ರದರ್ಶಿಸಿದ್ದರು.

ಸಾಮಾಜಿಕ ಅಂತರವನ್ನು ದೇಶದಾದ್ಯಂತ ಉಲ್ಲಂಘಿಸಿ. ಬೀದಿಯಲ್ಲಿ ಜಾಥಾ ಮಾಡಿ ತಟ್ಟೆ ಜಾಗಟೆಗಳನ್ನು ಬಡಿದಾಗಲಾದರೂ ದೇಶದ ಪ್ರಧಾನಿ ಮೋದಿಯವರು ಇದೆ ರೀತಿಯ ಇನ್ನೊಂದು ಕರೆ ಕೊಡುವ ಮುನ್ನ ಯೋಚಿಸಬೇಕಿತ್ತು. ಆದರೆ ಹಾಗಾಗಲಿಲ್ಲ. ಭಾರತದಲ್ಲಿ 4067 ಪ್ರಕರಣಗಳು ಬೆಳಕಿಗೆ ಬಂದಿವೆ. 109 ಮಂದಿ ಮೃತಪಟ್ಟಿದ್ದಾರೆ. ದಿನದಿಂದ ದಿನಕ್ಕೆ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಹೀಗಿದ್ದ ಪರಿಸ್ಥಿಯಲ್ಲಿ ಮತ್ತೆ ಮನೆ ಮುಂದೆ ದೀಪಗಳನ್ನು ಬೆಳಗಲು ಹೇಳಿದರೆ ಜನರು ಏನು ಮಾಡಬಹುದು ಎಂಬ ಊಹೆ ಪ್ರಧಾನಿ ಮೋದಿಯವರಿಗೆ ಇರಬೇಕಿತ್ತು. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಅವಶ್ಯಕತೆ ಮತ್ತು ಅನಿವಾರ್ಯತೆ ಇರುವ ಸಂದರ್ಭದಲ್ಲಿ ಈ ರೀತಿಯ ಕರೆ ಕೊಡುವುದು ಎಷ್ಟು ಸರಿ?

ಕೊನೆಗೂ ಪರಿಸ್ಥಿತಿ ಕೈಮೀರಿತು. ಕೆಲವು ಜನ ದೀಪ ಹಚ್ಚುವುದರ ಬದಲು ದೊಂದಿ ಹಿಡಿದು ಬೀದಿಗಿಳಿದರು. ಮನಸೋ ಇಚ್ಛೆ ಪಟಾಕಿ ಸಿಡಿಸಿದರು. ಗುಂಪು ಗುಂಪಾಗಿ ಸೇರಿ ಬೆಂಕಿ ಹಾಕಿ ಕೂಗಾಡಿದರು. ಒಟ್ಟಿನಲ್ಲಿ ಲಾಕ್‌ಡೌನ್‌ನ ಮುಖ್ಯ ಉದ್ದೇಶ ಸಾಮಾಜಿಕ ಅಂತರದಲ್ಲಿರಬೇಕಾದುದ್ದನ್ನು ಮಣ್ಣು ಪಾಲು ಮಾಡಿದರು. ಇದಕ್ಕೆ ನಾವು ಯಾರನ್ನು ದೂರೋಣ?

ಪ್ರಧಾನಿಗಳು ವೈದ್ಯಕೀಯ ಅಗತ್ಯಗಳೆಡೆ ಗಮನ ನೀಡಬೇಕು. ಜನರನ್ನು ರಕ್ಷಣೆ ಮಾಡಬೇಕು. ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿ ಹೇಳಬೇಕು. ಜಾಗೃತಿ ಮೂಡಿಸುವ ಬದಲಾಗಿ ಒಂದರ ಮೇಲೊಂದು ಕರೆ ಕೊಡುವುದು ಎಷ್ಟು ಸರಿ ? ದೇಶದ ಜನರನ್ನು ನಿಯಂತ್ರಿಸುವುದು ಎಷ್ಟು ಕಷ್ಟ ಎಂದು ಅರಿತ ಮೇಲು ದೇಶದ ಪ್ರಧಾನಿಯವರು ಹೀಗೆ ಮಾಡುತ್ತಾರೆ ಎಂದರೆ ಏನನ್ನುವುದು? ಇದು ಪ್ರಧಾನಿಯವರ ಮೂರ್ಖತನವೋ ಅಥವಾ ಜನರ ಮೂರ್ಖತನವೋ?

(ಲೇಖಕರು ಸಾಮಾಜಿಕ ಕಾರ್ಯಕರ್ತರು. ಅಭಿಪ್ರಾಯಗಳು ವಯಕ್ತಿಕವಾದವುಗಳು)


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...