HomeUncategorizedಚಪ್ಪಾಳೆ ಬದಲು ಜಾಗಟೆ, ದೀಪದ ಬದಲು ದೊಂದಿಗಳು : ಇದು ಯಾರ ಮುರ್ಖತನ?

ಚಪ್ಪಾಳೆ ಬದಲು ಜಾಗಟೆ, ದೀಪದ ಬದಲು ದೊಂದಿಗಳು : ಇದು ಯಾರ ಮುರ್ಖತನ?

ಕೆಲವು ಜನ ದೀಪ ಹಚ್ಚುವುದರ ಬದಲು ದೊಂದಿ ಹಿಡಿದು ಬೀದಿಗಿಳಿದರು. ಮನಸೋ ಇಚ್ಛೆ ಪಟಾಕಿ ಸಿಡಿಸಿದರು. ಗುಂಪು ಗುಂಪಾಗಿ ಸೇರಿ ಬೆಂಕಿ ಹಾಕಿ ಕೂಗಾಡಿದರು. ಒಟ್ಟಿನಲ್ಲಿ ಲಾಕ್‌ಡೌನ್‌ನ ಮುಖ್ಯ ಉದ್ದೇಶ ಸಾಮಾಜಿಕ ಅಂತರದಲ್ಲಿರಬೇಕಾದುದ್ದನ್ನು ಮಣ್ಣು ಪಾಲು ಮಾಡಿದರು.

- Advertisement -
- Advertisement -

ಒಂದೆಡೆ ದೇಶದಲ್ಲಿ ವೈದ್ಯಕೀಯ ಸಿಬ್ಬಂದಿಗಳ ಕೊರತೆಯಿದೆ. ದೇಶ ವೈದ್ಯಕೀಯ ಸಲಕರಣೆ ಮತ್ತು ಜೀವ ರಕ್ಷಕಗಳ ಕೊರತೆ ಎದುರಿಸುತ್ತಿದೆ. ಉಚಿತ ವೈದ್ಯಕೀಯ ಸೌಲಭ್ಯ ನೀಡುವಂತೆ ಜನ ಆಗ್ರಹಿಸುತ್ತಿದ್ದಾರೆ. ಕೊರೋನಾ ಮಹಾಮಾರಿ ವೈದ್ಯಕೀಯ ಸಿಬ್ಬಂದಿಗಳನ್ನು, ಐಎಎಸ್ ಅಧಿಕಾರಿಗಳನ್ನು ಕೂಡ ಬಿಡದೇ ವ್ಯಾಪಿಸುತ್ತಿದೆ. ಇಂತಹ ಸಂದರ್ಭದಲ್ಲಿ ಕೂಡಲೇ ಸಾಕಷ್ಟು ವೈದ್ಯಕೀಯ ಸಲಕರಣೆಗಳ ಒದಗಿಸಲು ಮುಂದಾಗಬೇಕಿದ್ದ ಪ್ರಧಾನಿಗಳು ಒಗ್ಗಟ್ಟಿನ ಮಂತ್ರದ ಹೆಸರಲ್ಲಿ ಜನರ ಜೀವವನ್ನು ಸಾವಿನೆಡೆಗೆ ತಳ್ಳುತ್ತಿದ್ದಾರೆ.

ಕೋವಿಡ್ -19 ಹಿನ್ನೆಲೆಯಲ್ಲಿ ಜನತಾ ಕರ್ಫ್ಯೂ ದಿನ ಚಪ್ಪಾಳೆ ತಟ್ಟಲು ಮೋದಿ ಕೋರಿದ್ದರು. ನಮ್ಮ ರಾಜ್ಯದ ರಾಜ್ಯಪಾಲರಾದ ವಜುಭಾಯಿ ವಾಲಾ ಸೇರಿದಂತೆ ಅನೇಕ ಶಾಸಕರು, ಸಚಿವರು, ಸಂಸದರು ಸಾಮಾಜಿಕ ಅಂತರವನ್ನು ಉಲ್ಲಂಘಿಸಿ ಮೋದಿಯ ಚಪ್ಪಾಳೆಯ ಕರೆಯಿಂದಾಗಿ ಬೀದಿಗಿಳಿದಿದ್ದರು. ಮನೆಯ ಬಾಲ್ಕನಿಯ ಮುಂದೆ ನಿಂತು ಚಪ್ಪಾಳೆ ತಟ್ಟಿ ಎಂದಿದ್ದಕ್ಕೆ ಈ ರೀತಿಯ ಮೂರ್ಖತನವನ್ನು ಜನ ಪ್ರದರ್ಶಿಸಿದ್ದರು.

ಸಾಮಾಜಿಕ ಅಂತರವನ್ನು ದೇಶದಾದ್ಯಂತ ಉಲ್ಲಂಘಿಸಿ. ಬೀದಿಯಲ್ಲಿ ಜಾಥಾ ಮಾಡಿ ತಟ್ಟೆ ಜಾಗಟೆಗಳನ್ನು ಬಡಿದಾಗಲಾದರೂ ದೇಶದ ಪ್ರಧಾನಿ ಮೋದಿಯವರು ಇದೆ ರೀತಿಯ ಇನ್ನೊಂದು ಕರೆ ಕೊಡುವ ಮುನ್ನ ಯೋಚಿಸಬೇಕಿತ್ತು. ಆದರೆ ಹಾಗಾಗಲಿಲ್ಲ. ಭಾರತದಲ್ಲಿ 4067 ಪ್ರಕರಣಗಳು ಬೆಳಕಿಗೆ ಬಂದಿವೆ. 109 ಮಂದಿ ಮೃತಪಟ್ಟಿದ್ದಾರೆ. ದಿನದಿಂದ ದಿನಕ್ಕೆ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಹೀಗಿದ್ದ ಪರಿಸ್ಥಿಯಲ್ಲಿ ಮತ್ತೆ ಮನೆ ಮುಂದೆ ದೀಪಗಳನ್ನು ಬೆಳಗಲು ಹೇಳಿದರೆ ಜನರು ಏನು ಮಾಡಬಹುದು ಎಂಬ ಊಹೆ ಪ್ರಧಾನಿ ಮೋದಿಯವರಿಗೆ ಇರಬೇಕಿತ್ತು. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಅವಶ್ಯಕತೆ ಮತ್ತು ಅನಿವಾರ್ಯತೆ ಇರುವ ಸಂದರ್ಭದಲ್ಲಿ ಈ ರೀತಿಯ ಕರೆ ಕೊಡುವುದು ಎಷ್ಟು ಸರಿ?

ಕೊನೆಗೂ ಪರಿಸ್ಥಿತಿ ಕೈಮೀರಿತು. ಕೆಲವು ಜನ ದೀಪ ಹಚ್ಚುವುದರ ಬದಲು ದೊಂದಿ ಹಿಡಿದು ಬೀದಿಗಿಳಿದರು. ಮನಸೋ ಇಚ್ಛೆ ಪಟಾಕಿ ಸಿಡಿಸಿದರು. ಗುಂಪು ಗುಂಪಾಗಿ ಸೇರಿ ಬೆಂಕಿ ಹಾಕಿ ಕೂಗಾಡಿದರು. ಒಟ್ಟಿನಲ್ಲಿ ಲಾಕ್‌ಡೌನ್‌ನ ಮುಖ್ಯ ಉದ್ದೇಶ ಸಾಮಾಜಿಕ ಅಂತರದಲ್ಲಿರಬೇಕಾದುದ್ದನ್ನು ಮಣ್ಣು ಪಾಲು ಮಾಡಿದರು. ಇದಕ್ಕೆ ನಾವು ಯಾರನ್ನು ದೂರೋಣ?

ಪ್ರಧಾನಿಗಳು ವೈದ್ಯಕೀಯ ಅಗತ್ಯಗಳೆಡೆ ಗಮನ ನೀಡಬೇಕು. ಜನರನ್ನು ರಕ್ಷಣೆ ಮಾಡಬೇಕು. ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿ ಹೇಳಬೇಕು. ಜಾಗೃತಿ ಮೂಡಿಸುವ ಬದಲಾಗಿ ಒಂದರ ಮೇಲೊಂದು ಕರೆ ಕೊಡುವುದು ಎಷ್ಟು ಸರಿ ? ದೇಶದ ಜನರನ್ನು ನಿಯಂತ್ರಿಸುವುದು ಎಷ್ಟು ಕಷ್ಟ ಎಂದು ಅರಿತ ಮೇಲು ದೇಶದ ಪ್ರಧಾನಿಯವರು ಹೀಗೆ ಮಾಡುತ್ತಾರೆ ಎಂದರೆ ಏನನ್ನುವುದು? ಇದು ಪ್ರಧಾನಿಯವರ ಮೂರ್ಖತನವೋ ಅಥವಾ ಜನರ ಮೂರ್ಖತನವೋ?

(ಲೇಖಕರು ಸಾಮಾಜಿಕ ಕಾರ್ಯಕರ್ತರು. ಅಭಿಪ್ರಾಯಗಳು ವಯಕ್ತಿಕವಾದವುಗಳು)


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...