HomeUncategorizedಚಪ್ಪಾಳೆ ಬದಲು ಜಾಗಟೆ, ದೀಪದ ಬದಲು ದೊಂದಿಗಳು : ಇದು ಯಾರ ಮುರ್ಖತನ?

ಚಪ್ಪಾಳೆ ಬದಲು ಜಾಗಟೆ, ದೀಪದ ಬದಲು ದೊಂದಿಗಳು : ಇದು ಯಾರ ಮುರ್ಖತನ?

ಕೆಲವು ಜನ ದೀಪ ಹಚ್ಚುವುದರ ಬದಲು ದೊಂದಿ ಹಿಡಿದು ಬೀದಿಗಿಳಿದರು. ಮನಸೋ ಇಚ್ಛೆ ಪಟಾಕಿ ಸಿಡಿಸಿದರು. ಗುಂಪು ಗುಂಪಾಗಿ ಸೇರಿ ಬೆಂಕಿ ಹಾಕಿ ಕೂಗಾಡಿದರು. ಒಟ್ಟಿನಲ್ಲಿ ಲಾಕ್‌ಡೌನ್‌ನ ಮುಖ್ಯ ಉದ್ದೇಶ ಸಾಮಾಜಿಕ ಅಂತರದಲ್ಲಿರಬೇಕಾದುದ್ದನ್ನು ಮಣ್ಣು ಪಾಲು ಮಾಡಿದರು.

- Advertisement -
- Advertisement -

ಒಂದೆಡೆ ದೇಶದಲ್ಲಿ ವೈದ್ಯಕೀಯ ಸಿಬ್ಬಂದಿಗಳ ಕೊರತೆಯಿದೆ. ದೇಶ ವೈದ್ಯಕೀಯ ಸಲಕರಣೆ ಮತ್ತು ಜೀವ ರಕ್ಷಕಗಳ ಕೊರತೆ ಎದುರಿಸುತ್ತಿದೆ. ಉಚಿತ ವೈದ್ಯಕೀಯ ಸೌಲಭ್ಯ ನೀಡುವಂತೆ ಜನ ಆಗ್ರಹಿಸುತ್ತಿದ್ದಾರೆ. ಕೊರೋನಾ ಮಹಾಮಾರಿ ವೈದ್ಯಕೀಯ ಸಿಬ್ಬಂದಿಗಳನ್ನು, ಐಎಎಸ್ ಅಧಿಕಾರಿಗಳನ್ನು ಕೂಡ ಬಿಡದೇ ವ್ಯಾಪಿಸುತ್ತಿದೆ. ಇಂತಹ ಸಂದರ್ಭದಲ್ಲಿ ಕೂಡಲೇ ಸಾಕಷ್ಟು ವೈದ್ಯಕೀಯ ಸಲಕರಣೆಗಳ ಒದಗಿಸಲು ಮುಂದಾಗಬೇಕಿದ್ದ ಪ್ರಧಾನಿಗಳು ಒಗ್ಗಟ್ಟಿನ ಮಂತ್ರದ ಹೆಸರಲ್ಲಿ ಜನರ ಜೀವವನ್ನು ಸಾವಿನೆಡೆಗೆ ತಳ್ಳುತ್ತಿದ್ದಾರೆ.

ಕೋವಿಡ್ -19 ಹಿನ್ನೆಲೆಯಲ್ಲಿ ಜನತಾ ಕರ್ಫ್ಯೂ ದಿನ ಚಪ್ಪಾಳೆ ತಟ್ಟಲು ಮೋದಿ ಕೋರಿದ್ದರು. ನಮ್ಮ ರಾಜ್ಯದ ರಾಜ್ಯಪಾಲರಾದ ವಜುಭಾಯಿ ವಾಲಾ ಸೇರಿದಂತೆ ಅನೇಕ ಶಾಸಕರು, ಸಚಿವರು, ಸಂಸದರು ಸಾಮಾಜಿಕ ಅಂತರವನ್ನು ಉಲ್ಲಂಘಿಸಿ ಮೋದಿಯ ಚಪ್ಪಾಳೆಯ ಕರೆಯಿಂದಾಗಿ ಬೀದಿಗಿಳಿದಿದ್ದರು. ಮನೆಯ ಬಾಲ್ಕನಿಯ ಮುಂದೆ ನಿಂತು ಚಪ್ಪಾಳೆ ತಟ್ಟಿ ಎಂದಿದ್ದಕ್ಕೆ ಈ ರೀತಿಯ ಮೂರ್ಖತನವನ್ನು ಜನ ಪ್ರದರ್ಶಿಸಿದ್ದರು.

ಸಾಮಾಜಿಕ ಅಂತರವನ್ನು ದೇಶದಾದ್ಯಂತ ಉಲ್ಲಂಘಿಸಿ. ಬೀದಿಯಲ್ಲಿ ಜಾಥಾ ಮಾಡಿ ತಟ್ಟೆ ಜಾಗಟೆಗಳನ್ನು ಬಡಿದಾಗಲಾದರೂ ದೇಶದ ಪ್ರಧಾನಿ ಮೋದಿಯವರು ಇದೆ ರೀತಿಯ ಇನ್ನೊಂದು ಕರೆ ಕೊಡುವ ಮುನ್ನ ಯೋಚಿಸಬೇಕಿತ್ತು. ಆದರೆ ಹಾಗಾಗಲಿಲ್ಲ. ಭಾರತದಲ್ಲಿ 4067 ಪ್ರಕರಣಗಳು ಬೆಳಕಿಗೆ ಬಂದಿವೆ. 109 ಮಂದಿ ಮೃತಪಟ್ಟಿದ್ದಾರೆ. ದಿನದಿಂದ ದಿನಕ್ಕೆ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಹೀಗಿದ್ದ ಪರಿಸ್ಥಿಯಲ್ಲಿ ಮತ್ತೆ ಮನೆ ಮುಂದೆ ದೀಪಗಳನ್ನು ಬೆಳಗಲು ಹೇಳಿದರೆ ಜನರು ಏನು ಮಾಡಬಹುದು ಎಂಬ ಊಹೆ ಪ್ರಧಾನಿ ಮೋದಿಯವರಿಗೆ ಇರಬೇಕಿತ್ತು. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಅವಶ್ಯಕತೆ ಮತ್ತು ಅನಿವಾರ್ಯತೆ ಇರುವ ಸಂದರ್ಭದಲ್ಲಿ ಈ ರೀತಿಯ ಕರೆ ಕೊಡುವುದು ಎಷ್ಟು ಸರಿ?

ಕೊನೆಗೂ ಪರಿಸ್ಥಿತಿ ಕೈಮೀರಿತು. ಕೆಲವು ಜನ ದೀಪ ಹಚ್ಚುವುದರ ಬದಲು ದೊಂದಿ ಹಿಡಿದು ಬೀದಿಗಿಳಿದರು. ಮನಸೋ ಇಚ್ಛೆ ಪಟಾಕಿ ಸಿಡಿಸಿದರು. ಗುಂಪು ಗುಂಪಾಗಿ ಸೇರಿ ಬೆಂಕಿ ಹಾಕಿ ಕೂಗಾಡಿದರು. ಒಟ್ಟಿನಲ್ಲಿ ಲಾಕ್‌ಡೌನ್‌ನ ಮುಖ್ಯ ಉದ್ದೇಶ ಸಾಮಾಜಿಕ ಅಂತರದಲ್ಲಿರಬೇಕಾದುದ್ದನ್ನು ಮಣ್ಣು ಪಾಲು ಮಾಡಿದರು. ಇದಕ್ಕೆ ನಾವು ಯಾರನ್ನು ದೂರೋಣ?

ಪ್ರಧಾನಿಗಳು ವೈದ್ಯಕೀಯ ಅಗತ್ಯಗಳೆಡೆ ಗಮನ ನೀಡಬೇಕು. ಜನರನ್ನು ರಕ್ಷಣೆ ಮಾಡಬೇಕು. ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿ ಹೇಳಬೇಕು. ಜಾಗೃತಿ ಮೂಡಿಸುವ ಬದಲಾಗಿ ಒಂದರ ಮೇಲೊಂದು ಕರೆ ಕೊಡುವುದು ಎಷ್ಟು ಸರಿ ? ದೇಶದ ಜನರನ್ನು ನಿಯಂತ್ರಿಸುವುದು ಎಷ್ಟು ಕಷ್ಟ ಎಂದು ಅರಿತ ಮೇಲು ದೇಶದ ಪ್ರಧಾನಿಯವರು ಹೀಗೆ ಮಾಡುತ್ತಾರೆ ಎಂದರೆ ಏನನ್ನುವುದು? ಇದು ಪ್ರಧಾನಿಯವರ ಮೂರ್ಖತನವೋ ಅಥವಾ ಜನರ ಮೂರ್ಖತನವೋ?

(ಲೇಖಕರು ಸಾಮಾಜಿಕ ಕಾರ್ಯಕರ್ತರು. ಅಭಿಪ್ರಾಯಗಳು ವಯಕ್ತಿಕವಾದವುಗಳು)


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....