HomeUncategorizedಚಪ್ಪಾಳೆ ಬದಲು ಜಾಗಟೆ, ದೀಪದ ಬದಲು ದೊಂದಿಗಳು : ಇದು ಯಾರ ಮುರ್ಖತನ?

ಚಪ್ಪಾಳೆ ಬದಲು ಜಾಗಟೆ, ದೀಪದ ಬದಲು ದೊಂದಿಗಳು : ಇದು ಯಾರ ಮುರ್ಖತನ?

ಕೆಲವು ಜನ ದೀಪ ಹಚ್ಚುವುದರ ಬದಲು ದೊಂದಿ ಹಿಡಿದು ಬೀದಿಗಿಳಿದರು. ಮನಸೋ ಇಚ್ಛೆ ಪಟಾಕಿ ಸಿಡಿಸಿದರು. ಗುಂಪು ಗುಂಪಾಗಿ ಸೇರಿ ಬೆಂಕಿ ಹಾಕಿ ಕೂಗಾಡಿದರು. ಒಟ್ಟಿನಲ್ಲಿ ಲಾಕ್‌ಡೌನ್‌ನ ಮುಖ್ಯ ಉದ್ದೇಶ ಸಾಮಾಜಿಕ ಅಂತರದಲ್ಲಿರಬೇಕಾದುದ್ದನ್ನು ಮಣ್ಣು ಪಾಲು ಮಾಡಿದರು.

- Advertisement -
- Advertisement -

ಒಂದೆಡೆ ದೇಶದಲ್ಲಿ ವೈದ್ಯಕೀಯ ಸಿಬ್ಬಂದಿಗಳ ಕೊರತೆಯಿದೆ. ದೇಶ ವೈದ್ಯಕೀಯ ಸಲಕರಣೆ ಮತ್ತು ಜೀವ ರಕ್ಷಕಗಳ ಕೊರತೆ ಎದುರಿಸುತ್ತಿದೆ. ಉಚಿತ ವೈದ್ಯಕೀಯ ಸೌಲಭ್ಯ ನೀಡುವಂತೆ ಜನ ಆಗ್ರಹಿಸುತ್ತಿದ್ದಾರೆ. ಕೊರೋನಾ ಮಹಾಮಾರಿ ವೈದ್ಯಕೀಯ ಸಿಬ್ಬಂದಿಗಳನ್ನು, ಐಎಎಸ್ ಅಧಿಕಾರಿಗಳನ್ನು ಕೂಡ ಬಿಡದೇ ವ್ಯಾಪಿಸುತ್ತಿದೆ. ಇಂತಹ ಸಂದರ್ಭದಲ್ಲಿ ಕೂಡಲೇ ಸಾಕಷ್ಟು ವೈದ್ಯಕೀಯ ಸಲಕರಣೆಗಳ ಒದಗಿಸಲು ಮುಂದಾಗಬೇಕಿದ್ದ ಪ್ರಧಾನಿಗಳು ಒಗ್ಗಟ್ಟಿನ ಮಂತ್ರದ ಹೆಸರಲ್ಲಿ ಜನರ ಜೀವವನ್ನು ಸಾವಿನೆಡೆಗೆ ತಳ್ಳುತ್ತಿದ್ದಾರೆ.

ಕೋವಿಡ್ -19 ಹಿನ್ನೆಲೆಯಲ್ಲಿ ಜನತಾ ಕರ್ಫ್ಯೂ ದಿನ ಚಪ್ಪಾಳೆ ತಟ್ಟಲು ಮೋದಿ ಕೋರಿದ್ದರು. ನಮ್ಮ ರಾಜ್ಯದ ರಾಜ್ಯಪಾಲರಾದ ವಜುಭಾಯಿ ವಾಲಾ ಸೇರಿದಂತೆ ಅನೇಕ ಶಾಸಕರು, ಸಚಿವರು, ಸಂಸದರು ಸಾಮಾಜಿಕ ಅಂತರವನ್ನು ಉಲ್ಲಂಘಿಸಿ ಮೋದಿಯ ಚಪ್ಪಾಳೆಯ ಕರೆಯಿಂದಾಗಿ ಬೀದಿಗಿಳಿದಿದ್ದರು. ಮನೆಯ ಬಾಲ್ಕನಿಯ ಮುಂದೆ ನಿಂತು ಚಪ್ಪಾಳೆ ತಟ್ಟಿ ಎಂದಿದ್ದಕ್ಕೆ ಈ ರೀತಿಯ ಮೂರ್ಖತನವನ್ನು ಜನ ಪ್ರದರ್ಶಿಸಿದ್ದರು.

ಸಾಮಾಜಿಕ ಅಂತರವನ್ನು ದೇಶದಾದ್ಯಂತ ಉಲ್ಲಂಘಿಸಿ. ಬೀದಿಯಲ್ಲಿ ಜಾಥಾ ಮಾಡಿ ತಟ್ಟೆ ಜಾಗಟೆಗಳನ್ನು ಬಡಿದಾಗಲಾದರೂ ದೇಶದ ಪ್ರಧಾನಿ ಮೋದಿಯವರು ಇದೆ ರೀತಿಯ ಇನ್ನೊಂದು ಕರೆ ಕೊಡುವ ಮುನ್ನ ಯೋಚಿಸಬೇಕಿತ್ತು. ಆದರೆ ಹಾಗಾಗಲಿಲ್ಲ. ಭಾರತದಲ್ಲಿ 4067 ಪ್ರಕರಣಗಳು ಬೆಳಕಿಗೆ ಬಂದಿವೆ. 109 ಮಂದಿ ಮೃತಪಟ್ಟಿದ್ದಾರೆ. ದಿನದಿಂದ ದಿನಕ್ಕೆ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಹೀಗಿದ್ದ ಪರಿಸ್ಥಿಯಲ್ಲಿ ಮತ್ತೆ ಮನೆ ಮುಂದೆ ದೀಪಗಳನ್ನು ಬೆಳಗಲು ಹೇಳಿದರೆ ಜನರು ಏನು ಮಾಡಬಹುದು ಎಂಬ ಊಹೆ ಪ್ರಧಾನಿ ಮೋದಿಯವರಿಗೆ ಇರಬೇಕಿತ್ತು. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಅವಶ್ಯಕತೆ ಮತ್ತು ಅನಿವಾರ್ಯತೆ ಇರುವ ಸಂದರ್ಭದಲ್ಲಿ ಈ ರೀತಿಯ ಕರೆ ಕೊಡುವುದು ಎಷ್ಟು ಸರಿ?

ಕೊನೆಗೂ ಪರಿಸ್ಥಿತಿ ಕೈಮೀರಿತು. ಕೆಲವು ಜನ ದೀಪ ಹಚ್ಚುವುದರ ಬದಲು ದೊಂದಿ ಹಿಡಿದು ಬೀದಿಗಿಳಿದರು. ಮನಸೋ ಇಚ್ಛೆ ಪಟಾಕಿ ಸಿಡಿಸಿದರು. ಗುಂಪು ಗುಂಪಾಗಿ ಸೇರಿ ಬೆಂಕಿ ಹಾಕಿ ಕೂಗಾಡಿದರು. ಒಟ್ಟಿನಲ್ಲಿ ಲಾಕ್‌ಡೌನ್‌ನ ಮುಖ್ಯ ಉದ್ದೇಶ ಸಾಮಾಜಿಕ ಅಂತರದಲ್ಲಿರಬೇಕಾದುದ್ದನ್ನು ಮಣ್ಣು ಪಾಲು ಮಾಡಿದರು. ಇದಕ್ಕೆ ನಾವು ಯಾರನ್ನು ದೂರೋಣ?

ಪ್ರಧಾನಿಗಳು ವೈದ್ಯಕೀಯ ಅಗತ್ಯಗಳೆಡೆ ಗಮನ ನೀಡಬೇಕು. ಜನರನ್ನು ರಕ್ಷಣೆ ಮಾಡಬೇಕು. ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿ ಹೇಳಬೇಕು. ಜಾಗೃತಿ ಮೂಡಿಸುವ ಬದಲಾಗಿ ಒಂದರ ಮೇಲೊಂದು ಕರೆ ಕೊಡುವುದು ಎಷ್ಟು ಸರಿ ? ದೇಶದ ಜನರನ್ನು ನಿಯಂತ್ರಿಸುವುದು ಎಷ್ಟು ಕಷ್ಟ ಎಂದು ಅರಿತ ಮೇಲು ದೇಶದ ಪ್ರಧಾನಿಯವರು ಹೀಗೆ ಮಾಡುತ್ತಾರೆ ಎಂದರೆ ಏನನ್ನುವುದು? ಇದು ಪ್ರಧಾನಿಯವರ ಮೂರ್ಖತನವೋ ಅಥವಾ ಜನರ ಮೂರ್ಖತನವೋ?

(ಲೇಖಕರು ಸಾಮಾಜಿಕ ಕಾರ್ಯಕರ್ತರು. ಅಭಿಪ್ರಾಯಗಳು ವಯಕ್ತಿಕವಾದವುಗಳು)


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....