HomeUncategorizedಚಪ್ಪಾಳೆ ಬದಲು ಜಾಗಟೆ, ದೀಪದ ಬದಲು ದೊಂದಿಗಳು : ಇದು ಯಾರ ಮುರ್ಖತನ?

ಚಪ್ಪಾಳೆ ಬದಲು ಜಾಗಟೆ, ದೀಪದ ಬದಲು ದೊಂದಿಗಳು : ಇದು ಯಾರ ಮುರ್ಖತನ?

ಕೆಲವು ಜನ ದೀಪ ಹಚ್ಚುವುದರ ಬದಲು ದೊಂದಿ ಹಿಡಿದು ಬೀದಿಗಿಳಿದರು. ಮನಸೋ ಇಚ್ಛೆ ಪಟಾಕಿ ಸಿಡಿಸಿದರು. ಗುಂಪು ಗುಂಪಾಗಿ ಸೇರಿ ಬೆಂಕಿ ಹಾಕಿ ಕೂಗಾಡಿದರು. ಒಟ್ಟಿನಲ್ಲಿ ಲಾಕ್‌ಡೌನ್‌ನ ಮುಖ್ಯ ಉದ್ದೇಶ ಸಾಮಾಜಿಕ ಅಂತರದಲ್ಲಿರಬೇಕಾದುದ್ದನ್ನು ಮಣ್ಣು ಪಾಲು ಮಾಡಿದರು.

- Advertisement -
- Advertisement -

ಒಂದೆಡೆ ದೇಶದಲ್ಲಿ ವೈದ್ಯಕೀಯ ಸಿಬ್ಬಂದಿಗಳ ಕೊರತೆಯಿದೆ. ದೇಶ ವೈದ್ಯಕೀಯ ಸಲಕರಣೆ ಮತ್ತು ಜೀವ ರಕ್ಷಕಗಳ ಕೊರತೆ ಎದುರಿಸುತ್ತಿದೆ. ಉಚಿತ ವೈದ್ಯಕೀಯ ಸೌಲಭ್ಯ ನೀಡುವಂತೆ ಜನ ಆಗ್ರಹಿಸುತ್ತಿದ್ದಾರೆ. ಕೊರೋನಾ ಮಹಾಮಾರಿ ವೈದ್ಯಕೀಯ ಸಿಬ್ಬಂದಿಗಳನ್ನು, ಐಎಎಸ್ ಅಧಿಕಾರಿಗಳನ್ನು ಕೂಡ ಬಿಡದೇ ವ್ಯಾಪಿಸುತ್ತಿದೆ. ಇಂತಹ ಸಂದರ್ಭದಲ್ಲಿ ಕೂಡಲೇ ಸಾಕಷ್ಟು ವೈದ್ಯಕೀಯ ಸಲಕರಣೆಗಳ ಒದಗಿಸಲು ಮುಂದಾಗಬೇಕಿದ್ದ ಪ್ರಧಾನಿಗಳು ಒಗ್ಗಟ್ಟಿನ ಮಂತ್ರದ ಹೆಸರಲ್ಲಿ ಜನರ ಜೀವವನ್ನು ಸಾವಿನೆಡೆಗೆ ತಳ್ಳುತ್ತಿದ್ದಾರೆ.

ಕೋವಿಡ್ -19 ಹಿನ್ನೆಲೆಯಲ್ಲಿ ಜನತಾ ಕರ್ಫ್ಯೂ ದಿನ ಚಪ್ಪಾಳೆ ತಟ್ಟಲು ಮೋದಿ ಕೋರಿದ್ದರು. ನಮ್ಮ ರಾಜ್ಯದ ರಾಜ್ಯಪಾಲರಾದ ವಜುಭಾಯಿ ವಾಲಾ ಸೇರಿದಂತೆ ಅನೇಕ ಶಾಸಕರು, ಸಚಿವರು, ಸಂಸದರು ಸಾಮಾಜಿಕ ಅಂತರವನ್ನು ಉಲ್ಲಂಘಿಸಿ ಮೋದಿಯ ಚಪ್ಪಾಳೆಯ ಕರೆಯಿಂದಾಗಿ ಬೀದಿಗಿಳಿದಿದ್ದರು. ಮನೆಯ ಬಾಲ್ಕನಿಯ ಮುಂದೆ ನಿಂತು ಚಪ್ಪಾಳೆ ತಟ್ಟಿ ಎಂದಿದ್ದಕ್ಕೆ ಈ ರೀತಿಯ ಮೂರ್ಖತನವನ್ನು ಜನ ಪ್ರದರ್ಶಿಸಿದ್ದರು.

ಸಾಮಾಜಿಕ ಅಂತರವನ್ನು ದೇಶದಾದ್ಯಂತ ಉಲ್ಲಂಘಿಸಿ. ಬೀದಿಯಲ್ಲಿ ಜಾಥಾ ಮಾಡಿ ತಟ್ಟೆ ಜಾಗಟೆಗಳನ್ನು ಬಡಿದಾಗಲಾದರೂ ದೇಶದ ಪ್ರಧಾನಿ ಮೋದಿಯವರು ಇದೆ ರೀತಿಯ ಇನ್ನೊಂದು ಕರೆ ಕೊಡುವ ಮುನ್ನ ಯೋಚಿಸಬೇಕಿತ್ತು. ಆದರೆ ಹಾಗಾಗಲಿಲ್ಲ. ಭಾರತದಲ್ಲಿ 4067 ಪ್ರಕರಣಗಳು ಬೆಳಕಿಗೆ ಬಂದಿವೆ. 109 ಮಂದಿ ಮೃತಪಟ್ಟಿದ್ದಾರೆ. ದಿನದಿಂದ ದಿನಕ್ಕೆ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಹೀಗಿದ್ದ ಪರಿಸ್ಥಿಯಲ್ಲಿ ಮತ್ತೆ ಮನೆ ಮುಂದೆ ದೀಪಗಳನ್ನು ಬೆಳಗಲು ಹೇಳಿದರೆ ಜನರು ಏನು ಮಾಡಬಹುದು ಎಂಬ ಊಹೆ ಪ್ರಧಾನಿ ಮೋದಿಯವರಿಗೆ ಇರಬೇಕಿತ್ತು. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಅವಶ್ಯಕತೆ ಮತ್ತು ಅನಿವಾರ್ಯತೆ ಇರುವ ಸಂದರ್ಭದಲ್ಲಿ ಈ ರೀತಿಯ ಕರೆ ಕೊಡುವುದು ಎಷ್ಟು ಸರಿ?

ಕೊನೆಗೂ ಪರಿಸ್ಥಿತಿ ಕೈಮೀರಿತು. ಕೆಲವು ಜನ ದೀಪ ಹಚ್ಚುವುದರ ಬದಲು ದೊಂದಿ ಹಿಡಿದು ಬೀದಿಗಿಳಿದರು. ಮನಸೋ ಇಚ್ಛೆ ಪಟಾಕಿ ಸಿಡಿಸಿದರು. ಗುಂಪು ಗುಂಪಾಗಿ ಸೇರಿ ಬೆಂಕಿ ಹಾಕಿ ಕೂಗಾಡಿದರು. ಒಟ್ಟಿನಲ್ಲಿ ಲಾಕ್‌ಡೌನ್‌ನ ಮುಖ್ಯ ಉದ್ದೇಶ ಸಾಮಾಜಿಕ ಅಂತರದಲ್ಲಿರಬೇಕಾದುದ್ದನ್ನು ಮಣ್ಣು ಪಾಲು ಮಾಡಿದರು. ಇದಕ್ಕೆ ನಾವು ಯಾರನ್ನು ದೂರೋಣ?

ಪ್ರಧಾನಿಗಳು ವೈದ್ಯಕೀಯ ಅಗತ್ಯಗಳೆಡೆ ಗಮನ ನೀಡಬೇಕು. ಜನರನ್ನು ರಕ್ಷಣೆ ಮಾಡಬೇಕು. ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿ ಹೇಳಬೇಕು. ಜಾಗೃತಿ ಮೂಡಿಸುವ ಬದಲಾಗಿ ಒಂದರ ಮೇಲೊಂದು ಕರೆ ಕೊಡುವುದು ಎಷ್ಟು ಸರಿ ? ದೇಶದ ಜನರನ್ನು ನಿಯಂತ್ರಿಸುವುದು ಎಷ್ಟು ಕಷ್ಟ ಎಂದು ಅರಿತ ಮೇಲು ದೇಶದ ಪ್ರಧಾನಿಯವರು ಹೀಗೆ ಮಾಡುತ್ತಾರೆ ಎಂದರೆ ಏನನ್ನುವುದು? ಇದು ಪ್ರಧಾನಿಯವರ ಮೂರ್ಖತನವೋ ಅಥವಾ ಜನರ ಮೂರ್ಖತನವೋ?

(ಲೇಖಕರು ಸಾಮಾಜಿಕ ಕಾರ್ಯಕರ್ತರು. ಅಭಿಪ್ರಾಯಗಳು ವಯಕ್ತಿಕವಾದವುಗಳು)


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...