HomeUncategorizedಚಪ್ಪಾಳೆ ಬದಲು ಜಾಗಟೆ, ದೀಪದ ಬದಲು ದೊಂದಿಗಳು : ಇದು ಯಾರ ಮುರ್ಖತನ?

ಚಪ್ಪಾಳೆ ಬದಲು ಜಾಗಟೆ, ದೀಪದ ಬದಲು ದೊಂದಿಗಳು : ಇದು ಯಾರ ಮುರ್ಖತನ?

ಕೆಲವು ಜನ ದೀಪ ಹಚ್ಚುವುದರ ಬದಲು ದೊಂದಿ ಹಿಡಿದು ಬೀದಿಗಿಳಿದರು. ಮನಸೋ ಇಚ್ಛೆ ಪಟಾಕಿ ಸಿಡಿಸಿದರು. ಗುಂಪು ಗುಂಪಾಗಿ ಸೇರಿ ಬೆಂಕಿ ಹಾಕಿ ಕೂಗಾಡಿದರು. ಒಟ್ಟಿನಲ್ಲಿ ಲಾಕ್‌ಡೌನ್‌ನ ಮುಖ್ಯ ಉದ್ದೇಶ ಸಾಮಾಜಿಕ ಅಂತರದಲ್ಲಿರಬೇಕಾದುದ್ದನ್ನು ಮಣ್ಣು ಪಾಲು ಮಾಡಿದರು.

- Advertisement -
- Advertisement -

ಒಂದೆಡೆ ದೇಶದಲ್ಲಿ ವೈದ್ಯಕೀಯ ಸಿಬ್ಬಂದಿಗಳ ಕೊರತೆಯಿದೆ. ದೇಶ ವೈದ್ಯಕೀಯ ಸಲಕರಣೆ ಮತ್ತು ಜೀವ ರಕ್ಷಕಗಳ ಕೊರತೆ ಎದುರಿಸುತ್ತಿದೆ. ಉಚಿತ ವೈದ್ಯಕೀಯ ಸೌಲಭ್ಯ ನೀಡುವಂತೆ ಜನ ಆಗ್ರಹಿಸುತ್ತಿದ್ದಾರೆ. ಕೊರೋನಾ ಮಹಾಮಾರಿ ವೈದ್ಯಕೀಯ ಸಿಬ್ಬಂದಿಗಳನ್ನು, ಐಎಎಸ್ ಅಧಿಕಾರಿಗಳನ್ನು ಕೂಡ ಬಿಡದೇ ವ್ಯಾಪಿಸುತ್ತಿದೆ. ಇಂತಹ ಸಂದರ್ಭದಲ್ಲಿ ಕೂಡಲೇ ಸಾಕಷ್ಟು ವೈದ್ಯಕೀಯ ಸಲಕರಣೆಗಳ ಒದಗಿಸಲು ಮುಂದಾಗಬೇಕಿದ್ದ ಪ್ರಧಾನಿಗಳು ಒಗ್ಗಟ್ಟಿನ ಮಂತ್ರದ ಹೆಸರಲ್ಲಿ ಜನರ ಜೀವವನ್ನು ಸಾವಿನೆಡೆಗೆ ತಳ್ಳುತ್ತಿದ್ದಾರೆ.

ಕೋವಿಡ್ -19 ಹಿನ್ನೆಲೆಯಲ್ಲಿ ಜನತಾ ಕರ್ಫ್ಯೂ ದಿನ ಚಪ್ಪಾಳೆ ತಟ್ಟಲು ಮೋದಿ ಕೋರಿದ್ದರು. ನಮ್ಮ ರಾಜ್ಯದ ರಾಜ್ಯಪಾಲರಾದ ವಜುಭಾಯಿ ವಾಲಾ ಸೇರಿದಂತೆ ಅನೇಕ ಶಾಸಕರು, ಸಚಿವರು, ಸಂಸದರು ಸಾಮಾಜಿಕ ಅಂತರವನ್ನು ಉಲ್ಲಂಘಿಸಿ ಮೋದಿಯ ಚಪ್ಪಾಳೆಯ ಕರೆಯಿಂದಾಗಿ ಬೀದಿಗಿಳಿದಿದ್ದರು. ಮನೆಯ ಬಾಲ್ಕನಿಯ ಮುಂದೆ ನಿಂತು ಚಪ್ಪಾಳೆ ತಟ್ಟಿ ಎಂದಿದ್ದಕ್ಕೆ ಈ ರೀತಿಯ ಮೂರ್ಖತನವನ್ನು ಜನ ಪ್ರದರ್ಶಿಸಿದ್ದರು.

ಸಾಮಾಜಿಕ ಅಂತರವನ್ನು ದೇಶದಾದ್ಯಂತ ಉಲ್ಲಂಘಿಸಿ. ಬೀದಿಯಲ್ಲಿ ಜಾಥಾ ಮಾಡಿ ತಟ್ಟೆ ಜಾಗಟೆಗಳನ್ನು ಬಡಿದಾಗಲಾದರೂ ದೇಶದ ಪ್ರಧಾನಿ ಮೋದಿಯವರು ಇದೆ ರೀತಿಯ ಇನ್ನೊಂದು ಕರೆ ಕೊಡುವ ಮುನ್ನ ಯೋಚಿಸಬೇಕಿತ್ತು. ಆದರೆ ಹಾಗಾಗಲಿಲ್ಲ. ಭಾರತದಲ್ಲಿ 4067 ಪ್ರಕರಣಗಳು ಬೆಳಕಿಗೆ ಬಂದಿವೆ. 109 ಮಂದಿ ಮೃತಪಟ್ಟಿದ್ದಾರೆ. ದಿನದಿಂದ ದಿನಕ್ಕೆ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಹೀಗಿದ್ದ ಪರಿಸ್ಥಿಯಲ್ಲಿ ಮತ್ತೆ ಮನೆ ಮುಂದೆ ದೀಪಗಳನ್ನು ಬೆಳಗಲು ಹೇಳಿದರೆ ಜನರು ಏನು ಮಾಡಬಹುದು ಎಂಬ ಊಹೆ ಪ್ರಧಾನಿ ಮೋದಿಯವರಿಗೆ ಇರಬೇಕಿತ್ತು. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಅವಶ್ಯಕತೆ ಮತ್ತು ಅನಿವಾರ್ಯತೆ ಇರುವ ಸಂದರ್ಭದಲ್ಲಿ ಈ ರೀತಿಯ ಕರೆ ಕೊಡುವುದು ಎಷ್ಟು ಸರಿ?

ಕೊನೆಗೂ ಪರಿಸ್ಥಿತಿ ಕೈಮೀರಿತು. ಕೆಲವು ಜನ ದೀಪ ಹಚ್ಚುವುದರ ಬದಲು ದೊಂದಿ ಹಿಡಿದು ಬೀದಿಗಿಳಿದರು. ಮನಸೋ ಇಚ್ಛೆ ಪಟಾಕಿ ಸಿಡಿಸಿದರು. ಗುಂಪು ಗುಂಪಾಗಿ ಸೇರಿ ಬೆಂಕಿ ಹಾಕಿ ಕೂಗಾಡಿದರು. ಒಟ್ಟಿನಲ್ಲಿ ಲಾಕ್‌ಡೌನ್‌ನ ಮುಖ್ಯ ಉದ್ದೇಶ ಸಾಮಾಜಿಕ ಅಂತರದಲ್ಲಿರಬೇಕಾದುದ್ದನ್ನು ಮಣ್ಣು ಪಾಲು ಮಾಡಿದರು. ಇದಕ್ಕೆ ನಾವು ಯಾರನ್ನು ದೂರೋಣ?

ಪ್ರಧಾನಿಗಳು ವೈದ್ಯಕೀಯ ಅಗತ್ಯಗಳೆಡೆ ಗಮನ ನೀಡಬೇಕು. ಜನರನ್ನು ರಕ್ಷಣೆ ಮಾಡಬೇಕು. ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿ ಹೇಳಬೇಕು. ಜಾಗೃತಿ ಮೂಡಿಸುವ ಬದಲಾಗಿ ಒಂದರ ಮೇಲೊಂದು ಕರೆ ಕೊಡುವುದು ಎಷ್ಟು ಸರಿ ? ದೇಶದ ಜನರನ್ನು ನಿಯಂತ್ರಿಸುವುದು ಎಷ್ಟು ಕಷ್ಟ ಎಂದು ಅರಿತ ಮೇಲು ದೇಶದ ಪ್ರಧಾನಿಯವರು ಹೀಗೆ ಮಾಡುತ್ತಾರೆ ಎಂದರೆ ಏನನ್ನುವುದು? ಇದು ಪ್ರಧಾನಿಯವರ ಮೂರ್ಖತನವೋ ಅಥವಾ ಜನರ ಮೂರ್ಖತನವೋ?

(ಲೇಖಕರು ಸಾಮಾಜಿಕ ಕಾರ್ಯಕರ್ತರು. ಅಭಿಪ್ರಾಯಗಳು ವಯಕ್ತಿಕವಾದವುಗಳು)


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...