HomeUncategorizedಚಪ್ಪಾಳೆ ಬದಲು ಜಾಗಟೆ, ದೀಪದ ಬದಲು ದೊಂದಿಗಳು : ಇದು ಯಾರ ಮುರ್ಖತನ?

ಚಪ್ಪಾಳೆ ಬದಲು ಜಾಗಟೆ, ದೀಪದ ಬದಲು ದೊಂದಿಗಳು : ಇದು ಯಾರ ಮುರ್ಖತನ?

ಕೆಲವು ಜನ ದೀಪ ಹಚ್ಚುವುದರ ಬದಲು ದೊಂದಿ ಹಿಡಿದು ಬೀದಿಗಿಳಿದರು. ಮನಸೋ ಇಚ್ಛೆ ಪಟಾಕಿ ಸಿಡಿಸಿದರು. ಗುಂಪು ಗುಂಪಾಗಿ ಸೇರಿ ಬೆಂಕಿ ಹಾಕಿ ಕೂಗಾಡಿದರು. ಒಟ್ಟಿನಲ್ಲಿ ಲಾಕ್‌ಡೌನ್‌ನ ಮುಖ್ಯ ಉದ್ದೇಶ ಸಾಮಾಜಿಕ ಅಂತರದಲ್ಲಿರಬೇಕಾದುದ್ದನ್ನು ಮಣ್ಣು ಪಾಲು ಮಾಡಿದರು.

- Advertisement -
- Advertisement -

ಒಂದೆಡೆ ದೇಶದಲ್ಲಿ ವೈದ್ಯಕೀಯ ಸಿಬ್ಬಂದಿಗಳ ಕೊರತೆಯಿದೆ. ದೇಶ ವೈದ್ಯಕೀಯ ಸಲಕರಣೆ ಮತ್ತು ಜೀವ ರಕ್ಷಕಗಳ ಕೊರತೆ ಎದುರಿಸುತ್ತಿದೆ. ಉಚಿತ ವೈದ್ಯಕೀಯ ಸೌಲಭ್ಯ ನೀಡುವಂತೆ ಜನ ಆಗ್ರಹಿಸುತ್ತಿದ್ದಾರೆ. ಕೊರೋನಾ ಮಹಾಮಾರಿ ವೈದ್ಯಕೀಯ ಸಿಬ್ಬಂದಿಗಳನ್ನು, ಐಎಎಸ್ ಅಧಿಕಾರಿಗಳನ್ನು ಕೂಡ ಬಿಡದೇ ವ್ಯಾಪಿಸುತ್ತಿದೆ. ಇಂತಹ ಸಂದರ್ಭದಲ್ಲಿ ಕೂಡಲೇ ಸಾಕಷ್ಟು ವೈದ್ಯಕೀಯ ಸಲಕರಣೆಗಳ ಒದಗಿಸಲು ಮುಂದಾಗಬೇಕಿದ್ದ ಪ್ರಧಾನಿಗಳು ಒಗ್ಗಟ್ಟಿನ ಮಂತ್ರದ ಹೆಸರಲ್ಲಿ ಜನರ ಜೀವವನ್ನು ಸಾವಿನೆಡೆಗೆ ತಳ್ಳುತ್ತಿದ್ದಾರೆ.

ಕೋವಿಡ್ -19 ಹಿನ್ನೆಲೆಯಲ್ಲಿ ಜನತಾ ಕರ್ಫ್ಯೂ ದಿನ ಚಪ್ಪಾಳೆ ತಟ್ಟಲು ಮೋದಿ ಕೋರಿದ್ದರು. ನಮ್ಮ ರಾಜ್ಯದ ರಾಜ್ಯಪಾಲರಾದ ವಜುಭಾಯಿ ವಾಲಾ ಸೇರಿದಂತೆ ಅನೇಕ ಶಾಸಕರು, ಸಚಿವರು, ಸಂಸದರು ಸಾಮಾಜಿಕ ಅಂತರವನ್ನು ಉಲ್ಲಂಘಿಸಿ ಮೋದಿಯ ಚಪ್ಪಾಳೆಯ ಕರೆಯಿಂದಾಗಿ ಬೀದಿಗಿಳಿದಿದ್ದರು. ಮನೆಯ ಬಾಲ್ಕನಿಯ ಮುಂದೆ ನಿಂತು ಚಪ್ಪಾಳೆ ತಟ್ಟಿ ಎಂದಿದ್ದಕ್ಕೆ ಈ ರೀತಿಯ ಮೂರ್ಖತನವನ್ನು ಜನ ಪ್ರದರ್ಶಿಸಿದ್ದರು.

ಸಾಮಾಜಿಕ ಅಂತರವನ್ನು ದೇಶದಾದ್ಯಂತ ಉಲ್ಲಂಘಿಸಿ. ಬೀದಿಯಲ್ಲಿ ಜಾಥಾ ಮಾಡಿ ತಟ್ಟೆ ಜಾಗಟೆಗಳನ್ನು ಬಡಿದಾಗಲಾದರೂ ದೇಶದ ಪ್ರಧಾನಿ ಮೋದಿಯವರು ಇದೆ ರೀತಿಯ ಇನ್ನೊಂದು ಕರೆ ಕೊಡುವ ಮುನ್ನ ಯೋಚಿಸಬೇಕಿತ್ತು. ಆದರೆ ಹಾಗಾಗಲಿಲ್ಲ. ಭಾರತದಲ್ಲಿ 4067 ಪ್ರಕರಣಗಳು ಬೆಳಕಿಗೆ ಬಂದಿವೆ. 109 ಮಂದಿ ಮೃತಪಟ್ಟಿದ್ದಾರೆ. ದಿನದಿಂದ ದಿನಕ್ಕೆ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಹೀಗಿದ್ದ ಪರಿಸ್ಥಿಯಲ್ಲಿ ಮತ್ತೆ ಮನೆ ಮುಂದೆ ದೀಪಗಳನ್ನು ಬೆಳಗಲು ಹೇಳಿದರೆ ಜನರು ಏನು ಮಾಡಬಹುದು ಎಂಬ ಊಹೆ ಪ್ರಧಾನಿ ಮೋದಿಯವರಿಗೆ ಇರಬೇಕಿತ್ತು. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಅವಶ್ಯಕತೆ ಮತ್ತು ಅನಿವಾರ್ಯತೆ ಇರುವ ಸಂದರ್ಭದಲ್ಲಿ ಈ ರೀತಿಯ ಕರೆ ಕೊಡುವುದು ಎಷ್ಟು ಸರಿ?

ಕೊನೆಗೂ ಪರಿಸ್ಥಿತಿ ಕೈಮೀರಿತು. ಕೆಲವು ಜನ ದೀಪ ಹಚ್ಚುವುದರ ಬದಲು ದೊಂದಿ ಹಿಡಿದು ಬೀದಿಗಿಳಿದರು. ಮನಸೋ ಇಚ್ಛೆ ಪಟಾಕಿ ಸಿಡಿಸಿದರು. ಗುಂಪು ಗುಂಪಾಗಿ ಸೇರಿ ಬೆಂಕಿ ಹಾಕಿ ಕೂಗಾಡಿದರು. ಒಟ್ಟಿನಲ್ಲಿ ಲಾಕ್‌ಡೌನ್‌ನ ಮುಖ್ಯ ಉದ್ದೇಶ ಸಾಮಾಜಿಕ ಅಂತರದಲ್ಲಿರಬೇಕಾದುದ್ದನ್ನು ಮಣ್ಣು ಪಾಲು ಮಾಡಿದರು. ಇದಕ್ಕೆ ನಾವು ಯಾರನ್ನು ದೂರೋಣ?

ಪ್ರಧಾನಿಗಳು ವೈದ್ಯಕೀಯ ಅಗತ್ಯಗಳೆಡೆ ಗಮನ ನೀಡಬೇಕು. ಜನರನ್ನು ರಕ್ಷಣೆ ಮಾಡಬೇಕು. ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿ ಹೇಳಬೇಕು. ಜಾಗೃತಿ ಮೂಡಿಸುವ ಬದಲಾಗಿ ಒಂದರ ಮೇಲೊಂದು ಕರೆ ಕೊಡುವುದು ಎಷ್ಟು ಸರಿ ? ದೇಶದ ಜನರನ್ನು ನಿಯಂತ್ರಿಸುವುದು ಎಷ್ಟು ಕಷ್ಟ ಎಂದು ಅರಿತ ಮೇಲು ದೇಶದ ಪ್ರಧಾನಿಯವರು ಹೀಗೆ ಮಾಡುತ್ತಾರೆ ಎಂದರೆ ಏನನ್ನುವುದು? ಇದು ಪ್ರಧಾನಿಯವರ ಮೂರ್ಖತನವೋ ಅಥವಾ ಜನರ ಮೂರ್ಖತನವೋ?

(ಲೇಖಕರು ಸಾಮಾಜಿಕ ಕಾರ್ಯಕರ್ತರು. ಅಭಿಪ್ರಾಯಗಳು ವಯಕ್ತಿಕವಾದವುಗಳು)


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...