Homeಸಿನಿಮಾಕ್ರೀಡೆ17ರ ಈ ಪೋರನ ಮುಂದೆ ಪುಡಿಯಾದವು ರೋಹಿತ್ ಶರ್ಮಾ, ಕ್ರಿಸ್ ಗೇಲ್ ದಾಖಲೆಗಳು!

17ರ ಈ ಪೋರನ ಮುಂದೆ ಪುಡಿಯಾದವು ರೋಹಿತ್ ಶರ್ಮಾ, ಕ್ರಿಸ್ ಗೇಲ್ ದಾಖಲೆಗಳು!

- Advertisement -
- Advertisement -

ಮುಂಬೈ ಹಾಗೂ ಜಾರ್ಖಂಡ್ ನಡುವಿನ ಪಂದ್ಯದಲ್ಲಿ ಮುಂಬೈ ತಂಡದ ಉದಯೋನ್ಮುಖ ಹಾಗೂ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ದಾಖಲೆ ಬರೆದಿದ್ದಾರೆ. 154 ಎಸೆತದಲ್ಲಿ 203 ರನ್ ಗಳಿಸುವ ಮೂಲಕ ಮೊದಲ ದರ್ಜೆ ಕ್ರಿಕೆಟ್ ನಲ್ಲಿ ದ್ವಿಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 50 ಓವರ್ ಕ್ರಿಕೆಟ್ ನ ಲಿಸ್ಟ್ ಎ ಮತ್ತು ಒಡಿಐನಲ್ಲಿ ದ್ವಿಶತಕ ಗಳಿಸಿದ ಕೀರ್ತಿಗೆ ಭಾಜನರಾಗಿದ್ದಾರೆ.

ವಿಜಯ್ ಹಜಾರೆ ಟೂರ್ನಿಯಲ್ಲಿ ಇಂಥದ್ದೊಂದು ದಾಖಲೆ ಸೃಷ್ಟಿಯಾಗಿದೆ. ಜಾರ್ಖಂಡ್ ವಿರುದ್ಧದ ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಸುಮಾರು 3 ವರ್ಷಗಳ ದಾಖಲೆಯನ್ನು ಯಶಸ್ವಿ ಬ್ರೇಕ್ ಮಾಡಿದರು. ಆ ಮೂಲಕ ಮುಂಬೈ ತಂಡದ ಆರಂಭಿಕ ಆಟಗಾರ, 17 ವರ್ಷದ ಯಶಸ್ವಿ ಜೈಸ್ವಾಲ್, ಕ್ರಿಸ್ ಗೇಲ್ ಮತ್ತು ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರ ರೆಕಾರ್ಡ್ ನ್ನು ಪುಡಿ ಮಾಡಿದ್ದಾರೆ. ಜೊತೆಗೆ ಯಶಸ್ವಿ ಜೈಸ್ವಾಲ್ ಮೊದಲ ದರ್ಜೆ ಕ್ರಿಕೆಟ್ ನಲ್ಲಿ ದ್ವಿಶತಕ ಬಾರಿಸಿದ 7 ನೇ ಭಾರತೀಯ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

1975ರಲ್ಲಿ ದಕ್ಷಿಣ ಆಫ್ರಿಕಾದ ದೇಶೀಯ ಕ್ರಿಕೆಟ್ ನಲ್ಲಿ 20 ವರ್ಷ ವಯಸ್ಸಿನ ಅಲನ್ ಬ್ಯಾರೋ ದ್ವಿಶತಕ ಗಳಿಸಿದ ಕಿರಿಯ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದರು. ಯಶಸ್ವಿ ಜೈಸ್ವಾಲ್, 154 ಎಸೆತಗಳಲ್ಲಿ 12 ಸಿಕ್ಸರ್, 17 ಬೌಂಡರಿ ಬಾರಿಸುವ ಮೂಲಕ 203 ರನ್ ಕಲೆ ಹಾಕಿದರು. ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಯಶಸ್ವಿ ಮೂರನೇ ಶತಕ ದಾಖಲಿಸಿದ್ದು, 5 ಪಂದ್ಯಗಳಲ್ಲಿ 585 ರನ್ ಕಲೆ ಹಾಕಿ ರನ್ ಸ್ಕೋರಿಂಗ್ ನಲ್ಲಿ ಮುನ್ನಡೆ ಪಡೆದುಕೊಂಡಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಸಂಜು ಸ್ಯಾಮ್ಸನ್ ದ್ವಿಶತಕ ಸಿಡಿಸಿದ್ದರು. ಲಿಸ್ಟ್ ಎ ನಲ್ಲಿ ದ್ವಿಶತಕ ಬಾರಿಸಿದ ಆಟಗಾರರೆಂದರೆ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ರೋಹಿತ್ ಶರ್ಮಾ, ಶಿಖರ್ ಧವನ್, ಕೆ,ವಿ.ಕೌಶಲ್, ಸಂಜು ಸ್ಯಾಮ್ಸನ್. ಅಂದಹಾಗೆ, ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಇದುವರೆಗೆ ಕೇವಲ ಎಂದು ವೈಯಕ್ತಿಕ ದ್ವಿಶತಕಗಳು ದಾಖಲಾಗಿವೆ. ವಿಶೇಷವೆಂದರೆ, ಅವುಗಳಲ್ಲಿ ಐದು ಭಾರತೀಯ ಆಟಗಾರರಿಂದ ದಾಖಲಿಸಲ್ಪಟ್ಟಿವೆ. ಇನ್ನೂ ವಿಶೇಷವೆಂದರೆ, ರೋಹಿತ್ ಶರ್ಮಾ ಒಬ್ಬರೇ ಮೂರು ಬಾರಿ ಏಕದಿನ ದ್ವಿಶತಕ ಸಾಧನೆಗೈದಿದ್ದಾರೆ. ಮಿಕ್ಕುಳಿದಂತೆ ತೆಂಡೂಲ್ಕರ್, ಸೆಹ್ವಾಗ್ ತಲಾ ಒಂದೊಂದು ದ್ವಿಶತಕ ದಾಖಲಿಸಿದ್ದಾರೆ.

ವಿಜಯ್ ಹಜಾರೆ ಟ್ರೋಫಿಯ ಇತಿಹಾಸದಲ್ಲೇ ಜೈಸ್ವಾಲ್ ಅವರದ್ದು ಮೂರನೇ ದ್ವಿಶತಕವಾಗಿದೆ. ಅಲ್ಲದೇ ಅವರ ಅಮೋಘ ಆಟದ ಮೂಲಕ ಮುಂಬೈ ತಂಡ 358 ರನ್ ಗಳಿಸಿತು. ತಾವು ಸಿಡಿಸಿರುವ ದ್ವಿಶತಕ ಮತ್ತು ದಾಖಲೆ ಬಗ್ಗೆ ಪ್ರತಿಕ್ರಿಯಿಸಿದ ಯಶಸ್ವಿ ಜೈಸ್ವಾಲ್, ನನಗೆ 70ರಿಂದ 80 ರನ್ ಕಲೆ ಹಾಕಲು ಮಾತ್ರ ಸಾಧ್ಯವಾಗುತ್ತಿತ್ತು. ಸೆಂಚುರಿ ಬಾರಿಸುವ ಬಗ್ಗೆ ವಾಸೀಂ ಅವರ ಬ್ಯಾಟಿಂಗ್ ನೋಡಿ ಕಲಿತಿದ್ದೆ. ಹೇಗೆ ಬೌಲನ್ನು ಬೌಂಡರಿಗೆ ಅಟ್ಟಬೇಕು ಎಂಬ ಬಗ್ಗೆ ಅವರು ಹೇಳಿದ್ದರು. ಇದೆಲ್ಲದರಿಂದ ದ್ವಿಶತಕ ಬಾರಿಸುವುದು ಸಾಧ್ಯವಾಗಿದೆ ಎಂದು ಹೇಳಿದ್ದಾರೆ. ಜೈಸ್ವಾಲ್ ಅವರ ರೋಚಕ ದಾಖಲೆಗೆ ಕ್ರಿಕೆಟ್ ಪ್ರೇಮಿಗಳಿಂದ ಶುಭ ಹಾರೈಕೆಗಳು ಹರಿದುಬರುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...