Homeಸಿನಿಮಾಕ್ರೀಡೆ17ರ ಈ ಪೋರನ ಮುಂದೆ ಪುಡಿಯಾದವು ರೋಹಿತ್ ಶರ್ಮಾ, ಕ್ರಿಸ್ ಗೇಲ್ ದಾಖಲೆಗಳು!

17ರ ಈ ಪೋರನ ಮುಂದೆ ಪುಡಿಯಾದವು ರೋಹಿತ್ ಶರ್ಮಾ, ಕ್ರಿಸ್ ಗೇಲ್ ದಾಖಲೆಗಳು!

- Advertisement -
- Advertisement -

ಮುಂಬೈ ಹಾಗೂ ಜಾರ್ಖಂಡ್ ನಡುವಿನ ಪಂದ್ಯದಲ್ಲಿ ಮುಂಬೈ ತಂಡದ ಉದಯೋನ್ಮುಖ ಹಾಗೂ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ದಾಖಲೆ ಬರೆದಿದ್ದಾರೆ. 154 ಎಸೆತದಲ್ಲಿ 203 ರನ್ ಗಳಿಸುವ ಮೂಲಕ ಮೊದಲ ದರ್ಜೆ ಕ್ರಿಕೆಟ್ ನಲ್ಲಿ ದ್ವಿಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 50 ಓವರ್ ಕ್ರಿಕೆಟ್ ನ ಲಿಸ್ಟ್ ಎ ಮತ್ತು ಒಡಿಐನಲ್ಲಿ ದ್ವಿಶತಕ ಗಳಿಸಿದ ಕೀರ್ತಿಗೆ ಭಾಜನರಾಗಿದ್ದಾರೆ.

ವಿಜಯ್ ಹಜಾರೆ ಟೂರ್ನಿಯಲ್ಲಿ ಇಂಥದ್ದೊಂದು ದಾಖಲೆ ಸೃಷ್ಟಿಯಾಗಿದೆ. ಜಾರ್ಖಂಡ್ ವಿರುದ್ಧದ ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಸುಮಾರು 3 ವರ್ಷಗಳ ದಾಖಲೆಯನ್ನು ಯಶಸ್ವಿ ಬ್ರೇಕ್ ಮಾಡಿದರು. ಆ ಮೂಲಕ ಮುಂಬೈ ತಂಡದ ಆರಂಭಿಕ ಆಟಗಾರ, 17 ವರ್ಷದ ಯಶಸ್ವಿ ಜೈಸ್ವಾಲ್, ಕ್ರಿಸ್ ಗೇಲ್ ಮತ್ತು ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರ ರೆಕಾರ್ಡ್ ನ್ನು ಪುಡಿ ಮಾಡಿದ್ದಾರೆ. ಜೊತೆಗೆ ಯಶಸ್ವಿ ಜೈಸ್ವಾಲ್ ಮೊದಲ ದರ್ಜೆ ಕ್ರಿಕೆಟ್ ನಲ್ಲಿ ದ್ವಿಶತಕ ಬಾರಿಸಿದ 7 ನೇ ಭಾರತೀಯ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

1975ರಲ್ಲಿ ದಕ್ಷಿಣ ಆಫ್ರಿಕಾದ ದೇಶೀಯ ಕ್ರಿಕೆಟ್ ನಲ್ಲಿ 20 ವರ್ಷ ವಯಸ್ಸಿನ ಅಲನ್ ಬ್ಯಾರೋ ದ್ವಿಶತಕ ಗಳಿಸಿದ ಕಿರಿಯ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದರು. ಯಶಸ್ವಿ ಜೈಸ್ವಾಲ್, 154 ಎಸೆತಗಳಲ್ಲಿ 12 ಸಿಕ್ಸರ್, 17 ಬೌಂಡರಿ ಬಾರಿಸುವ ಮೂಲಕ 203 ರನ್ ಕಲೆ ಹಾಕಿದರು. ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಯಶಸ್ವಿ ಮೂರನೇ ಶತಕ ದಾಖಲಿಸಿದ್ದು, 5 ಪಂದ್ಯಗಳಲ್ಲಿ 585 ರನ್ ಕಲೆ ಹಾಕಿ ರನ್ ಸ್ಕೋರಿಂಗ್ ನಲ್ಲಿ ಮುನ್ನಡೆ ಪಡೆದುಕೊಂಡಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಸಂಜು ಸ್ಯಾಮ್ಸನ್ ದ್ವಿಶತಕ ಸಿಡಿಸಿದ್ದರು. ಲಿಸ್ಟ್ ಎ ನಲ್ಲಿ ದ್ವಿಶತಕ ಬಾರಿಸಿದ ಆಟಗಾರರೆಂದರೆ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ರೋಹಿತ್ ಶರ್ಮಾ, ಶಿಖರ್ ಧವನ್, ಕೆ,ವಿ.ಕೌಶಲ್, ಸಂಜು ಸ್ಯಾಮ್ಸನ್. ಅಂದಹಾಗೆ, ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಇದುವರೆಗೆ ಕೇವಲ ಎಂದು ವೈಯಕ್ತಿಕ ದ್ವಿಶತಕಗಳು ದಾಖಲಾಗಿವೆ. ವಿಶೇಷವೆಂದರೆ, ಅವುಗಳಲ್ಲಿ ಐದು ಭಾರತೀಯ ಆಟಗಾರರಿಂದ ದಾಖಲಿಸಲ್ಪಟ್ಟಿವೆ. ಇನ್ನೂ ವಿಶೇಷವೆಂದರೆ, ರೋಹಿತ್ ಶರ್ಮಾ ಒಬ್ಬರೇ ಮೂರು ಬಾರಿ ಏಕದಿನ ದ್ವಿಶತಕ ಸಾಧನೆಗೈದಿದ್ದಾರೆ. ಮಿಕ್ಕುಳಿದಂತೆ ತೆಂಡೂಲ್ಕರ್, ಸೆಹ್ವಾಗ್ ತಲಾ ಒಂದೊಂದು ದ್ವಿಶತಕ ದಾಖಲಿಸಿದ್ದಾರೆ.

ವಿಜಯ್ ಹಜಾರೆ ಟ್ರೋಫಿಯ ಇತಿಹಾಸದಲ್ಲೇ ಜೈಸ್ವಾಲ್ ಅವರದ್ದು ಮೂರನೇ ದ್ವಿಶತಕವಾಗಿದೆ. ಅಲ್ಲದೇ ಅವರ ಅಮೋಘ ಆಟದ ಮೂಲಕ ಮುಂಬೈ ತಂಡ 358 ರನ್ ಗಳಿಸಿತು. ತಾವು ಸಿಡಿಸಿರುವ ದ್ವಿಶತಕ ಮತ್ತು ದಾಖಲೆ ಬಗ್ಗೆ ಪ್ರತಿಕ್ರಿಯಿಸಿದ ಯಶಸ್ವಿ ಜೈಸ್ವಾಲ್, ನನಗೆ 70ರಿಂದ 80 ರನ್ ಕಲೆ ಹಾಕಲು ಮಾತ್ರ ಸಾಧ್ಯವಾಗುತ್ತಿತ್ತು. ಸೆಂಚುರಿ ಬಾರಿಸುವ ಬಗ್ಗೆ ವಾಸೀಂ ಅವರ ಬ್ಯಾಟಿಂಗ್ ನೋಡಿ ಕಲಿತಿದ್ದೆ. ಹೇಗೆ ಬೌಲನ್ನು ಬೌಂಡರಿಗೆ ಅಟ್ಟಬೇಕು ಎಂಬ ಬಗ್ಗೆ ಅವರು ಹೇಳಿದ್ದರು. ಇದೆಲ್ಲದರಿಂದ ದ್ವಿಶತಕ ಬಾರಿಸುವುದು ಸಾಧ್ಯವಾಗಿದೆ ಎಂದು ಹೇಳಿದ್ದಾರೆ. ಜೈಸ್ವಾಲ್ ಅವರ ರೋಚಕ ದಾಖಲೆಗೆ ಕ್ರಿಕೆಟ್ ಪ್ರೇಮಿಗಳಿಂದ ಶುಭ ಹಾರೈಕೆಗಳು ಹರಿದುಬರುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...