Homeಸಿನಿಮಾಕ್ರೀಡೆ17ರ ಈ ಪೋರನ ಮುಂದೆ ಪುಡಿಯಾದವು ರೋಹಿತ್ ಶರ್ಮಾ, ಕ್ರಿಸ್ ಗೇಲ್ ದಾಖಲೆಗಳು!

17ರ ಈ ಪೋರನ ಮುಂದೆ ಪುಡಿಯಾದವು ರೋಹಿತ್ ಶರ್ಮಾ, ಕ್ರಿಸ್ ಗೇಲ್ ದಾಖಲೆಗಳು!

- Advertisement -
- Advertisement -

ಮುಂಬೈ ಹಾಗೂ ಜಾರ್ಖಂಡ್ ನಡುವಿನ ಪಂದ್ಯದಲ್ಲಿ ಮುಂಬೈ ತಂಡದ ಉದಯೋನ್ಮುಖ ಹಾಗೂ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ದಾಖಲೆ ಬರೆದಿದ್ದಾರೆ. 154 ಎಸೆತದಲ್ಲಿ 203 ರನ್ ಗಳಿಸುವ ಮೂಲಕ ಮೊದಲ ದರ್ಜೆ ಕ್ರಿಕೆಟ್ ನಲ್ಲಿ ದ್ವಿಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 50 ಓವರ್ ಕ್ರಿಕೆಟ್ ನ ಲಿಸ್ಟ್ ಎ ಮತ್ತು ಒಡಿಐನಲ್ಲಿ ದ್ವಿಶತಕ ಗಳಿಸಿದ ಕೀರ್ತಿಗೆ ಭಾಜನರಾಗಿದ್ದಾರೆ.

ವಿಜಯ್ ಹಜಾರೆ ಟೂರ್ನಿಯಲ್ಲಿ ಇಂಥದ್ದೊಂದು ದಾಖಲೆ ಸೃಷ್ಟಿಯಾಗಿದೆ. ಜಾರ್ಖಂಡ್ ವಿರುದ್ಧದ ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಸುಮಾರು 3 ವರ್ಷಗಳ ದಾಖಲೆಯನ್ನು ಯಶಸ್ವಿ ಬ್ರೇಕ್ ಮಾಡಿದರು. ಆ ಮೂಲಕ ಮುಂಬೈ ತಂಡದ ಆರಂಭಿಕ ಆಟಗಾರ, 17 ವರ್ಷದ ಯಶಸ್ವಿ ಜೈಸ್ವಾಲ್, ಕ್ರಿಸ್ ಗೇಲ್ ಮತ್ತು ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರ ರೆಕಾರ್ಡ್ ನ್ನು ಪುಡಿ ಮಾಡಿದ್ದಾರೆ. ಜೊತೆಗೆ ಯಶಸ್ವಿ ಜೈಸ್ವಾಲ್ ಮೊದಲ ದರ್ಜೆ ಕ್ರಿಕೆಟ್ ನಲ್ಲಿ ದ್ವಿಶತಕ ಬಾರಿಸಿದ 7 ನೇ ಭಾರತೀಯ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

1975ರಲ್ಲಿ ದಕ್ಷಿಣ ಆಫ್ರಿಕಾದ ದೇಶೀಯ ಕ್ರಿಕೆಟ್ ನಲ್ಲಿ 20 ವರ್ಷ ವಯಸ್ಸಿನ ಅಲನ್ ಬ್ಯಾರೋ ದ್ವಿಶತಕ ಗಳಿಸಿದ ಕಿರಿಯ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದರು. ಯಶಸ್ವಿ ಜೈಸ್ವಾಲ್, 154 ಎಸೆತಗಳಲ್ಲಿ 12 ಸಿಕ್ಸರ್, 17 ಬೌಂಡರಿ ಬಾರಿಸುವ ಮೂಲಕ 203 ರನ್ ಕಲೆ ಹಾಕಿದರು. ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಯಶಸ್ವಿ ಮೂರನೇ ಶತಕ ದಾಖಲಿಸಿದ್ದು, 5 ಪಂದ್ಯಗಳಲ್ಲಿ 585 ರನ್ ಕಲೆ ಹಾಕಿ ರನ್ ಸ್ಕೋರಿಂಗ್ ನಲ್ಲಿ ಮುನ್ನಡೆ ಪಡೆದುಕೊಂಡಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಸಂಜು ಸ್ಯಾಮ್ಸನ್ ದ್ವಿಶತಕ ಸಿಡಿಸಿದ್ದರು. ಲಿಸ್ಟ್ ಎ ನಲ್ಲಿ ದ್ವಿಶತಕ ಬಾರಿಸಿದ ಆಟಗಾರರೆಂದರೆ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ರೋಹಿತ್ ಶರ್ಮಾ, ಶಿಖರ್ ಧವನ್, ಕೆ,ವಿ.ಕೌಶಲ್, ಸಂಜು ಸ್ಯಾಮ್ಸನ್. ಅಂದಹಾಗೆ, ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಇದುವರೆಗೆ ಕೇವಲ ಎಂದು ವೈಯಕ್ತಿಕ ದ್ವಿಶತಕಗಳು ದಾಖಲಾಗಿವೆ. ವಿಶೇಷವೆಂದರೆ, ಅವುಗಳಲ್ಲಿ ಐದು ಭಾರತೀಯ ಆಟಗಾರರಿಂದ ದಾಖಲಿಸಲ್ಪಟ್ಟಿವೆ. ಇನ್ನೂ ವಿಶೇಷವೆಂದರೆ, ರೋಹಿತ್ ಶರ್ಮಾ ಒಬ್ಬರೇ ಮೂರು ಬಾರಿ ಏಕದಿನ ದ್ವಿಶತಕ ಸಾಧನೆಗೈದಿದ್ದಾರೆ. ಮಿಕ್ಕುಳಿದಂತೆ ತೆಂಡೂಲ್ಕರ್, ಸೆಹ್ವಾಗ್ ತಲಾ ಒಂದೊಂದು ದ್ವಿಶತಕ ದಾಖಲಿಸಿದ್ದಾರೆ.

ವಿಜಯ್ ಹಜಾರೆ ಟ್ರೋಫಿಯ ಇತಿಹಾಸದಲ್ಲೇ ಜೈಸ್ವಾಲ್ ಅವರದ್ದು ಮೂರನೇ ದ್ವಿಶತಕವಾಗಿದೆ. ಅಲ್ಲದೇ ಅವರ ಅಮೋಘ ಆಟದ ಮೂಲಕ ಮುಂಬೈ ತಂಡ 358 ರನ್ ಗಳಿಸಿತು. ತಾವು ಸಿಡಿಸಿರುವ ದ್ವಿಶತಕ ಮತ್ತು ದಾಖಲೆ ಬಗ್ಗೆ ಪ್ರತಿಕ್ರಿಯಿಸಿದ ಯಶಸ್ವಿ ಜೈಸ್ವಾಲ್, ನನಗೆ 70ರಿಂದ 80 ರನ್ ಕಲೆ ಹಾಕಲು ಮಾತ್ರ ಸಾಧ್ಯವಾಗುತ್ತಿತ್ತು. ಸೆಂಚುರಿ ಬಾರಿಸುವ ಬಗ್ಗೆ ವಾಸೀಂ ಅವರ ಬ್ಯಾಟಿಂಗ್ ನೋಡಿ ಕಲಿತಿದ್ದೆ. ಹೇಗೆ ಬೌಲನ್ನು ಬೌಂಡರಿಗೆ ಅಟ್ಟಬೇಕು ಎಂಬ ಬಗ್ಗೆ ಅವರು ಹೇಳಿದ್ದರು. ಇದೆಲ್ಲದರಿಂದ ದ್ವಿಶತಕ ಬಾರಿಸುವುದು ಸಾಧ್ಯವಾಗಿದೆ ಎಂದು ಹೇಳಿದ್ದಾರೆ. ಜೈಸ್ವಾಲ್ ಅವರ ರೋಚಕ ದಾಖಲೆಗೆ ಕ್ರಿಕೆಟ್ ಪ್ರೇಮಿಗಳಿಂದ ಶುಭ ಹಾರೈಕೆಗಳು ಹರಿದುಬರುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...