Homeಸಿನಿಮಾಕ್ರೀಡೆ17ರ ಈ ಪೋರನ ಮುಂದೆ ಪುಡಿಯಾದವು ರೋಹಿತ್ ಶರ್ಮಾ, ಕ್ರಿಸ್ ಗೇಲ್ ದಾಖಲೆಗಳು!

17ರ ಈ ಪೋರನ ಮುಂದೆ ಪುಡಿಯಾದವು ರೋಹಿತ್ ಶರ್ಮಾ, ಕ್ರಿಸ್ ಗೇಲ್ ದಾಖಲೆಗಳು!

- Advertisement -
- Advertisement -

ಮುಂಬೈ ಹಾಗೂ ಜಾರ್ಖಂಡ್ ನಡುವಿನ ಪಂದ್ಯದಲ್ಲಿ ಮುಂಬೈ ತಂಡದ ಉದಯೋನ್ಮುಖ ಹಾಗೂ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ದಾಖಲೆ ಬರೆದಿದ್ದಾರೆ. 154 ಎಸೆತದಲ್ಲಿ 203 ರನ್ ಗಳಿಸುವ ಮೂಲಕ ಮೊದಲ ದರ್ಜೆ ಕ್ರಿಕೆಟ್ ನಲ್ಲಿ ದ್ವಿಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 50 ಓವರ್ ಕ್ರಿಕೆಟ್ ನ ಲಿಸ್ಟ್ ಎ ಮತ್ತು ಒಡಿಐನಲ್ಲಿ ದ್ವಿಶತಕ ಗಳಿಸಿದ ಕೀರ್ತಿಗೆ ಭಾಜನರಾಗಿದ್ದಾರೆ.

ವಿಜಯ್ ಹಜಾರೆ ಟೂರ್ನಿಯಲ್ಲಿ ಇಂಥದ್ದೊಂದು ದಾಖಲೆ ಸೃಷ್ಟಿಯಾಗಿದೆ. ಜಾರ್ಖಂಡ್ ವಿರುದ್ಧದ ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಸುಮಾರು 3 ವರ್ಷಗಳ ದಾಖಲೆಯನ್ನು ಯಶಸ್ವಿ ಬ್ರೇಕ್ ಮಾಡಿದರು. ಆ ಮೂಲಕ ಮುಂಬೈ ತಂಡದ ಆರಂಭಿಕ ಆಟಗಾರ, 17 ವರ್ಷದ ಯಶಸ್ವಿ ಜೈಸ್ವಾಲ್, ಕ್ರಿಸ್ ಗೇಲ್ ಮತ್ತು ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರ ರೆಕಾರ್ಡ್ ನ್ನು ಪುಡಿ ಮಾಡಿದ್ದಾರೆ. ಜೊತೆಗೆ ಯಶಸ್ವಿ ಜೈಸ್ವಾಲ್ ಮೊದಲ ದರ್ಜೆ ಕ್ರಿಕೆಟ್ ನಲ್ಲಿ ದ್ವಿಶತಕ ಬಾರಿಸಿದ 7 ನೇ ಭಾರತೀಯ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

1975ರಲ್ಲಿ ದಕ್ಷಿಣ ಆಫ್ರಿಕಾದ ದೇಶೀಯ ಕ್ರಿಕೆಟ್ ನಲ್ಲಿ 20 ವರ್ಷ ವಯಸ್ಸಿನ ಅಲನ್ ಬ್ಯಾರೋ ದ್ವಿಶತಕ ಗಳಿಸಿದ ಕಿರಿಯ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದರು. ಯಶಸ್ವಿ ಜೈಸ್ವಾಲ್, 154 ಎಸೆತಗಳಲ್ಲಿ 12 ಸಿಕ್ಸರ್, 17 ಬೌಂಡರಿ ಬಾರಿಸುವ ಮೂಲಕ 203 ರನ್ ಕಲೆ ಹಾಕಿದರು. ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಯಶಸ್ವಿ ಮೂರನೇ ಶತಕ ದಾಖಲಿಸಿದ್ದು, 5 ಪಂದ್ಯಗಳಲ್ಲಿ 585 ರನ್ ಕಲೆ ಹಾಕಿ ರನ್ ಸ್ಕೋರಿಂಗ್ ನಲ್ಲಿ ಮುನ್ನಡೆ ಪಡೆದುಕೊಂಡಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಸಂಜು ಸ್ಯಾಮ್ಸನ್ ದ್ವಿಶತಕ ಸಿಡಿಸಿದ್ದರು. ಲಿಸ್ಟ್ ಎ ನಲ್ಲಿ ದ್ವಿಶತಕ ಬಾರಿಸಿದ ಆಟಗಾರರೆಂದರೆ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ರೋಹಿತ್ ಶರ್ಮಾ, ಶಿಖರ್ ಧವನ್, ಕೆ,ವಿ.ಕೌಶಲ್, ಸಂಜು ಸ್ಯಾಮ್ಸನ್. ಅಂದಹಾಗೆ, ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಇದುವರೆಗೆ ಕೇವಲ ಎಂದು ವೈಯಕ್ತಿಕ ದ್ವಿಶತಕಗಳು ದಾಖಲಾಗಿವೆ. ವಿಶೇಷವೆಂದರೆ, ಅವುಗಳಲ್ಲಿ ಐದು ಭಾರತೀಯ ಆಟಗಾರರಿಂದ ದಾಖಲಿಸಲ್ಪಟ್ಟಿವೆ. ಇನ್ನೂ ವಿಶೇಷವೆಂದರೆ, ರೋಹಿತ್ ಶರ್ಮಾ ಒಬ್ಬರೇ ಮೂರು ಬಾರಿ ಏಕದಿನ ದ್ವಿಶತಕ ಸಾಧನೆಗೈದಿದ್ದಾರೆ. ಮಿಕ್ಕುಳಿದಂತೆ ತೆಂಡೂಲ್ಕರ್, ಸೆಹ್ವಾಗ್ ತಲಾ ಒಂದೊಂದು ದ್ವಿಶತಕ ದಾಖಲಿಸಿದ್ದಾರೆ.

ವಿಜಯ್ ಹಜಾರೆ ಟ್ರೋಫಿಯ ಇತಿಹಾಸದಲ್ಲೇ ಜೈಸ್ವಾಲ್ ಅವರದ್ದು ಮೂರನೇ ದ್ವಿಶತಕವಾಗಿದೆ. ಅಲ್ಲದೇ ಅವರ ಅಮೋಘ ಆಟದ ಮೂಲಕ ಮುಂಬೈ ತಂಡ 358 ರನ್ ಗಳಿಸಿತು. ತಾವು ಸಿಡಿಸಿರುವ ದ್ವಿಶತಕ ಮತ್ತು ದಾಖಲೆ ಬಗ್ಗೆ ಪ್ರತಿಕ್ರಿಯಿಸಿದ ಯಶಸ್ವಿ ಜೈಸ್ವಾಲ್, ನನಗೆ 70ರಿಂದ 80 ರನ್ ಕಲೆ ಹಾಕಲು ಮಾತ್ರ ಸಾಧ್ಯವಾಗುತ್ತಿತ್ತು. ಸೆಂಚುರಿ ಬಾರಿಸುವ ಬಗ್ಗೆ ವಾಸೀಂ ಅವರ ಬ್ಯಾಟಿಂಗ್ ನೋಡಿ ಕಲಿತಿದ್ದೆ. ಹೇಗೆ ಬೌಲನ್ನು ಬೌಂಡರಿಗೆ ಅಟ್ಟಬೇಕು ಎಂಬ ಬಗ್ಗೆ ಅವರು ಹೇಳಿದ್ದರು. ಇದೆಲ್ಲದರಿಂದ ದ್ವಿಶತಕ ಬಾರಿಸುವುದು ಸಾಧ್ಯವಾಗಿದೆ ಎಂದು ಹೇಳಿದ್ದಾರೆ. ಜೈಸ್ವಾಲ್ ಅವರ ರೋಚಕ ದಾಖಲೆಗೆ ಕ್ರಿಕೆಟ್ ಪ್ರೇಮಿಗಳಿಂದ ಶುಭ ಹಾರೈಕೆಗಳು ಹರಿದುಬರುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...