Homeಸಿನಿಮಾಕ್ರೀಡೆ17ರ ಈ ಪೋರನ ಮುಂದೆ ಪುಡಿಯಾದವು ರೋಹಿತ್ ಶರ್ಮಾ, ಕ್ರಿಸ್ ಗೇಲ್ ದಾಖಲೆಗಳು!

17ರ ಈ ಪೋರನ ಮುಂದೆ ಪುಡಿಯಾದವು ರೋಹಿತ್ ಶರ್ಮಾ, ಕ್ರಿಸ್ ಗೇಲ್ ದಾಖಲೆಗಳು!

- Advertisement -
- Advertisement -

ಮುಂಬೈ ಹಾಗೂ ಜಾರ್ಖಂಡ್ ನಡುವಿನ ಪಂದ್ಯದಲ್ಲಿ ಮುಂಬೈ ತಂಡದ ಉದಯೋನ್ಮುಖ ಹಾಗೂ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ದಾಖಲೆ ಬರೆದಿದ್ದಾರೆ. 154 ಎಸೆತದಲ್ಲಿ 203 ರನ್ ಗಳಿಸುವ ಮೂಲಕ ಮೊದಲ ದರ್ಜೆ ಕ್ರಿಕೆಟ್ ನಲ್ಲಿ ದ್ವಿಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 50 ಓವರ್ ಕ್ರಿಕೆಟ್ ನ ಲಿಸ್ಟ್ ಎ ಮತ್ತು ಒಡಿಐನಲ್ಲಿ ದ್ವಿಶತಕ ಗಳಿಸಿದ ಕೀರ್ತಿಗೆ ಭಾಜನರಾಗಿದ್ದಾರೆ.

ವಿಜಯ್ ಹಜಾರೆ ಟೂರ್ನಿಯಲ್ಲಿ ಇಂಥದ್ದೊಂದು ದಾಖಲೆ ಸೃಷ್ಟಿಯಾಗಿದೆ. ಜಾರ್ಖಂಡ್ ವಿರುದ್ಧದ ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಸುಮಾರು 3 ವರ್ಷಗಳ ದಾಖಲೆಯನ್ನು ಯಶಸ್ವಿ ಬ್ರೇಕ್ ಮಾಡಿದರು. ಆ ಮೂಲಕ ಮುಂಬೈ ತಂಡದ ಆರಂಭಿಕ ಆಟಗಾರ, 17 ವರ್ಷದ ಯಶಸ್ವಿ ಜೈಸ್ವಾಲ್, ಕ್ರಿಸ್ ಗೇಲ್ ಮತ್ತು ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರ ರೆಕಾರ್ಡ್ ನ್ನು ಪುಡಿ ಮಾಡಿದ್ದಾರೆ. ಜೊತೆಗೆ ಯಶಸ್ವಿ ಜೈಸ್ವಾಲ್ ಮೊದಲ ದರ್ಜೆ ಕ್ರಿಕೆಟ್ ನಲ್ಲಿ ದ್ವಿಶತಕ ಬಾರಿಸಿದ 7 ನೇ ಭಾರತೀಯ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

1975ರಲ್ಲಿ ದಕ್ಷಿಣ ಆಫ್ರಿಕಾದ ದೇಶೀಯ ಕ್ರಿಕೆಟ್ ನಲ್ಲಿ 20 ವರ್ಷ ವಯಸ್ಸಿನ ಅಲನ್ ಬ್ಯಾರೋ ದ್ವಿಶತಕ ಗಳಿಸಿದ ಕಿರಿಯ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದರು. ಯಶಸ್ವಿ ಜೈಸ್ವಾಲ್, 154 ಎಸೆತಗಳಲ್ಲಿ 12 ಸಿಕ್ಸರ್, 17 ಬೌಂಡರಿ ಬಾರಿಸುವ ಮೂಲಕ 203 ರನ್ ಕಲೆ ಹಾಕಿದರು. ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಯಶಸ್ವಿ ಮೂರನೇ ಶತಕ ದಾಖಲಿಸಿದ್ದು, 5 ಪಂದ್ಯಗಳಲ್ಲಿ 585 ರನ್ ಕಲೆ ಹಾಕಿ ರನ್ ಸ್ಕೋರಿಂಗ್ ನಲ್ಲಿ ಮುನ್ನಡೆ ಪಡೆದುಕೊಂಡಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಸಂಜು ಸ್ಯಾಮ್ಸನ್ ದ್ವಿಶತಕ ಸಿಡಿಸಿದ್ದರು. ಲಿಸ್ಟ್ ಎ ನಲ್ಲಿ ದ್ವಿಶತಕ ಬಾರಿಸಿದ ಆಟಗಾರರೆಂದರೆ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ರೋಹಿತ್ ಶರ್ಮಾ, ಶಿಖರ್ ಧವನ್, ಕೆ,ವಿ.ಕೌಶಲ್, ಸಂಜು ಸ್ಯಾಮ್ಸನ್. ಅಂದಹಾಗೆ, ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಇದುವರೆಗೆ ಕೇವಲ ಎಂದು ವೈಯಕ್ತಿಕ ದ್ವಿಶತಕಗಳು ದಾಖಲಾಗಿವೆ. ವಿಶೇಷವೆಂದರೆ, ಅವುಗಳಲ್ಲಿ ಐದು ಭಾರತೀಯ ಆಟಗಾರರಿಂದ ದಾಖಲಿಸಲ್ಪಟ್ಟಿವೆ. ಇನ್ನೂ ವಿಶೇಷವೆಂದರೆ, ರೋಹಿತ್ ಶರ್ಮಾ ಒಬ್ಬರೇ ಮೂರು ಬಾರಿ ಏಕದಿನ ದ್ವಿಶತಕ ಸಾಧನೆಗೈದಿದ್ದಾರೆ. ಮಿಕ್ಕುಳಿದಂತೆ ತೆಂಡೂಲ್ಕರ್, ಸೆಹ್ವಾಗ್ ತಲಾ ಒಂದೊಂದು ದ್ವಿಶತಕ ದಾಖಲಿಸಿದ್ದಾರೆ.

ವಿಜಯ್ ಹಜಾರೆ ಟ್ರೋಫಿಯ ಇತಿಹಾಸದಲ್ಲೇ ಜೈಸ್ವಾಲ್ ಅವರದ್ದು ಮೂರನೇ ದ್ವಿಶತಕವಾಗಿದೆ. ಅಲ್ಲದೇ ಅವರ ಅಮೋಘ ಆಟದ ಮೂಲಕ ಮುಂಬೈ ತಂಡ 358 ರನ್ ಗಳಿಸಿತು. ತಾವು ಸಿಡಿಸಿರುವ ದ್ವಿಶತಕ ಮತ್ತು ದಾಖಲೆ ಬಗ್ಗೆ ಪ್ರತಿಕ್ರಿಯಿಸಿದ ಯಶಸ್ವಿ ಜೈಸ್ವಾಲ್, ನನಗೆ 70ರಿಂದ 80 ರನ್ ಕಲೆ ಹಾಕಲು ಮಾತ್ರ ಸಾಧ್ಯವಾಗುತ್ತಿತ್ತು. ಸೆಂಚುರಿ ಬಾರಿಸುವ ಬಗ್ಗೆ ವಾಸೀಂ ಅವರ ಬ್ಯಾಟಿಂಗ್ ನೋಡಿ ಕಲಿತಿದ್ದೆ. ಹೇಗೆ ಬೌಲನ್ನು ಬೌಂಡರಿಗೆ ಅಟ್ಟಬೇಕು ಎಂಬ ಬಗ್ಗೆ ಅವರು ಹೇಳಿದ್ದರು. ಇದೆಲ್ಲದರಿಂದ ದ್ವಿಶತಕ ಬಾರಿಸುವುದು ಸಾಧ್ಯವಾಗಿದೆ ಎಂದು ಹೇಳಿದ್ದಾರೆ. ಜೈಸ್ವಾಲ್ ಅವರ ರೋಚಕ ದಾಖಲೆಗೆ ಕ್ರಿಕೆಟ್ ಪ್ರೇಮಿಗಳಿಂದ ಶುಭ ಹಾರೈಕೆಗಳು ಹರಿದುಬರುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...