Homeಚಳವಳಿಬಹುಜನ ಚಳವಳಿಗೆ ಬರಹಗಳ ಮಾರ್ಗ ತೋರಿದ ವಿಜಯ ಮಹೇಶ್‌: ಒಡನಾಡಿಗಳ ನುಡಿನಮನ

ಬಹುಜನ ಚಳವಳಿಗೆ ಬರಹಗಳ ಮಾರ್ಗ ತೋರಿದ ವಿಜಯ ಮಹೇಶ್‌: ಒಡನಾಡಿಗಳ ನುಡಿನಮನ

- Advertisement -
- Advertisement -

ಕರ್ನಾಟಕದಲ್ಲಿ ಬಹುಜನ ಚಳವಳಿಯ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ್ದ ಚಿಂತಕಿ, ಸಂಶೋಧಕಿ ಎಚ್.ಕೆ.ವಿಜಯರವರು ಅನಾರೋಗ್ಯದ ಕಾರಣದಿಂದ ಸೆಪ್ಟಂಬರ್ 05ರ ಭಾನುವಾರ ರಾತ್ರಿ ಕೊನೆಯುಸಿರೆಳಿದಿದ್ದಾರೆ.

ಅವರು ಸೇರಿದಂತೆ ಹಲವು ಜನರ ಶ್ರಮದಿಂದ ರೂಪಿತವಾಗಿದ್ದ ಬಹುಜನ ವಿದ್ಯಾರ್ಥಿ ಚಳವಳಿಯಿಂದಾಗಿ ಹೊಸ ತಲೆಮಾರಿನ ಬರಹಗಾರರು ಹುಟ್ಟಿಕೊಂಡರು. ಹೊಸ ರೀತಿಯ ಚಳವಳಿಯ ಹಾಡುಗಳು ಚಾಲ್ತಿಗೆ ಬಂದವು. ಅಂಬೇಡ್ಕರ್- ಗಾಂಧಿ ನಡುವಿನ ಭಿನ್ನಾಭಿಪ್ರಾಯಗಳ ಕುರಿತು ಹೊಸ ಚರ್ಚೆಗಳು ಮುನ್ನಲೆಗೆ ಬಂದವು.

ಸರ್ಕಾರಿ ಉದ್ಯೋಗವನ್ನು ಬಿಟ್ಟು, ಚಳವಳಿಗೆ ಕಾಲಿಟ್ಟಿದ್ದ ಎನ್.ಮಹೇಶ್ ಹೊಸ ಭರವಸೆಯಾಗಿ ಹೊಮ್ಮಿದ್ದರು. ಎನ್.ಮಹೇಶ್‌ ಅವರಿಗೆ ಸದಾ ಬೆನ್ನೆಲುಬಾಗಿ ನಿಂತು, ಬಹುಜನ ಚಳವಳಿ ಬಲವಾಗಲು ಕಾರಣರಾಗಿ, ದಲಿತ ವಿದ್ಯಾರ್ಥಿ ಸಮೂಹವನ್ನು ತನ್ನ ಮಕ್ಕಳಂತೆ ಪೊರೆದವರು ವಿಜಯ ಮಹೇಶ್ ಎಂದು ನೆನೆಯುತ್ತಾರೆ ಅವರ ಒಡನಾಡಿಗಳು.

ಎಚ್.ಕೆ.ವಿಜಯ ಹಾಗೂ ಎನ್.ಮಹೇಶ್‌ ಪ್ರೀತಿಸಿ ಮದುವೆಯಾದವರು. ಬೆಂಗಳೂರು ವಿವಿಯ ವಿದ್ಯಾರ್ಥಿಗಳಾಗಿದ್ದ ಈ ಇಬ್ಬರು, ಕಾಲೇಜು ದಿನಗಳಿಂದಲೂ ಪ್ರೀತಿಸುತ್ತಿದ್ದರು. ಮುಂದೆ ಎನ್.ಮಹೇಶ್‌ ಅವರು ಕೆಎಎಸ್‌ ಅಧಿಕಾರಿಯಾದರು. ವಿಜಯ ಅವರು ಅಪೆಕ್ಸ್ ಬ್ಯಾಂಕ್ ನಲ್ಲಿ ಕೆಲಸದಲ್ಲಿದ್ದರು. ಕೆಲಸವನ್ನು ಬಿಟ್ಟು ಎನ್.ಮಹೇಶ್, ಚಳವಳಿಗೆ ಕಾಲಿಡಲು ಪ್ರೋತ್ಸಾಹಿಸಿದ ವಿಜಯ ಮಹೇಶ್, ಬಹುಜನ ಚಳವಳಿಯ ಹುಡುಗರಿಗೆ “ವಿಜಯಕ್ಕ” ಎಂದೇ ಚಿರಪರಿಚಿತರಾದರು.

ಚಳವಳಿಯ ಭಾಗವಾಗಿದ್ದ “ಸಮಾಜ ಪರಿವರ್ತನಾ” ಹಾಗೂ “ಪ್ರಬುದ್ಧ ಭಾರತ” ಪತ್ರಿಕೆಗಳಲ್ಲಿ ವಿಜಯ ಅವರ ಲೇಖನಗಳು ಪ್ರಕಟವಾಗಿದ್ದವು. ಇವರು ಬರೆದ ವಿಚಾರಗಳು ‘ಮೂಲನಿವಾಸಿ ಬಹುಜನರ ಇತಿಹಾಸ’, ‘ಅಂಬೇಡ್ಕರ್ ಮತ್ತು ಚರಿತ್ರೆಯ ಮರುಶೋಧ’, ‘ಹಿಂದುತ್ವದ ಗಾಂಧಿ ಮತ್ತು ಮಾನವತೆಯ ಅಂಬೇಡ್ಕರ್’, ‘ವಿಜಯಕ್ಕನ ವಿಚಾರಲಹರಿ’, ‘ನೆಲದ ಮಾತು’, ‘ಆಧುನಿಕ ಪುಷ್ಯಮಿತ್ರ’, ‘ಅಂದದ ಮಗುವಿಗೆ ಚಂದದ ಹೆಸರು’ ಕೃತಿಗಳಾಗಿ ಪ್ರಕಟವಾಗಿವೆ.

“ಬಹುಜನ ವಿದ್ಯಾರ್ಥಿ ಸಂಘಟನೆಗೆ ವಿಜಯ ಮಹೇಶ್‌ ಅವರ ಬರಹಗಳು ಪ್ರೋತ್ಸಾಹವನ್ನು ನೀಡುತ್ತಿದ್ದವು. ಸಮಾಜ ಪರಿವರ್ತನಾ, ಪ್ರಬುದ್ಧ ಭಾರತಕ್ಕೆ ನಿರಂತರವಾಗಿ ಬರೆಯುತ್ತಿದ್ದರು. ನಾವೆಲ್ಲ ಅವರ ಬರಹಗಳಿಂದ ಸ್ಫೂರ್ತಿ ಪಡೆದೆವು. ಎಷ್ಟೇ ಜನ ಕಾರ್ಯಕರ್ತರು ಬಂದರೂ ಸ್ವತಃ ತಾಯಿಯ ಹಾಗೆ ನೋಡಿಕೊಳ್ಳುತ್ತಿದ್ದರು. ಎನ್‌.ಮಹೇಶ್ ಅವರು ಈ ವಿಚಾರದಲ್ಲಿ ಭಾಗ್ಯವಂತರು. ಎಲ್ಲರಿಗೂ ಇಂತಹ ಪತ್ನಿ ಸಿಗುವುದಿಲ್ಲ. ಮನೆಯಲ್ಲಿ ಸಂಪೂರ್ಣ ಸಹಕಾರ ಸಿಕ್ಕಿದ್ದರಿಂದಲೇ ಚಳವಳಿಗೆ ಹೋಗಲು ಸಾಧ್ಯವಾಯಿತು. ಬಹುಜನ ಚಳವಳಿಗೆ ಎನ್.ಮಹೇಶ್ ಅರ್ಧ ಶಕ್ತಿಯಾಗಿದ್ದರೆ, ವಿಜಯ ಮಹೇಶ್ ಇನ್ನರ್ಧ ಶಕ್ತಿಯಾಗಿದ್ದರು” ಎನ್ನುತ್ತಾರೆ ಬರಹಗಾರ, ಸಂಘಟಕ ಡಾ.ಶಿವಕುಮಾರ್.

“ನಾಲ್ವಡಿ ಕೃಷ್ಣರಾಜ ಒಡೆಯರ್, ಪೆರಿಯಾರ್‌ ರಾಮಸ್ವಾಮಿ, ಜ್ಯೋತಿ ಬಾ ಫುಲೆ, ಸಾವಿತ್ರಿ ಬಾ ಫುಲೆ, ಟಿಪ್ಪು ಸುಲ್ತಾನ್, ಕಾನ್ಶಿರಾಮ್, ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಅವರು ಬರೆಯುತ್ತಿದ್ದ ಲೇಖನಗಳು ಅಥೆಂಟಿಕ್‌ ಆಗಿರುತ್ತಿದ್ದವು. ಹೊಸ ತಲೆಮಾರಿಗೆ ಸ್ಫೂರ್ತಿಯನ್ನು ತುಂಬುತ್ತಿದ್ದರು. ನಾವೆಲ್ಲ ವಿಚಾರವಂತರಾಗಿದ್ದೇವೆ ಎಂದರೆ ಅದರ ಹಿಂದಿನ ಶಕ್ತಿ ವಿಜಯ ಮಹೇಶ್” ಎಂಬುದು ಅವರ ಅಭಿಪ್ರಾಯ.

“ನಾವು ಎಷ್ಟೋ ವಿದ್ಯಾರ್ಥಿಗಳು ವಿವಿಧ ವಿ.ವಿ.ಗಳಲ್ಲಿ ಸಂಶೋಧನೆ ಮಾಡಿದ್ದೇವೆ. ವಿಜಯ ಮಹೇಶ್ ಅವರ ಬರವಣಿಗೆಗಳೇ ಈ ಸಂಶೋಧನಾ ವಿದ್ಯಾರ್ಥಿಗಳಿಗೆ ಆಧಾರವಾಗಿದ್ದವು. ಶೋಷಿತರ ಕುರಿತು ಅತ್ಯಂತ ಖಚಿತವಾಗಿ ಬರೆಯುವ ಲೇಖಕಿ ಅವರರಾಗಿದ್ದರು. ನಾವೆಲ್ಲ ವಿಶ್ವವಿದ್ಯಾನಿಲಯಗಳಲ್ಲಿ ನೋಂದಾಯಿತ ಸಂಶೋಧಕರಾಗಿದ್ದರೆ, ವಿಜಯಕ್ಕ ನೋಂದಾಯಿತರಲ್ಲದ ಸಂಶೋಧಕರಾಗಿದ್ದರು” ಎಂದು ಅಭಿಪ್ರಾಯಪಡುತ್ತಾರೆ ಶಿವಕುಮಾರ್.

ಇದನ್ನೂ ಓದಿ: ಅವಕಾಶವಾದವನ್ನು ಸಿದ್ಧಾಂತವಾಗಿಸಿಕೊಂಡಾಗ ವಿಶ್ವಾಸ ಉಳಿಯುವ ಬಗೆ ಎಂತು?

ಕೈಬರಹದಲ್ಲಿದ್ದ ವಿಜಯ ಮಹೇಶ್ ಅವರ ಬರಹಗಳನ್ನು ಕೃತಿ ರೂಪಕ್ಕೆ ತರಲು ಶ್ರಮಿಸಿದವರಲ್ಲಿ ರಘೋತ್ತಮ ಹೊ.ಬ. ಅವರೂ ಒಬ್ಬರು. “ಸಮಾಜ ಪರಿವರ್ತನಾ ಪತ್ರಿಕೆಯ ಸಂಪಾದನೆಯನ್ನು ನೋಡಿಕೊಳ್ಳುತ್ತಿದ್ದ ಕೃಷ್ಣಮೂರ್ತಿ ಚಮರಂ ಒಂದಿಷ್ಟು ಲೇಖನಗಳನ್ನು ಸಂಗ್ರಹಿಸಿಕೊಟ್ಟಿದ್ದರು. ಮುಂದೆ ಪ್ರಬುದ್ಧ ಭಾರತ ಆರಂಭವಾದಾಗ ಅದರ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದೆ. ಹೀಗಾಗಿ ಅವರ ಹಲವು ಬರಹಗಳನ್ನು ನನ್ನ ಬಳಿ ಇದ್ದವು. ಅವುಗಳನ್ನು ಸಂಗ್ರಹಿಸಿ ಪುಸ್ತಕ ಪ್ರಕಟಿಸಿದ ಖುಷಿ ಇದೆ” ಎನ್ನುತ್ತಾರೆ ಹೊ.ಬ.

ಕಾನ್ಶಿ ಫೌಂಡೇಷನ್

“ಎನ್.ಮಹೇಶ್ ಮತ್ತು ವಿಜಯ ಅವರು ಕಾನ್ಶಿರಾಮ್ ಅವರ ಚಿಂತನೆಗಳಿಂದ ಪ್ರಭಾವಿತರಾದವರು. ಉತ್ತರ ಪ್ರದೇಶದಲ್ಲಿ ಬಿಎಸ್ಪಿ ಅಧಿಕಾರ ಹಿಡಿದಿತ್ತು. ಹೋರಾಟಗಾರರಾದ ಗೋಪಿನಾಥ್, ಮೋಹನ್ ಕುಮಾರ್‌ ಅವರು 1992ರಲ್ಲಿ ಸಣ್ಣಮಟ್ಟದಲ್ಲಿ ಬಹುಜನ ಚಳವಳಿಯನ್ನು ಕಟ್ಟುತ್ತಿದ್ದರು. 1993ರಲ್ಲೇ ಭೀಮ್ ಮಾರ್ಚ್ ಹಮ್ಮಿಕೊಂಡಿದ್ದರು. ಮಹೇಶ್ ಅವರು ಚಳವಳಿಯಲ್ಲಿ ಪಾಲ್ಗೊಳ್ಳುತ್ತಿದ್ದರೂ ಸರ್ಕಾರಿ ಉದ್ಯೋಗದಲ್ಲಿದ್ದರು. ಪತ್ನಿಯ ಪ್ರೋತ್ಸಾಹದಿಂದ ಕೆಲಸ ಬಿಟ್ಟರು. ಚಳವಳಿಯಲ್ಲಿ ಪೂರ್ಣ ತೊಡಗಿಸಿಕೊಂಡರು. 1998ರಲ್ಲಿ ಚುನಾವಣೆಯಲ್ಲಿ ನಿಂತರು. ಬಹುಜನ ಚಳವಳಿ ದೊಡ್ಡ ಮಟ್ಟದಲ್ಲಿ ಬೆಳೆಯಲು ವಿಜಯಾ ಅವರು ಕಾರಣ. ಅದ್ಭುತ ಓದುಗರಾಗಿದ್ದ ಅವರು, ಅಂಬೇಡ್ಕರ್ ಅವರ ಮೂಲ ಬರಹಗಳನ್ನೇ ಅಧ್ಯಯನ ಮಾಡಿ, ನಮಗೆಲ್ಲ ವಿಚಾರಗಳನ್ನು ತಿಳಿಸಿಕೊಟ್ಟರು” ಎಂದು ಸ್ಮರಿಸುತ್ತಾರೆ ರಘೋತ್ತಮ ಹೊ.ಬ.

ಕಾನ್ಶಿ ಫೌಂಡೇಷನ್‌ನಲ್ಲಿ ಅಂತ್ಯ ಸಂಸ್ಕಾರ

ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯ ಮಹೇಶ್‌ ಅವರು ಭಾನುವಾರ ನಿಧನರಾದರು. ಅವರು ಬೆಂಗಳೂರಿನ ಬಳಿ ಕನಕಪುರದಲ್ಲಿ ಸ್ಥಾಪಿಸಿದ್ದ ಕಾನ್ಶಿ ಫೌಂಡೇಷನ್‌ನಲ್ಲಿ ಸೋಮವಾರ ಅವರ ಅಂತ್ಯ ಸಂಸ್ಕಾರ ನೆರವೇರಿತು.


ಇದನ್ನೂ ಓದಿ: ಭಾರತದ ಆರ್ಥಿಕತೆ – ಸುಧಾರಣಾಪೂರ್ವ ಮತ್ತು ಸುಧಾರಣೋತ್ತರ ಕಾಲಘಟ್ಟ; ಒಂದು ಮೌಲ್ಯಮಾಪನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...