Homeಚಳವಳಿಬಹುಜನ ಚಳವಳಿಗೆ ಬರಹಗಳ ಮಾರ್ಗ ತೋರಿದ ವಿಜಯ ಮಹೇಶ್‌: ಒಡನಾಡಿಗಳ ನುಡಿನಮನ

ಬಹುಜನ ಚಳವಳಿಗೆ ಬರಹಗಳ ಮಾರ್ಗ ತೋರಿದ ವಿಜಯ ಮಹೇಶ್‌: ಒಡನಾಡಿಗಳ ನುಡಿನಮನ

- Advertisement -
- Advertisement -

ಕರ್ನಾಟಕದಲ್ಲಿ ಬಹುಜನ ಚಳವಳಿಯ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ್ದ ಚಿಂತಕಿ, ಸಂಶೋಧಕಿ ಎಚ್.ಕೆ.ವಿಜಯರವರು ಅನಾರೋಗ್ಯದ ಕಾರಣದಿಂದ ಸೆಪ್ಟಂಬರ್ 05ರ ಭಾನುವಾರ ರಾತ್ರಿ ಕೊನೆಯುಸಿರೆಳಿದಿದ್ದಾರೆ.

ಅವರು ಸೇರಿದಂತೆ ಹಲವು ಜನರ ಶ್ರಮದಿಂದ ರೂಪಿತವಾಗಿದ್ದ ಬಹುಜನ ವಿದ್ಯಾರ್ಥಿ ಚಳವಳಿಯಿಂದಾಗಿ ಹೊಸ ತಲೆಮಾರಿನ ಬರಹಗಾರರು ಹುಟ್ಟಿಕೊಂಡರು. ಹೊಸ ರೀತಿಯ ಚಳವಳಿಯ ಹಾಡುಗಳು ಚಾಲ್ತಿಗೆ ಬಂದವು. ಅಂಬೇಡ್ಕರ್- ಗಾಂಧಿ ನಡುವಿನ ಭಿನ್ನಾಭಿಪ್ರಾಯಗಳ ಕುರಿತು ಹೊಸ ಚರ್ಚೆಗಳು ಮುನ್ನಲೆಗೆ ಬಂದವು.

ಸರ್ಕಾರಿ ಉದ್ಯೋಗವನ್ನು ಬಿಟ್ಟು, ಚಳವಳಿಗೆ ಕಾಲಿಟ್ಟಿದ್ದ ಎನ್.ಮಹೇಶ್ ಹೊಸ ಭರವಸೆಯಾಗಿ ಹೊಮ್ಮಿದ್ದರು. ಎನ್.ಮಹೇಶ್‌ ಅವರಿಗೆ ಸದಾ ಬೆನ್ನೆಲುಬಾಗಿ ನಿಂತು, ಬಹುಜನ ಚಳವಳಿ ಬಲವಾಗಲು ಕಾರಣರಾಗಿ, ದಲಿತ ವಿದ್ಯಾರ್ಥಿ ಸಮೂಹವನ್ನು ತನ್ನ ಮಕ್ಕಳಂತೆ ಪೊರೆದವರು ವಿಜಯ ಮಹೇಶ್ ಎಂದು ನೆನೆಯುತ್ತಾರೆ ಅವರ ಒಡನಾಡಿಗಳು.

ಎಚ್.ಕೆ.ವಿಜಯ ಹಾಗೂ ಎನ್.ಮಹೇಶ್‌ ಪ್ರೀತಿಸಿ ಮದುವೆಯಾದವರು. ಬೆಂಗಳೂರು ವಿವಿಯ ವಿದ್ಯಾರ್ಥಿಗಳಾಗಿದ್ದ ಈ ಇಬ್ಬರು, ಕಾಲೇಜು ದಿನಗಳಿಂದಲೂ ಪ್ರೀತಿಸುತ್ತಿದ್ದರು. ಮುಂದೆ ಎನ್.ಮಹೇಶ್‌ ಅವರು ಕೆಎಎಸ್‌ ಅಧಿಕಾರಿಯಾದರು. ವಿಜಯ ಅವರು ಅಪೆಕ್ಸ್ ಬ್ಯಾಂಕ್ ನಲ್ಲಿ ಕೆಲಸದಲ್ಲಿದ್ದರು. ಕೆಲಸವನ್ನು ಬಿಟ್ಟು ಎನ್.ಮಹೇಶ್, ಚಳವಳಿಗೆ ಕಾಲಿಡಲು ಪ್ರೋತ್ಸಾಹಿಸಿದ ವಿಜಯ ಮಹೇಶ್, ಬಹುಜನ ಚಳವಳಿಯ ಹುಡುಗರಿಗೆ “ವಿಜಯಕ್ಕ” ಎಂದೇ ಚಿರಪರಿಚಿತರಾದರು.

ಚಳವಳಿಯ ಭಾಗವಾಗಿದ್ದ “ಸಮಾಜ ಪರಿವರ್ತನಾ” ಹಾಗೂ “ಪ್ರಬುದ್ಧ ಭಾರತ” ಪತ್ರಿಕೆಗಳಲ್ಲಿ ವಿಜಯ ಅವರ ಲೇಖನಗಳು ಪ್ರಕಟವಾಗಿದ್ದವು. ಇವರು ಬರೆದ ವಿಚಾರಗಳು ‘ಮೂಲನಿವಾಸಿ ಬಹುಜನರ ಇತಿಹಾಸ’, ‘ಅಂಬೇಡ್ಕರ್ ಮತ್ತು ಚರಿತ್ರೆಯ ಮರುಶೋಧ’, ‘ಹಿಂದುತ್ವದ ಗಾಂಧಿ ಮತ್ತು ಮಾನವತೆಯ ಅಂಬೇಡ್ಕರ್’, ‘ವಿಜಯಕ್ಕನ ವಿಚಾರಲಹರಿ’, ‘ನೆಲದ ಮಾತು’, ‘ಆಧುನಿಕ ಪುಷ್ಯಮಿತ್ರ’, ‘ಅಂದದ ಮಗುವಿಗೆ ಚಂದದ ಹೆಸರು’ ಕೃತಿಗಳಾಗಿ ಪ್ರಕಟವಾಗಿವೆ.

“ಬಹುಜನ ವಿದ್ಯಾರ್ಥಿ ಸಂಘಟನೆಗೆ ವಿಜಯ ಮಹೇಶ್‌ ಅವರ ಬರಹಗಳು ಪ್ರೋತ್ಸಾಹವನ್ನು ನೀಡುತ್ತಿದ್ದವು. ಸಮಾಜ ಪರಿವರ್ತನಾ, ಪ್ರಬುದ್ಧ ಭಾರತಕ್ಕೆ ನಿರಂತರವಾಗಿ ಬರೆಯುತ್ತಿದ್ದರು. ನಾವೆಲ್ಲ ಅವರ ಬರಹಗಳಿಂದ ಸ್ಫೂರ್ತಿ ಪಡೆದೆವು. ಎಷ್ಟೇ ಜನ ಕಾರ್ಯಕರ್ತರು ಬಂದರೂ ಸ್ವತಃ ತಾಯಿಯ ಹಾಗೆ ನೋಡಿಕೊಳ್ಳುತ್ತಿದ್ದರು. ಎನ್‌.ಮಹೇಶ್ ಅವರು ಈ ವಿಚಾರದಲ್ಲಿ ಭಾಗ್ಯವಂತರು. ಎಲ್ಲರಿಗೂ ಇಂತಹ ಪತ್ನಿ ಸಿಗುವುದಿಲ್ಲ. ಮನೆಯಲ್ಲಿ ಸಂಪೂರ್ಣ ಸಹಕಾರ ಸಿಕ್ಕಿದ್ದರಿಂದಲೇ ಚಳವಳಿಗೆ ಹೋಗಲು ಸಾಧ್ಯವಾಯಿತು. ಬಹುಜನ ಚಳವಳಿಗೆ ಎನ್.ಮಹೇಶ್ ಅರ್ಧ ಶಕ್ತಿಯಾಗಿದ್ದರೆ, ವಿಜಯ ಮಹೇಶ್ ಇನ್ನರ್ಧ ಶಕ್ತಿಯಾಗಿದ್ದರು” ಎನ್ನುತ್ತಾರೆ ಬರಹಗಾರ, ಸಂಘಟಕ ಡಾ.ಶಿವಕುಮಾರ್.

“ನಾಲ್ವಡಿ ಕೃಷ್ಣರಾಜ ಒಡೆಯರ್, ಪೆರಿಯಾರ್‌ ರಾಮಸ್ವಾಮಿ, ಜ್ಯೋತಿ ಬಾ ಫುಲೆ, ಸಾವಿತ್ರಿ ಬಾ ಫುಲೆ, ಟಿಪ್ಪು ಸುಲ್ತಾನ್, ಕಾನ್ಶಿರಾಮ್, ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಅವರು ಬರೆಯುತ್ತಿದ್ದ ಲೇಖನಗಳು ಅಥೆಂಟಿಕ್‌ ಆಗಿರುತ್ತಿದ್ದವು. ಹೊಸ ತಲೆಮಾರಿಗೆ ಸ್ಫೂರ್ತಿಯನ್ನು ತುಂಬುತ್ತಿದ್ದರು. ನಾವೆಲ್ಲ ವಿಚಾರವಂತರಾಗಿದ್ದೇವೆ ಎಂದರೆ ಅದರ ಹಿಂದಿನ ಶಕ್ತಿ ವಿಜಯ ಮಹೇಶ್” ಎಂಬುದು ಅವರ ಅಭಿಪ್ರಾಯ.

“ನಾವು ಎಷ್ಟೋ ವಿದ್ಯಾರ್ಥಿಗಳು ವಿವಿಧ ವಿ.ವಿ.ಗಳಲ್ಲಿ ಸಂಶೋಧನೆ ಮಾಡಿದ್ದೇವೆ. ವಿಜಯ ಮಹೇಶ್ ಅವರ ಬರವಣಿಗೆಗಳೇ ಈ ಸಂಶೋಧನಾ ವಿದ್ಯಾರ್ಥಿಗಳಿಗೆ ಆಧಾರವಾಗಿದ್ದವು. ಶೋಷಿತರ ಕುರಿತು ಅತ್ಯಂತ ಖಚಿತವಾಗಿ ಬರೆಯುವ ಲೇಖಕಿ ಅವರರಾಗಿದ್ದರು. ನಾವೆಲ್ಲ ವಿಶ್ವವಿದ್ಯಾನಿಲಯಗಳಲ್ಲಿ ನೋಂದಾಯಿತ ಸಂಶೋಧಕರಾಗಿದ್ದರೆ, ವಿಜಯಕ್ಕ ನೋಂದಾಯಿತರಲ್ಲದ ಸಂಶೋಧಕರಾಗಿದ್ದರು” ಎಂದು ಅಭಿಪ್ರಾಯಪಡುತ್ತಾರೆ ಶಿವಕುಮಾರ್.

ಇದನ್ನೂ ಓದಿ: ಅವಕಾಶವಾದವನ್ನು ಸಿದ್ಧಾಂತವಾಗಿಸಿಕೊಂಡಾಗ ವಿಶ್ವಾಸ ಉಳಿಯುವ ಬಗೆ ಎಂತು?

ಕೈಬರಹದಲ್ಲಿದ್ದ ವಿಜಯ ಮಹೇಶ್ ಅವರ ಬರಹಗಳನ್ನು ಕೃತಿ ರೂಪಕ್ಕೆ ತರಲು ಶ್ರಮಿಸಿದವರಲ್ಲಿ ರಘೋತ್ತಮ ಹೊ.ಬ. ಅವರೂ ಒಬ್ಬರು. “ಸಮಾಜ ಪರಿವರ್ತನಾ ಪತ್ರಿಕೆಯ ಸಂಪಾದನೆಯನ್ನು ನೋಡಿಕೊಳ್ಳುತ್ತಿದ್ದ ಕೃಷ್ಣಮೂರ್ತಿ ಚಮರಂ ಒಂದಿಷ್ಟು ಲೇಖನಗಳನ್ನು ಸಂಗ್ರಹಿಸಿಕೊಟ್ಟಿದ್ದರು. ಮುಂದೆ ಪ್ರಬುದ್ಧ ಭಾರತ ಆರಂಭವಾದಾಗ ಅದರ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದೆ. ಹೀಗಾಗಿ ಅವರ ಹಲವು ಬರಹಗಳನ್ನು ನನ್ನ ಬಳಿ ಇದ್ದವು. ಅವುಗಳನ್ನು ಸಂಗ್ರಹಿಸಿ ಪುಸ್ತಕ ಪ್ರಕಟಿಸಿದ ಖುಷಿ ಇದೆ” ಎನ್ನುತ್ತಾರೆ ಹೊ.ಬ.

ಕಾನ್ಶಿ ಫೌಂಡೇಷನ್

“ಎನ್.ಮಹೇಶ್ ಮತ್ತು ವಿಜಯ ಅವರು ಕಾನ್ಶಿರಾಮ್ ಅವರ ಚಿಂತನೆಗಳಿಂದ ಪ್ರಭಾವಿತರಾದವರು. ಉತ್ತರ ಪ್ರದೇಶದಲ್ಲಿ ಬಿಎಸ್ಪಿ ಅಧಿಕಾರ ಹಿಡಿದಿತ್ತು. ಹೋರಾಟಗಾರರಾದ ಗೋಪಿನಾಥ್, ಮೋಹನ್ ಕುಮಾರ್‌ ಅವರು 1992ರಲ್ಲಿ ಸಣ್ಣಮಟ್ಟದಲ್ಲಿ ಬಹುಜನ ಚಳವಳಿಯನ್ನು ಕಟ್ಟುತ್ತಿದ್ದರು. 1993ರಲ್ಲೇ ಭೀಮ್ ಮಾರ್ಚ್ ಹಮ್ಮಿಕೊಂಡಿದ್ದರು. ಮಹೇಶ್ ಅವರು ಚಳವಳಿಯಲ್ಲಿ ಪಾಲ್ಗೊಳ್ಳುತ್ತಿದ್ದರೂ ಸರ್ಕಾರಿ ಉದ್ಯೋಗದಲ್ಲಿದ್ದರು. ಪತ್ನಿಯ ಪ್ರೋತ್ಸಾಹದಿಂದ ಕೆಲಸ ಬಿಟ್ಟರು. ಚಳವಳಿಯಲ್ಲಿ ಪೂರ್ಣ ತೊಡಗಿಸಿಕೊಂಡರು. 1998ರಲ್ಲಿ ಚುನಾವಣೆಯಲ್ಲಿ ನಿಂತರು. ಬಹುಜನ ಚಳವಳಿ ದೊಡ್ಡ ಮಟ್ಟದಲ್ಲಿ ಬೆಳೆಯಲು ವಿಜಯಾ ಅವರು ಕಾರಣ. ಅದ್ಭುತ ಓದುಗರಾಗಿದ್ದ ಅವರು, ಅಂಬೇಡ್ಕರ್ ಅವರ ಮೂಲ ಬರಹಗಳನ್ನೇ ಅಧ್ಯಯನ ಮಾಡಿ, ನಮಗೆಲ್ಲ ವಿಚಾರಗಳನ್ನು ತಿಳಿಸಿಕೊಟ್ಟರು” ಎಂದು ಸ್ಮರಿಸುತ್ತಾರೆ ರಘೋತ್ತಮ ಹೊ.ಬ.

ಕಾನ್ಶಿ ಫೌಂಡೇಷನ್‌ನಲ್ಲಿ ಅಂತ್ಯ ಸಂಸ್ಕಾರ

ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯ ಮಹೇಶ್‌ ಅವರು ಭಾನುವಾರ ನಿಧನರಾದರು. ಅವರು ಬೆಂಗಳೂರಿನ ಬಳಿ ಕನಕಪುರದಲ್ಲಿ ಸ್ಥಾಪಿಸಿದ್ದ ಕಾನ್ಶಿ ಫೌಂಡೇಷನ್‌ನಲ್ಲಿ ಸೋಮವಾರ ಅವರ ಅಂತ್ಯ ಸಂಸ್ಕಾರ ನೆರವೇರಿತು.


ಇದನ್ನೂ ಓದಿ: ಭಾರತದ ಆರ್ಥಿಕತೆ – ಸುಧಾರಣಾಪೂರ್ವ ಮತ್ತು ಸುಧಾರಣೋತ್ತರ ಕಾಲಘಟ್ಟ; ಒಂದು ಮೌಲ್ಯಮಾಪನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...