Homeಚಳವಳಿಬಹುಜನ ಚಳವಳಿಗೆ ಬರಹಗಳ ಮಾರ್ಗ ತೋರಿದ ವಿಜಯ ಮಹೇಶ್‌: ಒಡನಾಡಿಗಳ ನುಡಿನಮನ

ಬಹುಜನ ಚಳವಳಿಗೆ ಬರಹಗಳ ಮಾರ್ಗ ತೋರಿದ ವಿಜಯ ಮಹೇಶ್‌: ಒಡನಾಡಿಗಳ ನುಡಿನಮನ

- Advertisement -
- Advertisement -

ಕರ್ನಾಟಕದಲ್ಲಿ ಬಹುಜನ ಚಳವಳಿಯ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ್ದ ಚಿಂತಕಿ, ಸಂಶೋಧಕಿ ಎಚ್.ಕೆ.ವಿಜಯರವರು ಅನಾರೋಗ್ಯದ ಕಾರಣದಿಂದ ಸೆಪ್ಟಂಬರ್ 05ರ ಭಾನುವಾರ ರಾತ್ರಿ ಕೊನೆಯುಸಿರೆಳಿದಿದ್ದಾರೆ.

ಅವರು ಸೇರಿದಂತೆ ಹಲವು ಜನರ ಶ್ರಮದಿಂದ ರೂಪಿತವಾಗಿದ್ದ ಬಹುಜನ ವಿದ್ಯಾರ್ಥಿ ಚಳವಳಿಯಿಂದಾಗಿ ಹೊಸ ತಲೆಮಾರಿನ ಬರಹಗಾರರು ಹುಟ್ಟಿಕೊಂಡರು. ಹೊಸ ರೀತಿಯ ಚಳವಳಿಯ ಹಾಡುಗಳು ಚಾಲ್ತಿಗೆ ಬಂದವು. ಅಂಬೇಡ್ಕರ್- ಗಾಂಧಿ ನಡುವಿನ ಭಿನ್ನಾಭಿಪ್ರಾಯಗಳ ಕುರಿತು ಹೊಸ ಚರ್ಚೆಗಳು ಮುನ್ನಲೆಗೆ ಬಂದವು.

ಸರ್ಕಾರಿ ಉದ್ಯೋಗವನ್ನು ಬಿಟ್ಟು, ಚಳವಳಿಗೆ ಕಾಲಿಟ್ಟಿದ್ದ ಎನ್.ಮಹೇಶ್ ಹೊಸ ಭರವಸೆಯಾಗಿ ಹೊಮ್ಮಿದ್ದರು. ಎನ್.ಮಹೇಶ್‌ ಅವರಿಗೆ ಸದಾ ಬೆನ್ನೆಲುಬಾಗಿ ನಿಂತು, ಬಹುಜನ ಚಳವಳಿ ಬಲವಾಗಲು ಕಾರಣರಾಗಿ, ದಲಿತ ವಿದ್ಯಾರ್ಥಿ ಸಮೂಹವನ್ನು ತನ್ನ ಮಕ್ಕಳಂತೆ ಪೊರೆದವರು ವಿಜಯ ಮಹೇಶ್ ಎಂದು ನೆನೆಯುತ್ತಾರೆ ಅವರ ಒಡನಾಡಿಗಳು.

ಎಚ್.ಕೆ.ವಿಜಯ ಹಾಗೂ ಎನ್.ಮಹೇಶ್‌ ಪ್ರೀತಿಸಿ ಮದುವೆಯಾದವರು. ಬೆಂಗಳೂರು ವಿವಿಯ ವಿದ್ಯಾರ್ಥಿಗಳಾಗಿದ್ದ ಈ ಇಬ್ಬರು, ಕಾಲೇಜು ದಿನಗಳಿಂದಲೂ ಪ್ರೀತಿಸುತ್ತಿದ್ದರು. ಮುಂದೆ ಎನ್.ಮಹೇಶ್‌ ಅವರು ಕೆಎಎಸ್‌ ಅಧಿಕಾರಿಯಾದರು. ವಿಜಯ ಅವರು ಅಪೆಕ್ಸ್ ಬ್ಯಾಂಕ್ ನಲ್ಲಿ ಕೆಲಸದಲ್ಲಿದ್ದರು. ಕೆಲಸವನ್ನು ಬಿಟ್ಟು ಎನ್.ಮಹೇಶ್, ಚಳವಳಿಗೆ ಕಾಲಿಡಲು ಪ್ರೋತ್ಸಾಹಿಸಿದ ವಿಜಯ ಮಹೇಶ್, ಬಹುಜನ ಚಳವಳಿಯ ಹುಡುಗರಿಗೆ “ವಿಜಯಕ್ಕ” ಎಂದೇ ಚಿರಪರಿಚಿತರಾದರು.

ಚಳವಳಿಯ ಭಾಗವಾಗಿದ್ದ “ಸಮಾಜ ಪರಿವರ್ತನಾ” ಹಾಗೂ “ಪ್ರಬುದ್ಧ ಭಾರತ” ಪತ್ರಿಕೆಗಳಲ್ಲಿ ವಿಜಯ ಅವರ ಲೇಖನಗಳು ಪ್ರಕಟವಾಗಿದ್ದವು. ಇವರು ಬರೆದ ವಿಚಾರಗಳು ‘ಮೂಲನಿವಾಸಿ ಬಹುಜನರ ಇತಿಹಾಸ’, ‘ಅಂಬೇಡ್ಕರ್ ಮತ್ತು ಚರಿತ್ರೆಯ ಮರುಶೋಧ’, ‘ಹಿಂದುತ್ವದ ಗಾಂಧಿ ಮತ್ತು ಮಾನವತೆಯ ಅಂಬೇಡ್ಕರ್’, ‘ವಿಜಯಕ್ಕನ ವಿಚಾರಲಹರಿ’, ‘ನೆಲದ ಮಾತು’, ‘ಆಧುನಿಕ ಪುಷ್ಯಮಿತ್ರ’, ‘ಅಂದದ ಮಗುವಿಗೆ ಚಂದದ ಹೆಸರು’ ಕೃತಿಗಳಾಗಿ ಪ್ರಕಟವಾಗಿವೆ.

“ಬಹುಜನ ವಿದ್ಯಾರ್ಥಿ ಸಂಘಟನೆಗೆ ವಿಜಯ ಮಹೇಶ್‌ ಅವರ ಬರಹಗಳು ಪ್ರೋತ್ಸಾಹವನ್ನು ನೀಡುತ್ತಿದ್ದವು. ಸಮಾಜ ಪರಿವರ್ತನಾ, ಪ್ರಬುದ್ಧ ಭಾರತಕ್ಕೆ ನಿರಂತರವಾಗಿ ಬರೆಯುತ್ತಿದ್ದರು. ನಾವೆಲ್ಲ ಅವರ ಬರಹಗಳಿಂದ ಸ್ಫೂರ್ತಿ ಪಡೆದೆವು. ಎಷ್ಟೇ ಜನ ಕಾರ್ಯಕರ್ತರು ಬಂದರೂ ಸ್ವತಃ ತಾಯಿಯ ಹಾಗೆ ನೋಡಿಕೊಳ್ಳುತ್ತಿದ್ದರು. ಎನ್‌.ಮಹೇಶ್ ಅವರು ಈ ವಿಚಾರದಲ್ಲಿ ಭಾಗ್ಯವಂತರು. ಎಲ್ಲರಿಗೂ ಇಂತಹ ಪತ್ನಿ ಸಿಗುವುದಿಲ್ಲ. ಮನೆಯಲ್ಲಿ ಸಂಪೂರ್ಣ ಸಹಕಾರ ಸಿಕ್ಕಿದ್ದರಿಂದಲೇ ಚಳವಳಿಗೆ ಹೋಗಲು ಸಾಧ್ಯವಾಯಿತು. ಬಹುಜನ ಚಳವಳಿಗೆ ಎನ್.ಮಹೇಶ್ ಅರ್ಧ ಶಕ್ತಿಯಾಗಿದ್ದರೆ, ವಿಜಯ ಮಹೇಶ್ ಇನ್ನರ್ಧ ಶಕ್ತಿಯಾಗಿದ್ದರು” ಎನ್ನುತ್ತಾರೆ ಬರಹಗಾರ, ಸಂಘಟಕ ಡಾ.ಶಿವಕುಮಾರ್.

“ನಾಲ್ವಡಿ ಕೃಷ್ಣರಾಜ ಒಡೆಯರ್, ಪೆರಿಯಾರ್‌ ರಾಮಸ್ವಾಮಿ, ಜ್ಯೋತಿ ಬಾ ಫುಲೆ, ಸಾವಿತ್ರಿ ಬಾ ಫುಲೆ, ಟಿಪ್ಪು ಸುಲ್ತಾನ್, ಕಾನ್ಶಿರಾಮ್, ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಅವರು ಬರೆಯುತ್ತಿದ್ದ ಲೇಖನಗಳು ಅಥೆಂಟಿಕ್‌ ಆಗಿರುತ್ತಿದ್ದವು. ಹೊಸ ತಲೆಮಾರಿಗೆ ಸ್ಫೂರ್ತಿಯನ್ನು ತುಂಬುತ್ತಿದ್ದರು. ನಾವೆಲ್ಲ ವಿಚಾರವಂತರಾಗಿದ್ದೇವೆ ಎಂದರೆ ಅದರ ಹಿಂದಿನ ಶಕ್ತಿ ವಿಜಯ ಮಹೇಶ್” ಎಂಬುದು ಅವರ ಅಭಿಪ್ರಾಯ.

“ನಾವು ಎಷ್ಟೋ ವಿದ್ಯಾರ್ಥಿಗಳು ವಿವಿಧ ವಿ.ವಿ.ಗಳಲ್ಲಿ ಸಂಶೋಧನೆ ಮಾಡಿದ್ದೇವೆ. ವಿಜಯ ಮಹೇಶ್ ಅವರ ಬರವಣಿಗೆಗಳೇ ಈ ಸಂಶೋಧನಾ ವಿದ್ಯಾರ್ಥಿಗಳಿಗೆ ಆಧಾರವಾಗಿದ್ದವು. ಶೋಷಿತರ ಕುರಿತು ಅತ್ಯಂತ ಖಚಿತವಾಗಿ ಬರೆಯುವ ಲೇಖಕಿ ಅವರರಾಗಿದ್ದರು. ನಾವೆಲ್ಲ ವಿಶ್ವವಿದ್ಯಾನಿಲಯಗಳಲ್ಲಿ ನೋಂದಾಯಿತ ಸಂಶೋಧಕರಾಗಿದ್ದರೆ, ವಿಜಯಕ್ಕ ನೋಂದಾಯಿತರಲ್ಲದ ಸಂಶೋಧಕರಾಗಿದ್ದರು” ಎಂದು ಅಭಿಪ್ರಾಯಪಡುತ್ತಾರೆ ಶಿವಕುಮಾರ್.

ಇದನ್ನೂ ಓದಿ: ಅವಕಾಶವಾದವನ್ನು ಸಿದ್ಧಾಂತವಾಗಿಸಿಕೊಂಡಾಗ ವಿಶ್ವಾಸ ಉಳಿಯುವ ಬಗೆ ಎಂತು?

ಕೈಬರಹದಲ್ಲಿದ್ದ ವಿಜಯ ಮಹೇಶ್ ಅವರ ಬರಹಗಳನ್ನು ಕೃತಿ ರೂಪಕ್ಕೆ ತರಲು ಶ್ರಮಿಸಿದವರಲ್ಲಿ ರಘೋತ್ತಮ ಹೊ.ಬ. ಅವರೂ ಒಬ್ಬರು. “ಸಮಾಜ ಪರಿವರ್ತನಾ ಪತ್ರಿಕೆಯ ಸಂಪಾದನೆಯನ್ನು ನೋಡಿಕೊಳ್ಳುತ್ತಿದ್ದ ಕೃಷ್ಣಮೂರ್ತಿ ಚಮರಂ ಒಂದಿಷ್ಟು ಲೇಖನಗಳನ್ನು ಸಂಗ್ರಹಿಸಿಕೊಟ್ಟಿದ್ದರು. ಮುಂದೆ ಪ್ರಬುದ್ಧ ಭಾರತ ಆರಂಭವಾದಾಗ ಅದರ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದೆ. ಹೀಗಾಗಿ ಅವರ ಹಲವು ಬರಹಗಳನ್ನು ನನ್ನ ಬಳಿ ಇದ್ದವು. ಅವುಗಳನ್ನು ಸಂಗ್ರಹಿಸಿ ಪುಸ್ತಕ ಪ್ರಕಟಿಸಿದ ಖುಷಿ ಇದೆ” ಎನ್ನುತ್ತಾರೆ ಹೊ.ಬ.

ಕಾನ್ಶಿ ಫೌಂಡೇಷನ್

“ಎನ್.ಮಹೇಶ್ ಮತ್ತು ವಿಜಯ ಅವರು ಕಾನ್ಶಿರಾಮ್ ಅವರ ಚಿಂತನೆಗಳಿಂದ ಪ್ರಭಾವಿತರಾದವರು. ಉತ್ತರ ಪ್ರದೇಶದಲ್ಲಿ ಬಿಎಸ್ಪಿ ಅಧಿಕಾರ ಹಿಡಿದಿತ್ತು. ಹೋರಾಟಗಾರರಾದ ಗೋಪಿನಾಥ್, ಮೋಹನ್ ಕುಮಾರ್‌ ಅವರು 1992ರಲ್ಲಿ ಸಣ್ಣಮಟ್ಟದಲ್ಲಿ ಬಹುಜನ ಚಳವಳಿಯನ್ನು ಕಟ್ಟುತ್ತಿದ್ದರು. 1993ರಲ್ಲೇ ಭೀಮ್ ಮಾರ್ಚ್ ಹಮ್ಮಿಕೊಂಡಿದ್ದರು. ಮಹೇಶ್ ಅವರು ಚಳವಳಿಯಲ್ಲಿ ಪಾಲ್ಗೊಳ್ಳುತ್ತಿದ್ದರೂ ಸರ್ಕಾರಿ ಉದ್ಯೋಗದಲ್ಲಿದ್ದರು. ಪತ್ನಿಯ ಪ್ರೋತ್ಸಾಹದಿಂದ ಕೆಲಸ ಬಿಟ್ಟರು. ಚಳವಳಿಯಲ್ಲಿ ಪೂರ್ಣ ತೊಡಗಿಸಿಕೊಂಡರು. 1998ರಲ್ಲಿ ಚುನಾವಣೆಯಲ್ಲಿ ನಿಂತರು. ಬಹುಜನ ಚಳವಳಿ ದೊಡ್ಡ ಮಟ್ಟದಲ್ಲಿ ಬೆಳೆಯಲು ವಿಜಯಾ ಅವರು ಕಾರಣ. ಅದ್ಭುತ ಓದುಗರಾಗಿದ್ದ ಅವರು, ಅಂಬೇಡ್ಕರ್ ಅವರ ಮೂಲ ಬರಹಗಳನ್ನೇ ಅಧ್ಯಯನ ಮಾಡಿ, ನಮಗೆಲ್ಲ ವಿಚಾರಗಳನ್ನು ತಿಳಿಸಿಕೊಟ್ಟರು” ಎಂದು ಸ್ಮರಿಸುತ್ತಾರೆ ರಘೋತ್ತಮ ಹೊ.ಬ.

ಕಾನ್ಶಿ ಫೌಂಡೇಷನ್‌ನಲ್ಲಿ ಅಂತ್ಯ ಸಂಸ್ಕಾರ

ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯ ಮಹೇಶ್‌ ಅವರು ಭಾನುವಾರ ನಿಧನರಾದರು. ಅವರು ಬೆಂಗಳೂರಿನ ಬಳಿ ಕನಕಪುರದಲ್ಲಿ ಸ್ಥಾಪಿಸಿದ್ದ ಕಾನ್ಶಿ ಫೌಂಡೇಷನ್‌ನಲ್ಲಿ ಸೋಮವಾರ ಅವರ ಅಂತ್ಯ ಸಂಸ್ಕಾರ ನೆರವೇರಿತು.


ಇದನ್ನೂ ಓದಿ: ಭಾರತದ ಆರ್ಥಿಕತೆ – ಸುಧಾರಣಾಪೂರ್ವ ಮತ್ತು ಸುಧಾರಣೋತ್ತರ ಕಾಲಘಟ್ಟ; ಒಂದು ಮೌಲ್ಯಮಾಪನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...