Homeಚಳವಳಿಬಹುಜನ ಚಳವಳಿಗೆ ಬರಹಗಳ ಮಾರ್ಗ ತೋರಿದ ವಿಜಯ ಮಹೇಶ್‌: ಒಡನಾಡಿಗಳ ನುಡಿನಮನ

ಬಹುಜನ ಚಳವಳಿಗೆ ಬರಹಗಳ ಮಾರ್ಗ ತೋರಿದ ವಿಜಯ ಮಹೇಶ್‌: ಒಡನಾಡಿಗಳ ನುಡಿನಮನ

- Advertisement -
- Advertisement -

ಕರ್ನಾಟಕದಲ್ಲಿ ಬಹುಜನ ಚಳವಳಿಯ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ್ದ ಚಿಂತಕಿ, ಸಂಶೋಧಕಿ ಎಚ್.ಕೆ.ವಿಜಯರವರು ಅನಾರೋಗ್ಯದ ಕಾರಣದಿಂದ ಸೆಪ್ಟಂಬರ್ 05ರ ಭಾನುವಾರ ರಾತ್ರಿ ಕೊನೆಯುಸಿರೆಳಿದಿದ್ದಾರೆ.

ಅವರು ಸೇರಿದಂತೆ ಹಲವು ಜನರ ಶ್ರಮದಿಂದ ರೂಪಿತವಾಗಿದ್ದ ಬಹುಜನ ವಿದ್ಯಾರ್ಥಿ ಚಳವಳಿಯಿಂದಾಗಿ ಹೊಸ ತಲೆಮಾರಿನ ಬರಹಗಾರರು ಹುಟ್ಟಿಕೊಂಡರು. ಹೊಸ ರೀತಿಯ ಚಳವಳಿಯ ಹಾಡುಗಳು ಚಾಲ್ತಿಗೆ ಬಂದವು. ಅಂಬೇಡ್ಕರ್- ಗಾಂಧಿ ನಡುವಿನ ಭಿನ್ನಾಭಿಪ್ರಾಯಗಳ ಕುರಿತು ಹೊಸ ಚರ್ಚೆಗಳು ಮುನ್ನಲೆಗೆ ಬಂದವು.

ಸರ್ಕಾರಿ ಉದ್ಯೋಗವನ್ನು ಬಿಟ್ಟು, ಚಳವಳಿಗೆ ಕಾಲಿಟ್ಟಿದ್ದ ಎನ್.ಮಹೇಶ್ ಹೊಸ ಭರವಸೆಯಾಗಿ ಹೊಮ್ಮಿದ್ದರು. ಎನ್.ಮಹೇಶ್‌ ಅವರಿಗೆ ಸದಾ ಬೆನ್ನೆಲುಬಾಗಿ ನಿಂತು, ಬಹುಜನ ಚಳವಳಿ ಬಲವಾಗಲು ಕಾರಣರಾಗಿ, ದಲಿತ ವಿದ್ಯಾರ್ಥಿ ಸಮೂಹವನ್ನು ತನ್ನ ಮಕ್ಕಳಂತೆ ಪೊರೆದವರು ವಿಜಯ ಮಹೇಶ್ ಎಂದು ನೆನೆಯುತ್ತಾರೆ ಅವರ ಒಡನಾಡಿಗಳು.

ಎಚ್.ಕೆ.ವಿಜಯ ಹಾಗೂ ಎನ್.ಮಹೇಶ್‌ ಪ್ರೀತಿಸಿ ಮದುವೆಯಾದವರು. ಬೆಂಗಳೂರು ವಿವಿಯ ವಿದ್ಯಾರ್ಥಿಗಳಾಗಿದ್ದ ಈ ಇಬ್ಬರು, ಕಾಲೇಜು ದಿನಗಳಿಂದಲೂ ಪ್ರೀತಿಸುತ್ತಿದ್ದರು. ಮುಂದೆ ಎನ್.ಮಹೇಶ್‌ ಅವರು ಕೆಎಎಸ್‌ ಅಧಿಕಾರಿಯಾದರು. ವಿಜಯ ಅವರು ಅಪೆಕ್ಸ್ ಬ್ಯಾಂಕ್ ನಲ್ಲಿ ಕೆಲಸದಲ್ಲಿದ್ದರು. ಕೆಲಸವನ್ನು ಬಿಟ್ಟು ಎನ್.ಮಹೇಶ್, ಚಳವಳಿಗೆ ಕಾಲಿಡಲು ಪ್ರೋತ್ಸಾಹಿಸಿದ ವಿಜಯ ಮಹೇಶ್, ಬಹುಜನ ಚಳವಳಿಯ ಹುಡುಗರಿಗೆ “ವಿಜಯಕ್ಕ” ಎಂದೇ ಚಿರಪರಿಚಿತರಾದರು.

ಚಳವಳಿಯ ಭಾಗವಾಗಿದ್ದ “ಸಮಾಜ ಪರಿವರ್ತನಾ” ಹಾಗೂ “ಪ್ರಬುದ್ಧ ಭಾರತ” ಪತ್ರಿಕೆಗಳಲ್ಲಿ ವಿಜಯ ಅವರ ಲೇಖನಗಳು ಪ್ರಕಟವಾಗಿದ್ದವು. ಇವರು ಬರೆದ ವಿಚಾರಗಳು ‘ಮೂಲನಿವಾಸಿ ಬಹುಜನರ ಇತಿಹಾಸ’, ‘ಅಂಬೇಡ್ಕರ್ ಮತ್ತು ಚರಿತ್ರೆಯ ಮರುಶೋಧ’, ‘ಹಿಂದುತ್ವದ ಗಾಂಧಿ ಮತ್ತು ಮಾನವತೆಯ ಅಂಬೇಡ್ಕರ್’, ‘ವಿಜಯಕ್ಕನ ವಿಚಾರಲಹರಿ’, ‘ನೆಲದ ಮಾತು’, ‘ಆಧುನಿಕ ಪುಷ್ಯಮಿತ್ರ’, ‘ಅಂದದ ಮಗುವಿಗೆ ಚಂದದ ಹೆಸರು’ ಕೃತಿಗಳಾಗಿ ಪ್ರಕಟವಾಗಿವೆ.

“ಬಹುಜನ ವಿದ್ಯಾರ್ಥಿ ಸಂಘಟನೆಗೆ ವಿಜಯ ಮಹೇಶ್‌ ಅವರ ಬರಹಗಳು ಪ್ರೋತ್ಸಾಹವನ್ನು ನೀಡುತ್ತಿದ್ದವು. ಸಮಾಜ ಪರಿವರ್ತನಾ, ಪ್ರಬುದ್ಧ ಭಾರತಕ್ಕೆ ನಿರಂತರವಾಗಿ ಬರೆಯುತ್ತಿದ್ದರು. ನಾವೆಲ್ಲ ಅವರ ಬರಹಗಳಿಂದ ಸ್ಫೂರ್ತಿ ಪಡೆದೆವು. ಎಷ್ಟೇ ಜನ ಕಾರ್ಯಕರ್ತರು ಬಂದರೂ ಸ್ವತಃ ತಾಯಿಯ ಹಾಗೆ ನೋಡಿಕೊಳ್ಳುತ್ತಿದ್ದರು. ಎನ್‌.ಮಹೇಶ್ ಅವರು ಈ ವಿಚಾರದಲ್ಲಿ ಭಾಗ್ಯವಂತರು. ಎಲ್ಲರಿಗೂ ಇಂತಹ ಪತ್ನಿ ಸಿಗುವುದಿಲ್ಲ. ಮನೆಯಲ್ಲಿ ಸಂಪೂರ್ಣ ಸಹಕಾರ ಸಿಕ್ಕಿದ್ದರಿಂದಲೇ ಚಳವಳಿಗೆ ಹೋಗಲು ಸಾಧ್ಯವಾಯಿತು. ಬಹುಜನ ಚಳವಳಿಗೆ ಎನ್.ಮಹೇಶ್ ಅರ್ಧ ಶಕ್ತಿಯಾಗಿದ್ದರೆ, ವಿಜಯ ಮಹೇಶ್ ಇನ್ನರ್ಧ ಶಕ್ತಿಯಾಗಿದ್ದರು” ಎನ್ನುತ್ತಾರೆ ಬರಹಗಾರ, ಸಂಘಟಕ ಡಾ.ಶಿವಕುಮಾರ್.

“ನಾಲ್ವಡಿ ಕೃಷ್ಣರಾಜ ಒಡೆಯರ್, ಪೆರಿಯಾರ್‌ ರಾಮಸ್ವಾಮಿ, ಜ್ಯೋತಿ ಬಾ ಫುಲೆ, ಸಾವಿತ್ರಿ ಬಾ ಫುಲೆ, ಟಿಪ್ಪು ಸುಲ್ತಾನ್, ಕಾನ್ಶಿರಾಮ್, ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಅವರು ಬರೆಯುತ್ತಿದ್ದ ಲೇಖನಗಳು ಅಥೆಂಟಿಕ್‌ ಆಗಿರುತ್ತಿದ್ದವು. ಹೊಸ ತಲೆಮಾರಿಗೆ ಸ್ಫೂರ್ತಿಯನ್ನು ತುಂಬುತ್ತಿದ್ದರು. ನಾವೆಲ್ಲ ವಿಚಾರವಂತರಾಗಿದ್ದೇವೆ ಎಂದರೆ ಅದರ ಹಿಂದಿನ ಶಕ್ತಿ ವಿಜಯ ಮಹೇಶ್” ಎಂಬುದು ಅವರ ಅಭಿಪ್ರಾಯ.

“ನಾವು ಎಷ್ಟೋ ವಿದ್ಯಾರ್ಥಿಗಳು ವಿವಿಧ ವಿ.ವಿ.ಗಳಲ್ಲಿ ಸಂಶೋಧನೆ ಮಾಡಿದ್ದೇವೆ. ವಿಜಯ ಮಹೇಶ್ ಅವರ ಬರವಣಿಗೆಗಳೇ ಈ ಸಂಶೋಧನಾ ವಿದ್ಯಾರ್ಥಿಗಳಿಗೆ ಆಧಾರವಾಗಿದ್ದವು. ಶೋಷಿತರ ಕುರಿತು ಅತ್ಯಂತ ಖಚಿತವಾಗಿ ಬರೆಯುವ ಲೇಖಕಿ ಅವರರಾಗಿದ್ದರು. ನಾವೆಲ್ಲ ವಿಶ್ವವಿದ್ಯಾನಿಲಯಗಳಲ್ಲಿ ನೋಂದಾಯಿತ ಸಂಶೋಧಕರಾಗಿದ್ದರೆ, ವಿಜಯಕ್ಕ ನೋಂದಾಯಿತರಲ್ಲದ ಸಂಶೋಧಕರಾಗಿದ್ದರು” ಎಂದು ಅಭಿಪ್ರಾಯಪಡುತ್ತಾರೆ ಶಿವಕುಮಾರ್.

ಇದನ್ನೂ ಓದಿ: ಅವಕಾಶವಾದವನ್ನು ಸಿದ್ಧಾಂತವಾಗಿಸಿಕೊಂಡಾಗ ವಿಶ್ವಾಸ ಉಳಿಯುವ ಬಗೆ ಎಂತು?

ಕೈಬರಹದಲ್ಲಿದ್ದ ವಿಜಯ ಮಹೇಶ್ ಅವರ ಬರಹಗಳನ್ನು ಕೃತಿ ರೂಪಕ್ಕೆ ತರಲು ಶ್ರಮಿಸಿದವರಲ್ಲಿ ರಘೋತ್ತಮ ಹೊ.ಬ. ಅವರೂ ಒಬ್ಬರು. “ಸಮಾಜ ಪರಿವರ್ತನಾ ಪತ್ರಿಕೆಯ ಸಂಪಾದನೆಯನ್ನು ನೋಡಿಕೊಳ್ಳುತ್ತಿದ್ದ ಕೃಷ್ಣಮೂರ್ತಿ ಚಮರಂ ಒಂದಿಷ್ಟು ಲೇಖನಗಳನ್ನು ಸಂಗ್ರಹಿಸಿಕೊಟ್ಟಿದ್ದರು. ಮುಂದೆ ಪ್ರಬುದ್ಧ ಭಾರತ ಆರಂಭವಾದಾಗ ಅದರ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದೆ. ಹೀಗಾಗಿ ಅವರ ಹಲವು ಬರಹಗಳನ್ನು ನನ್ನ ಬಳಿ ಇದ್ದವು. ಅವುಗಳನ್ನು ಸಂಗ್ರಹಿಸಿ ಪುಸ್ತಕ ಪ್ರಕಟಿಸಿದ ಖುಷಿ ಇದೆ” ಎನ್ನುತ್ತಾರೆ ಹೊ.ಬ.

ಕಾನ್ಶಿ ಫೌಂಡೇಷನ್

“ಎನ್.ಮಹೇಶ್ ಮತ್ತು ವಿಜಯ ಅವರು ಕಾನ್ಶಿರಾಮ್ ಅವರ ಚಿಂತನೆಗಳಿಂದ ಪ್ರಭಾವಿತರಾದವರು. ಉತ್ತರ ಪ್ರದೇಶದಲ್ಲಿ ಬಿಎಸ್ಪಿ ಅಧಿಕಾರ ಹಿಡಿದಿತ್ತು. ಹೋರಾಟಗಾರರಾದ ಗೋಪಿನಾಥ್, ಮೋಹನ್ ಕುಮಾರ್‌ ಅವರು 1992ರಲ್ಲಿ ಸಣ್ಣಮಟ್ಟದಲ್ಲಿ ಬಹುಜನ ಚಳವಳಿಯನ್ನು ಕಟ್ಟುತ್ತಿದ್ದರು. 1993ರಲ್ಲೇ ಭೀಮ್ ಮಾರ್ಚ್ ಹಮ್ಮಿಕೊಂಡಿದ್ದರು. ಮಹೇಶ್ ಅವರು ಚಳವಳಿಯಲ್ಲಿ ಪಾಲ್ಗೊಳ್ಳುತ್ತಿದ್ದರೂ ಸರ್ಕಾರಿ ಉದ್ಯೋಗದಲ್ಲಿದ್ದರು. ಪತ್ನಿಯ ಪ್ರೋತ್ಸಾಹದಿಂದ ಕೆಲಸ ಬಿಟ್ಟರು. ಚಳವಳಿಯಲ್ಲಿ ಪೂರ್ಣ ತೊಡಗಿಸಿಕೊಂಡರು. 1998ರಲ್ಲಿ ಚುನಾವಣೆಯಲ್ಲಿ ನಿಂತರು. ಬಹುಜನ ಚಳವಳಿ ದೊಡ್ಡ ಮಟ್ಟದಲ್ಲಿ ಬೆಳೆಯಲು ವಿಜಯಾ ಅವರು ಕಾರಣ. ಅದ್ಭುತ ಓದುಗರಾಗಿದ್ದ ಅವರು, ಅಂಬೇಡ್ಕರ್ ಅವರ ಮೂಲ ಬರಹಗಳನ್ನೇ ಅಧ್ಯಯನ ಮಾಡಿ, ನಮಗೆಲ್ಲ ವಿಚಾರಗಳನ್ನು ತಿಳಿಸಿಕೊಟ್ಟರು” ಎಂದು ಸ್ಮರಿಸುತ್ತಾರೆ ರಘೋತ್ತಮ ಹೊ.ಬ.

ಕಾನ್ಶಿ ಫೌಂಡೇಷನ್‌ನಲ್ಲಿ ಅಂತ್ಯ ಸಂಸ್ಕಾರ

ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯ ಮಹೇಶ್‌ ಅವರು ಭಾನುವಾರ ನಿಧನರಾದರು. ಅವರು ಬೆಂಗಳೂರಿನ ಬಳಿ ಕನಕಪುರದಲ್ಲಿ ಸ್ಥಾಪಿಸಿದ್ದ ಕಾನ್ಶಿ ಫೌಂಡೇಷನ್‌ನಲ್ಲಿ ಸೋಮವಾರ ಅವರ ಅಂತ್ಯ ಸಂಸ್ಕಾರ ನೆರವೇರಿತು.


ಇದನ್ನೂ ಓದಿ: ಭಾರತದ ಆರ್ಥಿಕತೆ – ಸುಧಾರಣಾಪೂರ್ವ ಮತ್ತು ಸುಧಾರಣೋತ್ತರ ಕಾಲಘಟ್ಟ; ಒಂದು ಮೌಲ್ಯಮಾಪನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...