Homeಚಳವಳಿಬಹುಜನ ಚಳವಳಿಗೆ ಬರಹಗಳ ಮಾರ್ಗ ತೋರಿದ ವಿಜಯ ಮಹೇಶ್‌: ಒಡನಾಡಿಗಳ ನುಡಿನಮನ

ಬಹುಜನ ಚಳವಳಿಗೆ ಬರಹಗಳ ಮಾರ್ಗ ತೋರಿದ ವಿಜಯ ಮಹೇಶ್‌: ಒಡನಾಡಿಗಳ ನುಡಿನಮನ

- Advertisement -
- Advertisement -

ಕರ್ನಾಟಕದಲ್ಲಿ ಬಹುಜನ ಚಳವಳಿಯ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ್ದ ಚಿಂತಕಿ, ಸಂಶೋಧಕಿ ಎಚ್.ಕೆ.ವಿಜಯರವರು ಅನಾರೋಗ್ಯದ ಕಾರಣದಿಂದ ಸೆಪ್ಟಂಬರ್ 05ರ ಭಾನುವಾರ ರಾತ್ರಿ ಕೊನೆಯುಸಿರೆಳಿದಿದ್ದಾರೆ.

ಅವರು ಸೇರಿದಂತೆ ಹಲವು ಜನರ ಶ್ರಮದಿಂದ ರೂಪಿತವಾಗಿದ್ದ ಬಹುಜನ ವಿದ್ಯಾರ್ಥಿ ಚಳವಳಿಯಿಂದಾಗಿ ಹೊಸ ತಲೆಮಾರಿನ ಬರಹಗಾರರು ಹುಟ್ಟಿಕೊಂಡರು. ಹೊಸ ರೀತಿಯ ಚಳವಳಿಯ ಹಾಡುಗಳು ಚಾಲ್ತಿಗೆ ಬಂದವು. ಅಂಬೇಡ್ಕರ್- ಗಾಂಧಿ ನಡುವಿನ ಭಿನ್ನಾಭಿಪ್ರಾಯಗಳ ಕುರಿತು ಹೊಸ ಚರ್ಚೆಗಳು ಮುನ್ನಲೆಗೆ ಬಂದವು.

ಸರ್ಕಾರಿ ಉದ್ಯೋಗವನ್ನು ಬಿಟ್ಟು, ಚಳವಳಿಗೆ ಕಾಲಿಟ್ಟಿದ್ದ ಎನ್.ಮಹೇಶ್ ಹೊಸ ಭರವಸೆಯಾಗಿ ಹೊಮ್ಮಿದ್ದರು. ಎನ್.ಮಹೇಶ್‌ ಅವರಿಗೆ ಸದಾ ಬೆನ್ನೆಲುಬಾಗಿ ನಿಂತು, ಬಹುಜನ ಚಳವಳಿ ಬಲವಾಗಲು ಕಾರಣರಾಗಿ, ದಲಿತ ವಿದ್ಯಾರ್ಥಿ ಸಮೂಹವನ್ನು ತನ್ನ ಮಕ್ಕಳಂತೆ ಪೊರೆದವರು ವಿಜಯ ಮಹೇಶ್ ಎಂದು ನೆನೆಯುತ್ತಾರೆ ಅವರ ಒಡನಾಡಿಗಳು.

ಎಚ್.ಕೆ.ವಿಜಯ ಹಾಗೂ ಎನ್.ಮಹೇಶ್‌ ಪ್ರೀತಿಸಿ ಮದುವೆಯಾದವರು. ಬೆಂಗಳೂರು ವಿವಿಯ ವಿದ್ಯಾರ್ಥಿಗಳಾಗಿದ್ದ ಈ ಇಬ್ಬರು, ಕಾಲೇಜು ದಿನಗಳಿಂದಲೂ ಪ್ರೀತಿಸುತ್ತಿದ್ದರು. ಮುಂದೆ ಎನ್.ಮಹೇಶ್‌ ಅವರು ಕೆಎಎಸ್‌ ಅಧಿಕಾರಿಯಾದರು. ವಿಜಯ ಅವರು ಅಪೆಕ್ಸ್ ಬ್ಯಾಂಕ್ ನಲ್ಲಿ ಕೆಲಸದಲ್ಲಿದ್ದರು. ಕೆಲಸವನ್ನು ಬಿಟ್ಟು ಎನ್.ಮಹೇಶ್, ಚಳವಳಿಗೆ ಕಾಲಿಡಲು ಪ್ರೋತ್ಸಾಹಿಸಿದ ವಿಜಯ ಮಹೇಶ್, ಬಹುಜನ ಚಳವಳಿಯ ಹುಡುಗರಿಗೆ “ವಿಜಯಕ್ಕ” ಎಂದೇ ಚಿರಪರಿಚಿತರಾದರು.

ಚಳವಳಿಯ ಭಾಗವಾಗಿದ್ದ “ಸಮಾಜ ಪರಿವರ್ತನಾ” ಹಾಗೂ “ಪ್ರಬುದ್ಧ ಭಾರತ” ಪತ್ರಿಕೆಗಳಲ್ಲಿ ವಿಜಯ ಅವರ ಲೇಖನಗಳು ಪ್ರಕಟವಾಗಿದ್ದವು. ಇವರು ಬರೆದ ವಿಚಾರಗಳು ‘ಮೂಲನಿವಾಸಿ ಬಹುಜನರ ಇತಿಹಾಸ’, ‘ಅಂಬೇಡ್ಕರ್ ಮತ್ತು ಚರಿತ್ರೆಯ ಮರುಶೋಧ’, ‘ಹಿಂದುತ್ವದ ಗಾಂಧಿ ಮತ್ತು ಮಾನವತೆಯ ಅಂಬೇಡ್ಕರ್’, ‘ವಿಜಯಕ್ಕನ ವಿಚಾರಲಹರಿ’, ‘ನೆಲದ ಮಾತು’, ‘ಆಧುನಿಕ ಪುಷ್ಯಮಿತ್ರ’, ‘ಅಂದದ ಮಗುವಿಗೆ ಚಂದದ ಹೆಸರು’ ಕೃತಿಗಳಾಗಿ ಪ್ರಕಟವಾಗಿವೆ.

“ಬಹುಜನ ವಿದ್ಯಾರ್ಥಿ ಸಂಘಟನೆಗೆ ವಿಜಯ ಮಹೇಶ್‌ ಅವರ ಬರಹಗಳು ಪ್ರೋತ್ಸಾಹವನ್ನು ನೀಡುತ್ತಿದ್ದವು. ಸಮಾಜ ಪರಿವರ್ತನಾ, ಪ್ರಬುದ್ಧ ಭಾರತಕ್ಕೆ ನಿರಂತರವಾಗಿ ಬರೆಯುತ್ತಿದ್ದರು. ನಾವೆಲ್ಲ ಅವರ ಬರಹಗಳಿಂದ ಸ್ಫೂರ್ತಿ ಪಡೆದೆವು. ಎಷ್ಟೇ ಜನ ಕಾರ್ಯಕರ್ತರು ಬಂದರೂ ಸ್ವತಃ ತಾಯಿಯ ಹಾಗೆ ನೋಡಿಕೊಳ್ಳುತ್ತಿದ್ದರು. ಎನ್‌.ಮಹೇಶ್ ಅವರು ಈ ವಿಚಾರದಲ್ಲಿ ಭಾಗ್ಯವಂತರು. ಎಲ್ಲರಿಗೂ ಇಂತಹ ಪತ್ನಿ ಸಿಗುವುದಿಲ್ಲ. ಮನೆಯಲ್ಲಿ ಸಂಪೂರ್ಣ ಸಹಕಾರ ಸಿಕ್ಕಿದ್ದರಿಂದಲೇ ಚಳವಳಿಗೆ ಹೋಗಲು ಸಾಧ್ಯವಾಯಿತು. ಬಹುಜನ ಚಳವಳಿಗೆ ಎನ್.ಮಹೇಶ್ ಅರ್ಧ ಶಕ್ತಿಯಾಗಿದ್ದರೆ, ವಿಜಯ ಮಹೇಶ್ ಇನ್ನರ್ಧ ಶಕ್ತಿಯಾಗಿದ್ದರು” ಎನ್ನುತ್ತಾರೆ ಬರಹಗಾರ, ಸಂಘಟಕ ಡಾ.ಶಿವಕುಮಾರ್.

“ನಾಲ್ವಡಿ ಕೃಷ್ಣರಾಜ ಒಡೆಯರ್, ಪೆರಿಯಾರ್‌ ರಾಮಸ್ವಾಮಿ, ಜ್ಯೋತಿ ಬಾ ಫುಲೆ, ಸಾವಿತ್ರಿ ಬಾ ಫುಲೆ, ಟಿಪ್ಪು ಸುಲ್ತಾನ್, ಕಾನ್ಶಿರಾಮ್, ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಅವರು ಬರೆಯುತ್ತಿದ್ದ ಲೇಖನಗಳು ಅಥೆಂಟಿಕ್‌ ಆಗಿರುತ್ತಿದ್ದವು. ಹೊಸ ತಲೆಮಾರಿಗೆ ಸ್ಫೂರ್ತಿಯನ್ನು ತುಂಬುತ್ತಿದ್ದರು. ನಾವೆಲ್ಲ ವಿಚಾರವಂತರಾಗಿದ್ದೇವೆ ಎಂದರೆ ಅದರ ಹಿಂದಿನ ಶಕ್ತಿ ವಿಜಯ ಮಹೇಶ್” ಎಂಬುದು ಅವರ ಅಭಿಪ್ರಾಯ.

“ನಾವು ಎಷ್ಟೋ ವಿದ್ಯಾರ್ಥಿಗಳು ವಿವಿಧ ವಿ.ವಿ.ಗಳಲ್ಲಿ ಸಂಶೋಧನೆ ಮಾಡಿದ್ದೇವೆ. ವಿಜಯ ಮಹೇಶ್ ಅವರ ಬರವಣಿಗೆಗಳೇ ಈ ಸಂಶೋಧನಾ ವಿದ್ಯಾರ್ಥಿಗಳಿಗೆ ಆಧಾರವಾಗಿದ್ದವು. ಶೋಷಿತರ ಕುರಿತು ಅತ್ಯಂತ ಖಚಿತವಾಗಿ ಬರೆಯುವ ಲೇಖಕಿ ಅವರರಾಗಿದ್ದರು. ನಾವೆಲ್ಲ ವಿಶ್ವವಿದ್ಯಾನಿಲಯಗಳಲ್ಲಿ ನೋಂದಾಯಿತ ಸಂಶೋಧಕರಾಗಿದ್ದರೆ, ವಿಜಯಕ್ಕ ನೋಂದಾಯಿತರಲ್ಲದ ಸಂಶೋಧಕರಾಗಿದ್ದರು” ಎಂದು ಅಭಿಪ್ರಾಯಪಡುತ್ತಾರೆ ಶಿವಕುಮಾರ್.

ಇದನ್ನೂ ಓದಿ: ಅವಕಾಶವಾದವನ್ನು ಸಿದ್ಧಾಂತವಾಗಿಸಿಕೊಂಡಾಗ ವಿಶ್ವಾಸ ಉಳಿಯುವ ಬಗೆ ಎಂತು?

ಕೈಬರಹದಲ್ಲಿದ್ದ ವಿಜಯ ಮಹೇಶ್ ಅವರ ಬರಹಗಳನ್ನು ಕೃತಿ ರೂಪಕ್ಕೆ ತರಲು ಶ್ರಮಿಸಿದವರಲ್ಲಿ ರಘೋತ್ತಮ ಹೊ.ಬ. ಅವರೂ ಒಬ್ಬರು. “ಸಮಾಜ ಪರಿವರ್ತನಾ ಪತ್ರಿಕೆಯ ಸಂಪಾದನೆಯನ್ನು ನೋಡಿಕೊಳ್ಳುತ್ತಿದ್ದ ಕೃಷ್ಣಮೂರ್ತಿ ಚಮರಂ ಒಂದಿಷ್ಟು ಲೇಖನಗಳನ್ನು ಸಂಗ್ರಹಿಸಿಕೊಟ್ಟಿದ್ದರು. ಮುಂದೆ ಪ್ರಬುದ್ಧ ಭಾರತ ಆರಂಭವಾದಾಗ ಅದರ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದೆ. ಹೀಗಾಗಿ ಅವರ ಹಲವು ಬರಹಗಳನ್ನು ನನ್ನ ಬಳಿ ಇದ್ದವು. ಅವುಗಳನ್ನು ಸಂಗ್ರಹಿಸಿ ಪುಸ್ತಕ ಪ್ರಕಟಿಸಿದ ಖುಷಿ ಇದೆ” ಎನ್ನುತ್ತಾರೆ ಹೊ.ಬ.

ಕಾನ್ಶಿ ಫೌಂಡೇಷನ್

“ಎನ್.ಮಹೇಶ್ ಮತ್ತು ವಿಜಯ ಅವರು ಕಾನ್ಶಿರಾಮ್ ಅವರ ಚಿಂತನೆಗಳಿಂದ ಪ್ರಭಾವಿತರಾದವರು. ಉತ್ತರ ಪ್ರದೇಶದಲ್ಲಿ ಬಿಎಸ್ಪಿ ಅಧಿಕಾರ ಹಿಡಿದಿತ್ತು. ಹೋರಾಟಗಾರರಾದ ಗೋಪಿನಾಥ್, ಮೋಹನ್ ಕುಮಾರ್‌ ಅವರು 1992ರಲ್ಲಿ ಸಣ್ಣಮಟ್ಟದಲ್ಲಿ ಬಹುಜನ ಚಳವಳಿಯನ್ನು ಕಟ್ಟುತ್ತಿದ್ದರು. 1993ರಲ್ಲೇ ಭೀಮ್ ಮಾರ್ಚ್ ಹಮ್ಮಿಕೊಂಡಿದ್ದರು. ಮಹೇಶ್ ಅವರು ಚಳವಳಿಯಲ್ಲಿ ಪಾಲ್ಗೊಳ್ಳುತ್ತಿದ್ದರೂ ಸರ್ಕಾರಿ ಉದ್ಯೋಗದಲ್ಲಿದ್ದರು. ಪತ್ನಿಯ ಪ್ರೋತ್ಸಾಹದಿಂದ ಕೆಲಸ ಬಿಟ್ಟರು. ಚಳವಳಿಯಲ್ಲಿ ಪೂರ್ಣ ತೊಡಗಿಸಿಕೊಂಡರು. 1998ರಲ್ಲಿ ಚುನಾವಣೆಯಲ್ಲಿ ನಿಂತರು. ಬಹುಜನ ಚಳವಳಿ ದೊಡ್ಡ ಮಟ್ಟದಲ್ಲಿ ಬೆಳೆಯಲು ವಿಜಯಾ ಅವರು ಕಾರಣ. ಅದ್ಭುತ ಓದುಗರಾಗಿದ್ದ ಅವರು, ಅಂಬೇಡ್ಕರ್ ಅವರ ಮೂಲ ಬರಹಗಳನ್ನೇ ಅಧ್ಯಯನ ಮಾಡಿ, ನಮಗೆಲ್ಲ ವಿಚಾರಗಳನ್ನು ತಿಳಿಸಿಕೊಟ್ಟರು” ಎಂದು ಸ್ಮರಿಸುತ್ತಾರೆ ರಘೋತ್ತಮ ಹೊ.ಬ.

ಕಾನ್ಶಿ ಫೌಂಡೇಷನ್‌ನಲ್ಲಿ ಅಂತ್ಯ ಸಂಸ್ಕಾರ

ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯ ಮಹೇಶ್‌ ಅವರು ಭಾನುವಾರ ನಿಧನರಾದರು. ಅವರು ಬೆಂಗಳೂರಿನ ಬಳಿ ಕನಕಪುರದಲ್ಲಿ ಸ್ಥಾಪಿಸಿದ್ದ ಕಾನ್ಶಿ ಫೌಂಡೇಷನ್‌ನಲ್ಲಿ ಸೋಮವಾರ ಅವರ ಅಂತ್ಯ ಸಂಸ್ಕಾರ ನೆರವೇರಿತು.


ಇದನ್ನೂ ಓದಿ: ಭಾರತದ ಆರ್ಥಿಕತೆ – ಸುಧಾರಣಾಪೂರ್ವ ಮತ್ತು ಸುಧಾರಣೋತ್ತರ ಕಾಲಘಟ್ಟ; ಒಂದು ಮೌಲ್ಯಮಾಪನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....