Homeಅಂಕಣಗಳುಹನಿಮೂನ್ ಸಾಕು ತಗೋ ತಲಾಕು

ಹನಿಮೂನ್ ಸಾಕು ತಗೋ ತಲಾಕು

- Advertisement -
- Advertisement -

ಆಘಾತವಾಣಿ ವಾರ್ತೆಗಳು, ಕೇಳುಗರಿಗೆಲ್ಲ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ.

ಆಗಿದ್ದಾಗ್ಲಿ ಹೋಗಿದ್ದೋಗ್ಲಿ, ಆರು ಮೂರಾಗ್ಲಿ, ಮೂರು ಮುವ್ವತ್ತಾಗ್ಲಿ, ನಾನೂ ಕೆಲ್ಸ ಮಾಡಲ್ಲ, ಬೇರೇಯವ್ರಿಗೂ ಕೆಲ್ಸ ಮಾಡೋಕೆ ಬಿಡಲ್ಲ ಅಂತ ವೀರಪ್ರತಿಜ್ಞೆ ಮಾಡಿರೋ ಪಕೋಡೇಂದ್ರ ಕುಂಡಾಲಯ್ಯನ ಕಡೆಯಿಂದ ಹೊಸ ಸುದ್ದಿಯೊಂದು ಬಂದಿದೆ. ವರ್ಷಗಳ ಹಿಂದೆ ದೆಹಲಿ ಚುನಾವಣೆಯಲ್ಲಿ ಕೇಜ್ರಿವಾಲ್ ಪಕ್ಷದಿಂದ ಮಕಮೂತಿಗೆ ಇಕ್ಕಿಸಿಕೊಂಡು ಮಣ್ಣುಮುಕ್ಕಿದ್ದ ಪಕೋಡೇಂದ್ರರವರು ಕೇಜ್ರಿವಾಲ್ ತಲೆ ಮೇಲೆ ಲೆಫ್ಟಿನೆಂಟ್ ಗೌರ್ನರ್ ಎಂಬ ಶೋಕೇಸ್ ಪೀಸೊಂದನ್ನು ಕುಕ್ಕಿದ್ದನು. ಈ ಲಡಾಸಿ ಗೌರ್ನರ್ ದೆಹಲಿಯ ಐಎಎಸ್ ಅಧಿಕಾರಿಗಳ ತಲೆಸವರಿ ಒಳಕ್ಕೆಳೆದುಕೊಂಡು ತಾನಿರುವ ಸರ್ಕಾರದ ವಿರುದ್ಧವೇ ಸ್ಟ್ರೈಕು ಮಾಡಿಸಲು ಹಚ್ಚಿದ್ದಾರೆಂದು ಸುಪ್ತಚರ ಮೂಲಗಳಿಂದ ತಿಳಿದುಬಂದಿದೆ. ಇದಕ್ಕೆ ಪ್ರತಿಯಾಗಿ ಕೇಜ್ರಿವಾಲ್ ತಮ್ಮ ತಂಡದೊಂದಿಗೆ ಲೆಫ್ಟಿನೆಂಟ್ ಗೌರ್ನರ್ ಕಚೇರಿಯೊಳಗೇ ಮೊಕ್ಕಾಂ ಹೂಡಿ ಧರಣಿ ಕೂತು ವಾರ ಕಳೆದರೂ ಚೇಂಬರಿನಿಂದ ಹೊರಬರದೆ ಟೇಬಲ್ ಕೆಳಗೆ ಅವಿತು ಕುಳಿತಿದ್ದ ಆತನು ದೆಹಲಿಯ ಜನರು ಕೈಗೆ ಪ್ಯಾರಗಾನ್ ಚಡಾವು ಕಳಚಿಕೊಳ್ಳುತ್ತಿದ್ದಂತೆ ಆಫೀಸಿಂದ ಈಚೆ ಬಂದು ಕೇಜ್ರಿವಾಲ್ ಬೇಡಿಕೆಗಳಿಗೆ ಸೈನ್ ಹಾಕಿ ಮತ್ತೆ ಹೋಗಿ ಟೇಬಲ್ ಕೆಳಗೆ ಅವಿತುಕೊಂಡಿದ್ದಾನೆಂದು ವರದಿಯಾಗಿದೆ.
****
ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಶ್ಮೀರದಲ್ಲಿ ಮೂರು ಮುಕ್ಕಾಲು ಸೀಟು ಪಡೆದು ಕಾಶ್ಮೀರ ಪ್ರತ್ಯೇಕತಾವಾದಿ ಪಿಡಿಪಿ ಪಕ್ಷದ ಜೊತೆ ಸೇರಿ ಸರ್ಕಾರ ರಚಿಸಿದ್ದ ಬ್ಲೂಜೆಪಿ ಪಕ್ಷದ ವತಿಯಿಂದ ಹೊಸ ನ್ಯೂಸೊಂದು ಎಗರಿ ಬಂದಿದೆ. ಪುಡಿಪುಕ್ಕ ಸೀಟುಗಳನ್ನು ಕಂಕುಳಿಗಿಟ್ಟುಕೊಂಡು “ ಪ್ರೀತ್ಸೇ ಪ್ರೀತ್ಸೇ, ಮೂರೂ ಬಿಟ್ಟು ನನ್ನೇ ಪ್ರೀತ್ಸೇ” ಅಂತ ಈ ಕಡೆಯಿಂದ ಪಿಡಿಪಿ ಪಕ್ಷದ ಸೊಂಟ ಗಿಲ್ಲಿದಾಗ, ಆ ಕಡೆಯಿಂದ “ ಆಜಾ ಮೆರಿ ಗಾಡಿ ಮೇ ಬೈಟ್ ಜಾ, ಆಜಾ ಮೆರಿ ಗಾಡಿ ಮೇ ಬೈಟ್ ಜಾ” ಅನ್ನೋ ರೆಸ್ಪಾನ್ಸ್ ಬಂದಿತ್ತು. ನಂತ್ರ ಇಬ್ಬರೂ ಸೇರಿ ಕಾಶ್ಮೀರದಲ್ಲಿ ಕಲಬೆರಕೆ ಸರ್ಕಾರ ರಚಿಸಿ ಒಬ್ಬರ ಸೊಂಟ ಒಬ್ಬರು ಹಿಡಿದು “ ಬೆರಕೆ ಪ್ರೀತಿಯಲ್ಲಿ ಇರೋ ಸುಖ ಗೊತ್ತೇ ಇರಲಿಲ್ಲ, ಹೂ ಅಂತೀಯ, ಉಹೂ ಅಂತೀಯ” ಅಂತ ಡ್ಯಾನ್ಸ್ ಮಾಡ್ತಿದ್ದ ಎರಡೂ ಪಕ್ಷಗಳು ಈಗ ಮಕಮಕ ಪರಚಾಡಿಕೊಂಡು ದಿಢೀರ್ ಡೈವೋರ್ಸ್ ತಗೊಂಡಿವೆ.
****
ಈ ಢಮಾರ್ ಡೈವೋರ್ಸಿಗೆ ಕಾರಣಗಳೇನೆಂದು ಕೆದಕಿದಾಗ ಕುತೂಹಲಕಾರಿ ಕಿತಾಪತಿ ಮಾಹಿತಿಗಳು ನಮಗೆ ಲಭ್ಯವಾಗಿವೆ. ದೇಶದ ತುಂಬ ಕಾಶ್ಮೀರಿ ಟೆರರಿಸ್ಟ್‍ಗಳ ಬಗ್ಗೆ ಪುಯ್ಯೋ ಪುಯ್ಯೋ ಎಂದು ಪುಂಗಿ ಊದುವ ಬ್ಲೂಜೆಪಿ ಪಕ್ಷವು, ಈ ಪ್ರತ್ಯೇಕತಾವಾದಿಗಳ ಜೊತೆಗೆ ಕಾಶ್ಮೀರದಲ್ಲಿ ತಮ್ಮದೇ ಸರ್ಕಾರದಲ್ಲಿ ಕುಸುಕು ಮುಸುಕು ನಡೆಸುತ್ತಿದ್ದುದು ಎಲ್ಲರಿಗು ತಿಳಿದ ಸತ್ಯ. ಪೊಲೀಸರು-ಮಿಲಿಟರಿಯವರು ಅರೆಸ್ಟ್ ಮಾಡಿದ ಟೆರರಿಸ್ಟುಗಳ ಕೈಗೆ ಹೂಗುಚ್ಛ ಕೊಟ್ಟು ಜೈಲಿಂದ ಬಿಡಿಸಿ ಕಳಿಸುತ್ತಿದ್ದ ಇದೇ ಬೆರಕೆ ಪಕ್ಷದವರು ಬೇರೆ ರಾಜ್ಯಗಳಲ್ಲಿ ಇದಕ್ಕೆ ಉಲ್ಟಾ ಭಾಷಣಗಳನ್ನು ಬೊಗಳುತ್ತ ಚಿಲ್ರೆಕಾಸು ದುಡಿದು ಹೊಟ್ಟೆ ಹೊರೆಯುತ್ತಿದ್ದರು. ಅದೇನಾಯ್ತೋ ಏನೋ ಪಿಡಿಪಿ ಪಕ್ಷಕ್ಕೆ ಬ್ಲೂಜೆಪಿ ಜೊತೆಗಿನ ಕುಸುಕು ಮುಸುಕು ಪ್ರಣಯ ಸಾಕಾಗಿ ಬ್ಲೂಜೆಪಿಯನ್ನು ಸರ್ಕಾರದಿಂದ ಒದ್ದೋಡಿಸುವ ಪ್ರಯತ್ನದಲ್ಲಿತ್ತು. ಅಷ್ಟರಲ್ಲಿ ತನ್ನ ಲಂಗೋಟಿ-ಪುಟಗೋಸಿಯನ್ನು ಗಂಟು ಕಟ್ಟಿಕೊಂಡು ತಲೆ ಮೇಲೆ ಟವೆಲ್ಲು ಹಾಕಿಕೊಂಡ ಬ್ಲೂಜೆಪಿಯು ತಾನೇ ಸರ್ಕಾರದಿಂದ ಈಚೆಗೆ ಬರುತ್ತಿದ್ದೇನೆಂಬ ಡ್ರಾಮಾ ಆಡಿ ಮುಖ ಉಳಿಸಿಕೊಳ್ಳಲು ಪ್ರಯತ್ನಿಸಿದೆಯೆಂದು ಬಲ್ಲ ಮೂಲಗಳು ಬೊಂಬಡ ಹೊಡೆಯುತ್ತ ತಿಳಿಸಿವೆ.
****
ಪ್ರಸ್ತುತ ಮಾಟ-ಮಂತ್ರ ಕವಡೆಶಾಸ್ತ್ರ ತಜ್ಞರ ರಾಜ್ಯಮಟ್ಟದ ಸಮ್ಮೇಳನದಂತೆ ಕಾಣುತ್ತಿರುವ ಕರ್ನಾಟಕದ ‘ಮಿಕ್ಸ್ ಮಸಾಲ ಸರ್ಕಾರ’ದ ಕಡೆಯಿಂದ ಹೊಸ “ಮಮ್ಮಿ ಮೆಟ್ಟು” ವರದಿಯೊಂದು ಕುಪ್ಪಳಿಸುತ್ತ ಬಂದಿದೆ. ಪ್ರೈಮರಿಶಾಲೆಯ ಮಂತ್ರಿಯೊಬ್ಬರು ಮದನಪಲ್ಲಿ ಮೂಲದ ರೇಪಿಸ್ಟನೊಬ್ಬನ ಪತ್ನಿ ಹಾಗೂ ಮಾಜಿಸುಂದರಿ ಮತ್ತು ಹಾಲಿ “ಮಮ್ಮಿ ಭಗವಾನ್” ದೇವಿಯ ಮರದ ಎಕ್ಕಡಗಳನ್ನು ಸ್ಲೋಮೋಷನ್ನಿನಲ್ಲಿ ಮೈಗೆಲ್ಲ ಚರಚರನೆ ಸವರಿಕೊಂಡು ಪಠಾಪಠಾ ಹೊಡೆದುಕೊಂಡು ಆಶೀರ್ವಾದ ತೆಗೆದುಕೊಂಡ ಹಾಸ್ಯಾಸ್ಪದ ಸುದ್ದಿಯೊಂದು ಲಭ್ಯವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ಮಮ್ಮಿ ಭಗವಾನ್ ಭಕ್ತಮಂತ್ರಿಯ ಎಕ್ಕಡಸೇವೆಯ ವಿಡಿಯೋ ಕಡ್ಲೆಪುರಿಯಂತೆ ಖರ್ಚಾಗುತ್ತಿರುವುದು ರಾಜ್ಯದ ಪ್ರಾಥಮಿಕ ಶಾಲೆಯ ಪುಟ್ಟಮಕ್ಕಳಲ್ಲಿ ಗಾಬರಿ ಹುಟ್ಟಿಸಿದೆ. ಈ ಬಗ್ಗೆ ನಿಮ್ಮ ಒಪಿನಿಯನ್ ಏನೆಂದು ಕೇಳಿದಾಗ “ಓಟಿಗೋಸ್ಕರ ಹಿಂಗೆಲ್ಲ ಕಂಡೋರ ಎಕ್ಕಡವನ್ನು ಮತದಾರರ ಇಚ್ಛೆಯಂತೆ ಮೈಗೆಲ್ಲ ಸವರಿಕೊಳ್ಳಬೇಕಾಗ್ತದೆ” ಎಂದು ಸದರೀ ಮಮ್ಮಿ ಭಗವಾನ್ ಭಕ್ತಮಂತ್ರಿಯು ಆಲಾಪಿಸಿದೆ. ಓಟು ಕೊಡೋರು “ನಮ್ಮನೆ ಎಮ್ಮೆಸೆಗಣಿ ತಿನ್ನಿ, ಮೇಲ್ಜಾತಿ ಜನರ ಬೀದಿಯ ಚರಂಡಿನೀರು ತಗೊಂಡು ತಲೆಗೆ ಚಿಮುಕಿಸ್ಕೊಳಿ” ಅಂದ್ರೆ ಅದನ್ನೂ ಮಾಡ್ತೀರ ಸ್ವಾಮಿ? ಎಂದು ಕೇಳಿದಾಗ.. ಕಂಗಾಲಾದ ಭಕ್ತಮಂತ್ರಿಯು ಮುಳುಮುಳನೆ ಗೋಳಾಡುತ್ತ ತನ್ನ ಭಜನೆಭಕ್ತರೊಡನೆ ಇನ್ನೊಂದು “ಡ್ಯಾಡಿ ಭಗವಾನ್” ಮಠದತ್ತ ಬರಿಗಾಲಲ್ಲಿ ಓಡಿಹೋದ ಘಟನೆ ತಡವಾಗಿ ವರದಿಯಾಗಿದೆ.
****
ಹೊಟ್ಟೆಪಾಡಿಗೊಂದು ಕೆಲಸವೂ ಇಲ್ಲದೆ ತೆಂಗಿನಚಿಪ್ಪೊಂದನ್ನು ತಲೇ ಮೇಲಿಟ್ಟುಕೊಂಡು ಊರೂರಲ್ಲಿ ತಿರುಪೆಯೆತ್ತಿಕೊಂಡು ಅಂಡಲೆಯುತ್ತಿರುವ ‘ಪ್ರಬೋದ್ ಮೂತ್ರಲೀಕ್’ ಎಂಬ ವಯೋವೃದ್ಧ ಗುಳ್ಳೆನರಿಯು ಈ ಜನ್ಮದಲ್ಲಿ ಉದ್ದಾರವಾಗುವ ಲಕ್ಷಣಗಳು ಕಂಡು ಬರುತ್ತಿಲ್ಲವೆಂಬುದಕ್ಕೆ ಇತ್ತೀಚೆಗೆ ಮತ್ತೊಂದು ಸಾಕ್ಷಿ ದೊರಕಿದೆ. ಕರ್ನಾಟಕದಲ್ಲಿ ನಾಯಿ ಸತ್ತರೂ ಅದಕ್ಕೆ ಡ್ರಾಮಾಮಾಸ್ಟರ್ ಕುಂಡಾಲೇಂದ್ರ ರೆಸ್ಪಾಂಡ್ ಮಾಡಬೇಕೆ? ಎಂದು ಈ ಕೆಟ್ಟಮುಸುಡಿ ಗುಳ್ಳೆನರಿಯು ಊಳಿಟ್ಟಿದೆ. ಈ ಸುದ್ದಿ ಕೇಳಿದ ಹುಬ್ಬಳ್ಳಿಯ ಪಾನ್ ಬೀಡಾ ಅಂಗಡಿ ಓನರ್ ಸಿದ್ದಪ್ಪಶೆಟ್ಟಿಯವರು, “ಇವನ ಮನೆ ಹಾಳಾಗ, ಇದೆಲ್ಲಾ ಕಿಸಲಗೇಡಿ ಮಾತಾಡೋ ಈ ಮೂತ್ರಲೀಕ್, ಕಟಿಂಗ್ ಶೇವಿಂಗ್ ಮಾಡಿಸಿಕೊಳ್ಳಲು ನನ್ನ ಬಳಿ 300 ರುಪಾಯಿ ತೆಗೆದುಕೊಂಡು ತಲೆಮರೆಸಿಕೊಂಡು ತಿರುಗುತ್ತಿದ್ದಾನೆ, ಇವನನ್ನು ಕಂಡವರು ಇವನ ಕೈಕಾಲು ಕಟ್ಟಿ ಹತ್ತಿರದ ಪಾಳುಬಾವಿಯೊಂದರೊಳಗೆ ಎತ್ತಿಹಾಕಿ, ನನಗೊಂದು ಮಿಸ್ ಕಾಲ್ ಕೊಟ್ರೆ ಓಡಿ ಬಂದು ಮೂತ್ರಲೀಕ್ ಬಿದ್ದಿರುವ ಪಾಳುಬಾವಿಗೆ ಮುವ್ವತ್ತು ಮಂಕರಿ ತಿಪ್ಪೆಗೊಬ್ಬರ ಸುರಿಯುತ್ತೇನೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
****
ಕರ್ನಾಟಕ ಕಿಚಡಿ ಗೌರ್ಮೆಂಟಿನ ಚೀಫ್ ಮಂತ್ರಿಯಾಗಿರುವ ಕುಮಾರಣ್ಣನವರ ತಲೆ ಇತ್ತೀಚೆಗೆ ಕೆಟ್ಟು ಕೇಸರಿಬಾತ್ ಆಗಿರುವ ಲಕ್ಷಣಗಳು ಗೋಚರವಾಗುತ್ತಿವೆ. ಹಾವು ಮುಂಗುಸಿಗಳನ್ನು ಒಂದೇ ಮೂಟೆಯೊಳಗೆ ತುಂಬಿಟ್ಟಂತಾಗಿರುವ ಕಿಚಡಿ ಸರ್ಕಾರದಲ್ಲಿ ಕಂಡಕಂಡವರೆಲ್ಲ ಕುಮಾರಣ್ಣನ ನುಣುಪಾದ ತಲೆಗೆ ಟುಕು ಟುಕು ಕುಟ್ಟುತ್ತಿರುವುದರಿಂದ ರೋಸತ್ತು ಹೋಗಿರುವ ಮು.ಮಂ. ಅವರು ಇನ್ನುಮುಂದೆ ತಲೆಗೆ 25 ಕೇಜಿ ತೂಕದ ತಾಮ್ರದ ಹೆಲ್ಮೆಟ್ಟು ಧರಿಸಿಕೊಂಡು ಓಡಾಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಅತ್ತ ನಿಂಬೆಹಣ್ ತಜ್ಞ ಲೇವಣ್ಣ, ಇತ್ತ ಹೋಮಹವನ ಪಂಡಿತ ಪಲಮೇಶ್ವರ್, ಆ ಕಡೆ ಹೆಡ್ ಮೇಸ್ಟ್ರು ದೊಡ್ಡಗೌಡ್ರು, ಈ ಕಡೆ 24/7 ಗಢಾರಿ ಹಿಡಿದುಕೊಂಡೇ ಓಡಾಡೋ ಎಂ.ಬಿ. ಘಾಟೀಲ್, ಮತ್ತೊಂದು ಕಡೆ ಉದುರೋ ಕಡ್ಲೆಬೀಜ ಫಾಲೋ ಮಾಡ್ಕೊಂಡು ಹಿಂದಿಂದೆಯೇ ಸುತ್ತುತ್ತಿರೋ ಧಡಿಯೂರಪ್ಪ, ಇನ್ನೊಂದ್ಕಡೆ ಈ ಗೌರ್ಮೆಂಟ್ ಅದುರಿ ಅಲ್ಲಾಡಿ, ನೆಗರಿ ನಿಗುರಾಡಿ ಸರ್ವನಾಶ ಆಗಲಿ ಅಂತ ದಿನಬೆಳಗಾದರೆ ಕಯ್ಯಯ್ಯೋ ಅನ್ನೋ ‘ಆಲ್‍ರೈಟ್ ರಂಗ’ ಅಂಡ್ ಪಟಾಲಂನ ರಕ್ತಬೇಧಿಯ ಕಾಟ ತಡೆಯಲಾರದೆ ಕುಮಾರಣ್ಣ ಕಕ್ಕಾಬಿಕ್ಕಿಯಾಗಿ, ತಲೆಗೇರಿಸಿಕೊಂಡ ತಾಮ್ರದ ಹೆಲ್ಮೆಟ್ಟನ್ನು ಮಲಗೋವಾಗಲು ಸಹ ತೆಗೆಯದೆ ಸೇಫ್ಟಿಯಾಗಿದ್ದಾರೆಂದು ಅವರ ಕಾರ್ ಡ್ರೈವರ್ ಎಣ್ಣೆ ಏಟಿನಲ್ಲಿ ಬಾರ್ ಸಪ್ಲೈಯರ್ ಜೊತೆಗೆ ಚರ್ಚೆ ನಡೆಸಿದ್ದಾರೆಂದು ಗುಪ್ತದಳದ ಮೂಲಗಳು ತಿಳಿಸಿವೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ನಮ್ಮ ನಿಮ್ಮ ಬೇಟಿ ಮುಂದಿನವಾರ. ಅಲ್ಲೀತನಕ ನೀವೂ ನೆಮ್ದಿಯಾಗಿರಿ, ನಾವೂ ನೆಮ್ದಿಯಾಗಿರುತ್ತೇವೆ. ನಮಸ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...