Homeಅಂಕಣಗಳುಹನಿಮೂನ್ ಸಾಕು ತಗೋ ತಲಾಕು

ಹನಿಮೂನ್ ಸಾಕು ತಗೋ ತಲಾಕು

- Advertisement -
- Advertisement -

ಆಘಾತವಾಣಿ ವಾರ್ತೆಗಳು, ಕೇಳುಗರಿಗೆಲ್ಲ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ.

ಆಗಿದ್ದಾಗ್ಲಿ ಹೋಗಿದ್ದೋಗ್ಲಿ, ಆರು ಮೂರಾಗ್ಲಿ, ಮೂರು ಮುವ್ವತ್ತಾಗ್ಲಿ, ನಾನೂ ಕೆಲ್ಸ ಮಾಡಲ್ಲ, ಬೇರೇಯವ್ರಿಗೂ ಕೆಲ್ಸ ಮಾಡೋಕೆ ಬಿಡಲ್ಲ ಅಂತ ವೀರಪ್ರತಿಜ್ಞೆ ಮಾಡಿರೋ ಪಕೋಡೇಂದ್ರ ಕುಂಡಾಲಯ್ಯನ ಕಡೆಯಿಂದ ಹೊಸ ಸುದ್ದಿಯೊಂದು ಬಂದಿದೆ. ವರ್ಷಗಳ ಹಿಂದೆ ದೆಹಲಿ ಚುನಾವಣೆಯಲ್ಲಿ ಕೇಜ್ರಿವಾಲ್ ಪಕ್ಷದಿಂದ ಮಕಮೂತಿಗೆ ಇಕ್ಕಿಸಿಕೊಂಡು ಮಣ್ಣುಮುಕ್ಕಿದ್ದ ಪಕೋಡೇಂದ್ರರವರು ಕೇಜ್ರಿವಾಲ್ ತಲೆ ಮೇಲೆ ಲೆಫ್ಟಿನೆಂಟ್ ಗೌರ್ನರ್ ಎಂಬ ಶೋಕೇಸ್ ಪೀಸೊಂದನ್ನು ಕುಕ್ಕಿದ್ದನು. ಈ ಲಡಾಸಿ ಗೌರ್ನರ್ ದೆಹಲಿಯ ಐಎಎಸ್ ಅಧಿಕಾರಿಗಳ ತಲೆಸವರಿ ಒಳಕ್ಕೆಳೆದುಕೊಂಡು ತಾನಿರುವ ಸರ್ಕಾರದ ವಿರುದ್ಧವೇ ಸ್ಟ್ರೈಕು ಮಾಡಿಸಲು ಹಚ್ಚಿದ್ದಾರೆಂದು ಸುಪ್ತಚರ ಮೂಲಗಳಿಂದ ತಿಳಿದುಬಂದಿದೆ. ಇದಕ್ಕೆ ಪ್ರತಿಯಾಗಿ ಕೇಜ್ರಿವಾಲ್ ತಮ್ಮ ತಂಡದೊಂದಿಗೆ ಲೆಫ್ಟಿನೆಂಟ್ ಗೌರ್ನರ್ ಕಚೇರಿಯೊಳಗೇ ಮೊಕ್ಕಾಂ ಹೂಡಿ ಧರಣಿ ಕೂತು ವಾರ ಕಳೆದರೂ ಚೇಂಬರಿನಿಂದ ಹೊರಬರದೆ ಟೇಬಲ್ ಕೆಳಗೆ ಅವಿತು ಕುಳಿತಿದ್ದ ಆತನು ದೆಹಲಿಯ ಜನರು ಕೈಗೆ ಪ್ಯಾರಗಾನ್ ಚಡಾವು ಕಳಚಿಕೊಳ್ಳುತ್ತಿದ್ದಂತೆ ಆಫೀಸಿಂದ ಈಚೆ ಬಂದು ಕೇಜ್ರಿವಾಲ್ ಬೇಡಿಕೆಗಳಿಗೆ ಸೈನ್ ಹಾಕಿ ಮತ್ತೆ ಹೋಗಿ ಟೇಬಲ್ ಕೆಳಗೆ ಅವಿತುಕೊಂಡಿದ್ದಾನೆಂದು ವರದಿಯಾಗಿದೆ.
****
ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಶ್ಮೀರದಲ್ಲಿ ಮೂರು ಮುಕ್ಕಾಲು ಸೀಟು ಪಡೆದು ಕಾಶ್ಮೀರ ಪ್ರತ್ಯೇಕತಾವಾದಿ ಪಿಡಿಪಿ ಪಕ್ಷದ ಜೊತೆ ಸೇರಿ ಸರ್ಕಾರ ರಚಿಸಿದ್ದ ಬ್ಲೂಜೆಪಿ ಪಕ್ಷದ ವತಿಯಿಂದ ಹೊಸ ನ್ಯೂಸೊಂದು ಎಗರಿ ಬಂದಿದೆ. ಪುಡಿಪುಕ್ಕ ಸೀಟುಗಳನ್ನು ಕಂಕುಳಿಗಿಟ್ಟುಕೊಂಡು “ ಪ್ರೀತ್ಸೇ ಪ್ರೀತ್ಸೇ, ಮೂರೂ ಬಿಟ್ಟು ನನ್ನೇ ಪ್ರೀತ್ಸೇ” ಅಂತ ಈ ಕಡೆಯಿಂದ ಪಿಡಿಪಿ ಪಕ್ಷದ ಸೊಂಟ ಗಿಲ್ಲಿದಾಗ, ಆ ಕಡೆಯಿಂದ “ ಆಜಾ ಮೆರಿ ಗಾಡಿ ಮೇ ಬೈಟ್ ಜಾ, ಆಜಾ ಮೆರಿ ಗಾಡಿ ಮೇ ಬೈಟ್ ಜಾ” ಅನ್ನೋ ರೆಸ್ಪಾನ್ಸ್ ಬಂದಿತ್ತು. ನಂತ್ರ ಇಬ್ಬರೂ ಸೇರಿ ಕಾಶ್ಮೀರದಲ್ಲಿ ಕಲಬೆರಕೆ ಸರ್ಕಾರ ರಚಿಸಿ ಒಬ್ಬರ ಸೊಂಟ ಒಬ್ಬರು ಹಿಡಿದು “ ಬೆರಕೆ ಪ್ರೀತಿಯಲ್ಲಿ ಇರೋ ಸುಖ ಗೊತ್ತೇ ಇರಲಿಲ್ಲ, ಹೂ ಅಂತೀಯ, ಉಹೂ ಅಂತೀಯ” ಅಂತ ಡ್ಯಾನ್ಸ್ ಮಾಡ್ತಿದ್ದ ಎರಡೂ ಪಕ್ಷಗಳು ಈಗ ಮಕಮಕ ಪರಚಾಡಿಕೊಂಡು ದಿಢೀರ್ ಡೈವೋರ್ಸ್ ತಗೊಂಡಿವೆ.
****
ಈ ಢಮಾರ್ ಡೈವೋರ್ಸಿಗೆ ಕಾರಣಗಳೇನೆಂದು ಕೆದಕಿದಾಗ ಕುತೂಹಲಕಾರಿ ಕಿತಾಪತಿ ಮಾಹಿತಿಗಳು ನಮಗೆ ಲಭ್ಯವಾಗಿವೆ. ದೇಶದ ತುಂಬ ಕಾಶ್ಮೀರಿ ಟೆರರಿಸ್ಟ್‍ಗಳ ಬಗ್ಗೆ ಪುಯ್ಯೋ ಪುಯ್ಯೋ ಎಂದು ಪುಂಗಿ ಊದುವ ಬ್ಲೂಜೆಪಿ ಪಕ್ಷವು, ಈ ಪ್ರತ್ಯೇಕತಾವಾದಿಗಳ ಜೊತೆಗೆ ಕಾಶ್ಮೀರದಲ್ಲಿ ತಮ್ಮದೇ ಸರ್ಕಾರದಲ್ಲಿ ಕುಸುಕು ಮುಸುಕು ನಡೆಸುತ್ತಿದ್ದುದು ಎಲ್ಲರಿಗು ತಿಳಿದ ಸತ್ಯ. ಪೊಲೀಸರು-ಮಿಲಿಟರಿಯವರು ಅರೆಸ್ಟ್ ಮಾಡಿದ ಟೆರರಿಸ್ಟುಗಳ ಕೈಗೆ ಹೂಗುಚ್ಛ ಕೊಟ್ಟು ಜೈಲಿಂದ ಬಿಡಿಸಿ ಕಳಿಸುತ್ತಿದ್ದ ಇದೇ ಬೆರಕೆ ಪಕ್ಷದವರು ಬೇರೆ ರಾಜ್ಯಗಳಲ್ಲಿ ಇದಕ್ಕೆ ಉಲ್ಟಾ ಭಾಷಣಗಳನ್ನು ಬೊಗಳುತ್ತ ಚಿಲ್ರೆಕಾಸು ದುಡಿದು ಹೊಟ್ಟೆ ಹೊರೆಯುತ್ತಿದ್ದರು. ಅದೇನಾಯ್ತೋ ಏನೋ ಪಿಡಿಪಿ ಪಕ್ಷಕ್ಕೆ ಬ್ಲೂಜೆಪಿ ಜೊತೆಗಿನ ಕುಸುಕು ಮುಸುಕು ಪ್ರಣಯ ಸಾಕಾಗಿ ಬ್ಲೂಜೆಪಿಯನ್ನು ಸರ್ಕಾರದಿಂದ ಒದ್ದೋಡಿಸುವ ಪ್ರಯತ್ನದಲ್ಲಿತ್ತು. ಅಷ್ಟರಲ್ಲಿ ತನ್ನ ಲಂಗೋಟಿ-ಪುಟಗೋಸಿಯನ್ನು ಗಂಟು ಕಟ್ಟಿಕೊಂಡು ತಲೆ ಮೇಲೆ ಟವೆಲ್ಲು ಹಾಕಿಕೊಂಡ ಬ್ಲೂಜೆಪಿಯು ತಾನೇ ಸರ್ಕಾರದಿಂದ ಈಚೆಗೆ ಬರುತ್ತಿದ್ದೇನೆಂಬ ಡ್ರಾಮಾ ಆಡಿ ಮುಖ ಉಳಿಸಿಕೊಳ್ಳಲು ಪ್ರಯತ್ನಿಸಿದೆಯೆಂದು ಬಲ್ಲ ಮೂಲಗಳು ಬೊಂಬಡ ಹೊಡೆಯುತ್ತ ತಿಳಿಸಿವೆ.
****
ಪ್ರಸ್ತುತ ಮಾಟ-ಮಂತ್ರ ಕವಡೆಶಾಸ್ತ್ರ ತಜ್ಞರ ರಾಜ್ಯಮಟ್ಟದ ಸಮ್ಮೇಳನದಂತೆ ಕಾಣುತ್ತಿರುವ ಕರ್ನಾಟಕದ ‘ಮಿಕ್ಸ್ ಮಸಾಲ ಸರ್ಕಾರ’ದ ಕಡೆಯಿಂದ ಹೊಸ “ಮಮ್ಮಿ ಮೆಟ್ಟು” ವರದಿಯೊಂದು ಕುಪ್ಪಳಿಸುತ್ತ ಬಂದಿದೆ. ಪ್ರೈಮರಿಶಾಲೆಯ ಮಂತ್ರಿಯೊಬ್ಬರು ಮದನಪಲ್ಲಿ ಮೂಲದ ರೇಪಿಸ್ಟನೊಬ್ಬನ ಪತ್ನಿ ಹಾಗೂ ಮಾಜಿಸುಂದರಿ ಮತ್ತು ಹಾಲಿ “ಮಮ್ಮಿ ಭಗವಾನ್” ದೇವಿಯ ಮರದ ಎಕ್ಕಡಗಳನ್ನು ಸ್ಲೋಮೋಷನ್ನಿನಲ್ಲಿ ಮೈಗೆಲ್ಲ ಚರಚರನೆ ಸವರಿಕೊಂಡು ಪಠಾಪಠಾ ಹೊಡೆದುಕೊಂಡು ಆಶೀರ್ವಾದ ತೆಗೆದುಕೊಂಡ ಹಾಸ್ಯಾಸ್ಪದ ಸುದ್ದಿಯೊಂದು ಲಭ್ಯವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ಮಮ್ಮಿ ಭಗವಾನ್ ಭಕ್ತಮಂತ್ರಿಯ ಎಕ್ಕಡಸೇವೆಯ ವಿಡಿಯೋ ಕಡ್ಲೆಪುರಿಯಂತೆ ಖರ್ಚಾಗುತ್ತಿರುವುದು ರಾಜ್ಯದ ಪ್ರಾಥಮಿಕ ಶಾಲೆಯ ಪುಟ್ಟಮಕ್ಕಳಲ್ಲಿ ಗಾಬರಿ ಹುಟ್ಟಿಸಿದೆ. ಈ ಬಗ್ಗೆ ನಿಮ್ಮ ಒಪಿನಿಯನ್ ಏನೆಂದು ಕೇಳಿದಾಗ “ಓಟಿಗೋಸ್ಕರ ಹಿಂಗೆಲ್ಲ ಕಂಡೋರ ಎಕ್ಕಡವನ್ನು ಮತದಾರರ ಇಚ್ಛೆಯಂತೆ ಮೈಗೆಲ್ಲ ಸವರಿಕೊಳ್ಳಬೇಕಾಗ್ತದೆ” ಎಂದು ಸದರೀ ಮಮ್ಮಿ ಭಗವಾನ್ ಭಕ್ತಮಂತ್ರಿಯು ಆಲಾಪಿಸಿದೆ. ಓಟು ಕೊಡೋರು “ನಮ್ಮನೆ ಎಮ್ಮೆಸೆಗಣಿ ತಿನ್ನಿ, ಮೇಲ್ಜಾತಿ ಜನರ ಬೀದಿಯ ಚರಂಡಿನೀರು ತಗೊಂಡು ತಲೆಗೆ ಚಿಮುಕಿಸ್ಕೊಳಿ” ಅಂದ್ರೆ ಅದನ್ನೂ ಮಾಡ್ತೀರ ಸ್ವಾಮಿ? ಎಂದು ಕೇಳಿದಾಗ.. ಕಂಗಾಲಾದ ಭಕ್ತಮಂತ್ರಿಯು ಮುಳುಮುಳನೆ ಗೋಳಾಡುತ್ತ ತನ್ನ ಭಜನೆಭಕ್ತರೊಡನೆ ಇನ್ನೊಂದು “ಡ್ಯಾಡಿ ಭಗವಾನ್” ಮಠದತ್ತ ಬರಿಗಾಲಲ್ಲಿ ಓಡಿಹೋದ ಘಟನೆ ತಡವಾಗಿ ವರದಿಯಾಗಿದೆ.
****
ಹೊಟ್ಟೆಪಾಡಿಗೊಂದು ಕೆಲಸವೂ ಇಲ್ಲದೆ ತೆಂಗಿನಚಿಪ್ಪೊಂದನ್ನು ತಲೇ ಮೇಲಿಟ್ಟುಕೊಂಡು ಊರೂರಲ್ಲಿ ತಿರುಪೆಯೆತ್ತಿಕೊಂಡು ಅಂಡಲೆಯುತ್ತಿರುವ ‘ಪ್ರಬೋದ್ ಮೂತ್ರಲೀಕ್’ ಎಂಬ ವಯೋವೃದ್ಧ ಗುಳ್ಳೆನರಿಯು ಈ ಜನ್ಮದಲ್ಲಿ ಉದ್ದಾರವಾಗುವ ಲಕ್ಷಣಗಳು ಕಂಡು ಬರುತ್ತಿಲ್ಲವೆಂಬುದಕ್ಕೆ ಇತ್ತೀಚೆಗೆ ಮತ್ತೊಂದು ಸಾಕ್ಷಿ ದೊರಕಿದೆ. ಕರ್ನಾಟಕದಲ್ಲಿ ನಾಯಿ ಸತ್ತರೂ ಅದಕ್ಕೆ ಡ್ರಾಮಾಮಾಸ್ಟರ್ ಕುಂಡಾಲೇಂದ್ರ ರೆಸ್ಪಾಂಡ್ ಮಾಡಬೇಕೆ? ಎಂದು ಈ ಕೆಟ್ಟಮುಸುಡಿ ಗುಳ್ಳೆನರಿಯು ಊಳಿಟ್ಟಿದೆ. ಈ ಸುದ್ದಿ ಕೇಳಿದ ಹುಬ್ಬಳ್ಳಿಯ ಪಾನ್ ಬೀಡಾ ಅಂಗಡಿ ಓನರ್ ಸಿದ್ದಪ್ಪಶೆಟ್ಟಿಯವರು, “ಇವನ ಮನೆ ಹಾಳಾಗ, ಇದೆಲ್ಲಾ ಕಿಸಲಗೇಡಿ ಮಾತಾಡೋ ಈ ಮೂತ್ರಲೀಕ್, ಕಟಿಂಗ್ ಶೇವಿಂಗ್ ಮಾಡಿಸಿಕೊಳ್ಳಲು ನನ್ನ ಬಳಿ 300 ರುಪಾಯಿ ತೆಗೆದುಕೊಂಡು ತಲೆಮರೆಸಿಕೊಂಡು ತಿರುಗುತ್ತಿದ್ದಾನೆ, ಇವನನ್ನು ಕಂಡವರು ಇವನ ಕೈಕಾಲು ಕಟ್ಟಿ ಹತ್ತಿರದ ಪಾಳುಬಾವಿಯೊಂದರೊಳಗೆ ಎತ್ತಿಹಾಕಿ, ನನಗೊಂದು ಮಿಸ್ ಕಾಲ್ ಕೊಟ್ರೆ ಓಡಿ ಬಂದು ಮೂತ್ರಲೀಕ್ ಬಿದ್ದಿರುವ ಪಾಳುಬಾವಿಗೆ ಮುವ್ವತ್ತು ಮಂಕರಿ ತಿಪ್ಪೆಗೊಬ್ಬರ ಸುರಿಯುತ್ತೇನೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
****
ಕರ್ನಾಟಕ ಕಿಚಡಿ ಗೌರ್ಮೆಂಟಿನ ಚೀಫ್ ಮಂತ್ರಿಯಾಗಿರುವ ಕುಮಾರಣ್ಣನವರ ತಲೆ ಇತ್ತೀಚೆಗೆ ಕೆಟ್ಟು ಕೇಸರಿಬಾತ್ ಆಗಿರುವ ಲಕ್ಷಣಗಳು ಗೋಚರವಾಗುತ್ತಿವೆ. ಹಾವು ಮುಂಗುಸಿಗಳನ್ನು ಒಂದೇ ಮೂಟೆಯೊಳಗೆ ತುಂಬಿಟ್ಟಂತಾಗಿರುವ ಕಿಚಡಿ ಸರ್ಕಾರದಲ್ಲಿ ಕಂಡಕಂಡವರೆಲ್ಲ ಕುಮಾರಣ್ಣನ ನುಣುಪಾದ ತಲೆಗೆ ಟುಕು ಟುಕು ಕುಟ್ಟುತ್ತಿರುವುದರಿಂದ ರೋಸತ್ತು ಹೋಗಿರುವ ಮು.ಮಂ. ಅವರು ಇನ್ನುಮುಂದೆ ತಲೆಗೆ 25 ಕೇಜಿ ತೂಕದ ತಾಮ್ರದ ಹೆಲ್ಮೆಟ್ಟು ಧರಿಸಿಕೊಂಡು ಓಡಾಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಅತ್ತ ನಿಂಬೆಹಣ್ ತಜ್ಞ ಲೇವಣ್ಣ, ಇತ್ತ ಹೋಮಹವನ ಪಂಡಿತ ಪಲಮೇಶ್ವರ್, ಆ ಕಡೆ ಹೆಡ್ ಮೇಸ್ಟ್ರು ದೊಡ್ಡಗೌಡ್ರು, ಈ ಕಡೆ 24/7 ಗಢಾರಿ ಹಿಡಿದುಕೊಂಡೇ ಓಡಾಡೋ ಎಂ.ಬಿ. ಘಾಟೀಲ್, ಮತ್ತೊಂದು ಕಡೆ ಉದುರೋ ಕಡ್ಲೆಬೀಜ ಫಾಲೋ ಮಾಡ್ಕೊಂಡು ಹಿಂದಿಂದೆಯೇ ಸುತ್ತುತ್ತಿರೋ ಧಡಿಯೂರಪ್ಪ, ಇನ್ನೊಂದ್ಕಡೆ ಈ ಗೌರ್ಮೆಂಟ್ ಅದುರಿ ಅಲ್ಲಾಡಿ, ನೆಗರಿ ನಿಗುರಾಡಿ ಸರ್ವನಾಶ ಆಗಲಿ ಅಂತ ದಿನಬೆಳಗಾದರೆ ಕಯ್ಯಯ್ಯೋ ಅನ್ನೋ ‘ಆಲ್‍ರೈಟ್ ರಂಗ’ ಅಂಡ್ ಪಟಾಲಂನ ರಕ್ತಬೇಧಿಯ ಕಾಟ ತಡೆಯಲಾರದೆ ಕುಮಾರಣ್ಣ ಕಕ್ಕಾಬಿಕ್ಕಿಯಾಗಿ, ತಲೆಗೇರಿಸಿಕೊಂಡ ತಾಮ್ರದ ಹೆಲ್ಮೆಟ್ಟನ್ನು ಮಲಗೋವಾಗಲು ಸಹ ತೆಗೆಯದೆ ಸೇಫ್ಟಿಯಾಗಿದ್ದಾರೆಂದು ಅವರ ಕಾರ್ ಡ್ರೈವರ್ ಎಣ್ಣೆ ಏಟಿನಲ್ಲಿ ಬಾರ್ ಸಪ್ಲೈಯರ್ ಜೊತೆಗೆ ಚರ್ಚೆ ನಡೆಸಿದ್ದಾರೆಂದು ಗುಪ್ತದಳದ ಮೂಲಗಳು ತಿಳಿಸಿವೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ನಮ್ಮ ನಿಮ್ಮ ಬೇಟಿ ಮುಂದಿನವಾರ. ಅಲ್ಲೀತನಕ ನೀವೂ ನೆಮ್ದಿಯಾಗಿರಿ, ನಾವೂ ನೆಮ್ದಿಯಾಗಿರುತ್ತೇವೆ. ನಮಸ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...