Homeಅಂಕಣಗಳುಹನಿಮೂನ್ ಸಾಕು ತಗೋ ತಲಾಕು

ಹನಿಮೂನ್ ಸಾಕು ತಗೋ ತಲಾಕು

- Advertisement -
- Advertisement -

ಆಘಾತವಾಣಿ ವಾರ್ತೆಗಳು, ಕೇಳುಗರಿಗೆಲ್ಲ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ.

ಆಗಿದ್ದಾಗ್ಲಿ ಹೋಗಿದ್ದೋಗ್ಲಿ, ಆರು ಮೂರಾಗ್ಲಿ, ಮೂರು ಮುವ್ವತ್ತಾಗ್ಲಿ, ನಾನೂ ಕೆಲ್ಸ ಮಾಡಲ್ಲ, ಬೇರೇಯವ್ರಿಗೂ ಕೆಲ್ಸ ಮಾಡೋಕೆ ಬಿಡಲ್ಲ ಅಂತ ವೀರಪ್ರತಿಜ್ಞೆ ಮಾಡಿರೋ ಪಕೋಡೇಂದ್ರ ಕುಂಡಾಲಯ್ಯನ ಕಡೆಯಿಂದ ಹೊಸ ಸುದ್ದಿಯೊಂದು ಬಂದಿದೆ. ವರ್ಷಗಳ ಹಿಂದೆ ದೆಹಲಿ ಚುನಾವಣೆಯಲ್ಲಿ ಕೇಜ್ರಿವಾಲ್ ಪಕ್ಷದಿಂದ ಮಕಮೂತಿಗೆ ಇಕ್ಕಿಸಿಕೊಂಡು ಮಣ್ಣುಮುಕ್ಕಿದ್ದ ಪಕೋಡೇಂದ್ರರವರು ಕೇಜ್ರಿವಾಲ್ ತಲೆ ಮೇಲೆ ಲೆಫ್ಟಿನೆಂಟ್ ಗೌರ್ನರ್ ಎಂಬ ಶೋಕೇಸ್ ಪೀಸೊಂದನ್ನು ಕುಕ್ಕಿದ್ದನು. ಈ ಲಡಾಸಿ ಗೌರ್ನರ್ ದೆಹಲಿಯ ಐಎಎಸ್ ಅಧಿಕಾರಿಗಳ ತಲೆಸವರಿ ಒಳಕ್ಕೆಳೆದುಕೊಂಡು ತಾನಿರುವ ಸರ್ಕಾರದ ವಿರುದ್ಧವೇ ಸ್ಟ್ರೈಕು ಮಾಡಿಸಲು ಹಚ್ಚಿದ್ದಾರೆಂದು ಸುಪ್ತಚರ ಮೂಲಗಳಿಂದ ತಿಳಿದುಬಂದಿದೆ. ಇದಕ್ಕೆ ಪ್ರತಿಯಾಗಿ ಕೇಜ್ರಿವಾಲ್ ತಮ್ಮ ತಂಡದೊಂದಿಗೆ ಲೆಫ್ಟಿನೆಂಟ್ ಗೌರ್ನರ್ ಕಚೇರಿಯೊಳಗೇ ಮೊಕ್ಕಾಂ ಹೂಡಿ ಧರಣಿ ಕೂತು ವಾರ ಕಳೆದರೂ ಚೇಂಬರಿನಿಂದ ಹೊರಬರದೆ ಟೇಬಲ್ ಕೆಳಗೆ ಅವಿತು ಕುಳಿತಿದ್ದ ಆತನು ದೆಹಲಿಯ ಜನರು ಕೈಗೆ ಪ್ಯಾರಗಾನ್ ಚಡಾವು ಕಳಚಿಕೊಳ್ಳುತ್ತಿದ್ದಂತೆ ಆಫೀಸಿಂದ ಈಚೆ ಬಂದು ಕೇಜ್ರಿವಾಲ್ ಬೇಡಿಕೆಗಳಿಗೆ ಸೈನ್ ಹಾಕಿ ಮತ್ತೆ ಹೋಗಿ ಟೇಬಲ್ ಕೆಳಗೆ ಅವಿತುಕೊಂಡಿದ್ದಾನೆಂದು ವರದಿಯಾಗಿದೆ.
****
ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಶ್ಮೀರದಲ್ಲಿ ಮೂರು ಮುಕ್ಕಾಲು ಸೀಟು ಪಡೆದು ಕಾಶ್ಮೀರ ಪ್ರತ್ಯೇಕತಾವಾದಿ ಪಿಡಿಪಿ ಪಕ್ಷದ ಜೊತೆ ಸೇರಿ ಸರ್ಕಾರ ರಚಿಸಿದ್ದ ಬ್ಲೂಜೆಪಿ ಪಕ್ಷದ ವತಿಯಿಂದ ಹೊಸ ನ್ಯೂಸೊಂದು ಎಗರಿ ಬಂದಿದೆ. ಪುಡಿಪುಕ್ಕ ಸೀಟುಗಳನ್ನು ಕಂಕುಳಿಗಿಟ್ಟುಕೊಂಡು “ ಪ್ರೀತ್ಸೇ ಪ್ರೀತ್ಸೇ, ಮೂರೂ ಬಿಟ್ಟು ನನ್ನೇ ಪ್ರೀತ್ಸೇ” ಅಂತ ಈ ಕಡೆಯಿಂದ ಪಿಡಿಪಿ ಪಕ್ಷದ ಸೊಂಟ ಗಿಲ್ಲಿದಾಗ, ಆ ಕಡೆಯಿಂದ “ ಆಜಾ ಮೆರಿ ಗಾಡಿ ಮೇ ಬೈಟ್ ಜಾ, ಆಜಾ ಮೆರಿ ಗಾಡಿ ಮೇ ಬೈಟ್ ಜಾ” ಅನ್ನೋ ರೆಸ್ಪಾನ್ಸ್ ಬಂದಿತ್ತು. ನಂತ್ರ ಇಬ್ಬರೂ ಸೇರಿ ಕಾಶ್ಮೀರದಲ್ಲಿ ಕಲಬೆರಕೆ ಸರ್ಕಾರ ರಚಿಸಿ ಒಬ್ಬರ ಸೊಂಟ ಒಬ್ಬರು ಹಿಡಿದು “ ಬೆರಕೆ ಪ್ರೀತಿಯಲ್ಲಿ ಇರೋ ಸುಖ ಗೊತ್ತೇ ಇರಲಿಲ್ಲ, ಹೂ ಅಂತೀಯ, ಉಹೂ ಅಂತೀಯ” ಅಂತ ಡ್ಯಾನ್ಸ್ ಮಾಡ್ತಿದ್ದ ಎರಡೂ ಪಕ್ಷಗಳು ಈಗ ಮಕಮಕ ಪರಚಾಡಿಕೊಂಡು ದಿಢೀರ್ ಡೈವೋರ್ಸ್ ತಗೊಂಡಿವೆ.
****
ಈ ಢಮಾರ್ ಡೈವೋರ್ಸಿಗೆ ಕಾರಣಗಳೇನೆಂದು ಕೆದಕಿದಾಗ ಕುತೂಹಲಕಾರಿ ಕಿತಾಪತಿ ಮಾಹಿತಿಗಳು ನಮಗೆ ಲಭ್ಯವಾಗಿವೆ. ದೇಶದ ತುಂಬ ಕಾಶ್ಮೀರಿ ಟೆರರಿಸ್ಟ್‍ಗಳ ಬಗ್ಗೆ ಪುಯ್ಯೋ ಪುಯ್ಯೋ ಎಂದು ಪುಂಗಿ ಊದುವ ಬ್ಲೂಜೆಪಿ ಪಕ್ಷವು, ಈ ಪ್ರತ್ಯೇಕತಾವಾದಿಗಳ ಜೊತೆಗೆ ಕಾಶ್ಮೀರದಲ್ಲಿ ತಮ್ಮದೇ ಸರ್ಕಾರದಲ್ಲಿ ಕುಸುಕು ಮುಸುಕು ನಡೆಸುತ್ತಿದ್ದುದು ಎಲ್ಲರಿಗು ತಿಳಿದ ಸತ್ಯ. ಪೊಲೀಸರು-ಮಿಲಿಟರಿಯವರು ಅರೆಸ್ಟ್ ಮಾಡಿದ ಟೆರರಿಸ್ಟುಗಳ ಕೈಗೆ ಹೂಗುಚ್ಛ ಕೊಟ್ಟು ಜೈಲಿಂದ ಬಿಡಿಸಿ ಕಳಿಸುತ್ತಿದ್ದ ಇದೇ ಬೆರಕೆ ಪಕ್ಷದವರು ಬೇರೆ ರಾಜ್ಯಗಳಲ್ಲಿ ಇದಕ್ಕೆ ಉಲ್ಟಾ ಭಾಷಣಗಳನ್ನು ಬೊಗಳುತ್ತ ಚಿಲ್ರೆಕಾಸು ದುಡಿದು ಹೊಟ್ಟೆ ಹೊರೆಯುತ್ತಿದ್ದರು. ಅದೇನಾಯ್ತೋ ಏನೋ ಪಿಡಿಪಿ ಪಕ್ಷಕ್ಕೆ ಬ್ಲೂಜೆಪಿ ಜೊತೆಗಿನ ಕುಸುಕು ಮುಸುಕು ಪ್ರಣಯ ಸಾಕಾಗಿ ಬ್ಲೂಜೆಪಿಯನ್ನು ಸರ್ಕಾರದಿಂದ ಒದ್ದೋಡಿಸುವ ಪ್ರಯತ್ನದಲ್ಲಿತ್ತು. ಅಷ್ಟರಲ್ಲಿ ತನ್ನ ಲಂಗೋಟಿ-ಪುಟಗೋಸಿಯನ್ನು ಗಂಟು ಕಟ್ಟಿಕೊಂಡು ತಲೆ ಮೇಲೆ ಟವೆಲ್ಲು ಹಾಕಿಕೊಂಡ ಬ್ಲೂಜೆಪಿಯು ತಾನೇ ಸರ್ಕಾರದಿಂದ ಈಚೆಗೆ ಬರುತ್ತಿದ್ದೇನೆಂಬ ಡ್ರಾಮಾ ಆಡಿ ಮುಖ ಉಳಿಸಿಕೊಳ್ಳಲು ಪ್ರಯತ್ನಿಸಿದೆಯೆಂದು ಬಲ್ಲ ಮೂಲಗಳು ಬೊಂಬಡ ಹೊಡೆಯುತ್ತ ತಿಳಿಸಿವೆ.
****
ಪ್ರಸ್ತುತ ಮಾಟ-ಮಂತ್ರ ಕವಡೆಶಾಸ್ತ್ರ ತಜ್ಞರ ರಾಜ್ಯಮಟ್ಟದ ಸಮ್ಮೇಳನದಂತೆ ಕಾಣುತ್ತಿರುವ ಕರ್ನಾಟಕದ ‘ಮಿಕ್ಸ್ ಮಸಾಲ ಸರ್ಕಾರ’ದ ಕಡೆಯಿಂದ ಹೊಸ “ಮಮ್ಮಿ ಮೆಟ್ಟು” ವರದಿಯೊಂದು ಕುಪ್ಪಳಿಸುತ್ತ ಬಂದಿದೆ. ಪ್ರೈಮರಿಶಾಲೆಯ ಮಂತ್ರಿಯೊಬ್ಬರು ಮದನಪಲ್ಲಿ ಮೂಲದ ರೇಪಿಸ್ಟನೊಬ್ಬನ ಪತ್ನಿ ಹಾಗೂ ಮಾಜಿಸುಂದರಿ ಮತ್ತು ಹಾಲಿ “ಮಮ್ಮಿ ಭಗವಾನ್” ದೇವಿಯ ಮರದ ಎಕ್ಕಡಗಳನ್ನು ಸ್ಲೋಮೋಷನ್ನಿನಲ್ಲಿ ಮೈಗೆಲ್ಲ ಚರಚರನೆ ಸವರಿಕೊಂಡು ಪಠಾಪಠಾ ಹೊಡೆದುಕೊಂಡು ಆಶೀರ್ವಾದ ತೆಗೆದುಕೊಂಡ ಹಾಸ್ಯಾಸ್ಪದ ಸುದ್ದಿಯೊಂದು ಲಭ್ಯವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ಮಮ್ಮಿ ಭಗವಾನ್ ಭಕ್ತಮಂತ್ರಿಯ ಎಕ್ಕಡಸೇವೆಯ ವಿಡಿಯೋ ಕಡ್ಲೆಪುರಿಯಂತೆ ಖರ್ಚಾಗುತ್ತಿರುವುದು ರಾಜ್ಯದ ಪ್ರಾಥಮಿಕ ಶಾಲೆಯ ಪುಟ್ಟಮಕ್ಕಳಲ್ಲಿ ಗಾಬರಿ ಹುಟ್ಟಿಸಿದೆ. ಈ ಬಗ್ಗೆ ನಿಮ್ಮ ಒಪಿನಿಯನ್ ಏನೆಂದು ಕೇಳಿದಾಗ “ಓಟಿಗೋಸ್ಕರ ಹಿಂಗೆಲ್ಲ ಕಂಡೋರ ಎಕ್ಕಡವನ್ನು ಮತದಾರರ ಇಚ್ಛೆಯಂತೆ ಮೈಗೆಲ್ಲ ಸವರಿಕೊಳ್ಳಬೇಕಾಗ್ತದೆ” ಎಂದು ಸದರೀ ಮಮ್ಮಿ ಭಗವಾನ್ ಭಕ್ತಮಂತ್ರಿಯು ಆಲಾಪಿಸಿದೆ. ಓಟು ಕೊಡೋರು “ನಮ್ಮನೆ ಎಮ್ಮೆಸೆಗಣಿ ತಿನ್ನಿ, ಮೇಲ್ಜಾತಿ ಜನರ ಬೀದಿಯ ಚರಂಡಿನೀರು ತಗೊಂಡು ತಲೆಗೆ ಚಿಮುಕಿಸ್ಕೊಳಿ” ಅಂದ್ರೆ ಅದನ್ನೂ ಮಾಡ್ತೀರ ಸ್ವಾಮಿ? ಎಂದು ಕೇಳಿದಾಗ.. ಕಂಗಾಲಾದ ಭಕ್ತಮಂತ್ರಿಯು ಮುಳುಮುಳನೆ ಗೋಳಾಡುತ್ತ ತನ್ನ ಭಜನೆಭಕ್ತರೊಡನೆ ಇನ್ನೊಂದು “ಡ್ಯಾಡಿ ಭಗವಾನ್” ಮಠದತ್ತ ಬರಿಗಾಲಲ್ಲಿ ಓಡಿಹೋದ ಘಟನೆ ತಡವಾಗಿ ವರದಿಯಾಗಿದೆ.
****
ಹೊಟ್ಟೆಪಾಡಿಗೊಂದು ಕೆಲಸವೂ ಇಲ್ಲದೆ ತೆಂಗಿನಚಿಪ್ಪೊಂದನ್ನು ತಲೇ ಮೇಲಿಟ್ಟುಕೊಂಡು ಊರೂರಲ್ಲಿ ತಿರುಪೆಯೆತ್ತಿಕೊಂಡು ಅಂಡಲೆಯುತ್ತಿರುವ ‘ಪ್ರಬೋದ್ ಮೂತ್ರಲೀಕ್’ ಎಂಬ ವಯೋವೃದ್ಧ ಗುಳ್ಳೆನರಿಯು ಈ ಜನ್ಮದಲ್ಲಿ ಉದ್ದಾರವಾಗುವ ಲಕ್ಷಣಗಳು ಕಂಡು ಬರುತ್ತಿಲ್ಲವೆಂಬುದಕ್ಕೆ ಇತ್ತೀಚೆಗೆ ಮತ್ತೊಂದು ಸಾಕ್ಷಿ ದೊರಕಿದೆ. ಕರ್ನಾಟಕದಲ್ಲಿ ನಾಯಿ ಸತ್ತರೂ ಅದಕ್ಕೆ ಡ್ರಾಮಾಮಾಸ್ಟರ್ ಕುಂಡಾಲೇಂದ್ರ ರೆಸ್ಪಾಂಡ್ ಮಾಡಬೇಕೆ? ಎಂದು ಈ ಕೆಟ್ಟಮುಸುಡಿ ಗುಳ್ಳೆನರಿಯು ಊಳಿಟ್ಟಿದೆ. ಈ ಸುದ್ದಿ ಕೇಳಿದ ಹುಬ್ಬಳ್ಳಿಯ ಪಾನ್ ಬೀಡಾ ಅಂಗಡಿ ಓನರ್ ಸಿದ್ದಪ್ಪಶೆಟ್ಟಿಯವರು, “ಇವನ ಮನೆ ಹಾಳಾಗ, ಇದೆಲ್ಲಾ ಕಿಸಲಗೇಡಿ ಮಾತಾಡೋ ಈ ಮೂತ್ರಲೀಕ್, ಕಟಿಂಗ್ ಶೇವಿಂಗ್ ಮಾಡಿಸಿಕೊಳ್ಳಲು ನನ್ನ ಬಳಿ 300 ರುಪಾಯಿ ತೆಗೆದುಕೊಂಡು ತಲೆಮರೆಸಿಕೊಂಡು ತಿರುಗುತ್ತಿದ್ದಾನೆ, ಇವನನ್ನು ಕಂಡವರು ಇವನ ಕೈಕಾಲು ಕಟ್ಟಿ ಹತ್ತಿರದ ಪಾಳುಬಾವಿಯೊಂದರೊಳಗೆ ಎತ್ತಿಹಾಕಿ, ನನಗೊಂದು ಮಿಸ್ ಕಾಲ್ ಕೊಟ್ರೆ ಓಡಿ ಬಂದು ಮೂತ್ರಲೀಕ್ ಬಿದ್ದಿರುವ ಪಾಳುಬಾವಿಗೆ ಮುವ್ವತ್ತು ಮಂಕರಿ ತಿಪ್ಪೆಗೊಬ್ಬರ ಸುರಿಯುತ್ತೇನೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
****
ಕರ್ನಾಟಕ ಕಿಚಡಿ ಗೌರ್ಮೆಂಟಿನ ಚೀಫ್ ಮಂತ್ರಿಯಾಗಿರುವ ಕುಮಾರಣ್ಣನವರ ತಲೆ ಇತ್ತೀಚೆಗೆ ಕೆಟ್ಟು ಕೇಸರಿಬಾತ್ ಆಗಿರುವ ಲಕ್ಷಣಗಳು ಗೋಚರವಾಗುತ್ತಿವೆ. ಹಾವು ಮುಂಗುಸಿಗಳನ್ನು ಒಂದೇ ಮೂಟೆಯೊಳಗೆ ತುಂಬಿಟ್ಟಂತಾಗಿರುವ ಕಿಚಡಿ ಸರ್ಕಾರದಲ್ಲಿ ಕಂಡಕಂಡವರೆಲ್ಲ ಕುಮಾರಣ್ಣನ ನುಣುಪಾದ ತಲೆಗೆ ಟುಕು ಟುಕು ಕುಟ್ಟುತ್ತಿರುವುದರಿಂದ ರೋಸತ್ತು ಹೋಗಿರುವ ಮು.ಮಂ. ಅವರು ಇನ್ನುಮುಂದೆ ತಲೆಗೆ 25 ಕೇಜಿ ತೂಕದ ತಾಮ್ರದ ಹೆಲ್ಮೆಟ್ಟು ಧರಿಸಿಕೊಂಡು ಓಡಾಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಅತ್ತ ನಿಂಬೆಹಣ್ ತಜ್ಞ ಲೇವಣ್ಣ, ಇತ್ತ ಹೋಮಹವನ ಪಂಡಿತ ಪಲಮೇಶ್ವರ್, ಆ ಕಡೆ ಹೆಡ್ ಮೇಸ್ಟ್ರು ದೊಡ್ಡಗೌಡ್ರು, ಈ ಕಡೆ 24/7 ಗಢಾರಿ ಹಿಡಿದುಕೊಂಡೇ ಓಡಾಡೋ ಎಂ.ಬಿ. ಘಾಟೀಲ್, ಮತ್ತೊಂದು ಕಡೆ ಉದುರೋ ಕಡ್ಲೆಬೀಜ ಫಾಲೋ ಮಾಡ್ಕೊಂಡು ಹಿಂದಿಂದೆಯೇ ಸುತ್ತುತ್ತಿರೋ ಧಡಿಯೂರಪ್ಪ, ಇನ್ನೊಂದ್ಕಡೆ ಈ ಗೌರ್ಮೆಂಟ್ ಅದುರಿ ಅಲ್ಲಾಡಿ, ನೆಗರಿ ನಿಗುರಾಡಿ ಸರ್ವನಾಶ ಆಗಲಿ ಅಂತ ದಿನಬೆಳಗಾದರೆ ಕಯ್ಯಯ್ಯೋ ಅನ್ನೋ ‘ಆಲ್‍ರೈಟ್ ರಂಗ’ ಅಂಡ್ ಪಟಾಲಂನ ರಕ್ತಬೇಧಿಯ ಕಾಟ ತಡೆಯಲಾರದೆ ಕುಮಾರಣ್ಣ ಕಕ್ಕಾಬಿಕ್ಕಿಯಾಗಿ, ತಲೆಗೇರಿಸಿಕೊಂಡ ತಾಮ್ರದ ಹೆಲ್ಮೆಟ್ಟನ್ನು ಮಲಗೋವಾಗಲು ಸಹ ತೆಗೆಯದೆ ಸೇಫ್ಟಿಯಾಗಿದ್ದಾರೆಂದು ಅವರ ಕಾರ್ ಡ್ರೈವರ್ ಎಣ್ಣೆ ಏಟಿನಲ್ಲಿ ಬಾರ್ ಸಪ್ಲೈಯರ್ ಜೊತೆಗೆ ಚರ್ಚೆ ನಡೆಸಿದ್ದಾರೆಂದು ಗುಪ್ತದಳದ ಮೂಲಗಳು ತಿಳಿಸಿವೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ನಮ್ಮ ನಿಮ್ಮ ಬೇಟಿ ಮುಂದಿನವಾರ. ಅಲ್ಲೀತನಕ ನೀವೂ ನೆಮ್ದಿಯಾಗಿರಿ, ನಾವೂ ನೆಮ್ದಿಯಾಗಿರುತ್ತೇವೆ. ನಮಸ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...