Homeಅಂಕಣಗಳುಹನಿಮೂನ್ ಸಾಕು ತಗೋ ತಲಾಕು

ಹನಿಮೂನ್ ಸಾಕು ತಗೋ ತಲಾಕು

- Advertisement -
- Advertisement -

ಆಘಾತವಾಣಿ ವಾರ್ತೆಗಳು, ಕೇಳುಗರಿಗೆಲ್ಲ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ.

ಆಗಿದ್ದಾಗ್ಲಿ ಹೋಗಿದ್ದೋಗ್ಲಿ, ಆರು ಮೂರಾಗ್ಲಿ, ಮೂರು ಮುವ್ವತ್ತಾಗ್ಲಿ, ನಾನೂ ಕೆಲ್ಸ ಮಾಡಲ್ಲ, ಬೇರೇಯವ್ರಿಗೂ ಕೆಲ್ಸ ಮಾಡೋಕೆ ಬಿಡಲ್ಲ ಅಂತ ವೀರಪ್ರತಿಜ್ಞೆ ಮಾಡಿರೋ ಪಕೋಡೇಂದ್ರ ಕುಂಡಾಲಯ್ಯನ ಕಡೆಯಿಂದ ಹೊಸ ಸುದ್ದಿಯೊಂದು ಬಂದಿದೆ. ವರ್ಷಗಳ ಹಿಂದೆ ದೆಹಲಿ ಚುನಾವಣೆಯಲ್ಲಿ ಕೇಜ್ರಿವಾಲ್ ಪಕ್ಷದಿಂದ ಮಕಮೂತಿಗೆ ಇಕ್ಕಿಸಿಕೊಂಡು ಮಣ್ಣುಮುಕ್ಕಿದ್ದ ಪಕೋಡೇಂದ್ರರವರು ಕೇಜ್ರಿವಾಲ್ ತಲೆ ಮೇಲೆ ಲೆಫ್ಟಿನೆಂಟ್ ಗೌರ್ನರ್ ಎಂಬ ಶೋಕೇಸ್ ಪೀಸೊಂದನ್ನು ಕುಕ್ಕಿದ್ದನು. ಈ ಲಡಾಸಿ ಗೌರ್ನರ್ ದೆಹಲಿಯ ಐಎಎಸ್ ಅಧಿಕಾರಿಗಳ ತಲೆಸವರಿ ಒಳಕ್ಕೆಳೆದುಕೊಂಡು ತಾನಿರುವ ಸರ್ಕಾರದ ವಿರುದ್ಧವೇ ಸ್ಟ್ರೈಕು ಮಾಡಿಸಲು ಹಚ್ಚಿದ್ದಾರೆಂದು ಸುಪ್ತಚರ ಮೂಲಗಳಿಂದ ತಿಳಿದುಬಂದಿದೆ. ಇದಕ್ಕೆ ಪ್ರತಿಯಾಗಿ ಕೇಜ್ರಿವಾಲ್ ತಮ್ಮ ತಂಡದೊಂದಿಗೆ ಲೆಫ್ಟಿನೆಂಟ್ ಗೌರ್ನರ್ ಕಚೇರಿಯೊಳಗೇ ಮೊಕ್ಕಾಂ ಹೂಡಿ ಧರಣಿ ಕೂತು ವಾರ ಕಳೆದರೂ ಚೇಂಬರಿನಿಂದ ಹೊರಬರದೆ ಟೇಬಲ್ ಕೆಳಗೆ ಅವಿತು ಕುಳಿತಿದ್ದ ಆತನು ದೆಹಲಿಯ ಜನರು ಕೈಗೆ ಪ್ಯಾರಗಾನ್ ಚಡಾವು ಕಳಚಿಕೊಳ್ಳುತ್ತಿದ್ದಂತೆ ಆಫೀಸಿಂದ ಈಚೆ ಬಂದು ಕೇಜ್ರಿವಾಲ್ ಬೇಡಿಕೆಗಳಿಗೆ ಸೈನ್ ಹಾಕಿ ಮತ್ತೆ ಹೋಗಿ ಟೇಬಲ್ ಕೆಳಗೆ ಅವಿತುಕೊಂಡಿದ್ದಾನೆಂದು ವರದಿಯಾಗಿದೆ.
****
ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಶ್ಮೀರದಲ್ಲಿ ಮೂರು ಮುಕ್ಕಾಲು ಸೀಟು ಪಡೆದು ಕಾಶ್ಮೀರ ಪ್ರತ್ಯೇಕತಾವಾದಿ ಪಿಡಿಪಿ ಪಕ್ಷದ ಜೊತೆ ಸೇರಿ ಸರ್ಕಾರ ರಚಿಸಿದ್ದ ಬ್ಲೂಜೆಪಿ ಪಕ್ಷದ ವತಿಯಿಂದ ಹೊಸ ನ್ಯೂಸೊಂದು ಎಗರಿ ಬಂದಿದೆ. ಪುಡಿಪುಕ್ಕ ಸೀಟುಗಳನ್ನು ಕಂಕುಳಿಗಿಟ್ಟುಕೊಂಡು “ ಪ್ರೀತ್ಸೇ ಪ್ರೀತ್ಸೇ, ಮೂರೂ ಬಿಟ್ಟು ನನ್ನೇ ಪ್ರೀತ್ಸೇ” ಅಂತ ಈ ಕಡೆಯಿಂದ ಪಿಡಿಪಿ ಪಕ್ಷದ ಸೊಂಟ ಗಿಲ್ಲಿದಾಗ, ಆ ಕಡೆಯಿಂದ “ ಆಜಾ ಮೆರಿ ಗಾಡಿ ಮೇ ಬೈಟ್ ಜಾ, ಆಜಾ ಮೆರಿ ಗಾಡಿ ಮೇ ಬೈಟ್ ಜಾ” ಅನ್ನೋ ರೆಸ್ಪಾನ್ಸ್ ಬಂದಿತ್ತು. ನಂತ್ರ ಇಬ್ಬರೂ ಸೇರಿ ಕಾಶ್ಮೀರದಲ್ಲಿ ಕಲಬೆರಕೆ ಸರ್ಕಾರ ರಚಿಸಿ ಒಬ್ಬರ ಸೊಂಟ ಒಬ್ಬರು ಹಿಡಿದು “ ಬೆರಕೆ ಪ್ರೀತಿಯಲ್ಲಿ ಇರೋ ಸುಖ ಗೊತ್ತೇ ಇರಲಿಲ್ಲ, ಹೂ ಅಂತೀಯ, ಉಹೂ ಅಂತೀಯ” ಅಂತ ಡ್ಯಾನ್ಸ್ ಮಾಡ್ತಿದ್ದ ಎರಡೂ ಪಕ್ಷಗಳು ಈಗ ಮಕಮಕ ಪರಚಾಡಿಕೊಂಡು ದಿಢೀರ್ ಡೈವೋರ್ಸ್ ತಗೊಂಡಿವೆ.
****
ಈ ಢಮಾರ್ ಡೈವೋರ್ಸಿಗೆ ಕಾರಣಗಳೇನೆಂದು ಕೆದಕಿದಾಗ ಕುತೂಹಲಕಾರಿ ಕಿತಾಪತಿ ಮಾಹಿತಿಗಳು ನಮಗೆ ಲಭ್ಯವಾಗಿವೆ. ದೇಶದ ತುಂಬ ಕಾಶ್ಮೀರಿ ಟೆರರಿಸ್ಟ್‍ಗಳ ಬಗ್ಗೆ ಪುಯ್ಯೋ ಪುಯ್ಯೋ ಎಂದು ಪುಂಗಿ ಊದುವ ಬ್ಲೂಜೆಪಿ ಪಕ್ಷವು, ಈ ಪ್ರತ್ಯೇಕತಾವಾದಿಗಳ ಜೊತೆಗೆ ಕಾಶ್ಮೀರದಲ್ಲಿ ತಮ್ಮದೇ ಸರ್ಕಾರದಲ್ಲಿ ಕುಸುಕು ಮುಸುಕು ನಡೆಸುತ್ತಿದ್ದುದು ಎಲ್ಲರಿಗು ತಿಳಿದ ಸತ್ಯ. ಪೊಲೀಸರು-ಮಿಲಿಟರಿಯವರು ಅರೆಸ್ಟ್ ಮಾಡಿದ ಟೆರರಿಸ್ಟುಗಳ ಕೈಗೆ ಹೂಗುಚ್ಛ ಕೊಟ್ಟು ಜೈಲಿಂದ ಬಿಡಿಸಿ ಕಳಿಸುತ್ತಿದ್ದ ಇದೇ ಬೆರಕೆ ಪಕ್ಷದವರು ಬೇರೆ ರಾಜ್ಯಗಳಲ್ಲಿ ಇದಕ್ಕೆ ಉಲ್ಟಾ ಭಾಷಣಗಳನ್ನು ಬೊಗಳುತ್ತ ಚಿಲ್ರೆಕಾಸು ದುಡಿದು ಹೊಟ್ಟೆ ಹೊರೆಯುತ್ತಿದ್ದರು. ಅದೇನಾಯ್ತೋ ಏನೋ ಪಿಡಿಪಿ ಪಕ್ಷಕ್ಕೆ ಬ್ಲೂಜೆಪಿ ಜೊತೆಗಿನ ಕುಸುಕು ಮುಸುಕು ಪ್ರಣಯ ಸಾಕಾಗಿ ಬ್ಲೂಜೆಪಿಯನ್ನು ಸರ್ಕಾರದಿಂದ ಒದ್ದೋಡಿಸುವ ಪ್ರಯತ್ನದಲ್ಲಿತ್ತು. ಅಷ್ಟರಲ್ಲಿ ತನ್ನ ಲಂಗೋಟಿ-ಪುಟಗೋಸಿಯನ್ನು ಗಂಟು ಕಟ್ಟಿಕೊಂಡು ತಲೆ ಮೇಲೆ ಟವೆಲ್ಲು ಹಾಕಿಕೊಂಡ ಬ್ಲೂಜೆಪಿಯು ತಾನೇ ಸರ್ಕಾರದಿಂದ ಈಚೆಗೆ ಬರುತ್ತಿದ್ದೇನೆಂಬ ಡ್ರಾಮಾ ಆಡಿ ಮುಖ ಉಳಿಸಿಕೊಳ್ಳಲು ಪ್ರಯತ್ನಿಸಿದೆಯೆಂದು ಬಲ್ಲ ಮೂಲಗಳು ಬೊಂಬಡ ಹೊಡೆಯುತ್ತ ತಿಳಿಸಿವೆ.
****
ಪ್ರಸ್ತುತ ಮಾಟ-ಮಂತ್ರ ಕವಡೆಶಾಸ್ತ್ರ ತಜ್ಞರ ರಾಜ್ಯಮಟ್ಟದ ಸಮ್ಮೇಳನದಂತೆ ಕಾಣುತ್ತಿರುವ ಕರ್ನಾಟಕದ ‘ಮಿಕ್ಸ್ ಮಸಾಲ ಸರ್ಕಾರ’ದ ಕಡೆಯಿಂದ ಹೊಸ “ಮಮ್ಮಿ ಮೆಟ್ಟು” ವರದಿಯೊಂದು ಕುಪ್ಪಳಿಸುತ್ತ ಬಂದಿದೆ. ಪ್ರೈಮರಿಶಾಲೆಯ ಮಂತ್ರಿಯೊಬ್ಬರು ಮದನಪಲ್ಲಿ ಮೂಲದ ರೇಪಿಸ್ಟನೊಬ್ಬನ ಪತ್ನಿ ಹಾಗೂ ಮಾಜಿಸುಂದರಿ ಮತ್ತು ಹಾಲಿ “ಮಮ್ಮಿ ಭಗವಾನ್” ದೇವಿಯ ಮರದ ಎಕ್ಕಡಗಳನ್ನು ಸ್ಲೋಮೋಷನ್ನಿನಲ್ಲಿ ಮೈಗೆಲ್ಲ ಚರಚರನೆ ಸವರಿಕೊಂಡು ಪಠಾಪಠಾ ಹೊಡೆದುಕೊಂಡು ಆಶೀರ್ವಾದ ತೆಗೆದುಕೊಂಡ ಹಾಸ್ಯಾಸ್ಪದ ಸುದ್ದಿಯೊಂದು ಲಭ್ಯವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ಮಮ್ಮಿ ಭಗವಾನ್ ಭಕ್ತಮಂತ್ರಿಯ ಎಕ್ಕಡಸೇವೆಯ ವಿಡಿಯೋ ಕಡ್ಲೆಪುರಿಯಂತೆ ಖರ್ಚಾಗುತ್ತಿರುವುದು ರಾಜ್ಯದ ಪ್ರಾಥಮಿಕ ಶಾಲೆಯ ಪುಟ್ಟಮಕ್ಕಳಲ್ಲಿ ಗಾಬರಿ ಹುಟ್ಟಿಸಿದೆ. ಈ ಬಗ್ಗೆ ನಿಮ್ಮ ಒಪಿನಿಯನ್ ಏನೆಂದು ಕೇಳಿದಾಗ “ಓಟಿಗೋಸ್ಕರ ಹಿಂಗೆಲ್ಲ ಕಂಡೋರ ಎಕ್ಕಡವನ್ನು ಮತದಾರರ ಇಚ್ಛೆಯಂತೆ ಮೈಗೆಲ್ಲ ಸವರಿಕೊಳ್ಳಬೇಕಾಗ್ತದೆ” ಎಂದು ಸದರೀ ಮಮ್ಮಿ ಭಗವಾನ್ ಭಕ್ತಮಂತ್ರಿಯು ಆಲಾಪಿಸಿದೆ. ಓಟು ಕೊಡೋರು “ನಮ್ಮನೆ ಎಮ್ಮೆಸೆಗಣಿ ತಿನ್ನಿ, ಮೇಲ್ಜಾತಿ ಜನರ ಬೀದಿಯ ಚರಂಡಿನೀರು ತಗೊಂಡು ತಲೆಗೆ ಚಿಮುಕಿಸ್ಕೊಳಿ” ಅಂದ್ರೆ ಅದನ್ನೂ ಮಾಡ್ತೀರ ಸ್ವಾಮಿ? ಎಂದು ಕೇಳಿದಾಗ.. ಕಂಗಾಲಾದ ಭಕ್ತಮಂತ್ರಿಯು ಮುಳುಮುಳನೆ ಗೋಳಾಡುತ್ತ ತನ್ನ ಭಜನೆಭಕ್ತರೊಡನೆ ಇನ್ನೊಂದು “ಡ್ಯಾಡಿ ಭಗವಾನ್” ಮಠದತ್ತ ಬರಿಗಾಲಲ್ಲಿ ಓಡಿಹೋದ ಘಟನೆ ತಡವಾಗಿ ವರದಿಯಾಗಿದೆ.
****
ಹೊಟ್ಟೆಪಾಡಿಗೊಂದು ಕೆಲಸವೂ ಇಲ್ಲದೆ ತೆಂಗಿನಚಿಪ್ಪೊಂದನ್ನು ತಲೇ ಮೇಲಿಟ್ಟುಕೊಂಡು ಊರೂರಲ್ಲಿ ತಿರುಪೆಯೆತ್ತಿಕೊಂಡು ಅಂಡಲೆಯುತ್ತಿರುವ ‘ಪ್ರಬೋದ್ ಮೂತ್ರಲೀಕ್’ ಎಂಬ ವಯೋವೃದ್ಧ ಗುಳ್ಳೆನರಿಯು ಈ ಜನ್ಮದಲ್ಲಿ ಉದ್ದಾರವಾಗುವ ಲಕ್ಷಣಗಳು ಕಂಡು ಬರುತ್ತಿಲ್ಲವೆಂಬುದಕ್ಕೆ ಇತ್ತೀಚೆಗೆ ಮತ್ತೊಂದು ಸಾಕ್ಷಿ ದೊರಕಿದೆ. ಕರ್ನಾಟಕದಲ್ಲಿ ನಾಯಿ ಸತ್ತರೂ ಅದಕ್ಕೆ ಡ್ರಾಮಾಮಾಸ್ಟರ್ ಕುಂಡಾಲೇಂದ್ರ ರೆಸ್ಪಾಂಡ್ ಮಾಡಬೇಕೆ? ಎಂದು ಈ ಕೆಟ್ಟಮುಸುಡಿ ಗುಳ್ಳೆನರಿಯು ಊಳಿಟ್ಟಿದೆ. ಈ ಸುದ್ದಿ ಕೇಳಿದ ಹುಬ್ಬಳ್ಳಿಯ ಪಾನ್ ಬೀಡಾ ಅಂಗಡಿ ಓನರ್ ಸಿದ್ದಪ್ಪಶೆಟ್ಟಿಯವರು, “ಇವನ ಮನೆ ಹಾಳಾಗ, ಇದೆಲ್ಲಾ ಕಿಸಲಗೇಡಿ ಮಾತಾಡೋ ಈ ಮೂತ್ರಲೀಕ್, ಕಟಿಂಗ್ ಶೇವಿಂಗ್ ಮಾಡಿಸಿಕೊಳ್ಳಲು ನನ್ನ ಬಳಿ 300 ರುಪಾಯಿ ತೆಗೆದುಕೊಂಡು ತಲೆಮರೆಸಿಕೊಂಡು ತಿರುಗುತ್ತಿದ್ದಾನೆ, ಇವನನ್ನು ಕಂಡವರು ಇವನ ಕೈಕಾಲು ಕಟ್ಟಿ ಹತ್ತಿರದ ಪಾಳುಬಾವಿಯೊಂದರೊಳಗೆ ಎತ್ತಿಹಾಕಿ, ನನಗೊಂದು ಮಿಸ್ ಕಾಲ್ ಕೊಟ್ರೆ ಓಡಿ ಬಂದು ಮೂತ್ರಲೀಕ್ ಬಿದ್ದಿರುವ ಪಾಳುಬಾವಿಗೆ ಮುವ್ವತ್ತು ಮಂಕರಿ ತಿಪ್ಪೆಗೊಬ್ಬರ ಸುರಿಯುತ್ತೇನೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
****
ಕರ್ನಾಟಕ ಕಿಚಡಿ ಗೌರ್ಮೆಂಟಿನ ಚೀಫ್ ಮಂತ್ರಿಯಾಗಿರುವ ಕುಮಾರಣ್ಣನವರ ತಲೆ ಇತ್ತೀಚೆಗೆ ಕೆಟ್ಟು ಕೇಸರಿಬಾತ್ ಆಗಿರುವ ಲಕ್ಷಣಗಳು ಗೋಚರವಾಗುತ್ತಿವೆ. ಹಾವು ಮುಂಗುಸಿಗಳನ್ನು ಒಂದೇ ಮೂಟೆಯೊಳಗೆ ತುಂಬಿಟ್ಟಂತಾಗಿರುವ ಕಿಚಡಿ ಸರ್ಕಾರದಲ್ಲಿ ಕಂಡಕಂಡವರೆಲ್ಲ ಕುಮಾರಣ್ಣನ ನುಣುಪಾದ ತಲೆಗೆ ಟುಕು ಟುಕು ಕುಟ್ಟುತ್ತಿರುವುದರಿಂದ ರೋಸತ್ತು ಹೋಗಿರುವ ಮು.ಮಂ. ಅವರು ಇನ್ನುಮುಂದೆ ತಲೆಗೆ 25 ಕೇಜಿ ತೂಕದ ತಾಮ್ರದ ಹೆಲ್ಮೆಟ್ಟು ಧರಿಸಿಕೊಂಡು ಓಡಾಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಅತ್ತ ನಿಂಬೆಹಣ್ ತಜ್ಞ ಲೇವಣ್ಣ, ಇತ್ತ ಹೋಮಹವನ ಪಂಡಿತ ಪಲಮೇಶ್ವರ್, ಆ ಕಡೆ ಹೆಡ್ ಮೇಸ್ಟ್ರು ದೊಡ್ಡಗೌಡ್ರು, ಈ ಕಡೆ 24/7 ಗಢಾರಿ ಹಿಡಿದುಕೊಂಡೇ ಓಡಾಡೋ ಎಂ.ಬಿ. ಘಾಟೀಲ್, ಮತ್ತೊಂದು ಕಡೆ ಉದುರೋ ಕಡ್ಲೆಬೀಜ ಫಾಲೋ ಮಾಡ್ಕೊಂಡು ಹಿಂದಿಂದೆಯೇ ಸುತ್ತುತ್ತಿರೋ ಧಡಿಯೂರಪ್ಪ, ಇನ್ನೊಂದ್ಕಡೆ ಈ ಗೌರ್ಮೆಂಟ್ ಅದುರಿ ಅಲ್ಲಾಡಿ, ನೆಗರಿ ನಿಗುರಾಡಿ ಸರ್ವನಾಶ ಆಗಲಿ ಅಂತ ದಿನಬೆಳಗಾದರೆ ಕಯ್ಯಯ್ಯೋ ಅನ್ನೋ ‘ಆಲ್‍ರೈಟ್ ರಂಗ’ ಅಂಡ್ ಪಟಾಲಂನ ರಕ್ತಬೇಧಿಯ ಕಾಟ ತಡೆಯಲಾರದೆ ಕುಮಾರಣ್ಣ ಕಕ್ಕಾಬಿಕ್ಕಿಯಾಗಿ, ತಲೆಗೇರಿಸಿಕೊಂಡ ತಾಮ್ರದ ಹೆಲ್ಮೆಟ್ಟನ್ನು ಮಲಗೋವಾಗಲು ಸಹ ತೆಗೆಯದೆ ಸೇಫ್ಟಿಯಾಗಿದ್ದಾರೆಂದು ಅವರ ಕಾರ್ ಡ್ರೈವರ್ ಎಣ್ಣೆ ಏಟಿನಲ್ಲಿ ಬಾರ್ ಸಪ್ಲೈಯರ್ ಜೊತೆಗೆ ಚರ್ಚೆ ನಡೆಸಿದ್ದಾರೆಂದು ಗುಪ್ತದಳದ ಮೂಲಗಳು ತಿಳಿಸಿವೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ನಮ್ಮ ನಿಮ್ಮ ಬೇಟಿ ಮುಂದಿನವಾರ. ಅಲ್ಲೀತನಕ ನೀವೂ ನೆಮ್ದಿಯಾಗಿರಿ, ನಾವೂ ನೆಮ್ದಿಯಾಗಿರುತ್ತೇವೆ. ನಮಸ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...