Homeಅಂಕಣಗಳುಹನಿಮೂನ್ ಸಾಕು ತಗೋ ತಲಾಕು

ಹನಿಮೂನ್ ಸಾಕು ತಗೋ ತಲಾಕು

- Advertisement -
- Advertisement -

ಆಘಾತವಾಣಿ ವಾರ್ತೆಗಳು, ಕೇಳುಗರಿಗೆಲ್ಲ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ.

ಆಗಿದ್ದಾಗ್ಲಿ ಹೋಗಿದ್ದೋಗ್ಲಿ, ಆರು ಮೂರಾಗ್ಲಿ, ಮೂರು ಮುವ್ವತ್ತಾಗ್ಲಿ, ನಾನೂ ಕೆಲ್ಸ ಮಾಡಲ್ಲ, ಬೇರೇಯವ್ರಿಗೂ ಕೆಲ್ಸ ಮಾಡೋಕೆ ಬಿಡಲ್ಲ ಅಂತ ವೀರಪ್ರತಿಜ್ಞೆ ಮಾಡಿರೋ ಪಕೋಡೇಂದ್ರ ಕುಂಡಾಲಯ್ಯನ ಕಡೆಯಿಂದ ಹೊಸ ಸುದ್ದಿಯೊಂದು ಬಂದಿದೆ. ವರ್ಷಗಳ ಹಿಂದೆ ದೆಹಲಿ ಚುನಾವಣೆಯಲ್ಲಿ ಕೇಜ್ರಿವಾಲ್ ಪಕ್ಷದಿಂದ ಮಕಮೂತಿಗೆ ಇಕ್ಕಿಸಿಕೊಂಡು ಮಣ್ಣುಮುಕ್ಕಿದ್ದ ಪಕೋಡೇಂದ್ರರವರು ಕೇಜ್ರಿವಾಲ್ ತಲೆ ಮೇಲೆ ಲೆಫ್ಟಿನೆಂಟ್ ಗೌರ್ನರ್ ಎಂಬ ಶೋಕೇಸ್ ಪೀಸೊಂದನ್ನು ಕುಕ್ಕಿದ್ದನು. ಈ ಲಡಾಸಿ ಗೌರ್ನರ್ ದೆಹಲಿಯ ಐಎಎಸ್ ಅಧಿಕಾರಿಗಳ ತಲೆಸವರಿ ಒಳಕ್ಕೆಳೆದುಕೊಂಡು ತಾನಿರುವ ಸರ್ಕಾರದ ವಿರುದ್ಧವೇ ಸ್ಟ್ರೈಕು ಮಾಡಿಸಲು ಹಚ್ಚಿದ್ದಾರೆಂದು ಸುಪ್ತಚರ ಮೂಲಗಳಿಂದ ತಿಳಿದುಬಂದಿದೆ. ಇದಕ್ಕೆ ಪ್ರತಿಯಾಗಿ ಕೇಜ್ರಿವಾಲ್ ತಮ್ಮ ತಂಡದೊಂದಿಗೆ ಲೆಫ್ಟಿನೆಂಟ್ ಗೌರ್ನರ್ ಕಚೇರಿಯೊಳಗೇ ಮೊಕ್ಕಾಂ ಹೂಡಿ ಧರಣಿ ಕೂತು ವಾರ ಕಳೆದರೂ ಚೇಂಬರಿನಿಂದ ಹೊರಬರದೆ ಟೇಬಲ್ ಕೆಳಗೆ ಅವಿತು ಕುಳಿತಿದ್ದ ಆತನು ದೆಹಲಿಯ ಜನರು ಕೈಗೆ ಪ್ಯಾರಗಾನ್ ಚಡಾವು ಕಳಚಿಕೊಳ್ಳುತ್ತಿದ್ದಂತೆ ಆಫೀಸಿಂದ ಈಚೆ ಬಂದು ಕೇಜ್ರಿವಾಲ್ ಬೇಡಿಕೆಗಳಿಗೆ ಸೈನ್ ಹಾಕಿ ಮತ್ತೆ ಹೋಗಿ ಟೇಬಲ್ ಕೆಳಗೆ ಅವಿತುಕೊಂಡಿದ್ದಾನೆಂದು ವರದಿಯಾಗಿದೆ.
****
ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಶ್ಮೀರದಲ್ಲಿ ಮೂರು ಮುಕ್ಕಾಲು ಸೀಟು ಪಡೆದು ಕಾಶ್ಮೀರ ಪ್ರತ್ಯೇಕತಾವಾದಿ ಪಿಡಿಪಿ ಪಕ್ಷದ ಜೊತೆ ಸೇರಿ ಸರ್ಕಾರ ರಚಿಸಿದ್ದ ಬ್ಲೂಜೆಪಿ ಪಕ್ಷದ ವತಿಯಿಂದ ಹೊಸ ನ್ಯೂಸೊಂದು ಎಗರಿ ಬಂದಿದೆ. ಪುಡಿಪುಕ್ಕ ಸೀಟುಗಳನ್ನು ಕಂಕುಳಿಗಿಟ್ಟುಕೊಂಡು “ ಪ್ರೀತ್ಸೇ ಪ್ರೀತ್ಸೇ, ಮೂರೂ ಬಿಟ್ಟು ನನ್ನೇ ಪ್ರೀತ್ಸೇ” ಅಂತ ಈ ಕಡೆಯಿಂದ ಪಿಡಿಪಿ ಪಕ್ಷದ ಸೊಂಟ ಗಿಲ್ಲಿದಾಗ, ಆ ಕಡೆಯಿಂದ “ ಆಜಾ ಮೆರಿ ಗಾಡಿ ಮೇ ಬೈಟ್ ಜಾ, ಆಜಾ ಮೆರಿ ಗಾಡಿ ಮೇ ಬೈಟ್ ಜಾ” ಅನ್ನೋ ರೆಸ್ಪಾನ್ಸ್ ಬಂದಿತ್ತು. ನಂತ್ರ ಇಬ್ಬರೂ ಸೇರಿ ಕಾಶ್ಮೀರದಲ್ಲಿ ಕಲಬೆರಕೆ ಸರ್ಕಾರ ರಚಿಸಿ ಒಬ್ಬರ ಸೊಂಟ ಒಬ್ಬರು ಹಿಡಿದು “ ಬೆರಕೆ ಪ್ರೀತಿಯಲ್ಲಿ ಇರೋ ಸುಖ ಗೊತ್ತೇ ಇರಲಿಲ್ಲ, ಹೂ ಅಂತೀಯ, ಉಹೂ ಅಂತೀಯ” ಅಂತ ಡ್ಯಾನ್ಸ್ ಮಾಡ್ತಿದ್ದ ಎರಡೂ ಪಕ್ಷಗಳು ಈಗ ಮಕಮಕ ಪರಚಾಡಿಕೊಂಡು ದಿಢೀರ್ ಡೈವೋರ್ಸ್ ತಗೊಂಡಿವೆ.
****
ಈ ಢಮಾರ್ ಡೈವೋರ್ಸಿಗೆ ಕಾರಣಗಳೇನೆಂದು ಕೆದಕಿದಾಗ ಕುತೂಹಲಕಾರಿ ಕಿತಾಪತಿ ಮಾಹಿತಿಗಳು ನಮಗೆ ಲಭ್ಯವಾಗಿವೆ. ದೇಶದ ತುಂಬ ಕಾಶ್ಮೀರಿ ಟೆರರಿಸ್ಟ್‍ಗಳ ಬಗ್ಗೆ ಪುಯ್ಯೋ ಪುಯ್ಯೋ ಎಂದು ಪುಂಗಿ ಊದುವ ಬ್ಲೂಜೆಪಿ ಪಕ್ಷವು, ಈ ಪ್ರತ್ಯೇಕತಾವಾದಿಗಳ ಜೊತೆಗೆ ಕಾಶ್ಮೀರದಲ್ಲಿ ತಮ್ಮದೇ ಸರ್ಕಾರದಲ್ಲಿ ಕುಸುಕು ಮುಸುಕು ನಡೆಸುತ್ತಿದ್ದುದು ಎಲ್ಲರಿಗು ತಿಳಿದ ಸತ್ಯ. ಪೊಲೀಸರು-ಮಿಲಿಟರಿಯವರು ಅರೆಸ್ಟ್ ಮಾಡಿದ ಟೆರರಿಸ್ಟುಗಳ ಕೈಗೆ ಹೂಗುಚ್ಛ ಕೊಟ್ಟು ಜೈಲಿಂದ ಬಿಡಿಸಿ ಕಳಿಸುತ್ತಿದ್ದ ಇದೇ ಬೆರಕೆ ಪಕ್ಷದವರು ಬೇರೆ ರಾಜ್ಯಗಳಲ್ಲಿ ಇದಕ್ಕೆ ಉಲ್ಟಾ ಭಾಷಣಗಳನ್ನು ಬೊಗಳುತ್ತ ಚಿಲ್ರೆಕಾಸು ದುಡಿದು ಹೊಟ್ಟೆ ಹೊರೆಯುತ್ತಿದ್ದರು. ಅದೇನಾಯ್ತೋ ಏನೋ ಪಿಡಿಪಿ ಪಕ್ಷಕ್ಕೆ ಬ್ಲೂಜೆಪಿ ಜೊತೆಗಿನ ಕುಸುಕು ಮುಸುಕು ಪ್ರಣಯ ಸಾಕಾಗಿ ಬ್ಲೂಜೆಪಿಯನ್ನು ಸರ್ಕಾರದಿಂದ ಒದ್ದೋಡಿಸುವ ಪ್ರಯತ್ನದಲ್ಲಿತ್ತು. ಅಷ್ಟರಲ್ಲಿ ತನ್ನ ಲಂಗೋಟಿ-ಪುಟಗೋಸಿಯನ್ನು ಗಂಟು ಕಟ್ಟಿಕೊಂಡು ತಲೆ ಮೇಲೆ ಟವೆಲ್ಲು ಹಾಕಿಕೊಂಡ ಬ್ಲೂಜೆಪಿಯು ತಾನೇ ಸರ್ಕಾರದಿಂದ ಈಚೆಗೆ ಬರುತ್ತಿದ್ದೇನೆಂಬ ಡ್ರಾಮಾ ಆಡಿ ಮುಖ ಉಳಿಸಿಕೊಳ್ಳಲು ಪ್ರಯತ್ನಿಸಿದೆಯೆಂದು ಬಲ್ಲ ಮೂಲಗಳು ಬೊಂಬಡ ಹೊಡೆಯುತ್ತ ತಿಳಿಸಿವೆ.
****
ಪ್ರಸ್ತುತ ಮಾಟ-ಮಂತ್ರ ಕವಡೆಶಾಸ್ತ್ರ ತಜ್ಞರ ರಾಜ್ಯಮಟ್ಟದ ಸಮ್ಮೇಳನದಂತೆ ಕಾಣುತ್ತಿರುವ ಕರ್ನಾಟಕದ ‘ಮಿಕ್ಸ್ ಮಸಾಲ ಸರ್ಕಾರ’ದ ಕಡೆಯಿಂದ ಹೊಸ “ಮಮ್ಮಿ ಮೆಟ್ಟು” ವರದಿಯೊಂದು ಕುಪ್ಪಳಿಸುತ್ತ ಬಂದಿದೆ. ಪ್ರೈಮರಿಶಾಲೆಯ ಮಂತ್ರಿಯೊಬ್ಬರು ಮದನಪಲ್ಲಿ ಮೂಲದ ರೇಪಿಸ್ಟನೊಬ್ಬನ ಪತ್ನಿ ಹಾಗೂ ಮಾಜಿಸುಂದರಿ ಮತ್ತು ಹಾಲಿ “ಮಮ್ಮಿ ಭಗವಾನ್” ದೇವಿಯ ಮರದ ಎಕ್ಕಡಗಳನ್ನು ಸ್ಲೋಮೋಷನ್ನಿನಲ್ಲಿ ಮೈಗೆಲ್ಲ ಚರಚರನೆ ಸವರಿಕೊಂಡು ಪಠಾಪಠಾ ಹೊಡೆದುಕೊಂಡು ಆಶೀರ್ವಾದ ತೆಗೆದುಕೊಂಡ ಹಾಸ್ಯಾಸ್ಪದ ಸುದ್ದಿಯೊಂದು ಲಭ್ಯವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ಮಮ್ಮಿ ಭಗವಾನ್ ಭಕ್ತಮಂತ್ರಿಯ ಎಕ್ಕಡಸೇವೆಯ ವಿಡಿಯೋ ಕಡ್ಲೆಪುರಿಯಂತೆ ಖರ್ಚಾಗುತ್ತಿರುವುದು ರಾಜ್ಯದ ಪ್ರಾಥಮಿಕ ಶಾಲೆಯ ಪುಟ್ಟಮಕ್ಕಳಲ್ಲಿ ಗಾಬರಿ ಹುಟ್ಟಿಸಿದೆ. ಈ ಬಗ್ಗೆ ನಿಮ್ಮ ಒಪಿನಿಯನ್ ಏನೆಂದು ಕೇಳಿದಾಗ “ಓಟಿಗೋಸ್ಕರ ಹಿಂಗೆಲ್ಲ ಕಂಡೋರ ಎಕ್ಕಡವನ್ನು ಮತದಾರರ ಇಚ್ಛೆಯಂತೆ ಮೈಗೆಲ್ಲ ಸವರಿಕೊಳ್ಳಬೇಕಾಗ್ತದೆ” ಎಂದು ಸದರೀ ಮಮ್ಮಿ ಭಗವಾನ್ ಭಕ್ತಮಂತ್ರಿಯು ಆಲಾಪಿಸಿದೆ. ಓಟು ಕೊಡೋರು “ನಮ್ಮನೆ ಎಮ್ಮೆಸೆಗಣಿ ತಿನ್ನಿ, ಮೇಲ್ಜಾತಿ ಜನರ ಬೀದಿಯ ಚರಂಡಿನೀರು ತಗೊಂಡು ತಲೆಗೆ ಚಿಮುಕಿಸ್ಕೊಳಿ” ಅಂದ್ರೆ ಅದನ್ನೂ ಮಾಡ್ತೀರ ಸ್ವಾಮಿ? ಎಂದು ಕೇಳಿದಾಗ.. ಕಂಗಾಲಾದ ಭಕ್ತಮಂತ್ರಿಯು ಮುಳುಮುಳನೆ ಗೋಳಾಡುತ್ತ ತನ್ನ ಭಜನೆಭಕ್ತರೊಡನೆ ಇನ್ನೊಂದು “ಡ್ಯಾಡಿ ಭಗವಾನ್” ಮಠದತ್ತ ಬರಿಗಾಲಲ್ಲಿ ಓಡಿಹೋದ ಘಟನೆ ತಡವಾಗಿ ವರದಿಯಾಗಿದೆ.
****
ಹೊಟ್ಟೆಪಾಡಿಗೊಂದು ಕೆಲಸವೂ ಇಲ್ಲದೆ ತೆಂಗಿನಚಿಪ್ಪೊಂದನ್ನು ತಲೇ ಮೇಲಿಟ್ಟುಕೊಂಡು ಊರೂರಲ್ಲಿ ತಿರುಪೆಯೆತ್ತಿಕೊಂಡು ಅಂಡಲೆಯುತ್ತಿರುವ ‘ಪ್ರಬೋದ್ ಮೂತ್ರಲೀಕ್’ ಎಂಬ ವಯೋವೃದ್ಧ ಗುಳ್ಳೆನರಿಯು ಈ ಜನ್ಮದಲ್ಲಿ ಉದ್ದಾರವಾಗುವ ಲಕ್ಷಣಗಳು ಕಂಡು ಬರುತ್ತಿಲ್ಲವೆಂಬುದಕ್ಕೆ ಇತ್ತೀಚೆಗೆ ಮತ್ತೊಂದು ಸಾಕ್ಷಿ ದೊರಕಿದೆ. ಕರ್ನಾಟಕದಲ್ಲಿ ನಾಯಿ ಸತ್ತರೂ ಅದಕ್ಕೆ ಡ್ರಾಮಾಮಾಸ್ಟರ್ ಕುಂಡಾಲೇಂದ್ರ ರೆಸ್ಪಾಂಡ್ ಮಾಡಬೇಕೆ? ಎಂದು ಈ ಕೆಟ್ಟಮುಸುಡಿ ಗುಳ್ಳೆನರಿಯು ಊಳಿಟ್ಟಿದೆ. ಈ ಸುದ್ದಿ ಕೇಳಿದ ಹುಬ್ಬಳ್ಳಿಯ ಪಾನ್ ಬೀಡಾ ಅಂಗಡಿ ಓನರ್ ಸಿದ್ದಪ್ಪಶೆಟ್ಟಿಯವರು, “ಇವನ ಮನೆ ಹಾಳಾಗ, ಇದೆಲ್ಲಾ ಕಿಸಲಗೇಡಿ ಮಾತಾಡೋ ಈ ಮೂತ್ರಲೀಕ್, ಕಟಿಂಗ್ ಶೇವಿಂಗ್ ಮಾಡಿಸಿಕೊಳ್ಳಲು ನನ್ನ ಬಳಿ 300 ರುಪಾಯಿ ತೆಗೆದುಕೊಂಡು ತಲೆಮರೆಸಿಕೊಂಡು ತಿರುಗುತ್ತಿದ್ದಾನೆ, ಇವನನ್ನು ಕಂಡವರು ಇವನ ಕೈಕಾಲು ಕಟ್ಟಿ ಹತ್ತಿರದ ಪಾಳುಬಾವಿಯೊಂದರೊಳಗೆ ಎತ್ತಿಹಾಕಿ, ನನಗೊಂದು ಮಿಸ್ ಕಾಲ್ ಕೊಟ್ರೆ ಓಡಿ ಬಂದು ಮೂತ್ರಲೀಕ್ ಬಿದ್ದಿರುವ ಪಾಳುಬಾವಿಗೆ ಮುವ್ವತ್ತು ಮಂಕರಿ ತಿಪ್ಪೆಗೊಬ್ಬರ ಸುರಿಯುತ್ತೇನೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
****
ಕರ್ನಾಟಕ ಕಿಚಡಿ ಗೌರ್ಮೆಂಟಿನ ಚೀಫ್ ಮಂತ್ರಿಯಾಗಿರುವ ಕುಮಾರಣ್ಣನವರ ತಲೆ ಇತ್ತೀಚೆಗೆ ಕೆಟ್ಟು ಕೇಸರಿಬಾತ್ ಆಗಿರುವ ಲಕ್ಷಣಗಳು ಗೋಚರವಾಗುತ್ತಿವೆ. ಹಾವು ಮುಂಗುಸಿಗಳನ್ನು ಒಂದೇ ಮೂಟೆಯೊಳಗೆ ತುಂಬಿಟ್ಟಂತಾಗಿರುವ ಕಿಚಡಿ ಸರ್ಕಾರದಲ್ಲಿ ಕಂಡಕಂಡವರೆಲ್ಲ ಕುಮಾರಣ್ಣನ ನುಣುಪಾದ ತಲೆಗೆ ಟುಕು ಟುಕು ಕುಟ್ಟುತ್ತಿರುವುದರಿಂದ ರೋಸತ್ತು ಹೋಗಿರುವ ಮು.ಮಂ. ಅವರು ಇನ್ನುಮುಂದೆ ತಲೆಗೆ 25 ಕೇಜಿ ತೂಕದ ತಾಮ್ರದ ಹೆಲ್ಮೆಟ್ಟು ಧರಿಸಿಕೊಂಡು ಓಡಾಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಅತ್ತ ನಿಂಬೆಹಣ್ ತಜ್ಞ ಲೇವಣ್ಣ, ಇತ್ತ ಹೋಮಹವನ ಪಂಡಿತ ಪಲಮೇಶ್ವರ್, ಆ ಕಡೆ ಹೆಡ್ ಮೇಸ್ಟ್ರು ದೊಡ್ಡಗೌಡ್ರು, ಈ ಕಡೆ 24/7 ಗಢಾರಿ ಹಿಡಿದುಕೊಂಡೇ ಓಡಾಡೋ ಎಂ.ಬಿ. ಘಾಟೀಲ್, ಮತ್ತೊಂದು ಕಡೆ ಉದುರೋ ಕಡ್ಲೆಬೀಜ ಫಾಲೋ ಮಾಡ್ಕೊಂಡು ಹಿಂದಿಂದೆಯೇ ಸುತ್ತುತ್ತಿರೋ ಧಡಿಯೂರಪ್ಪ, ಇನ್ನೊಂದ್ಕಡೆ ಈ ಗೌರ್ಮೆಂಟ್ ಅದುರಿ ಅಲ್ಲಾಡಿ, ನೆಗರಿ ನಿಗುರಾಡಿ ಸರ್ವನಾಶ ಆಗಲಿ ಅಂತ ದಿನಬೆಳಗಾದರೆ ಕಯ್ಯಯ್ಯೋ ಅನ್ನೋ ‘ಆಲ್‍ರೈಟ್ ರಂಗ’ ಅಂಡ್ ಪಟಾಲಂನ ರಕ್ತಬೇಧಿಯ ಕಾಟ ತಡೆಯಲಾರದೆ ಕುಮಾರಣ್ಣ ಕಕ್ಕಾಬಿಕ್ಕಿಯಾಗಿ, ತಲೆಗೇರಿಸಿಕೊಂಡ ತಾಮ್ರದ ಹೆಲ್ಮೆಟ್ಟನ್ನು ಮಲಗೋವಾಗಲು ಸಹ ತೆಗೆಯದೆ ಸೇಫ್ಟಿಯಾಗಿದ್ದಾರೆಂದು ಅವರ ಕಾರ್ ಡ್ರೈವರ್ ಎಣ್ಣೆ ಏಟಿನಲ್ಲಿ ಬಾರ್ ಸಪ್ಲೈಯರ್ ಜೊತೆಗೆ ಚರ್ಚೆ ನಡೆಸಿದ್ದಾರೆಂದು ಗುಪ್ತದಳದ ಮೂಲಗಳು ತಿಳಿಸಿವೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ನಮ್ಮ ನಿಮ್ಮ ಬೇಟಿ ಮುಂದಿನವಾರ. ಅಲ್ಲೀತನಕ ನೀವೂ ನೆಮ್ದಿಯಾಗಿರಿ, ನಾವೂ ನೆಮ್ದಿಯಾಗಿರುತ್ತೇವೆ. ನಮಸ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...