HomeUncategorizedಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: '800' ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ಮುತ್ತಯ್ಯ ಮುರುಳೀದರನ್ ಒಬ್ಬ ಕ್ರೀಡಾಪಟು. ಆತ ರಾಜಕಾರಣಿಯಲ್ಲ. ಅವರ ಯಾವುದೋ ಹೇಳಿಕೆಯನ್ನೇ ಕಾರಣ ಮಾಡಿಕೊಂಡು ಈ ಚಿತ್ರವನ್ನು ಮತ್ತು ಇಲ್ಲಿ ನಟಿಸುತ್ತಿರುವವರನ್ನು ಟೀಕಿಸುವುದು ಸರಿಯಲ್ಲ ಎಂದು ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಖ್ಯಾತ ಕ್ರಿಕೆಟ್ ಬೌಲರ್ ಶ್ರೀಲಂಕಾದ ಮುತ್ತಯ್ಯ ಮುರುಳೀಧರನ್ ಅವರ ಜೀವನಚರಿತ್ರೆ ಆಧಾರಿತ ಚಲನಚಿತ್ರ “800” ನಿರ್ಮಾಣವಾಗುತ್ತಿದ್ದು, ತಮಿಳಿನ ಪ್ರತಿಭಾವಂತ ನಟ ವಿಜಯ್ ಸೇತುಪತಿ ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದು ವಿಜಯ್ ಸೇತುಪತಿ ಮತ್ತು ಮುತ್ತಯ್ಯ ಮುರುಳೀಧರನ್ ಅಭಿಮಾನಿಗಳ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಆದರೆ ಇದರ ನಡುವೆಯೇ ಕೆಲವರು ಇದನ್ನು ವಿರೋಧಿಸಿ, ವಿಜಯ್ ಸೇತುಪತಿ ಈ ಸಿನಿಮಾವನ್ನು ಒಪ್ಪಿಕೊಂಡಿರುವುದಕ್ಕೆ, ಅವರನ್ನು ಮತ್ತು ಈ ಸಿನಿಮಾವನ್ನು ಬಹಿಷ್ಕರಿಸಬೇಕು ಎಂಬ ಅಭಿಯಾನವನ್ನು ಕೈಗೊಂಡಿದ್ದಾರೆ.

ನಿನ್ನೆ 800 ಚಿತ್ರದ ಫಸ್ಟ್‌ಲುಕ್ ಬಿಡುಗಡೆಯಾಗಿದ್ದು, ಇದಕ್ಕೆ ಸಾಕಷ್ಟು ಮೆಚ್ಚುಗೆಯೂ ವ್ಯಕ್ತವಾಗುತ್ತಿದೆ. ಇದನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಇದ್ದಕ್ಕಿದ್ದಂತೆ ಸಾಧ್ಯವಿಲ್ಲ: ’ಬಾಯ್ಕಾಟ್ ಚೀನಾ’ ಅಭಿಯಾನಕ್ಕೆ ಕ್ರೀಡಾ ಕ್ಷೇತ್ರದ ವಿರೋಧವೇಕೆ?

ಇದಕ್ಕೆ ಸಂಬಂಧಿಸಿದಂತೆ ಟ್ವಿಟ್ಟರ್‌ನಲ್ಲಿ #ShameOnVijaySethupathi ಟ್ರೆಂಡಿಂಗ್ ಆಗುತ್ತಿದ್ದು, ಇದಕ್ಕೆ ತದ್ವಿರುದ್ಧವಾಗಿ ಹಲವಾರು ಜನರು #WeSupportVijaySethupathi ಎಂದು ನಟನ ಪರವಾಗಿ ದನಿಯೆತ್ತಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಇದರ ಕುರಿತು ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ.

“ಬ್ರಿಟಿಷರ ವಿರುದ್ಧ ತೀವ್ರ ಹೋರಾಟ ಮಾಡಿದ ಗಾಂಧಿಯವರ ಚಿತ್ರವನ್ನು ಹಾಲಿವುಡ್‌ನಲ್ಲಿ ನಿರ್ಮಿಸಲಾಗಿದೆ. ಅದಕ್ಕಿಲ್ಲದ ವಿರೋಧ ಈ ಚಿತ್ರಕ್ಕೆ ಯಾಕೆ ಎಂದು ಕೆಲವರು ಪ್ರಶ್ನಿಸಿದ್ದಾರೆ. ಶ್ರೀಲಂಕಾದ ರಾವಣನ ಪಾತ್ರವನ್ನು ಭಾರತದಲ್ಲಿ ಅನೇಕರು ಅಭಿನಯಿಸಿದ್ದಾರೆ. ಅಂದ ಮಾತ್ರಕ್ಕೆ ಅವರ ಚಿತ್ರವನ್ನು ಅಥವಾ ನಟನನ್ನು ಬಹಿಷ್ಕರಿಸಲು ಸಾಧ್ಯವೇ? ವಿಜಯ್ ಸೇತುಪತಿ ಒಬ್ಬ ನಟ ಅಷ್ಟೆ. ಆತನಿಗೆ ಎಲ್ಲಾ ಪಾತ್ರಗಳನ್ನೂ ಅಭಿನಯಿಸಲು ಸ್ವಾತಂತ್ರವಿದೆ. ಅದು ಕೇವಲ ಪಾತ್ರವಷ್ಟೆ” ಎಂದು ಇನ್ನೂ ಕೆಲವರು ವಿಜಯ್ ಸೇತುಪತಿ ಪರವಾಗಿ ಮಾತನಾಡಿದ್ದಾರೆ.

ಮುತ್ತಯ್ಯ ಮುರುಳೀಧರನ್ ಒಬ್ಬ ಕ್ರೀಡಾಪಟು. ಆತ ರಾಜಕಾರಣಿಯಲ್ಲ. ಅವರ ಯಾವುದೋ ಹೇಳಿಕೆಯನ್ನೇ ಕಾರಣ ಮಾಡಿಕೊಂಡು ಈ ಚಿತ್ರವನ್ನು ಮತ್ತು ಇಲ್ಲಿ ನಟಿಸುತ್ತಿರುವವರನ್ನು ಟೀಕಿಸುವುದು ಸರಿಯಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಅದಾಗ್ಯೂ, ಈ ಚಿತ್ರಕ್ಕೆ ವಿರೋಧ ವ್ಯಕ್ತವಾಗುತ್ತಿರುವುದೇಕೆ? ವಿಜಯ್ ಸೇತುಪತಿ ಮತ್ತು ಸಿನಿಮಾವನ್ನು ಬಹಿಷ್ಕರಿಸುವಂತೆ ಕರೆ ನೀಡುತ್ತಿರುವುದೇಕೆ? ಇದರ ಹಿಂದಿನ ರಾಜಕೀಯ ಏನಿರಬಹುದು?

ಇದನ್ನೂ ಓದಿ:“ದಿ ಕಪಿಲ್‌ ಶರ್ಮಾ ಶೋ” ಬಾಯ್ಕಾಟ್: ಸಿಡಿದೆದ್ದ ಅರ್ನಾಬ್ ಅಭಿಮಾನಿಗಳು?

ಮುತ್ತಯ್ಯ ಮುರುಳೀಧರನ್ ಮೂಲತಃ ತಮಿಳು ಮಾತನಾಡುವ ಶ್ರೀಲಂಕಾದವರಾಗಿದ್ದು, ಕ್ರಿಕೆಟ್‌ನಲ್ಲಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ಆಫ್ ಸ್ಪಿನ್ ಬೌಲಿಂಗ್‌ ಮಾಡುವುದರಲ್ಲಿ ಯಶಸ್ವಿ ಆಟಗಾರರಾಗಿದ್ದಾರೆ. 1996ರಲ್ಲಿ ಶ್ರೀಲಂಕಾ ವಿಶ್ವಕಪ್ ಗೆದ್ದಾಗ ಆ ತಂಡದಲ್ಲಿದ್ದರು. ಟೆಸ್ಟ್‌ ಪಂದ್ಯದಲ್ಲಿ ಅತ್ಯಂತ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಮುತ್ತುಯ್ಯ 2ನೇ ಸ್ಥಾನದಲ್ಲಿದ್ದಾರೆ. 2010ರಲ್ಲಿ ನಡೆದ ಐಪಿಎಲ್ 3ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಪರವಾಗಿ ಆಡಿದ್ದರು. ಆಗ ಚೆನ್ನೈ ಐಪಿಎಲ್‌ ಚಾಂಪಿಯನ್‌ಶಿಪ್ ಪಡೆದುಕೊಂಡಿತ್ತು. ಇಷ್ಟೇ ಅಲ್ಲದೇ ಕ್ರಿಕೆಟ್ ಇತಿಹಾಸದ ದಂತಕಥೆ ಎಂದೇ ಪ್ರಸಿದ್ಧವಾಗಿದ್ದಾರೆ.

ಇಷ್ಟೆಲ್ಲಾ ಕಾರಣಗಳಿದ್ದಾಗ್ಯೂ ತಮಿಳರು ಮುತ್ತಯ್ಯನನ್ನು ವಿರೋಧಿಸುತ್ತಿರುವುದೇಕೆ? ಮುತ್ತಯ್ಯ ಸ್ವತಃ ಶ್ರೀಲಂಕದವರಾಗಿರುವುದರಿಂದ, ತಮಿಳುನಾಡು ಮತ್ತು ಶ್ರೀಲಂಕಾ ನಡುವೆ ಹಲವು ರಾಜಕೀಯ ಬಿಕ್ಕಟ್ಟುಗಳಿರುವುದರಿಂದ ತಮಿಳರು ಈ ಚಿತ್ರವನ್ನು ಬಹಿಷ್ಕರಿಸುತ್ತಿರಬಹುದೇ?

ಇದನ್ನೂ ಓದಿ: ಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ಟ್ವಿಟ್ಟರ್‌ನಲ್ಲಿ ಮುತ್ತಯ್ಯ ಅವರು ಮಾತನಾಡಿರುವ ಹಳೆಯ ವೀಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದ್ದು, ಅದರಲ್ಲಿ 2009ರ ಶ್ರೀಲಂಕಾದ ಯುದ್ಧ ಮುಗಿದ ದಿನವನ್ನು ತನ್ನ ಜೀವನದಲ್ಲಿ ಪ್ರಮುಖವಾದ ದಿನ ಎಂದು ಹೇಳಿಕೊಂಡಿದ್ದಾರೆ. ಮತ್ತೊಂದು ವೀಡಿಯೋದಲ್ಲಿ, “ಮೊದಲು ನಾನು ಶ್ರೀಲಂಕಾದ ಪ್ರಜೆ, ನಂತರ ತಮಿಳಿನವನು” ಎಂದು ಹೇಳಿದ್ದಾರೆ. ಜೊತೆಗೆ ಮತ್ತೊಂದು ಸಂದರ್ಶನದಲ್ಲಿ ಗೊಟಬಯ ರಾಜಪಕ್ಷೆ ಅವರ ಪರವಾಗಿ ಮುತ್ತಯ್ಯ ಮಾತನಾಡಿದ್ದು, ತಮ್ಮ ರಾಜಕೀಯ ಲಾಭಕ್ಕಾಗಿ ಶ್ರೀಲಂಕಾದಲ್ಲಿ ತಮಿಳರ ಮೇಲೆ ನಡೆದಿದ್ದ ಹತ್ಯಾಕಾಂಡವನ್ನು ಸಮರ್ಥಿಸಿಕೊಳ್ಳುವಂತೆ ಮಾತನಾಡಿದ್ದಾರೆ ಎಂದು ಹಲವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಐಡಿಸಿ ಸರ್ವೇ: ಭಾರತಕ್ಕೆ ರಫ್ತಾದ 3.25 ಕೋಟಿ ಸ್ಮಾರ್ಟ್‌ಫೋನ್‌ಗಳಲ್ಲಿ 76% ಚೀನಾದವು!

ಈ ಹಿಂದೆ ಸಲ್ಮಾನ್ ಖಾನ್ ನಟಿಸಿದ್ದ ಭಜರಂಗಿ ಭಾಯ್‌ಜಾನ್ ಚಿತ್ರದಲ್ಲಿ ಮುಸ್ಲಿಂ ಒಬ್ಬ ಆಂಜನೇಯನ ಭಕ್ತನ ಪಾತ್ರ ಮಾಡಿದ್ದಕ್ಕೆ ಆ ಚಿತ್ರವನ್ನು ಬಹಿಷ್ಕರಿಸಬೇಕು ಎಂಬ ಕೂಗೆದ್ದಿತ್ತು. ವಿಶೇಷವೆಂದರೆ ಈ ರೀತಿ ವಿವಾದ ಸೃಷ್ಟಿಸುವುದರಿಂದ ಆ ಸಿನಿಮಾಗಳು ಮತ್ತಷ್ಟು ಚೆನ್ನಾಗಿಯೇ ಪ್ರದರ್ಶನಗೊಳ್ಳುತ್ತವೆ.


ಇದನ್ನೂ ಓದಿ: ಮತ್ತೊಂದು ಧೋಕ್‍ಲಾಂ ಆಗಲಿದೆಯೇ ಲಡಾಖ್‍ನ ಗಾಲ್ವನ್ ಕಣಿವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...