HomeUncategorizedಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: '800' ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ಮುತ್ತಯ್ಯ ಮುರುಳೀದರನ್ ಒಬ್ಬ ಕ್ರೀಡಾಪಟು. ಆತ ರಾಜಕಾರಣಿಯಲ್ಲ. ಅವರ ಯಾವುದೋ ಹೇಳಿಕೆಯನ್ನೇ ಕಾರಣ ಮಾಡಿಕೊಂಡು ಈ ಚಿತ್ರವನ್ನು ಮತ್ತು ಇಲ್ಲಿ ನಟಿಸುತ್ತಿರುವವರನ್ನು ಟೀಕಿಸುವುದು ಸರಿಯಲ್ಲ ಎಂದು ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಖ್ಯಾತ ಕ್ರಿಕೆಟ್ ಬೌಲರ್ ಶ್ರೀಲಂಕಾದ ಮುತ್ತಯ್ಯ ಮುರುಳೀಧರನ್ ಅವರ ಜೀವನಚರಿತ್ರೆ ಆಧಾರಿತ ಚಲನಚಿತ್ರ “800” ನಿರ್ಮಾಣವಾಗುತ್ತಿದ್ದು, ತಮಿಳಿನ ಪ್ರತಿಭಾವಂತ ನಟ ವಿಜಯ್ ಸೇತುಪತಿ ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದು ವಿಜಯ್ ಸೇತುಪತಿ ಮತ್ತು ಮುತ್ತಯ್ಯ ಮುರುಳೀಧರನ್ ಅಭಿಮಾನಿಗಳ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಆದರೆ ಇದರ ನಡುವೆಯೇ ಕೆಲವರು ಇದನ್ನು ವಿರೋಧಿಸಿ, ವಿಜಯ್ ಸೇತುಪತಿ ಈ ಸಿನಿಮಾವನ್ನು ಒಪ್ಪಿಕೊಂಡಿರುವುದಕ್ಕೆ, ಅವರನ್ನು ಮತ್ತು ಈ ಸಿನಿಮಾವನ್ನು ಬಹಿಷ್ಕರಿಸಬೇಕು ಎಂಬ ಅಭಿಯಾನವನ್ನು ಕೈಗೊಂಡಿದ್ದಾರೆ.

ನಿನ್ನೆ 800 ಚಿತ್ರದ ಫಸ್ಟ್‌ಲುಕ್ ಬಿಡುಗಡೆಯಾಗಿದ್ದು, ಇದಕ್ಕೆ ಸಾಕಷ್ಟು ಮೆಚ್ಚುಗೆಯೂ ವ್ಯಕ್ತವಾಗುತ್ತಿದೆ. ಇದನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಇದ್ದಕ್ಕಿದ್ದಂತೆ ಸಾಧ್ಯವಿಲ್ಲ: ’ಬಾಯ್ಕಾಟ್ ಚೀನಾ’ ಅಭಿಯಾನಕ್ಕೆ ಕ್ರೀಡಾ ಕ್ಷೇತ್ರದ ವಿರೋಧವೇಕೆ?

ಇದಕ್ಕೆ ಸಂಬಂಧಿಸಿದಂತೆ ಟ್ವಿಟ್ಟರ್‌ನಲ್ಲಿ #ShameOnVijaySethupathi ಟ್ರೆಂಡಿಂಗ್ ಆಗುತ್ತಿದ್ದು, ಇದಕ್ಕೆ ತದ್ವಿರುದ್ಧವಾಗಿ ಹಲವಾರು ಜನರು #WeSupportVijaySethupathi ಎಂದು ನಟನ ಪರವಾಗಿ ದನಿಯೆತ್ತಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಇದರ ಕುರಿತು ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ.

“ಬ್ರಿಟಿಷರ ವಿರುದ್ಧ ತೀವ್ರ ಹೋರಾಟ ಮಾಡಿದ ಗಾಂಧಿಯವರ ಚಿತ್ರವನ್ನು ಹಾಲಿವುಡ್‌ನಲ್ಲಿ ನಿರ್ಮಿಸಲಾಗಿದೆ. ಅದಕ್ಕಿಲ್ಲದ ವಿರೋಧ ಈ ಚಿತ್ರಕ್ಕೆ ಯಾಕೆ ಎಂದು ಕೆಲವರು ಪ್ರಶ್ನಿಸಿದ್ದಾರೆ. ಶ್ರೀಲಂಕಾದ ರಾವಣನ ಪಾತ್ರವನ್ನು ಭಾರತದಲ್ಲಿ ಅನೇಕರು ಅಭಿನಯಿಸಿದ್ದಾರೆ. ಅಂದ ಮಾತ್ರಕ್ಕೆ ಅವರ ಚಿತ್ರವನ್ನು ಅಥವಾ ನಟನನ್ನು ಬಹಿಷ್ಕರಿಸಲು ಸಾಧ್ಯವೇ? ವಿಜಯ್ ಸೇತುಪತಿ ಒಬ್ಬ ನಟ ಅಷ್ಟೆ. ಆತನಿಗೆ ಎಲ್ಲಾ ಪಾತ್ರಗಳನ್ನೂ ಅಭಿನಯಿಸಲು ಸ್ವಾತಂತ್ರವಿದೆ. ಅದು ಕೇವಲ ಪಾತ್ರವಷ್ಟೆ” ಎಂದು ಇನ್ನೂ ಕೆಲವರು ವಿಜಯ್ ಸೇತುಪತಿ ಪರವಾಗಿ ಮಾತನಾಡಿದ್ದಾರೆ.

ಮುತ್ತಯ್ಯ ಮುರುಳೀಧರನ್ ಒಬ್ಬ ಕ್ರೀಡಾಪಟು. ಆತ ರಾಜಕಾರಣಿಯಲ್ಲ. ಅವರ ಯಾವುದೋ ಹೇಳಿಕೆಯನ್ನೇ ಕಾರಣ ಮಾಡಿಕೊಂಡು ಈ ಚಿತ್ರವನ್ನು ಮತ್ತು ಇಲ್ಲಿ ನಟಿಸುತ್ತಿರುವವರನ್ನು ಟೀಕಿಸುವುದು ಸರಿಯಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಅದಾಗ್ಯೂ, ಈ ಚಿತ್ರಕ್ಕೆ ವಿರೋಧ ವ್ಯಕ್ತವಾಗುತ್ತಿರುವುದೇಕೆ? ವಿಜಯ್ ಸೇತುಪತಿ ಮತ್ತು ಸಿನಿಮಾವನ್ನು ಬಹಿಷ್ಕರಿಸುವಂತೆ ಕರೆ ನೀಡುತ್ತಿರುವುದೇಕೆ? ಇದರ ಹಿಂದಿನ ರಾಜಕೀಯ ಏನಿರಬಹುದು?

ಇದನ್ನೂ ಓದಿ:“ದಿ ಕಪಿಲ್‌ ಶರ್ಮಾ ಶೋ” ಬಾಯ್ಕಾಟ್: ಸಿಡಿದೆದ್ದ ಅರ್ನಾಬ್ ಅಭಿಮಾನಿಗಳು?

ಮುತ್ತಯ್ಯ ಮುರುಳೀಧರನ್ ಮೂಲತಃ ತಮಿಳು ಮಾತನಾಡುವ ಶ್ರೀಲಂಕಾದವರಾಗಿದ್ದು, ಕ್ರಿಕೆಟ್‌ನಲ್ಲಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ಆಫ್ ಸ್ಪಿನ್ ಬೌಲಿಂಗ್‌ ಮಾಡುವುದರಲ್ಲಿ ಯಶಸ್ವಿ ಆಟಗಾರರಾಗಿದ್ದಾರೆ. 1996ರಲ್ಲಿ ಶ್ರೀಲಂಕಾ ವಿಶ್ವಕಪ್ ಗೆದ್ದಾಗ ಆ ತಂಡದಲ್ಲಿದ್ದರು. ಟೆಸ್ಟ್‌ ಪಂದ್ಯದಲ್ಲಿ ಅತ್ಯಂತ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಮುತ್ತುಯ್ಯ 2ನೇ ಸ್ಥಾನದಲ್ಲಿದ್ದಾರೆ. 2010ರಲ್ಲಿ ನಡೆದ ಐಪಿಎಲ್ 3ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಪರವಾಗಿ ಆಡಿದ್ದರು. ಆಗ ಚೆನ್ನೈ ಐಪಿಎಲ್‌ ಚಾಂಪಿಯನ್‌ಶಿಪ್ ಪಡೆದುಕೊಂಡಿತ್ತು. ಇಷ್ಟೇ ಅಲ್ಲದೇ ಕ್ರಿಕೆಟ್ ಇತಿಹಾಸದ ದಂತಕಥೆ ಎಂದೇ ಪ್ರಸಿದ್ಧವಾಗಿದ್ದಾರೆ.

ಇಷ್ಟೆಲ್ಲಾ ಕಾರಣಗಳಿದ್ದಾಗ್ಯೂ ತಮಿಳರು ಮುತ್ತಯ್ಯನನ್ನು ವಿರೋಧಿಸುತ್ತಿರುವುದೇಕೆ? ಮುತ್ತಯ್ಯ ಸ್ವತಃ ಶ್ರೀಲಂಕದವರಾಗಿರುವುದರಿಂದ, ತಮಿಳುನಾಡು ಮತ್ತು ಶ್ರೀಲಂಕಾ ನಡುವೆ ಹಲವು ರಾಜಕೀಯ ಬಿಕ್ಕಟ್ಟುಗಳಿರುವುದರಿಂದ ತಮಿಳರು ಈ ಚಿತ್ರವನ್ನು ಬಹಿಷ್ಕರಿಸುತ್ತಿರಬಹುದೇ?

ಇದನ್ನೂ ಓದಿ: ಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ಟ್ವಿಟ್ಟರ್‌ನಲ್ಲಿ ಮುತ್ತಯ್ಯ ಅವರು ಮಾತನಾಡಿರುವ ಹಳೆಯ ವೀಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದ್ದು, ಅದರಲ್ಲಿ 2009ರ ಶ್ರೀಲಂಕಾದ ಯುದ್ಧ ಮುಗಿದ ದಿನವನ್ನು ತನ್ನ ಜೀವನದಲ್ಲಿ ಪ್ರಮುಖವಾದ ದಿನ ಎಂದು ಹೇಳಿಕೊಂಡಿದ್ದಾರೆ. ಮತ್ತೊಂದು ವೀಡಿಯೋದಲ್ಲಿ, “ಮೊದಲು ನಾನು ಶ್ರೀಲಂಕಾದ ಪ್ರಜೆ, ನಂತರ ತಮಿಳಿನವನು” ಎಂದು ಹೇಳಿದ್ದಾರೆ. ಜೊತೆಗೆ ಮತ್ತೊಂದು ಸಂದರ್ಶನದಲ್ಲಿ ಗೊಟಬಯ ರಾಜಪಕ್ಷೆ ಅವರ ಪರವಾಗಿ ಮುತ್ತಯ್ಯ ಮಾತನಾಡಿದ್ದು, ತಮ್ಮ ರಾಜಕೀಯ ಲಾಭಕ್ಕಾಗಿ ಶ್ರೀಲಂಕಾದಲ್ಲಿ ತಮಿಳರ ಮೇಲೆ ನಡೆದಿದ್ದ ಹತ್ಯಾಕಾಂಡವನ್ನು ಸಮರ್ಥಿಸಿಕೊಳ್ಳುವಂತೆ ಮಾತನಾಡಿದ್ದಾರೆ ಎಂದು ಹಲವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಐಡಿಸಿ ಸರ್ವೇ: ಭಾರತಕ್ಕೆ ರಫ್ತಾದ 3.25 ಕೋಟಿ ಸ್ಮಾರ್ಟ್‌ಫೋನ್‌ಗಳಲ್ಲಿ 76% ಚೀನಾದವು!

ಈ ಹಿಂದೆ ಸಲ್ಮಾನ್ ಖಾನ್ ನಟಿಸಿದ್ದ ಭಜರಂಗಿ ಭಾಯ್‌ಜಾನ್ ಚಿತ್ರದಲ್ಲಿ ಮುಸ್ಲಿಂ ಒಬ್ಬ ಆಂಜನೇಯನ ಭಕ್ತನ ಪಾತ್ರ ಮಾಡಿದ್ದಕ್ಕೆ ಆ ಚಿತ್ರವನ್ನು ಬಹಿಷ್ಕರಿಸಬೇಕು ಎಂಬ ಕೂಗೆದ್ದಿತ್ತು. ವಿಶೇಷವೆಂದರೆ ಈ ರೀತಿ ವಿವಾದ ಸೃಷ್ಟಿಸುವುದರಿಂದ ಆ ಸಿನಿಮಾಗಳು ಮತ್ತಷ್ಟು ಚೆನ್ನಾಗಿಯೇ ಪ್ರದರ್ಶನಗೊಳ್ಳುತ್ತವೆ.


ಇದನ್ನೂ ಓದಿ: ಮತ್ತೊಂದು ಧೋಕ್‍ಲಾಂ ಆಗಲಿದೆಯೇ ಲಡಾಖ್‍ನ ಗಾಲ್ವನ್ ಕಣಿವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...