HomeUncategorizedಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: '800' ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ಮುತ್ತಯ್ಯ ಮುರುಳೀದರನ್ ಒಬ್ಬ ಕ್ರೀಡಾಪಟು. ಆತ ರಾಜಕಾರಣಿಯಲ್ಲ. ಅವರ ಯಾವುದೋ ಹೇಳಿಕೆಯನ್ನೇ ಕಾರಣ ಮಾಡಿಕೊಂಡು ಈ ಚಿತ್ರವನ್ನು ಮತ್ತು ಇಲ್ಲಿ ನಟಿಸುತ್ತಿರುವವರನ್ನು ಟೀಕಿಸುವುದು ಸರಿಯಲ್ಲ ಎಂದು ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಖ್ಯಾತ ಕ್ರಿಕೆಟ್ ಬೌಲರ್ ಶ್ರೀಲಂಕಾದ ಮುತ್ತಯ್ಯ ಮುರುಳೀಧರನ್ ಅವರ ಜೀವನಚರಿತ್ರೆ ಆಧಾರಿತ ಚಲನಚಿತ್ರ “800” ನಿರ್ಮಾಣವಾಗುತ್ತಿದ್ದು, ತಮಿಳಿನ ಪ್ರತಿಭಾವಂತ ನಟ ವಿಜಯ್ ಸೇತುಪತಿ ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದು ವಿಜಯ್ ಸೇತುಪತಿ ಮತ್ತು ಮುತ್ತಯ್ಯ ಮುರುಳೀಧರನ್ ಅಭಿಮಾನಿಗಳ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಆದರೆ ಇದರ ನಡುವೆಯೇ ಕೆಲವರು ಇದನ್ನು ವಿರೋಧಿಸಿ, ವಿಜಯ್ ಸೇತುಪತಿ ಈ ಸಿನಿಮಾವನ್ನು ಒಪ್ಪಿಕೊಂಡಿರುವುದಕ್ಕೆ, ಅವರನ್ನು ಮತ್ತು ಈ ಸಿನಿಮಾವನ್ನು ಬಹಿಷ್ಕರಿಸಬೇಕು ಎಂಬ ಅಭಿಯಾನವನ್ನು ಕೈಗೊಂಡಿದ್ದಾರೆ.

ನಿನ್ನೆ 800 ಚಿತ್ರದ ಫಸ್ಟ್‌ಲುಕ್ ಬಿಡುಗಡೆಯಾಗಿದ್ದು, ಇದಕ್ಕೆ ಸಾಕಷ್ಟು ಮೆಚ್ಚುಗೆಯೂ ವ್ಯಕ್ತವಾಗುತ್ತಿದೆ. ಇದನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಇದ್ದಕ್ಕಿದ್ದಂತೆ ಸಾಧ್ಯವಿಲ್ಲ: ’ಬಾಯ್ಕಾಟ್ ಚೀನಾ’ ಅಭಿಯಾನಕ್ಕೆ ಕ್ರೀಡಾ ಕ್ಷೇತ್ರದ ವಿರೋಧವೇಕೆ?

ಇದಕ್ಕೆ ಸಂಬಂಧಿಸಿದಂತೆ ಟ್ವಿಟ್ಟರ್‌ನಲ್ಲಿ #ShameOnVijaySethupathi ಟ್ರೆಂಡಿಂಗ್ ಆಗುತ್ತಿದ್ದು, ಇದಕ್ಕೆ ತದ್ವಿರುದ್ಧವಾಗಿ ಹಲವಾರು ಜನರು #WeSupportVijaySethupathi ಎಂದು ನಟನ ಪರವಾಗಿ ದನಿಯೆತ್ತಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಇದರ ಕುರಿತು ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ.

“ಬ್ರಿಟಿಷರ ವಿರುದ್ಧ ತೀವ್ರ ಹೋರಾಟ ಮಾಡಿದ ಗಾಂಧಿಯವರ ಚಿತ್ರವನ್ನು ಹಾಲಿವುಡ್‌ನಲ್ಲಿ ನಿರ್ಮಿಸಲಾಗಿದೆ. ಅದಕ್ಕಿಲ್ಲದ ವಿರೋಧ ಈ ಚಿತ್ರಕ್ಕೆ ಯಾಕೆ ಎಂದು ಕೆಲವರು ಪ್ರಶ್ನಿಸಿದ್ದಾರೆ. ಶ್ರೀಲಂಕಾದ ರಾವಣನ ಪಾತ್ರವನ್ನು ಭಾರತದಲ್ಲಿ ಅನೇಕರು ಅಭಿನಯಿಸಿದ್ದಾರೆ. ಅಂದ ಮಾತ್ರಕ್ಕೆ ಅವರ ಚಿತ್ರವನ್ನು ಅಥವಾ ನಟನನ್ನು ಬಹಿಷ್ಕರಿಸಲು ಸಾಧ್ಯವೇ? ವಿಜಯ್ ಸೇತುಪತಿ ಒಬ್ಬ ನಟ ಅಷ್ಟೆ. ಆತನಿಗೆ ಎಲ್ಲಾ ಪಾತ್ರಗಳನ್ನೂ ಅಭಿನಯಿಸಲು ಸ್ವಾತಂತ್ರವಿದೆ. ಅದು ಕೇವಲ ಪಾತ್ರವಷ್ಟೆ” ಎಂದು ಇನ್ನೂ ಕೆಲವರು ವಿಜಯ್ ಸೇತುಪತಿ ಪರವಾಗಿ ಮಾತನಾಡಿದ್ದಾರೆ.

ಮುತ್ತಯ್ಯ ಮುರುಳೀಧರನ್ ಒಬ್ಬ ಕ್ರೀಡಾಪಟು. ಆತ ರಾಜಕಾರಣಿಯಲ್ಲ. ಅವರ ಯಾವುದೋ ಹೇಳಿಕೆಯನ್ನೇ ಕಾರಣ ಮಾಡಿಕೊಂಡು ಈ ಚಿತ್ರವನ್ನು ಮತ್ತು ಇಲ್ಲಿ ನಟಿಸುತ್ತಿರುವವರನ್ನು ಟೀಕಿಸುವುದು ಸರಿಯಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಅದಾಗ್ಯೂ, ಈ ಚಿತ್ರಕ್ಕೆ ವಿರೋಧ ವ್ಯಕ್ತವಾಗುತ್ತಿರುವುದೇಕೆ? ವಿಜಯ್ ಸೇತುಪತಿ ಮತ್ತು ಸಿನಿಮಾವನ್ನು ಬಹಿಷ್ಕರಿಸುವಂತೆ ಕರೆ ನೀಡುತ್ತಿರುವುದೇಕೆ? ಇದರ ಹಿಂದಿನ ರಾಜಕೀಯ ಏನಿರಬಹುದು?

ಇದನ್ನೂ ಓದಿ:“ದಿ ಕಪಿಲ್‌ ಶರ್ಮಾ ಶೋ” ಬಾಯ್ಕಾಟ್: ಸಿಡಿದೆದ್ದ ಅರ್ನಾಬ್ ಅಭಿಮಾನಿಗಳು?

ಮುತ್ತಯ್ಯ ಮುರುಳೀಧರನ್ ಮೂಲತಃ ತಮಿಳು ಮಾತನಾಡುವ ಶ್ರೀಲಂಕಾದವರಾಗಿದ್ದು, ಕ್ರಿಕೆಟ್‌ನಲ್ಲಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ಆಫ್ ಸ್ಪಿನ್ ಬೌಲಿಂಗ್‌ ಮಾಡುವುದರಲ್ಲಿ ಯಶಸ್ವಿ ಆಟಗಾರರಾಗಿದ್ದಾರೆ. 1996ರಲ್ಲಿ ಶ್ರೀಲಂಕಾ ವಿಶ್ವಕಪ್ ಗೆದ್ದಾಗ ಆ ತಂಡದಲ್ಲಿದ್ದರು. ಟೆಸ್ಟ್‌ ಪಂದ್ಯದಲ್ಲಿ ಅತ್ಯಂತ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಮುತ್ತುಯ್ಯ 2ನೇ ಸ್ಥಾನದಲ್ಲಿದ್ದಾರೆ. 2010ರಲ್ಲಿ ನಡೆದ ಐಪಿಎಲ್ 3ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಪರವಾಗಿ ಆಡಿದ್ದರು. ಆಗ ಚೆನ್ನೈ ಐಪಿಎಲ್‌ ಚಾಂಪಿಯನ್‌ಶಿಪ್ ಪಡೆದುಕೊಂಡಿತ್ತು. ಇಷ್ಟೇ ಅಲ್ಲದೇ ಕ್ರಿಕೆಟ್ ಇತಿಹಾಸದ ದಂತಕಥೆ ಎಂದೇ ಪ್ರಸಿದ್ಧವಾಗಿದ್ದಾರೆ.

ಇಷ್ಟೆಲ್ಲಾ ಕಾರಣಗಳಿದ್ದಾಗ್ಯೂ ತಮಿಳರು ಮುತ್ತಯ್ಯನನ್ನು ವಿರೋಧಿಸುತ್ತಿರುವುದೇಕೆ? ಮುತ್ತಯ್ಯ ಸ್ವತಃ ಶ್ರೀಲಂಕದವರಾಗಿರುವುದರಿಂದ, ತಮಿಳುನಾಡು ಮತ್ತು ಶ್ರೀಲಂಕಾ ನಡುವೆ ಹಲವು ರಾಜಕೀಯ ಬಿಕ್ಕಟ್ಟುಗಳಿರುವುದರಿಂದ ತಮಿಳರು ಈ ಚಿತ್ರವನ್ನು ಬಹಿಷ್ಕರಿಸುತ್ತಿರಬಹುದೇ?

ಇದನ್ನೂ ಓದಿ: ಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ಟ್ವಿಟ್ಟರ್‌ನಲ್ಲಿ ಮುತ್ತಯ್ಯ ಅವರು ಮಾತನಾಡಿರುವ ಹಳೆಯ ವೀಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದ್ದು, ಅದರಲ್ಲಿ 2009ರ ಶ್ರೀಲಂಕಾದ ಯುದ್ಧ ಮುಗಿದ ದಿನವನ್ನು ತನ್ನ ಜೀವನದಲ್ಲಿ ಪ್ರಮುಖವಾದ ದಿನ ಎಂದು ಹೇಳಿಕೊಂಡಿದ್ದಾರೆ. ಮತ್ತೊಂದು ವೀಡಿಯೋದಲ್ಲಿ, “ಮೊದಲು ನಾನು ಶ್ರೀಲಂಕಾದ ಪ್ರಜೆ, ನಂತರ ತಮಿಳಿನವನು” ಎಂದು ಹೇಳಿದ್ದಾರೆ. ಜೊತೆಗೆ ಮತ್ತೊಂದು ಸಂದರ್ಶನದಲ್ಲಿ ಗೊಟಬಯ ರಾಜಪಕ್ಷೆ ಅವರ ಪರವಾಗಿ ಮುತ್ತಯ್ಯ ಮಾತನಾಡಿದ್ದು, ತಮ್ಮ ರಾಜಕೀಯ ಲಾಭಕ್ಕಾಗಿ ಶ್ರೀಲಂಕಾದಲ್ಲಿ ತಮಿಳರ ಮೇಲೆ ನಡೆದಿದ್ದ ಹತ್ಯಾಕಾಂಡವನ್ನು ಸಮರ್ಥಿಸಿಕೊಳ್ಳುವಂತೆ ಮಾತನಾಡಿದ್ದಾರೆ ಎಂದು ಹಲವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಐಡಿಸಿ ಸರ್ವೇ: ಭಾರತಕ್ಕೆ ರಫ್ತಾದ 3.25 ಕೋಟಿ ಸ್ಮಾರ್ಟ್‌ಫೋನ್‌ಗಳಲ್ಲಿ 76% ಚೀನಾದವು!

ಈ ಹಿಂದೆ ಸಲ್ಮಾನ್ ಖಾನ್ ನಟಿಸಿದ್ದ ಭಜರಂಗಿ ಭಾಯ್‌ಜಾನ್ ಚಿತ್ರದಲ್ಲಿ ಮುಸ್ಲಿಂ ಒಬ್ಬ ಆಂಜನೇಯನ ಭಕ್ತನ ಪಾತ್ರ ಮಾಡಿದ್ದಕ್ಕೆ ಆ ಚಿತ್ರವನ್ನು ಬಹಿಷ್ಕರಿಸಬೇಕು ಎಂಬ ಕೂಗೆದ್ದಿತ್ತು. ವಿಶೇಷವೆಂದರೆ ಈ ರೀತಿ ವಿವಾದ ಸೃಷ್ಟಿಸುವುದರಿಂದ ಆ ಸಿನಿಮಾಗಳು ಮತ್ತಷ್ಟು ಚೆನ್ನಾಗಿಯೇ ಪ್ರದರ್ಶನಗೊಳ್ಳುತ್ತವೆ.


ಇದನ್ನೂ ಓದಿ: ಮತ್ತೊಂದು ಧೋಕ್‍ಲಾಂ ಆಗಲಿದೆಯೇ ಲಡಾಖ್‍ನ ಗಾಲ್ವನ್ ಕಣಿವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...