Homeಮುಖಪುಟಸಾಮಾಜಿಕ ಸಂವೇದನೆಯ ಸೂಕ್ಷ್ಮ ನಟ ವಿಜಯ್ ಸೇತುಪಥಿ

ಸಾಮಾಜಿಕ ಸಂವೇದನೆಯ ಸೂಕ್ಷ್ಮ ನಟ ವಿಜಯ್ ಸೇತುಪಥಿ

ಧರ್ಮದುರೈ, ಇರೈವಿ, ಸೂಡು ಕವ್ವುಮ್, ತೆಣ್ಮೆರ್ಕು ಪರವಾಕುಟ್ರು, ಕಾವನ್ ಅದ್ಭುತ ಎನಿಸುವ ಪ್ರಮುಖ ಚಿತ್ರಗಳು

- Advertisement -
- Advertisement -

| ಮುತ್ತುರಾಜು |

‘ವಿಕ್ರಂವೇದ’ ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಸೂಪರ್ ಡೂಪರ್ ಹಿಟ್ ಆದ ಚಿತ್ರ. ಸಸ್ಪೆನ್ಸ್, ಥ್ರಿಲ್ಲರ್, ಆಕ್ಷನ್ ಮೂರನ್ನೂ ಒಳಗೊಂಡ ಈ ಚಿತ್ರ ಪ್ರೊಫೆಶನಲ್ ಎಥಿಕ್ಸ್ ಬಗ್ಗೆಯೂ ಮಾತಾಡುತ್ತದೆ. ಬಾಕ್ಸ್ ಆಫೀಸ್‍ನಲ್ಲಿ ಸಾಕಷ್ಟು ಹಣ ಮಾಡಿದ ಈ ಚಿತ್ರದಲ್ಲಿ ವಿಜಯ್ ಸೇತುಪಥಿಯ ನಟನೆ, ಮ್ಯಾನರಿಸಂ ಎಲ್ಲರ ಗಮನ ಸೆಳೆಯಿತು. ಇತ್ತಿಚೇಗೆ ಬಿಡುಗಡೆಯಾದ ನವಿರು ಪ್ರೇಮಕಥೆಯ ತಮಿಳಿನ ’96 ಸಹ ಎಲ್ಲರ ಮನಗೆದ್ದ ಚಿತ್ರ.

ವಿಕ್ರಂವೇದ ಚಿತ್ರದಲ್ಲಿ
’96 ಚಿತ್ರದ ದೃಶ್ಯ

ಆದರೆ ವಿಜಯ್ ಸೇತುಪಥಿ ಏನು ಎನ್ನುವುದನ್ನು ಈ ಚಿತ್ರಗಳು ಹೇಳುವುದಿಲ್ಲ. ತಮಿಳಿನಲ್ಲಿ ಬಂದಿರುವ ಕಡಿಮೆ ಬಜೆಟ್‍ನ ಹತ್ತಾರು ಸಾಮಾಜಿಕ ತುಡಿತದ ಸಿನೆಮಾಗಳು ಅವರನ್ನು ಸಂಪೂರ್ಣ ಅರ್ಥ ಮಾಡಿಸುತ್ತವೆ. ಒಂದೊಂದು ಸಿನೆಮಾಗಳು ಒಂದೊಂದು ಲೋಕವನ್ನು ನಮ್ಮೆದೆರು ತೆರೆದಿಡುತ್ತವೆ. ಅವುಗಳನ್ನು ನೋಡುತ್ತಿದ್ದಂತೆಯೇ ಅವರ ಬಗ್ಗೆ ನಮ್ಮಲ್ಲಿ ಗೌರವದ ಭಾವನೆ ಮೂಡಿಸುತ್ತವೆ. ಧರ್ಮದುರೈ, ಇರೈವಿ, ಸೂಡು ಕವ್ವುಮ್, ತೆಣ್ಮೆರ್ಕು ಪರವಾಕುಟ್ರು, ಕಾವನ್ ಅಂತಹ ಸಾಲಿಗೆ ಸೇರುವ ಪ್ರಮುಖ ಚಿತ್ರಗಳು.

ಸೇತುಪಥಿ ಅಭಿನಯದ ನಾನು ಮೊದಲು ನೋಡಿದ ಚಿತ್ರ ಧರ್ಮದುರೈ. ಯೂ ಟ್ಯೂಬ್‍ನಲ್ಲಿ ಆಕಸ್ಮಿಕವಾಗಿ ಸಿಕ್ಕಿದ ಈ ಸಿನೆಮಾ ಮೊದಲ 15 ನಿಮಿಷದಲ್ಲೇ ಬೋರ್ ಅನ್ನಿಸಲಿಕ್ಕೆ ಶುರುವಾಯಿತು. 10 ನಿಮಿಷ ಸ್ಕಿಪ್ ಮಾಡಿದೆ. ನಂತರ ಎಷ್ಟು ಇಷ್ಟವಾಯಿತೆಂದರೆ ಪುನಃ ಮೊದಲಿಂದ ನೋಡಲು ಶುರು ಮಾಡಿದೆ. ಸಿನಿಮಾ ಮುಗಿಯುವ ಹೊತ್ತಿಗೆ ನಾನು ಬೇರೊಂದು ಲೋಕದಲ್ಲಿ ಕಳೆದುಹೋಗಿದ್ದೆ. ಮಾನವೀಯತೆಯ ಮಳೆಯನ್ನೇ ಸುರಿಸುವ ಇದರಲ್ಲಿ ನಾವು ತೋಯ್ದು ಹೋಗುತ್ತೇವೆ.

ಮೆಡಿಕಲ್ ಓದುವಾಗ ಧರ್ಮದುರೈಗೆ (ಸೇತುಪಥಿ) ಸ್ಟೆಲ್ಲಾ ಮತ್ತು ಶುಭಾ ಎಂಬ ಇಬ್ಬರು ಒಳ್ಳೆಯ ಸ್ನೇಹಿತರು. ಆ ಇಬ್ಬರಿಗೂ ಇವನ ಮೇಲೆ ಅವ್ಯಕ್ತ ಪ್ರೀತಿ. ಸಮಾಜಮುಖಿ ವೈದ್ಯರುಗಳು ಹೇಗಿರಬೇಕೆಂಬ ಪಾಠವನ್ನು ಅವರ ಗುರುಗಳಾದ ಡಾ.ಕಾಮರಾಜ್‍ರವರಿಂದ ಪಡೆದ ಧರ್ಮದುರೈ ತನ್ನೂರಲ್ಲಿ ಕ್ಲಿನಿಕ್ ಆರಂಭಿಸಿ ತನ್ನ ಕುಗ್ರಾಮ ಗ್ರಾಮದಲ್ಲಿ ವೈದ್ಯನಾಗಿ ಸೇವೆ ಸಲ್ಲಿಸಬೇಕೆಂಬ ಕನಸನ್ನು ನನಸಾಗಿಸಿಕೊಳ್ಳುತ್ತಾನೆ. ಧರ್ಮದುರೈಗೆ ತಾನು ಮೆಚ್ಚಿದ ಹುಡುಗಿಯನ್ನು ಮದುವೆಯಾಗಲು ವರದಕ್ಷಿಣೆಯ ಕಾರಣಕ್ಕೆ ತನ್ನ ಅಣ್ಣತಮ್ಮಂದಿರೇ ಅಡ್ಡಬರುತ್ತಾರೆ. ಆತನ ಪ್ರಿಯೆ ಬಡವರ ಮನೆಯ ಅನ್ಬುಸೆಲ್ವಿ ಮತ್ತು ಆಕೆಯ ತಂದೆ ಅವಮಾನ ತಾಳದೇ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ.

ಧರ್ಮದುರೈ ಚಿತ್ರ

ಅಲ್ಲಿಂದ ಆತನದು ನಿರ್ಲಿಪ್ತಭಾವ. ಕುಡಿತ ಬಿಟ್ಟರೆ ತನಗೂ ಸಮಾಜಕ್ಕೂ ಸಂಬಂಧವಿಲ್ಲ. ಚೀಟಿ, ಬಡ್ಡಿ ವ್ಯವಹಾರ ಮಾಡುವ ಕುಟುಂಬವಾದರೂ ಧರ್ಮದುರೈಗೆ ಇದರಲ್ಲಿ ಯಾವುದೇ ಆಸಕ್ತಿ ಇಲ್ಲ. ಮನೆಯವರ ಕಾಟ ತಾಳಲಾರದೇ ತಪ್ಪಿಸಿಕೊಂಡು ಹೋಗುವ ಧರ್ಮದುರೈಗೆ ಸ್ಟೆಲ್ಲಾ ಸಾವಿನ ಸುದ್ದಿ ಅಪ್ಪಳಿಸುತ್ತದೆ. ನಂತರ ಶುಭಾ ಆತನನ್ನು ಕಾಪಿಟ್ಟು ಪೋಷಿಸುತ್ತಾಳೆ. ನಮ್ಮ ಬದುಕಿನ ಗುರಿಯೇನು? ಉದ್ದೇಶಗಳ ಕುರಿತು ಚರ್ಚಿಸುತ್ತಾರೆ. ನಂತರ ಅವರಿಬ್ಬರೂ ಒಟ್ಟು ಸೇರಿ ಬದುಕುವುದಲ್ಲದೇ ಅವರ ಗುರುಗಳ ಹೆಸರಿನಲ್ಲಿ ಆಸ್ಪತ್ರೆ ತೆರೆದು ಪ್ರೀತಿಯಿಂದ ಸೇವೆ ನೀಡುತ್ತಾರೆ. ಅಲ್ಲಿ ಟ್ರಾನ್ಸ್ ಜೆಂಡರ್ ಒಬ್ಬರನ್ನು ಕೆಲಸಕ್ಕೆ ನೇಮಿಸಿಕೊಂಡು ಮಾದರಿಯಾಗುತ್ತಾರೆ.

ಒಟ್ಟಾರೆ ಮನುಷ್ಯನ ಸಣ್ಣತನಗಳು, ಪ್ರೀತಿ, ಮಾದರಿ, ಸಮಾನತೆಯ ಭಾವ, ಮಾನವೀಯತೆಯ ಜೊತೆಗೆ ಸ್ಥಳೀಯ ತಮಿಳಿನ ಸೊಗಡು ಸಿನೆಮಾದಲ್ಲಿ ವ್ಯಕ್ತವಾಗುತ್ತದೆ. ಹಿರೋಗಳೆಂದರೆ ಬೆಳ್ಳಗೆ, ಸಿಕ್ಸ್‍ಪ್ಯಾಕ್ ದೇಹ, ಆಕರ್ಷಕ ಡ್ರೆಸ್ಸುಗಳಿಂದ ಮಿಂಚುವ ಮನೋಭಾವವಿರುವಾಗ ಇಲ್ಲಿ ಅವ್ಯಾವುವು ಇಲ್ಲದೇ ಕಪ್ಪುಬಣ್ಣದ, ದಪ್ಪದೇಹದ ಸೇತುಪಥಿ ನಟನೆಯೇ ನಮ್ಮನ್ನು ಮನಸೋರೆಗೊಳ್ಳುತ್ತದೆ.

ಇರೈವಿ ಚಿತ್ರದ ಪೋಸ್ಟರ್
ಪೆಣ್ಮೆರ್ಕು ಪರುವಾಕಾಟ್ರು ಸಿನಿಮಾದ ದೃಶ್ಯ

ಜೋರಾಗಿ ಮಳೆ ಬರುತ್ತಿರುತ್ತದೆ. ಬಡವರ ಮನೆಯ ಹುಡುಗಿ ತಾನು ಯಾರನ್ನಾದರೂ ಪ್ರೀತಿಸಿದರೆ ನಮ್ಮ ಮನೆಯವರು ಸುಮ್ಮನೇ ಬಿಡುತ್ತಾರಾ ಎಂದು ಸಹಪಾಠಿಗಳೊಂದಿಗೆ ಹೇಳುತ್ತಾಳೆ. ಅದೇ ಮಳೆ, ಇನ್ನೊಂದು ಕಡೆ ಶ್ರೀಮಂತ ಮನೆಯ ಹುಡುಗಿ ತಾನು ಇಷ್ಟಪಟ್ಟ ಪ್ರಖ್ಯಾತ ಸಿನೆಮಾ ನಿರ್ದೇಶಕನ ಜೊತೆ ಮದುವೆಯಾಗುವ ಸಂಭ್ರಮದಲ್ಲಿದ್ದಾಳೆ. ಅದಕ್ಕಾಗಿ ತನ್ನ ತಂದೆಯನ್ನು ಒಪ್ಪಿಸಲು ಪಟ್ಟ ಪರಿಪಾಡಲನ್ನು ಸ್ನೇಹಿತಳೊಂದಿಗೆ ವರ್ಣಿಸುತ್ತಿದ್ದಾಳೆ. ಹೀಗೆ ಆರಂಭವಾಗುವ ಇರೈವಿ ಸಿನೆಮಾ ಅಂತ್ಯದ ವೇಳೆಗೆ ದೀರ್ಘ ವಿಷಾದದೊಂದಿಗೆ ನಮ್ಮನ್ನು ಕಾಡುತ್ತದೆ.

ಅತುಲ್ ಪ್ರಖ್ಯಾತ ಸಿನೆಮಾ ನಿರ್ದೇಶಕ. ಶ್ರೀಮಂತ ಹುಡುಗಿಯನ್ನು ಮದುವೆಯಾಗುವ, ಒಬ್ಬ ಮಗಳಿರುವ ಈತ ಸಂಪೂರ್ಣ ಮದ್ಯವ್ಯಸನಿ. ಮುಂಗೋಪಿ ಮೈಕಲ್ ಪಾತ್ರದಲ್ಲಿ ವಿಜಯ್ ಸೇತುಪಥಿ ಬಡವರ ಮನೆಯ ಹುಡುಗಿಯನ್ನು ಬಲವಂತವಾಗಿ ಮದುವೆಯಾಗುತ್ತಾನೆ. ಈತನಿಗೂ ಒಬ್ಬ ಮಗಳಿರುತ್ತಾಳೆ. ಮೈಕಲ್, ಅತುಲ್ ಮತ್ತು ಆತನ ತಮ್ಮ ಜಗನ್ ಈ ಮೂವರ ನಡುವೆ ಗಾಢಸ್ನೇಹ. ಅತುಲ್ ಮತ್ತು ಮೈಕಲ್ ಅಪ್ಪಟ ಮನುಷ್ಯ ಪ್ರೀತಿಯ ಜೀವಗಳು. ಆದರೆ ಅವರ ಕುಡಿತ ಮತ್ತು ಮುಂಗೋಪ ಗುಣಗಳಿಂದ ಅವರು ಮಾಡುವ ಕೃತ್ಯಗಳು ಅವರನ್ನು ಮೇಲೇಳದಷ್ಟು ಪ್ರಪಾತಕ್ಕೆ ತಳ್ಳುತ್ತವೆ.

ಸೂಡು ಕವ್ವುಮ್ ಚಿತ್ರದಲ್ಲಿ

ಅತುಲ್ ಕುಡಿತದಿಂದ ಬೇಸತ್ತು ಡೈವೋರ್ಸ್ ನೀಡಿ ಬೇರೊಬ್ಬನನ್ನು ಪ್ರೀತಿಸಲು ಆತನ ಹೆಂಡತಿ ಹಲವು ಬಾರಿ ಬಯಸಿರುತ್ತಾಳೆ. ಕೊನೆಗೆ ಅತುಲ್ ತಾನು ಖಂಡಿತ ಬದಲಾಗುವುದಾಗಿಯೂ ಪ್ರತಿ ಸಲ ಒತ್ತಾಯ ಮಾಡಿ ಅದಕ್ಕೆ ಅವಕಾಶ ನೀಡುವುದಿಲ್ಲ. ಇತ್ತ ಅತುಲ್‍ಗಾಗಿ ಕೊಲೆಯೊಂದನ್ನು ಮಾಡಿ ಜೈಲು ಸೇರಿದ ಮೈಕಲ್ ಎರಡು ವರ್ಷದ ನಂತರ ಬಿಡುಗಡೆಯಾಗಿ ತನ್ನ ಹೆಂಡತಿಯೊಂದಿಗೆ ಸಹಜ ಪ್ರೀತಿಯಿಂದ ಹೊಸ ಜೀವನಕ್ಕೆ ಹಾತೊರೆಯುತ್ತಾನೆ. ಈ ಇಬ್ಬರು ಹೆಣ್ಣು ಮಕ್ಕಳು ತಮ್ಮ ಗಂಡಂದೀರು ಬದಲಾಗಲು ಬಹಳ ಅವಕಾಶಗಳನ್ನು ನೀಡುತ್ತಾ, ಹೊಸ ಬದುಕಿನ ಕನಸು ಕಾಣುತ್ತಾ. ಎಲ್ಲಾ ಕಷ್ಟಗಳನ್ನು ಸಹಿಸಿಕೊಳ್ಳುತ್ತಾರೆ.

ಆದರೆ ಅತುಲ್ ತಮ್ಮ ಜಗನ್ ಮಾತ್ರ ದುಷ್ಟತನಗಳ ಕೂಪ. ಕಳ್ಳತನ, ಕಂಡವರ ಹೆಂಡತಿಯ ಮೇಲಿನ ಮೋಹ, ಅಪರಿಮಿತ ಸ್ವಾರ್ಥದ ಕಾರಣಕ್ಕಾಗಿ ಆತ ಮೈಕಲ್ ನಿಂದಲೇ ಕೊಲೆಯಾಗುವ ಪರಿಸ್ಥಿತಿ ಬರುತ್ತದೆ. ಊರು ಬಿಡುವ ಮೈಕಲ್‍ನನ್ನು ತಮ್ಮನ ಸಾವಿನಿಂದ ಸಿಟ್ಟಿಗೇಳುವ ಅತುಲ್ ಕೊಂದು ಜೈಲು ಸೇರುತ್ತಾನೆ. ಮತ್ತೆ ಮಳೆ ಬರುತ್ತದೆ, ಇತ್ತ ಮೈಕಲ್ ಹೆಂಡತಿ ಬೀದಿ ಪಾಲಾಗುತ್ತಾಳೆ. ಅಪ್ಪ ಎಲ್ಲಿ ಎಂದು ಕೇಳುವ ತನ್ನ ಮಗಳಿಗೆ ಮಳೆಯಲ್ಲಿ ಆಡಲು ಹೇಳಿ ಕರೆದೊಯ್ಯುತ್ತಾಳೆ. ಅತ್ತ ಅತುಲ್ ಹೆಂಡತಿ ಸಹ ಮಾನಸಿಕವಾಗಿ ಖಿನ್ನಳಾಗುತ್ತಾಳೆ. ಮಳೆಯಲಿ ಆಡಲು ಬಯಸುವ ತನ್ನ ಮಗಳಿಗೆ ನಮ್ಮಂತವರು ಮಳೆಯಲ್ಲಿ ನೆನಯಬಾರದೆಂದು ದುಃಖದಿಂದ ಹೇಳುತ್ತಾಳೆ. ಅಲ್ಲಿಗೆ ಸಿನಿಮಾ ಮುಕ್ತಾಯವಾಗುತ್ತದೆ. ಅವರಿಬ್ಬರ ನಟನೆಯೇ ಸಿನಿಮಾದ ಜೀವಾಳವಾಗಿದೆ.

ಇದನ್ನು ಓದಿ: ಸತ್ಯಜಿತ್ ರೇ ರವರ ಜನ ಅರಣ್ಯ ಸಿನಿಮಾದ ಕುರಿತು

ಆದರೆ ಈ ಸಿನೆಮಾ ಹಲವು ಪ್ರಶ್ನೆಗಳನ್ನು ಉಳಿಸಿಹೋಗುತ್ತದೆ. ಮನುಷ್ಯನ ಕೋಪ-ತಾಪಗಳು ಎಂತಹ ದುರಂತ ತರುತ್ತವೆ ಎಂಬುದನ್ನು ತೋರಿಸುತ್ತದೆ. ಜೊತೆಗೆ ಎಲ್ಲವನ್ನು ಸಹಿಸುವ, ತನ್ನದಲ್ಲದ ತಪ್ಪಿಗೆ ಶಿಕ್ಷೆ ಅನುಭವಿಸುವ ಮಹಿಳೆಯರ ಯಾತನೆಯನ್ನು ಸಮರ್ಥವಾಗಿ ಮಂಡಿಸುತ್ತದೆ.

ಕಾವನ್ ಚಿತ್ರದಲ್ಲಿ

ವಿಜಯ್ ಸೇತುಪಥಿ ಸಿನಿಮಾಗಳ ಕಥೆಯ ಆಯ್ಕೆಯೇ ವಿಶಿಷ್ಟವಾದದು. ಭ್ರಷ್ಟಾಚಾರಕ್ಕೆ ಇಂದಿನ ಸಮಾಜ ಒಗ್ಗಿಕೊಂಡಿರವ ಅಪಾಯದ ಕುರಿತು ವ್ಯಂಗ್ಯವಾಗಿ ಬಂದ ಅವರ ‘ಸೂಡುಕವ್ವಮ್’ ಸಿನಿಮಾವನ್ನು ಪಾಕಿಸ್ತಾನದಲ್ಲಿ ರೀಮೇಕ್ ಮಾಡಲಾಗಿದೆ ಅಂದರೆ ನೀವು ನಂಬಲೇಬೇಕು. ತೆಣ್ಮೆರ್ಕು ಪರವಾಕುಟ್ರು ಸಿನಿಮವು ಕುರಿ ಕಾಯುವ ತಾಯಿಯೊಬ್ಬಳ ದಿಟ್ಟ ಕಥೆ ಮತ್ತು ಆಕೆಯ ಮಗನ ಪ್ರೇಮಕಥೆಯಾದರೆ, ಕಾವನ್ ಮಾಧ್ಯಮ ಲೋಕದ ಭ್ರಷ್ಟತೆ ಮತ್ತು ಪರ್ಯಾಯ ಮಾಧ್ಯಮಗಳ ಕುರಿತು ಮಾತನಾಡುತ್ತದೆ. ಕೇವಲ ಸಿನಿಮಾ ಮಾತ್ರವಲ್ಲದೇ ಸಾಮಾಜಿಕ ಕೆಲಸಗಳಲ್ಲಿಯೂ ತೊಡಗಿಸಿಕೊಂಡಿರುವ ಸೇತುಪಥಿ ಸಿನಿಮಾಗಳನ್ನೊಮ್ಮೆ ನೋಡಿ. ಜೀವನ ಪ್ರೀತಿಯನ್ನು ಅನುಭವಿಸಿ.

ಸಿನೆಮಾ ಎಂದರೆ ಒಂದು ಕಥೆ ಹೇಳುವ ಮಾಧ್ಯಮ – ಮೈಕೆಲ್ ಹಾನೆಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...