Homeಅಂತರಾಷ್ಟ್ರೀಯಉದ್ಯಮಿ ’ವಿಜಯ ಮಲ್ಯ’ ಭಾರತ ಹಸ್ತಾಂತರಕ್ಕೆ ತೊಡಕು, ಮತ್ತಷ್ಟು ವಿಳಂಬ.

ಉದ್ಯಮಿ ’ವಿಜಯ ಮಲ್ಯ’ ಭಾರತ ಹಸ್ತಾಂತರಕ್ಕೆ ತೊಡಕು, ಮತ್ತಷ್ಟು ವಿಳಂಬ.

- Advertisement -
- Advertisement -

ಮದ್ಯದ ದೊರೆ ಉದ್ಯಮಿ ವಿಜಯ ಮಲ್ಯ ಅವರನ್ನು ಇಂಗ್ಲೆಂಡ್‌ನಿಂದ ಭಾರತಕ್ಕೆ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಮತ್ತೊಂದು ಹೊಸ ಕಾನೂನು ತೊಡಕು ಎದುರಾಗಿದ್ದು, “ಮುಂದಿನ ಕಾನೂನು ಸಮಸ್ಯೆ ಬಗೆಹರಿಸದ ಹೊರತು ಮಲ್ಯ ಅವರನ್ನು ಭಾರತಕ್ಕೆ ವಾಪಸ್ ಕಳುಹಿಸಲಾಗುವುದಿಲ್ಲ” ಎಂದು ಎಂದು ಬ್ರಿಟಿಷ್ ಹೈಕಮಿಷನ್ ಇಂದು ಸ್ಪಷ್ಟಪಡಿಸಿದೆ.

ಭಾರತಕ್ಕೆ ತನ್ನನ್ನು ಹಸ್ತಾಂತರಿಸುವುದನ್ನು ವಿರೋಧಿಸಿ ವಿಜಯ ಮಲ್ಯ ಯುಕೆ ಸುಪ್ರೀಂ ಕೋರ್ಟ್‌‌ಗೆ ಕಳೆದ ಮೇ 14ರಂದು ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಮಲ್ಯ ಅವರನ್ನು ಶೀಘ್ರದಲ್ಲಿ ಭಾರತಕ್ಕೆ ಕರೆತರಲಿದ್ದಾರೆ ಎನ್ನುವ ಸುದ್ದಿ ಹರಡಿತ್ತು. ಇದರ ಕುರಿತು ಇಂದು ಬ್ರಿಟೀಷ್ ಹೈಕಮಿಷನ್ ನೀಡಿರುವ ಹೇಳಿಕೆಯೂ ವಿಜಯ್ ಮಲ್ಯನನ್ನು ಭಾರತಕ್ಕೆ ಕರೆತರುವುದು ಮತ್ತಷ್ಟು ವಿಳಂಬವಾಗುವಂತಾಗಿದೆ.

ಇದರ ಕುರಿತು ಸ್ಪಷ್ಟನೆ ನೀಡಿರುವ ಬ್ರಿಟೀಷ್‌ ಹೈಕಮಿಷನ್‌ ವಕ್ತಾರರು, “ಭಾರತಕ್ಕೆ ಹಸ್ತಾಂತರ ಮಾಡುವ ವಿರುದ್ಧ ಮಲ್ಯ ಸಲ್ಲಿಸಿದ್ದ ಮೇಲ್ಮನವಿಯನ್ನು ಯುಕೆ ಸುಪ್ರೀಂ ಕೋರ್ಟ್ಗೆ ಈಗಾಗಲೇ ನಿರಾಕರಿಸಿದೆಯಾರೂ, ಅವರನ್ನು ಹಸ್ತಾಂತರಿಸುವ ವ್ಯವಸ್ಥೆ ಮಾಡುವ ಮೊದಲು ಇನ್ನೂ ಹೆಚ್ಚಿನ ಕಾನೂನು ಸಮಸ್ಯೆಯನ್ನು ಬಗೆಹರಿಸಬೇಕಾಗಿದೆ” ಎಂದು ಹೇಳಿದ್ದಾರೆ.

“ಯುಕೆ ಕಾನೂನಿನ ಪ್ರಕಾರ ಹಸ್ತಾಂತರಿಸುವಿಕೆಗೆ ಸಂಬಂಧಿಸಿದ ಕಾನೂನು ತೊಡಕುಗಳು ಪರಿಹಾರವಾಗುವವರೆಗೆ ಅವರನ್ನು ಭಾರತಕ್ಕೆ ಹಸ್ತಾಂತರಿಸುವುದು ಸಾಧ್ಯವಿಲ್ಲ. ಸಮಸ್ಯೆ ಗೌಪ್ಯವಾಗಿದೆ. ಇದರ ವಿವರಗಳನ್ನು ಸದ್ಯಕ್ಕೆ ನೀಡಲು ಸಾಧ್ಯವಿಲ್ಲ. ಅಲ್ಲದೆ, ಈ ಸಮಸ್ಯೆಯನ್ನು ಪರಿಹರಿಸಲು ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ಸಹ ನಾವು ಅಂದಾಜಿಸಲು ಸಾಧ್ಯವಿಲ್ಲ. ಆದರೆ, ಇದನ್ನು ಸಾಧ್ಯವಾದಷ್ಟು ಬೇಗ ಪರಿಹರಿಸಲು ಯತ್ನಿಸುತ್ತೇವೆ” ಎಂದು ಹೈಕಮಿಷನ್ ಅಧಿಕಾರಿಗಳು ತಿಳಿಸಿದ್ದಾರೆ.

ಕಿಂಗ್‌ಫಿಶರ್‌ ಏರ್‌ಲೈನ್ಸ್‌ ಕುಸಿತ ಕಂಡ ಪರಿಣಾಮವಾಗಿ ವಿಜಯ ಮಲ್ಯ ಭಾರತದಿಂದ ಲಂಡನ್‌ಗೆ ಪರಾರಿಯಾಗಿದ್ದರು. ವಿಜಯ್ ಮಲ್ಯ ಭಾರತದಲ್ಲಿ ಸುಮಾರು 9,000 ಕೋಟಿ ವಂಚನೆ ಆರೋಪಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ 2018 ರಲ್ಲೇ ಯುಕೆ ಹೈಕೋರ್ಟ್ ಆದೇಶಿಸಿತ್ತು. ಇದರ ವಿರುದ್ದ ಮಲ್ಯ ಯುಕೆ ಸುಪ್ರೀಂ ಕೋರ್ಟ್‌‌ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ, ಈಗ ಸುಪ್ರೀಂ ಕೋರ್ಟ್ ಕೂಡಾ ಅರ್ಜಿಯನ್ನು ವಜಾ ಮಾಡಿದೆ.

ಯುಕೆ ಹಸ್ತಾಂತರ ಕಾಯ್ದೆಯ ಪ್ರಕಾರ, ಒಬ್ಬ ವ್ಯಕ್ತಿಯನ್ನು ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ 28 ದಿನಗಳ ಆದೇಶದೊಂದಿಗೆ ಹಸ್ತಾಂತರಿಸಬೇಕಾಗುತ್ತದೆ. ಒಂದು ವೇಳೆ ಹೀಗೆ ಲಂಡನ್‌ಗೆ ಆಶ್ರಯ ಹರಸಿ ಬಂದಿದ್ದ ವ್ಯಕ್ತಿಯು ಆಶ್ರಯ ಹಕ್ಕು ಪಡೆದಿದ್ದರೆ, ಇದು ಯುಕೆಯಲ್ಲಿ ನಿರಾಶ್ರಿತರಾಗಿ ಉಳಿಯಬೇಕೆಂಬ ಮನವಿಯನ್ನು ಸೂಚಿಸುತ್ತದೆ. ಈ ಹಕ್ಕು ಇತ್ಯರ್ಥವಾಗದ ಹೊರತು ಆ ವ್ಯಕ್ತಿಯನ್ನು ಹಸ್ತಾಂತರಿಸಲು ಮಾಡಲು ಸಾಧ್ಯವಿಲ್ಲ.

ಆರ್ಥಿಕ ಅಪರಾಧಿ ವಿಜಯ ಮಲ್ಯ ಯುಕೆಯ ಆಶ್ರಯ ಹಕ್ಕನ್ನು ಹೊಂದಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇದು ಸ್ಪಷ್ಟವಾಗುವವರೆಗೆ ಅವರನ್ನು ಭಾರತಕ್ಕೆ ಹಸ್ತಾಂತರ ಮಾಡುವುದು ಸಾಧ್ಯವಿಲ್ಲ ಎಂದು ಸಿಬಿಐ ಮೂಲಗಳು ತಿಳಿಸಿವೆ.


ಓದಿ: ಸಾಲ ತೀರಿಸುತ್ತೇನೆ, ನನ್ನ ವಿರುದ್ಧದ ಪ್ರಕರಣ ಕೈಬಿಡಿ: ವಿಜಯ್ ಮಲ್ಯ ಮನವಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...