Homeಅಂತರಾಷ್ಟ್ರೀಯಉದ್ಯಮಿ ’ವಿಜಯ ಮಲ್ಯ’ ಭಾರತ ಹಸ್ತಾಂತರಕ್ಕೆ ತೊಡಕು, ಮತ್ತಷ್ಟು ವಿಳಂಬ.

ಉದ್ಯಮಿ ’ವಿಜಯ ಮಲ್ಯ’ ಭಾರತ ಹಸ್ತಾಂತರಕ್ಕೆ ತೊಡಕು, ಮತ್ತಷ್ಟು ವಿಳಂಬ.

- Advertisement -
- Advertisement -

ಮದ್ಯದ ದೊರೆ ಉದ್ಯಮಿ ವಿಜಯ ಮಲ್ಯ ಅವರನ್ನು ಇಂಗ್ಲೆಂಡ್‌ನಿಂದ ಭಾರತಕ್ಕೆ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಮತ್ತೊಂದು ಹೊಸ ಕಾನೂನು ತೊಡಕು ಎದುರಾಗಿದ್ದು, “ಮುಂದಿನ ಕಾನೂನು ಸಮಸ್ಯೆ ಬಗೆಹರಿಸದ ಹೊರತು ಮಲ್ಯ ಅವರನ್ನು ಭಾರತಕ್ಕೆ ವಾಪಸ್ ಕಳುಹಿಸಲಾಗುವುದಿಲ್ಲ” ಎಂದು ಎಂದು ಬ್ರಿಟಿಷ್ ಹೈಕಮಿಷನ್ ಇಂದು ಸ್ಪಷ್ಟಪಡಿಸಿದೆ.

ಭಾರತಕ್ಕೆ ತನ್ನನ್ನು ಹಸ್ತಾಂತರಿಸುವುದನ್ನು ವಿರೋಧಿಸಿ ವಿಜಯ ಮಲ್ಯ ಯುಕೆ ಸುಪ್ರೀಂ ಕೋರ್ಟ್‌‌ಗೆ ಕಳೆದ ಮೇ 14ರಂದು ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಮಲ್ಯ ಅವರನ್ನು ಶೀಘ್ರದಲ್ಲಿ ಭಾರತಕ್ಕೆ ಕರೆತರಲಿದ್ದಾರೆ ಎನ್ನುವ ಸುದ್ದಿ ಹರಡಿತ್ತು. ಇದರ ಕುರಿತು ಇಂದು ಬ್ರಿಟೀಷ್ ಹೈಕಮಿಷನ್ ನೀಡಿರುವ ಹೇಳಿಕೆಯೂ ವಿಜಯ್ ಮಲ್ಯನನ್ನು ಭಾರತಕ್ಕೆ ಕರೆತರುವುದು ಮತ್ತಷ್ಟು ವಿಳಂಬವಾಗುವಂತಾಗಿದೆ.

ಇದರ ಕುರಿತು ಸ್ಪಷ್ಟನೆ ನೀಡಿರುವ ಬ್ರಿಟೀಷ್‌ ಹೈಕಮಿಷನ್‌ ವಕ್ತಾರರು, “ಭಾರತಕ್ಕೆ ಹಸ್ತಾಂತರ ಮಾಡುವ ವಿರುದ್ಧ ಮಲ್ಯ ಸಲ್ಲಿಸಿದ್ದ ಮೇಲ್ಮನವಿಯನ್ನು ಯುಕೆ ಸುಪ್ರೀಂ ಕೋರ್ಟ್ಗೆ ಈಗಾಗಲೇ ನಿರಾಕರಿಸಿದೆಯಾರೂ, ಅವರನ್ನು ಹಸ್ತಾಂತರಿಸುವ ವ್ಯವಸ್ಥೆ ಮಾಡುವ ಮೊದಲು ಇನ್ನೂ ಹೆಚ್ಚಿನ ಕಾನೂನು ಸಮಸ್ಯೆಯನ್ನು ಬಗೆಹರಿಸಬೇಕಾಗಿದೆ” ಎಂದು ಹೇಳಿದ್ದಾರೆ.

“ಯುಕೆ ಕಾನೂನಿನ ಪ್ರಕಾರ ಹಸ್ತಾಂತರಿಸುವಿಕೆಗೆ ಸಂಬಂಧಿಸಿದ ಕಾನೂನು ತೊಡಕುಗಳು ಪರಿಹಾರವಾಗುವವರೆಗೆ ಅವರನ್ನು ಭಾರತಕ್ಕೆ ಹಸ್ತಾಂತರಿಸುವುದು ಸಾಧ್ಯವಿಲ್ಲ. ಸಮಸ್ಯೆ ಗೌಪ್ಯವಾಗಿದೆ. ಇದರ ವಿವರಗಳನ್ನು ಸದ್ಯಕ್ಕೆ ನೀಡಲು ಸಾಧ್ಯವಿಲ್ಲ. ಅಲ್ಲದೆ, ಈ ಸಮಸ್ಯೆಯನ್ನು ಪರಿಹರಿಸಲು ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ಸಹ ನಾವು ಅಂದಾಜಿಸಲು ಸಾಧ್ಯವಿಲ್ಲ. ಆದರೆ, ಇದನ್ನು ಸಾಧ್ಯವಾದಷ್ಟು ಬೇಗ ಪರಿಹರಿಸಲು ಯತ್ನಿಸುತ್ತೇವೆ” ಎಂದು ಹೈಕಮಿಷನ್ ಅಧಿಕಾರಿಗಳು ತಿಳಿಸಿದ್ದಾರೆ.

ಕಿಂಗ್‌ಫಿಶರ್‌ ಏರ್‌ಲೈನ್ಸ್‌ ಕುಸಿತ ಕಂಡ ಪರಿಣಾಮವಾಗಿ ವಿಜಯ ಮಲ್ಯ ಭಾರತದಿಂದ ಲಂಡನ್‌ಗೆ ಪರಾರಿಯಾಗಿದ್ದರು. ವಿಜಯ್ ಮಲ್ಯ ಭಾರತದಲ್ಲಿ ಸುಮಾರು 9,000 ಕೋಟಿ ವಂಚನೆ ಆರೋಪಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ 2018 ರಲ್ಲೇ ಯುಕೆ ಹೈಕೋರ್ಟ್ ಆದೇಶಿಸಿತ್ತು. ಇದರ ವಿರುದ್ದ ಮಲ್ಯ ಯುಕೆ ಸುಪ್ರೀಂ ಕೋರ್ಟ್‌‌ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ, ಈಗ ಸುಪ್ರೀಂ ಕೋರ್ಟ್ ಕೂಡಾ ಅರ್ಜಿಯನ್ನು ವಜಾ ಮಾಡಿದೆ.

ಯುಕೆ ಹಸ್ತಾಂತರ ಕಾಯ್ದೆಯ ಪ್ರಕಾರ, ಒಬ್ಬ ವ್ಯಕ್ತಿಯನ್ನು ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ 28 ದಿನಗಳ ಆದೇಶದೊಂದಿಗೆ ಹಸ್ತಾಂತರಿಸಬೇಕಾಗುತ್ತದೆ. ಒಂದು ವೇಳೆ ಹೀಗೆ ಲಂಡನ್‌ಗೆ ಆಶ್ರಯ ಹರಸಿ ಬಂದಿದ್ದ ವ್ಯಕ್ತಿಯು ಆಶ್ರಯ ಹಕ್ಕು ಪಡೆದಿದ್ದರೆ, ಇದು ಯುಕೆಯಲ್ಲಿ ನಿರಾಶ್ರಿತರಾಗಿ ಉಳಿಯಬೇಕೆಂಬ ಮನವಿಯನ್ನು ಸೂಚಿಸುತ್ತದೆ. ಈ ಹಕ್ಕು ಇತ್ಯರ್ಥವಾಗದ ಹೊರತು ಆ ವ್ಯಕ್ತಿಯನ್ನು ಹಸ್ತಾಂತರಿಸಲು ಮಾಡಲು ಸಾಧ್ಯವಿಲ್ಲ.

ಆರ್ಥಿಕ ಅಪರಾಧಿ ವಿಜಯ ಮಲ್ಯ ಯುಕೆಯ ಆಶ್ರಯ ಹಕ್ಕನ್ನು ಹೊಂದಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇದು ಸ್ಪಷ್ಟವಾಗುವವರೆಗೆ ಅವರನ್ನು ಭಾರತಕ್ಕೆ ಹಸ್ತಾಂತರ ಮಾಡುವುದು ಸಾಧ್ಯವಿಲ್ಲ ಎಂದು ಸಿಬಿಐ ಮೂಲಗಳು ತಿಳಿಸಿವೆ.


ಓದಿ: ಸಾಲ ತೀರಿಸುತ್ತೇನೆ, ನನ್ನ ವಿರುದ್ಧದ ಪ್ರಕರಣ ಕೈಬಿಡಿ: ವಿಜಯ್ ಮಲ್ಯ ಮನವಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...