Homeಮುಖಪುಟನಟ, ಡಿಎಂಡಿಕೆ ನಾಯಕ ವಿಜಯಕಾಂತ್ ನಿಧನ

ನಟ, ಡಿಎಂಡಿಕೆ ನಾಯಕ ವಿಜಯಕಾಂತ್ ನಿಧನ

- Advertisement -
- Advertisement -

ತಮಿಳುನಾಡಿನ ಹಿರಿಯ ನಟ, ರಾಜಕಾರಣಿ, ಮಾಜಿ ಶಾಸಕ ವಿಜಯಕಾಂತ್ ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಈ ಕುರಿತು ಆಸ್ಪತ್ರೆ ಮೆಡಿಕಲ್‌ ಬುಲೆಟಿನ್‌ ಬಿಡುಗಡೆ ಮಾಡಿದೆ.

71 ವರ್ಷದ ವಿಜಯಕಾಂತ್ ದೀರ್ಘಕಾಲದವರೆಗೆ ವಿವಿಧ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಇತ್ತೀಚೆಗೆ ಕರೋನಾ ಸೋಂಕು ಪತ್ತೆಯಾದ ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನ್ಯುಮೋನಿಯಾ ಕಂಡು ಬಂದ ಹಿನ್ನೆಲೆ ವೆಂಟಿಲೇಟರ್‌ ಬೆಂಬಲದಲ್ಲಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.  ವಿಜಯಕಾಂತ್ ಅವರು ಪತ್ನಿ ಪ್ರೇಮಲತಾ ಮತ್ತು ಪುತ್ರರಾದ ಷಣ್ಮುಗ ಪಾಂಡಿಯನ್ ಮತ್ತು ವಿಜಯ ಪ್ರಭಾಕರನ್ ಅವರನ್ನು ಅಗಲಿದ್ದಾರೆ.

ಈ ಕುರಿತು ಚೆನ್ನೈನ ಖಾಸಗಿ ಆಸ್ಪತ್ರೆ ಮೆಡಿಕಲ್‌ ಬುಲೆಟಿನ್‌ ಬಿಡುಗಡೆ ಮಾಡಿದ್ದು, ವೈದ್ಯಕೀಯ ಸಿಬ್ಬಂದಿಗಳ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ ಡಿಎಂಡಿಕೆ ನಾಯಕ ವಿಜಯಕಾಂತ್ ಅವರು ಇಂದು ಬೆಳಿಗ್ಗೆ ನಿಧನರಾದರು ಎಂದು ತಿಳಿಸಿದೆ.

71 ವರ್ಷ ವಯಸ್ಸಿನ ವಿಜಯಕಾಂತ್ ನಟರಾಗಿ ಬಳಿಕ ರಾಜಕಾರಣಿಯಾಗಿ ಸಕ್ರಿಯರಾಗಿದ್ದರು. ಅವರ ಅನುಯಾಯಿಗಳು ಮತ್ತು ಸಿನಿಪ್ರಿಯರು ಅವರನ್ನು ಪ್ರೀತಿಯಿಂದ ‘ಕ್ಯಾಪ್ಟನ್’ ಎಂದು ಕರೆಯುತ್ತಾರೆ.  ವಿಜಯಕಾಂತ್ ದಕ್ಷಿಣ ಭಾರತೀಯ ಕಲಾವಿದರ ಸಂಘದ ಮಾಜಿ ಅಧ್ಯಕ್ಷರು ಕೂಡ ಆಗಿದ್ದರು.

150ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸುವ ಮೂಲಕ ನಟನೆಯಲ್ಲಿ ಯಶಸ್ವಿ ವೃತ್ತಿಜೀವನ ನಡೆಸಿದ್ದ ವಿಜಯಕಾಂತ್‌ ಅವರು 2005ರಲ್ಲಿ ತಮ್ಮ ಹುಟ್ಟೂರಾದ ಮಧುರಿಯಲ್ಲಿ ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ (DMDK) ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿದರು. ಅವರು 2006 ರಲ್ಲಿ ವಿರುಧಾಚಲಂ ಮತ್ತು 2011ರಲ್ಲಿ ರಿಷಿವಂದಿಯಂ ಕ್ಷೇತ್ರಗಳನ್ನು ಪ್ರತಿನಿಧಿಸುವ ಮೂಲಕ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2011ರಿಂದ 2016ರವರೆಗೆ ತಮಿಳುನಾಡು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದರು.

ಇತ್ತೀಚಿನ ವರ್ಷಗಳಲ್ಲಿ ವಿಜಯಕಾಂತ್ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದರು. ಇದು ಸಕ್ರಿಯ ರಾಜಕೀಯದಿಂದ ಅವರನ್ನು ದೂರ ಉಳಿಯುವಂತೆ ಮಾಡಿತ್ತು. ಡಿ.14ರಂದು ಅವರು ಡಿಎಂಡಿಕೆಯ ಕಾರ್ಯಕಾರಿ ಮತ್ತು ಸಾಮಾನ್ಯ ಮಂಡಳಿಯ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಅವರ ಪತ್ನಿ ಪ್ರೇಮಲತಾ ವಿಜಯಕಾಂತ್ ಅವರನ್ನು ಪಕ್ಷದ ನೂತನ ಪ್ರಧಾನ ಕಾರ್ಯದರ್ಶಿಯನ್ನಾಗಿ ಘೋಷಿಸಲಾಗಿತ್ತು.

ತಮಿಳು ಚಿತ್ರರಂಗದ ವಿಕ್ರಮ್, ಖುಷ್ಬು ಸುಂದರ್, ಆರ್ ಶರತ್ ಕುಮಾರ್ ಸೇರಿ ಹಲವರು ವಿಜಯಕಾಂತ್‌ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಇದುವರೆಗಿನ ಅತ್ಯಂತ ಪ್ರೀತಿಯ ಮತ್ತು ಕಾಳಜಿಯುಳ್ಳ ಜೀವಿಗಳಲ್ಲಿ ಒಬ್ಬರ ನಿಧನವನ್ನು ಕೇಳಿ ದುಃಖವಾಯಿತು. ನಾವು ನಿಮ್ಮನ್ನು ಕಳೆದುಕೊಳ್ಳುತ್ತೇವೆ ಕ್ಯಾಪ್ಟನ್ ಎಂದು ವಿಕ್ರಮ್ ಬರೆದಿದ್ದಾರೆ.

ಖುಷ್ಬು ಸುಂದರ್ ಈ ಕುರಿತು ಪೋಸ್ಟ್‌ ಮಾಡಿದ್ದು, ನಾವು ರತ್ನವನ್ನು ಕಳೆದುಕೊಂಡಿದ್ದೇವೆ. ಚಿನ್ನದ ಹೃದಯವುಳ್ಳ ವ್ಯಕ್ತಿ. ನಮ್ಮ ಪ್ರೀತಿಯ ಕ್ಯಾಪ್ಟನ್, ನಮ್ಮ ವಿಜಯಕಾಂತ್ ಸರ್, ನೀವು ಅಂತಿಮವಾಗಿ ಶಾಂತಿಯಿಂದ ಇರುತ್ತೀರಿ ಎಂದು ಭಾವಿಸುತ್ತೇವೆ. ಅವರ ಕುಟುಂಬ, ಅಭಿಮಾನಿಗಳು ಮತ್ತು ನಿಷ್ಠಾವಂತ ಪಕ್ಷದ ಕಾರ್ಯಕರ್ತರಿಗೆ ದುಃಖವನ್ನು ಭರಿಸುವ ಶಕ್ತಿ ಇರಲಿ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ನಟ-ರಾಜಕಾರಣಿ 1952ರಲ್ಲಿ ಮಧುರೈನಲ್ಲಿ ಜನಸಿದ್ದರು. ಅವರಿಗೆ ವಿಜಯರಾಜ್ ಅಲಗರಸ್ವಾಮಿ ಎಂದು ಹೆಸರಿಡಲಾಗಿತ್ತು. ಬಳಿಕ ಅವರು ನಟನಾ ವೃತ್ತಿಯನ್ನು ಮುಂದುವರಿಸಲು ಪ್ರಾರಂಭಿಸಿದ ನಂತರ ತನ್ನ ಹೆಸರನ್ನು ವಿಜಯಕಾಂತ್ ಎಂದು ಬದಲಾಯಿಸಿದರು.

ವಿಜಯಕಾಂತ್ 1979ರಲ್ಲಿ ಇನಿಕ್ಕುಂ ಇಳಮೈ ಚಿತ್ರದ ಮೂಲಕ ಸಿನಿ ಲೋಕ್ಕೆ ಪಾದಾರ್ಪಣೆ ಮಾಡಿದ್ದರು.  1981ರಲ್ಲಿ ಬಿಡುಗಡೆಯಾದ ಚಿತ್ರ ‘ಸತ್ತಂ ಒರು ಇರುತ್ತರೈ’  ಅವರಿಗೆ ಹೆಚ್ಚು ಹೆಸರನ್ನು ತಂದುಕೊಟ್ಟಿತ್ತು. ನಂತರ ಅವರು 1980ರ ದಶಕದ ಹಲವಾರು ಪ್ರಸಿದ್ಧ ತಮಿಳು ಚಲನಚಿತ್ರಗಳಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದರು. ನೂರವತು ನಾಲ್, ವೈಧೇಗಿ ಕಾತಿರುಂತಾಲ್, ಅಮ್ಮನ್ ಕೋವಿಲ್ ಕಿಝಾಕಲೆ, ಊಮೈ ವಿಝಿಗಲ್, ಪೂನ್ತೋಟ್ಟಾ ಕಾವಲ್ಕಾರನ್, ಸೆಂದೂರ ಪೂವಾ ಇನ್ನೂ ಅನೇಕ ಸಿನಿಮಾಗಳಲ್ಲಿ ನಟಿಸಿದ್ದರು. ವಿಜಯಕಾಂತ್ 2010ರಲ್ಲಿ ವಿರುಧಗಿರಿ ಎಂಬ ಸಾಹಸಮಯ ಚಿತ್ರದ ನಿರ್ದೇಶನದೊಂದಿಗೆ ನಿರ್ದೇಶಕರಾಗಿಯು ಗುರುತಿಸಿಕೊಂಡಿದ್ದರು.

ಇದನ್ನು ಓದಿ: ‘ಮುಸ್ಲಿಂ ಲೀಗ್ ಜಮ್ಮು-ಕಾಶ್ಮೀರ’ ಸಂಘಟನೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...