Homeಮುಖಪುಟನಟ, ಡಿಎಂಡಿಕೆ ನಾಯಕ ವಿಜಯಕಾಂತ್ ನಿಧನ

ನಟ, ಡಿಎಂಡಿಕೆ ನಾಯಕ ವಿಜಯಕಾಂತ್ ನಿಧನ

- Advertisement -
- Advertisement -

ತಮಿಳುನಾಡಿನ ಹಿರಿಯ ನಟ, ರಾಜಕಾರಣಿ, ಮಾಜಿ ಶಾಸಕ ವಿಜಯಕಾಂತ್ ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಈ ಕುರಿತು ಆಸ್ಪತ್ರೆ ಮೆಡಿಕಲ್‌ ಬುಲೆಟಿನ್‌ ಬಿಡುಗಡೆ ಮಾಡಿದೆ.

71 ವರ್ಷದ ವಿಜಯಕಾಂತ್ ದೀರ್ಘಕಾಲದವರೆಗೆ ವಿವಿಧ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಇತ್ತೀಚೆಗೆ ಕರೋನಾ ಸೋಂಕು ಪತ್ತೆಯಾದ ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನ್ಯುಮೋನಿಯಾ ಕಂಡು ಬಂದ ಹಿನ್ನೆಲೆ ವೆಂಟಿಲೇಟರ್‌ ಬೆಂಬಲದಲ್ಲಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.  ವಿಜಯಕಾಂತ್ ಅವರು ಪತ್ನಿ ಪ್ರೇಮಲತಾ ಮತ್ತು ಪುತ್ರರಾದ ಷಣ್ಮುಗ ಪಾಂಡಿಯನ್ ಮತ್ತು ವಿಜಯ ಪ್ರಭಾಕರನ್ ಅವರನ್ನು ಅಗಲಿದ್ದಾರೆ.

ಈ ಕುರಿತು ಚೆನ್ನೈನ ಖಾಸಗಿ ಆಸ್ಪತ್ರೆ ಮೆಡಿಕಲ್‌ ಬುಲೆಟಿನ್‌ ಬಿಡುಗಡೆ ಮಾಡಿದ್ದು, ವೈದ್ಯಕೀಯ ಸಿಬ್ಬಂದಿಗಳ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ ಡಿಎಂಡಿಕೆ ನಾಯಕ ವಿಜಯಕಾಂತ್ ಅವರು ಇಂದು ಬೆಳಿಗ್ಗೆ ನಿಧನರಾದರು ಎಂದು ತಿಳಿಸಿದೆ.

71 ವರ್ಷ ವಯಸ್ಸಿನ ವಿಜಯಕಾಂತ್ ನಟರಾಗಿ ಬಳಿಕ ರಾಜಕಾರಣಿಯಾಗಿ ಸಕ್ರಿಯರಾಗಿದ್ದರು. ಅವರ ಅನುಯಾಯಿಗಳು ಮತ್ತು ಸಿನಿಪ್ರಿಯರು ಅವರನ್ನು ಪ್ರೀತಿಯಿಂದ ‘ಕ್ಯಾಪ್ಟನ್’ ಎಂದು ಕರೆಯುತ್ತಾರೆ.  ವಿಜಯಕಾಂತ್ ದಕ್ಷಿಣ ಭಾರತೀಯ ಕಲಾವಿದರ ಸಂಘದ ಮಾಜಿ ಅಧ್ಯಕ್ಷರು ಕೂಡ ಆಗಿದ್ದರು.

150ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸುವ ಮೂಲಕ ನಟನೆಯಲ್ಲಿ ಯಶಸ್ವಿ ವೃತ್ತಿಜೀವನ ನಡೆಸಿದ್ದ ವಿಜಯಕಾಂತ್‌ ಅವರು 2005ರಲ್ಲಿ ತಮ್ಮ ಹುಟ್ಟೂರಾದ ಮಧುರಿಯಲ್ಲಿ ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ (DMDK) ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿದರು. ಅವರು 2006 ರಲ್ಲಿ ವಿರುಧಾಚಲಂ ಮತ್ತು 2011ರಲ್ಲಿ ರಿಷಿವಂದಿಯಂ ಕ್ಷೇತ್ರಗಳನ್ನು ಪ್ರತಿನಿಧಿಸುವ ಮೂಲಕ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2011ರಿಂದ 2016ರವರೆಗೆ ತಮಿಳುನಾಡು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದರು.

ಇತ್ತೀಚಿನ ವರ್ಷಗಳಲ್ಲಿ ವಿಜಯಕಾಂತ್ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದರು. ಇದು ಸಕ್ರಿಯ ರಾಜಕೀಯದಿಂದ ಅವರನ್ನು ದೂರ ಉಳಿಯುವಂತೆ ಮಾಡಿತ್ತು. ಡಿ.14ರಂದು ಅವರು ಡಿಎಂಡಿಕೆಯ ಕಾರ್ಯಕಾರಿ ಮತ್ತು ಸಾಮಾನ್ಯ ಮಂಡಳಿಯ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಅವರ ಪತ್ನಿ ಪ್ರೇಮಲತಾ ವಿಜಯಕಾಂತ್ ಅವರನ್ನು ಪಕ್ಷದ ನೂತನ ಪ್ರಧಾನ ಕಾರ್ಯದರ್ಶಿಯನ್ನಾಗಿ ಘೋಷಿಸಲಾಗಿತ್ತು.

ತಮಿಳು ಚಿತ್ರರಂಗದ ವಿಕ್ರಮ್, ಖುಷ್ಬು ಸುಂದರ್, ಆರ್ ಶರತ್ ಕುಮಾರ್ ಸೇರಿ ಹಲವರು ವಿಜಯಕಾಂತ್‌ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಇದುವರೆಗಿನ ಅತ್ಯಂತ ಪ್ರೀತಿಯ ಮತ್ತು ಕಾಳಜಿಯುಳ್ಳ ಜೀವಿಗಳಲ್ಲಿ ಒಬ್ಬರ ನಿಧನವನ್ನು ಕೇಳಿ ದುಃಖವಾಯಿತು. ನಾವು ನಿಮ್ಮನ್ನು ಕಳೆದುಕೊಳ್ಳುತ್ತೇವೆ ಕ್ಯಾಪ್ಟನ್ ಎಂದು ವಿಕ್ರಮ್ ಬರೆದಿದ್ದಾರೆ.

ಖುಷ್ಬು ಸುಂದರ್ ಈ ಕುರಿತು ಪೋಸ್ಟ್‌ ಮಾಡಿದ್ದು, ನಾವು ರತ್ನವನ್ನು ಕಳೆದುಕೊಂಡಿದ್ದೇವೆ. ಚಿನ್ನದ ಹೃದಯವುಳ್ಳ ವ್ಯಕ್ತಿ. ನಮ್ಮ ಪ್ರೀತಿಯ ಕ್ಯಾಪ್ಟನ್, ನಮ್ಮ ವಿಜಯಕಾಂತ್ ಸರ್, ನೀವು ಅಂತಿಮವಾಗಿ ಶಾಂತಿಯಿಂದ ಇರುತ್ತೀರಿ ಎಂದು ಭಾವಿಸುತ್ತೇವೆ. ಅವರ ಕುಟುಂಬ, ಅಭಿಮಾನಿಗಳು ಮತ್ತು ನಿಷ್ಠಾವಂತ ಪಕ್ಷದ ಕಾರ್ಯಕರ್ತರಿಗೆ ದುಃಖವನ್ನು ಭರಿಸುವ ಶಕ್ತಿ ಇರಲಿ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ನಟ-ರಾಜಕಾರಣಿ 1952ರಲ್ಲಿ ಮಧುರೈನಲ್ಲಿ ಜನಸಿದ್ದರು. ಅವರಿಗೆ ವಿಜಯರಾಜ್ ಅಲಗರಸ್ವಾಮಿ ಎಂದು ಹೆಸರಿಡಲಾಗಿತ್ತು. ಬಳಿಕ ಅವರು ನಟನಾ ವೃತ್ತಿಯನ್ನು ಮುಂದುವರಿಸಲು ಪ್ರಾರಂಭಿಸಿದ ನಂತರ ತನ್ನ ಹೆಸರನ್ನು ವಿಜಯಕಾಂತ್ ಎಂದು ಬದಲಾಯಿಸಿದರು.

ವಿಜಯಕಾಂತ್ 1979ರಲ್ಲಿ ಇನಿಕ್ಕುಂ ಇಳಮೈ ಚಿತ್ರದ ಮೂಲಕ ಸಿನಿ ಲೋಕ್ಕೆ ಪಾದಾರ್ಪಣೆ ಮಾಡಿದ್ದರು.  1981ರಲ್ಲಿ ಬಿಡುಗಡೆಯಾದ ಚಿತ್ರ ‘ಸತ್ತಂ ಒರು ಇರುತ್ತರೈ’  ಅವರಿಗೆ ಹೆಚ್ಚು ಹೆಸರನ್ನು ತಂದುಕೊಟ್ಟಿತ್ತು. ನಂತರ ಅವರು 1980ರ ದಶಕದ ಹಲವಾರು ಪ್ರಸಿದ್ಧ ತಮಿಳು ಚಲನಚಿತ್ರಗಳಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದರು. ನೂರವತು ನಾಲ್, ವೈಧೇಗಿ ಕಾತಿರುಂತಾಲ್, ಅಮ್ಮನ್ ಕೋವಿಲ್ ಕಿಝಾಕಲೆ, ಊಮೈ ವಿಝಿಗಲ್, ಪೂನ್ತೋಟ್ಟಾ ಕಾವಲ್ಕಾರನ್, ಸೆಂದೂರ ಪೂವಾ ಇನ್ನೂ ಅನೇಕ ಸಿನಿಮಾಗಳಲ್ಲಿ ನಟಿಸಿದ್ದರು. ವಿಜಯಕಾಂತ್ 2010ರಲ್ಲಿ ವಿರುಧಗಿರಿ ಎಂಬ ಸಾಹಸಮಯ ಚಿತ್ರದ ನಿರ್ದೇಶನದೊಂದಿಗೆ ನಿರ್ದೇಶಕರಾಗಿಯು ಗುರುತಿಸಿಕೊಂಡಿದ್ದರು.

ಇದನ್ನು ಓದಿ: ‘ಮುಸ್ಲಿಂ ಲೀಗ್ ಜಮ್ಮು-ಕಾಶ್ಮೀರ’ ಸಂಘಟನೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...