Homeಮುಖಪುಟನಟ, ಡಿಎಂಡಿಕೆ ನಾಯಕ ವಿಜಯಕಾಂತ್ ನಿಧನ

ನಟ, ಡಿಎಂಡಿಕೆ ನಾಯಕ ವಿಜಯಕಾಂತ್ ನಿಧನ

- Advertisement -
- Advertisement -

ತಮಿಳುನಾಡಿನ ಹಿರಿಯ ನಟ, ರಾಜಕಾರಣಿ, ಮಾಜಿ ಶಾಸಕ ವಿಜಯಕಾಂತ್ ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಈ ಕುರಿತು ಆಸ್ಪತ್ರೆ ಮೆಡಿಕಲ್‌ ಬುಲೆಟಿನ್‌ ಬಿಡುಗಡೆ ಮಾಡಿದೆ.

71 ವರ್ಷದ ವಿಜಯಕಾಂತ್ ದೀರ್ಘಕಾಲದವರೆಗೆ ವಿವಿಧ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಇತ್ತೀಚೆಗೆ ಕರೋನಾ ಸೋಂಕು ಪತ್ತೆಯಾದ ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನ್ಯುಮೋನಿಯಾ ಕಂಡು ಬಂದ ಹಿನ್ನೆಲೆ ವೆಂಟಿಲೇಟರ್‌ ಬೆಂಬಲದಲ್ಲಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.  ವಿಜಯಕಾಂತ್ ಅವರು ಪತ್ನಿ ಪ್ರೇಮಲತಾ ಮತ್ತು ಪುತ್ರರಾದ ಷಣ್ಮುಗ ಪಾಂಡಿಯನ್ ಮತ್ತು ವಿಜಯ ಪ್ರಭಾಕರನ್ ಅವರನ್ನು ಅಗಲಿದ್ದಾರೆ.

ಈ ಕುರಿತು ಚೆನ್ನೈನ ಖಾಸಗಿ ಆಸ್ಪತ್ರೆ ಮೆಡಿಕಲ್‌ ಬುಲೆಟಿನ್‌ ಬಿಡುಗಡೆ ಮಾಡಿದ್ದು, ವೈದ್ಯಕೀಯ ಸಿಬ್ಬಂದಿಗಳ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ ಡಿಎಂಡಿಕೆ ನಾಯಕ ವಿಜಯಕಾಂತ್ ಅವರು ಇಂದು ಬೆಳಿಗ್ಗೆ ನಿಧನರಾದರು ಎಂದು ತಿಳಿಸಿದೆ.

71 ವರ್ಷ ವಯಸ್ಸಿನ ವಿಜಯಕಾಂತ್ ನಟರಾಗಿ ಬಳಿಕ ರಾಜಕಾರಣಿಯಾಗಿ ಸಕ್ರಿಯರಾಗಿದ್ದರು. ಅವರ ಅನುಯಾಯಿಗಳು ಮತ್ತು ಸಿನಿಪ್ರಿಯರು ಅವರನ್ನು ಪ್ರೀತಿಯಿಂದ ‘ಕ್ಯಾಪ್ಟನ್’ ಎಂದು ಕರೆಯುತ್ತಾರೆ.  ವಿಜಯಕಾಂತ್ ದಕ್ಷಿಣ ಭಾರತೀಯ ಕಲಾವಿದರ ಸಂಘದ ಮಾಜಿ ಅಧ್ಯಕ್ಷರು ಕೂಡ ಆಗಿದ್ದರು.

150ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸುವ ಮೂಲಕ ನಟನೆಯಲ್ಲಿ ಯಶಸ್ವಿ ವೃತ್ತಿಜೀವನ ನಡೆಸಿದ್ದ ವಿಜಯಕಾಂತ್‌ ಅವರು 2005ರಲ್ಲಿ ತಮ್ಮ ಹುಟ್ಟೂರಾದ ಮಧುರಿಯಲ್ಲಿ ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ (DMDK) ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿದರು. ಅವರು 2006 ರಲ್ಲಿ ವಿರುಧಾಚಲಂ ಮತ್ತು 2011ರಲ್ಲಿ ರಿಷಿವಂದಿಯಂ ಕ್ಷೇತ್ರಗಳನ್ನು ಪ್ರತಿನಿಧಿಸುವ ಮೂಲಕ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2011ರಿಂದ 2016ರವರೆಗೆ ತಮಿಳುನಾಡು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದರು.

ಇತ್ತೀಚಿನ ವರ್ಷಗಳಲ್ಲಿ ವಿಜಯಕಾಂತ್ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದರು. ಇದು ಸಕ್ರಿಯ ರಾಜಕೀಯದಿಂದ ಅವರನ್ನು ದೂರ ಉಳಿಯುವಂತೆ ಮಾಡಿತ್ತು. ಡಿ.14ರಂದು ಅವರು ಡಿಎಂಡಿಕೆಯ ಕಾರ್ಯಕಾರಿ ಮತ್ತು ಸಾಮಾನ್ಯ ಮಂಡಳಿಯ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಅವರ ಪತ್ನಿ ಪ್ರೇಮಲತಾ ವಿಜಯಕಾಂತ್ ಅವರನ್ನು ಪಕ್ಷದ ನೂತನ ಪ್ರಧಾನ ಕಾರ್ಯದರ್ಶಿಯನ್ನಾಗಿ ಘೋಷಿಸಲಾಗಿತ್ತು.

ತಮಿಳು ಚಿತ್ರರಂಗದ ವಿಕ್ರಮ್, ಖುಷ್ಬು ಸುಂದರ್, ಆರ್ ಶರತ್ ಕುಮಾರ್ ಸೇರಿ ಹಲವರು ವಿಜಯಕಾಂತ್‌ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಇದುವರೆಗಿನ ಅತ್ಯಂತ ಪ್ರೀತಿಯ ಮತ್ತು ಕಾಳಜಿಯುಳ್ಳ ಜೀವಿಗಳಲ್ಲಿ ಒಬ್ಬರ ನಿಧನವನ್ನು ಕೇಳಿ ದುಃಖವಾಯಿತು. ನಾವು ನಿಮ್ಮನ್ನು ಕಳೆದುಕೊಳ್ಳುತ್ತೇವೆ ಕ್ಯಾಪ್ಟನ್ ಎಂದು ವಿಕ್ರಮ್ ಬರೆದಿದ್ದಾರೆ.

ಖುಷ್ಬು ಸುಂದರ್ ಈ ಕುರಿತು ಪೋಸ್ಟ್‌ ಮಾಡಿದ್ದು, ನಾವು ರತ್ನವನ್ನು ಕಳೆದುಕೊಂಡಿದ್ದೇವೆ. ಚಿನ್ನದ ಹೃದಯವುಳ್ಳ ವ್ಯಕ್ತಿ. ನಮ್ಮ ಪ್ರೀತಿಯ ಕ್ಯಾಪ್ಟನ್, ನಮ್ಮ ವಿಜಯಕಾಂತ್ ಸರ್, ನೀವು ಅಂತಿಮವಾಗಿ ಶಾಂತಿಯಿಂದ ಇರುತ್ತೀರಿ ಎಂದು ಭಾವಿಸುತ್ತೇವೆ. ಅವರ ಕುಟುಂಬ, ಅಭಿಮಾನಿಗಳು ಮತ್ತು ನಿಷ್ಠಾವಂತ ಪಕ್ಷದ ಕಾರ್ಯಕರ್ತರಿಗೆ ದುಃಖವನ್ನು ಭರಿಸುವ ಶಕ್ತಿ ಇರಲಿ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ನಟ-ರಾಜಕಾರಣಿ 1952ರಲ್ಲಿ ಮಧುರೈನಲ್ಲಿ ಜನಸಿದ್ದರು. ಅವರಿಗೆ ವಿಜಯರಾಜ್ ಅಲಗರಸ್ವಾಮಿ ಎಂದು ಹೆಸರಿಡಲಾಗಿತ್ತು. ಬಳಿಕ ಅವರು ನಟನಾ ವೃತ್ತಿಯನ್ನು ಮುಂದುವರಿಸಲು ಪ್ರಾರಂಭಿಸಿದ ನಂತರ ತನ್ನ ಹೆಸರನ್ನು ವಿಜಯಕಾಂತ್ ಎಂದು ಬದಲಾಯಿಸಿದರು.

ವಿಜಯಕಾಂತ್ 1979ರಲ್ಲಿ ಇನಿಕ್ಕುಂ ಇಳಮೈ ಚಿತ್ರದ ಮೂಲಕ ಸಿನಿ ಲೋಕ್ಕೆ ಪಾದಾರ್ಪಣೆ ಮಾಡಿದ್ದರು.  1981ರಲ್ಲಿ ಬಿಡುಗಡೆಯಾದ ಚಿತ್ರ ‘ಸತ್ತಂ ಒರು ಇರುತ್ತರೈ’  ಅವರಿಗೆ ಹೆಚ್ಚು ಹೆಸರನ್ನು ತಂದುಕೊಟ್ಟಿತ್ತು. ನಂತರ ಅವರು 1980ರ ದಶಕದ ಹಲವಾರು ಪ್ರಸಿದ್ಧ ತಮಿಳು ಚಲನಚಿತ್ರಗಳಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದರು. ನೂರವತು ನಾಲ್, ವೈಧೇಗಿ ಕಾತಿರುಂತಾಲ್, ಅಮ್ಮನ್ ಕೋವಿಲ್ ಕಿಝಾಕಲೆ, ಊಮೈ ವಿಝಿಗಲ್, ಪೂನ್ತೋಟ್ಟಾ ಕಾವಲ್ಕಾರನ್, ಸೆಂದೂರ ಪೂವಾ ಇನ್ನೂ ಅನೇಕ ಸಿನಿಮಾಗಳಲ್ಲಿ ನಟಿಸಿದ್ದರು. ವಿಜಯಕಾಂತ್ 2010ರಲ್ಲಿ ವಿರುಧಗಿರಿ ಎಂಬ ಸಾಹಸಮಯ ಚಿತ್ರದ ನಿರ್ದೇಶನದೊಂದಿಗೆ ನಿರ್ದೇಶಕರಾಗಿಯು ಗುರುತಿಸಿಕೊಂಡಿದ್ದರು.

ಇದನ್ನು ಓದಿ: ‘ಮುಸ್ಲಿಂ ಲೀಗ್ ಜಮ್ಮು-ಕಾಶ್ಮೀರ’ ಸಂಘಟನೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...