Homeಕರ್ನಾಟಕವಿಜಯನಗರ: ‘ಆರ್‌ಎಸ್‌ಎಸ್‌ ಆಳ ಅಗಲ’ ಕೃತಿ ಉಚಿತವಾಗಿ ಹಂಚಿಕೆ

ವಿಜಯನಗರ: ‘ಆರ್‌ಎಸ್‌ಎಸ್‌ ಆಳ ಅಗಲ’ ಕೃತಿ ಉಚಿತವಾಗಿ ಹಂಚಿಕೆ

ಬಲಿಷ್ಠ ಸಂಘಟನೆ ಎಂದು ಬಿಂಬಿಸಿಕೊಳ್ಳುವ ಆರ್‌ಎಸ್‌ಎಸ್‌, ಮಾನವತಾವಾದಿ ದೇವನೂರರು ಬರೆದಿರುವ ಈ ಚಿಕ್ಕ ಕೃತಿಯಿಂದಾಗಿ  ನಡುಗಿ ಹೋಗಿದೆ: ಪೀರ್‌ ಬಾಷಾ

- Advertisement -
- Advertisement -

ನಾಡಿನ ಸಾಕ್ಷಿ ಪ್ರಜ್ಞೆ, ನೆಲ ಸಂಸ್ಕೃತಿಯ ಪ್ರತಿಪಾದಕರಾದ ದೇವನೂರ ಮಹಾದೇವ ಅವರು ಬರೆದಿರುವ ಆರ್‌ಎಸ್‌ಎಸ್‌ ಆಳ ಮತ್ತು ಅಗಲ ಕೃತಿಯನ್ನು ವಿಜಯನಗರದಲ್ಲಿ ಉಚಿತವಾಗಿ ಹಂಚುವ ಕಾರ್ಯಕ್ರಮ ನಡೆಯಿತು.

ಪ್ರಗತಿಪರ ಸ್ನೇಹಿತರು, ವಿಜಯನಗರ ಜಿಲ್ಲಾ ಡಾ.ಬಿ.ಆರ್‌.ಅಂಬೇಡ್ಕರ್ ಸಂಘದ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಕಾರ್ಯಕ್ರಮ ನಡೆಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಿಂತಕ ಪೀರ್‌ ಬಾಷಾ ಮಾತನಾಡಿ, “ಬಲಿಷ್ಠ ಸಂಘಟನೆ ಎಂದು ಬಿಂಬಿಸಿಕೊಳ್ಳುವ ಆರ್‌ಎಸ್‌ಎಸ್‌, ಮಾನವತಾವಾದಿ ದೇವನೂರರು ಬರೆದಿರುವ ಈ ಚಿಕ್ಕ ಕೃತಿಯಿಂದಾಗಿ  ನಡುಗಿ ಹೋಗಿದೆ. ಆರ್‌ಎಸ್‌ಎಸ್ ಮುಖ್ಯಸ್ಥರಾದ ಮೋಹನ್‌ ಭಾಗವತ್‌ ಅವರು ಕರ್ನಾಟಕಕ್ಕೆ ಬಂದು ಸಭೆ ಮಾಡುವಷ್ಟು ಆತಂಕ ಆರ್‌ಎಸ್‌ಎಸ್‌ಗೆ ಉಂಟಾಗಿದೆ. ಇದು ದೇವನೂರರಿಗಿರುವ ಶಕ್ತಿ. ಅವರ ವಿಚಾರಗಳಿಗಿರುವ ಶಕ್ತಿ” ಎಂದು ಬಣ್ಣಿಸಿದರು.

“ಆರ್‌ಎಸ್‌ಎಸ್‌ ಹುಟ್ಟಿ ನೂರು ವರ್ಷಗಳಾಗುತ್ತಿದೆ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಬರೆದಿರುವ ಸಂವಿಧಾನವನ್ನು ಆರ್‌ಎಸ್‌ಎಸ್‌ನವರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಹೇಗಾದರೂ ಸರಿ, ಅಂಬೇಡ್ಕರ್‌ ಬರೆದಿರುವ ಸಂವಿಧಾನವನ್ನು ಅಪ್ರಸ್ತುತಗೊಳಿಸಬೇಕು ಎಂದು ಎಲ್ಲ ರೀತಿಯ ಹುನ್ನಾರ ಮಾಡುತ್ತಿರುವುದನ್ನು ದೇವನೂರರು ತಮ್ಮ ಕೃತಿಯಲ್ಲಿ ಬಯಲಿಗೆಳೆದಿದ್ದಾರೆ” ಎಂದು ತಿಳಿಸಿದರು.

ಆರ್‌ಎಸ್‌ಎಸ್‌ ಚಾತುರ್‌ವರ್ಣ ಪದ್ಧತಿಯಲ್ಲಿ ನಂಬಿಕೆ ಇಟ್ಟಿದೆ. ಭಾರತದ ಸಂವಿಧಾನ ಜಾತಿ ವ್ಯವಸ್ಥೆ ಬೇಡ ಎನ್ನುತ್ತದೆ. ಆರ್‌ಎಸ್‌ಎಸ್ ಭಗವಾಧ್ವಜ ಬೇಕು ಎಂದರೆ ಅಂಬೇಡ್ಕರರ ಸಂವಿಧಾನ ತ್ರಿವರ್ಣ ಧ್ವಜದಲ್ಲಿ ನಂಬಿಕೆ ಇಟ್ಟಿದೆ. ನಮ್ಮ ಸಂವಿಧಾನ ಜಾತ್ಯತೀತತೆಯಲ್ಲಿ ನಂಬಿಕೆ ಇಟ್ಟಿದ್ದರೆ, ಆರ್‌ಎಸ್‌ಎಸ್‌ನವರು ಮನುವಾದದಲ್ಲಿ ನಂಬಿಕೆ ಇಟ್ಟಿದ್ದಾರೆ. ಈ ವಿಚಾರಗಳನ್ನು ದೇವನೂರರು ಸರಳವಾಗಿ ವಿವರಿಸಿದ್ದಾರೆ. ಇಲ್ಲಿಯವರೆಗೆ ಈ ಕೃತಿಯ ಒಂದು ಲಕ್ಷ ಪ್ರತಿ ಮಾರಾಟವಾಗಿವೆ. ವಿದ್ಯಾರ್ಥಿಗಳು ಖರೀದಿಸಿ ಓದುತ್ತಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದರು.

ಚಿಂತಕ ಕೆ.ರಮೇಶ್ ಮಾತನಾಡಿ, “ಆರ್‌ಎಸ್‌ಎಸ್‌ನ ನಿಜ ಬಣ್ಣವನ್ನು ದೇವನೂರರು ಬಯಲು ಮಾಡಿದ್ದಾರೆ. ಆರ್‌ಎಸ್‌ಎಸ್‌ ದೇಶದಲ್ಲಿ ಹೇಗೆ ವಿಷಬೀಜವನ್ನು ಬಿತ್ತುತ್ತಿದೆ ಎಂಬ ವಿಚಾರಗಳನ್ನು ಅತ್ಯಂತ ಸ್ಪಷ್ಟವಾಗಿ ಈ ಕೃತಿಯಲ್ಲಿ ವಿವರಿಸಲಾಗಿದೆ. ಈ ಕೃತಿಯನ್ನು ಓದುವ ದೊಡ್ಡ ಆಂದೋಲನ ಆಗಬೇಕಿದೆ” ಎಂದು ಆಶಿಸಿದರು.

ಜಿಲ್ಲಾ ದಲಿತ ಹಕ್ಕುಗಳ ಸಮಿತಿಯ ಮರಡಿ ಜಂಬಯ್ಯ ನಾಯಕ ಮಾತನಾಡಿ, “ಆರ್‌ಎಸ್‌ಎಸ್‌ ಆಳ ಮತ್ತು ಅಗಲ ಕೃತಿಯು ಬಹುಭಾಷೆಗಳಿಗೆ ತರ್ಜುಮೆಯಾಗುತ್ತಿದೆ. ಈ ವಿದ್ಯಮಾನವು ಕೃತಿಯ ಮಹತ್ವವನ್ನು ಹಾಗೂ ಆರ್‌ಎಸ್‌ಎಸ್‌ ಕುರಿತು ತಿಳಿದುಕೊಳ್ಳಬೇಕೆಂಬ ಜನರ ತವಕವನ್ನು ತೋರಿಸುತ್ತದೆ. ದೇಶ ಆತಂಕ ಸ್ಥಿತಿಯಲ್ಲಿರುವ ಸಂದರ್ಭದಲ್ಲಿ ಈ ಕೃತಿ ನಮಗೆ ಮಾರ್ಗದರ್ಶನ ತೋರಿದೆ” ಎಂದು ವಿವರಿಸಿದರು.

ವಿಜಯನಗರ ಬಂಡಾಯ ಸಾಹಿತ್ಯ ಸಂಚಾಲಕರಾದ ಪಿ.ಆರ್. ವೆಂಕಟೇಶ ಮಾತನಾಡಿ, “ಪ್ರಗತಿಪರರು, ಸಮಾನತೆ ಬಯಸುವವರು ವಿದೇಶದ ವಿಚಾರಗಳನ್ನು ತುರುಕುತ್ತಿದ್ದಾರೆಂದು ಆರ್‌ಎಸ್‌ಎಸ್‌ ಹೇಳುತ್ತಿದೆ. ಆದರೆ ಗೋಲ್ವಲ್ಕರ್‌ ಅವರ ಬಂಚ್‌ ಆಫ್ ಥಾಟ್ಸ್‌ ಯಾವ ದೇಶದ್ದು ಎಂದು ದೇವನೂರರು ಕೇಳುತ್ತಿದ್ದಾರೆ. ನಾಜಿ ಸಿದ್ಧಾಂತ ಎಲ್ಲಿಯದ್ದು ಎಂದು ಪ್ರಶ್ನಿಸಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿರಿ: ಆರ್‌ಎಸ್‌ಎಸ್‌ ಅಜೆಂಡಾಗಳನ್ನು ಬಯಲುಗೊಳಿಸುವ ಕನ್ನಡ ಕೃತಿಗಳು

ಬಣ್ಣದ ಮನೆ ಸೋಮಶೇಖರ್ ಮಾತನಾಡಿ, “ದೇವನೂರರ ಆರ್.ಎಸ್.ಎಸ್ ಆಳ ಮತ್ತು ಅಗಲ ಕೃತಿಯಿಂದ ಕೆಲವರ ಎದೆಯಲ್ಲಿ ನಡುಕ ಹುಟ್ಟಿರುವುದು ಸತ್ಯ. ಹೀಗಾಗಿ ಪುಸ್ತಕ ಹಂಚುವ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ಶಾಲಾ ಕಾಲೇಜು ಆವರಣಗಳಲ್ಲಿ ಆಯೋಜಿಸಬೇಕು. ವಿದ್ಯಾರ್ಥಿಗಳೊಂದಿಗೆ ಸಂವಾದ ಏರ್ಪಡಿಸಬೇಕು” ಎಂದು ಆಶಿಸಿದರು.

ಪ್ರಗತಿಪರ ಸಂಘಟನೆಯ ದುರ್ಗಪ್ಪ ಪೂಜಾರಿ, ಆಟೋ ಯುನಿಯನ್ ರಾಮಚಂದ್ರ ಮತ್ತು ಎಮ್.ಆರ್.ಎಮ್ ಮಂಜು, ಸ್ಲಮ್ ಜಾಗೃತಿಯ ವೆಂಕಟೇಶ್‌ ಸೇರಿದಂತೆ ಅನೇಕ ಚಿಂತಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಓದುಕಟ್ಟಿನಲ್ಲಿ ಹಲವಾರು ಕಡೆ ಸಂಸ್ಕೃತ ಪದಗಳಿಗೆ ಕನ್ನಡ ಪದಗಳನ್ನು ಬಳಸಬಹುದಿತ್ತು.

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...