Homeಕರ್ನಾಟಕವಿಜಯನಗರ: ‘ಆರ್‌ಎಸ್‌ಎಸ್‌ ಆಳ ಅಗಲ’ ಕೃತಿ ಉಚಿತವಾಗಿ ಹಂಚಿಕೆ

ವಿಜಯನಗರ: ‘ಆರ್‌ಎಸ್‌ಎಸ್‌ ಆಳ ಅಗಲ’ ಕೃತಿ ಉಚಿತವಾಗಿ ಹಂಚಿಕೆ

ಬಲಿಷ್ಠ ಸಂಘಟನೆ ಎಂದು ಬಿಂಬಿಸಿಕೊಳ್ಳುವ ಆರ್‌ಎಸ್‌ಎಸ್‌, ಮಾನವತಾವಾದಿ ದೇವನೂರರು ಬರೆದಿರುವ ಈ ಚಿಕ್ಕ ಕೃತಿಯಿಂದಾಗಿ  ನಡುಗಿ ಹೋಗಿದೆ: ಪೀರ್‌ ಬಾಷಾ

- Advertisement -
- Advertisement -

ನಾಡಿನ ಸಾಕ್ಷಿ ಪ್ರಜ್ಞೆ, ನೆಲ ಸಂಸ್ಕೃತಿಯ ಪ್ರತಿಪಾದಕರಾದ ದೇವನೂರ ಮಹಾದೇವ ಅವರು ಬರೆದಿರುವ ಆರ್‌ಎಸ್‌ಎಸ್‌ ಆಳ ಮತ್ತು ಅಗಲ ಕೃತಿಯನ್ನು ವಿಜಯನಗರದಲ್ಲಿ ಉಚಿತವಾಗಿ ಹಂಚುವ ಕಾರ್ಯಕ್ರಮ ನಡೆಯಿತು.

ಪ್ರಗತಿಪರ ಸ್ನೇಹಿತರು, ವಿಜಯನಗರ ಜಿಲ್ಲಾ ಡಾ.ಬಿ.ಆರ್‌.ಅಂಬೇಡ್ಕರ್ ಸಂಘದ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಕಾರ್ಯಕ್ರಮ ನಡೆಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಿಂತಕ ಪೀರ್‌ ಬಾಷಾ ಮಾತನಾಡಿ, “ಬಲಿಷ್ಠ ಸಂಘಟನೆ ಎಂದು ಬಿಂಬಿಸಿಕೊಳ್ಳುವ ಆರ್‌ಎಸ್‌ಎಸ್‌, ಮಾನವತಾವಾದಿ ದೇವನೂರರು ಬರೆದಿರುವ ಈ ಚಿಕ್ಕ ಕೃತಿಯಿಂದಾಗಿ  ನಡುಗಿ ಹೋಗಿದೆ. ಆರ್‌ಎಸ್‌ಎಸ್ ಮುಖ್ಯಸ್ಥರಾದ ಮೋಹನ್‌ ಭಾಗವತ್‌ ಅವರು ಕರ್ನಾಟಕಕ್ಕೆ ಬಂದು ಸಭೆ ಮಾಡುವಷ್ಟು ಆತಂಕ ಆರ್‌ಎಸ್‌ಎಸ್‌ಗೆ ಉಂಟಾಗಿದೆ. ಇದು ದೇವನೂರರಿಗಿರುವ ಶಕ್ತಿ. ಅವರ ವಿಚಾರಗಳಿಗಿರುವ ಶಕ್ತಿ” ಎಂದು ಬಣ್ಣಿಸಿದರು.

“ಆರ್‌ಎಸ್‌ಎಸ್‌ ಹುಟ್ಟಿ ನೂರು ವರ್ಷಗಳಾಗುತ್ತಿದೆ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಬರೆದಿರುವ ಸಂವಿಧಾನವನ್ನು ಆರ್‌ಎಸ್‌ಎಸ್‌ನವರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಹೇಗಾದರೂ ಸರಿ, ಅಂಬೇಡ್ಕರ್‌ ಬರೆದಿರುವ ಸಂವಿಧಾನವನ್ನು ಅಪ್ರಸ್ತುತಗೊಳಿಸಬೇಕು ಎಂದು ಎಲ್ಲ ರೀತಿಯ ಹುನ್ನಾರ ಮಾಡುತ್ತಿರುವುದನ್ನು ದೇವನೂರರು ತಮ್ಮ ಕೃತಿಯಲ್ಲಿ ಬಯಲಿಗೆಳೆದಿದ್ದಾರೆ” ಎಂದು ತಿಳಿಸಿದರು.

ಆರ್‌ಎಸ್‌ಎಸ್‌ ಚಾತುರ್‌ವರ್ಣ ಪದ್ಧತಿಯಲ್ಲಿ ನಂಬಿಕೆ ಇಟ್ಟಿದೆ. ಭಾರತದ ಸಂವಿಧಾನ ಜಾತಿ ವ್ಯವಸ್ಥೆ ಬೇಡ ಎನ್ನುತ್ತದೆ. ಆರ್‌ಎಸ್‌ಎಸ್ ಭಗವಾಧ್ವಜ ಬೇಕು ಎಂದರೆ ಅಂಬೇಡ್ಕರರ ಸಂವಿಧಾನ ತ್ರಿವರ್ಣ ಧ್ವಜದಲ್ಲಿ ನಂಬಿಕೆ ಇಟ್ಟಿದೆ. ನಮ್ಮ ಸಂವಿಧಾನ ಜಾತ್ಯತೀತತೆಯಲ್ಲಿ ನಂಬಿಕೆ ಇಟ್ಟಿದ್ದರೆ, ಆರ್‌ಎಸ್‌ಎಸ್‌ನವರು ಮನುವಾದದಲ್ಲಿ ನಂಬಿಕೆ ಇಟ್ಟಿದ್ದಾರೆ. ಈ ವಿಚಾರಗಳನ್ನು ದೇವನೂರರು ಸರಳವಾಗಿ ವಿವರಿಸಿದ್ದಾರೆ. ಇಲ್ಲಿಯವರೆಗೆ ಈ ಕೃತಿಯ ಒಂದು ಲಕ್ಷ ಪ್ರತಿ ಮಾರಾಟವಾಗಿವೆ. ವಿದ್ಯಾರ್ಥಿಗಳು ಖರೀದಿಸಿ ಓದುತ್ತಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದರು.

ಚಿಂತಕ ಕೆ.ರಮೇಶ್ ಮಾತನಾಡಿ, “ಆರ್‌ಎಸ್‌ಎಸ್‌ನ ನಿಜ ಬಣ್ಣವನ್ನು ದೇವನೂರರು ಬಯಲು ಮಾಡಿದ್ದಾರೆ. ಆರ್‌ಎಸ್‌ಎಸ್‌ ದೇಶದಲ್ಲಿ ಹೇಗೆ ವಿಷಬೀಜವನ್ನು ಬಿತ್ತುತ್ತಿದೆ ಎಂಬ ವಿಚಾರಗಳನ್ನು ಅತ್ಯಂತ ಸ್ಪಷ್ಟವಾಗಿ ಈ ಕೃತಿಯಲ್ಲಿ ವಿವರಿಸಲಾಗಿದೆ. ಈ ಕೃತಿಯನ್ನು ಓದುವ ದೊಡ್ಡ ಆಂದೋಲನ ಆಗಬೇಕಿದೆ” ಎಂದು ಆಶಿಸಿದರು.

ಜಿಲ್ಲಾ ದಲಿತ ಹಕ್ಕುಗಳ ಸಮಿತಿಯ ಮರಡಿ ಜಂಬಯ್ಯ ನಾಯಕ ಮಾತನಾಡಿ, “ಆರ್‌ಎಸ್‌ಎಸ್‌ ಆಳ ಮತ್ತು ಅಗಲ ಕೃತಿಯು ಬಹುಭಾಷೆಗಳಿಗೆ ತರ್ಜುಮೆಯಾಗುತ್ತಿದೆ. ಈ ವಿದ್ಯಮಾನವು ಕೃತಿಯ ಮಹತ್ವವನ್ನು ಹಾಗೂ ಆರ್‌ಎಸ್‌ಎಸ್‌ ಕುರಿತು ತಿಳಿದುಕೊಳ್ಳಬೇಕೆಂಬ ಜನರ ತವಕವನ್ನು ತೋರಿಸುತ್ತದೆ. ದೇಶ ಆತಂಕ ಸ್ಥಿತಿಯಲ್ಲಿರುವ ಸಂದರ್ಭದಲ್ಲಿ ಈ ಕೃತಿ ನಮಗೆ ಮಾರ್ಗದರ್ಶನ ತೋರಿದೆ” ಎಂದು ವಿವರಿಸಿದರು.

ವಿಜಯನಗರ ಬಂಡಾಯ ಸಾಹಿತ್ಯ ಸಂಚಾಲಕರಾದ ಪಿ.ಆರ್. ವೆಂಕಟೇಶ ಮಾತನಾಡಿ, “ಪ್ರಗತಿಪರರು, ಸಮಾನತೆ ಬಯಸುವವರು ವಿದೇಶದ ವಿಚಾರಗಳನ್ನು ತುರುಕುತ್ತಿದ್ದಾರೆಂದು ಆರ್‌ಎಸ್‌ಎಸ್‌ ಹೇಳುತ್ತಿದೆ. ಆದರೆ ಗೋಲ್ವಲ್ಕರ್‌ ಅವರ ಬಂಚ್‌ ಆಫ್ ಥಾಟ್ಸ್‌ ಯಾವ ದೇಶದ್ದು ಎಂದು ದೇವನೂರರು ಕೇಳುತ್ತಿದ್ದಾರೆ. ನಾಜಿ ಸಿದ್ಧಾಂತ ಎಲ್ಲಿಯದ್ದು ಎಂದು ಪ್ರಶ್ನಿಸಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿರಿ: ಆರ್‌ಎಸ್‌ಎಸ್‌ ಅಜೆಂಡಾಗಳನ್ನು ಬಯಲುಗೊಳಿಸುವ ಕನ್ನಡ ಕೃತಿಗಳು

ಬಣ್ಣದ ಮನೆ ಸೋಮಶೇಖರ್ ಮಾತನಾಡಿ, “ದೇವನೂರರ ಆರ್.ಎಸ್.ಎಸ್ ಆಳ ಮತ್ತು ಅಗಲ ಕೃತಿಯಿಂದ ಕೆಲವರ ಎದೆಯಲ್ಲಿ ನಡುಕ ಹುಟ್ಟಿರುವುದು ಸತ್ಯ. ಹೀಗಾಗಿ ಪುಸ್ತಕ ಹಂಚುವ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ಶಾಲಾ ಕಾಲೇಜು ಆವರಣಗಳಲ್ಲಿ ಆಯೋಜಿಸಬೇಕು. ವಿದ್ಯಾರ್ಥಿಗಳೊಂದಿಗೆ ಸಂವಾದ ಏರ್ಪಡಿಸಬೇಕು” ಎಂದು ಆಶಿಸಿದರು.

ಪ್ರಗತಿಪರ ಸಂಘಟನೆಯ ದುರ್ಗಪ್ಪ ಪೂಜಾರಿ, ಆಟೋ ಯುನಿಯನ್ ರಾಮಚಂದ್ರ ಮತ್ತು ಎಮ್.ಆರ್.ಎಮ್ ಮಂಜು, ಸ್ಲಮ್ ಜಾಗೃತಿಯ ವೆಂಕಟೇಶ್‌ ಸೇರಿದಂತೆ ಅನೇಕ ಚಿಂತಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಓದುಕಟ್ಟಿನಲ್ಲಿ ಹಲವಾರು ಕಡೆ ಸಂಸ್ಕೃತ ಪದಗಳಿಗೆ ಕನ್ನಡ ಪದಗಳನ್ನು ಬಳಸಬಹುದಿತ್ತು.

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...