Homeಕರ್ನಾಟಕವಿಜಯನಗರ: ‘ಆರ್‌ಎಸ್‌ಎಸ್‌ ಆಳ ಅಗಲ’ ಕೃತಿ ಉಚಿತವಾಗಿ ಹಂಚಿಕೆ

ವಿಜಯನಗರ: ‘ಆರ್‌ಎಸ್‌ಎಸ್‌ ಆಳ ಅಗಲ’ ಕೃತಿ ಉಚಿತವಾಗಿ ಹಂಚಿಕೆ

ಬಲಿಷ್ಠ ಸಂಘಟನೆ ಎಂದು ಬಿಂಬಿಸಿಕೊಳ್ಳುವ ಆರ್‌ಎಸ್‌ಎಸ್‌, ಮಾನವತಾವಾದಿ ದೇವನೂರರು ಬರೆದಿರುವ ಈ ಚಿಕ್ಕ ಕೃತಿಯಿಂದಾಗಿ  ನಡುಗಿ ಹೋಗಿದೆ: ಪೀರ್‌ ಬಾಷಾ

- Advertisement -
- Advertisement -

ನಾಡಿನ ಸಾಕ್ಷಿ ಪ್ರಜ್ಞೆ, ನೆಲ ಸಂಸ್ಕೃತಿಯ ಪ್ರತಿಪಾದಕರಾದ ದೇವನೂರ ಮಹಾದೇವ ಅವರು ಬರೆದಿರುವ ಆರ್‌ಎಸ್‌ಎಸ್‌ ಆಳ ಮತ್ತು ಅಗಲ ಕೃತಿಯನ್ನು ವಿಜಯನಗರದಲ್ಲಿ ಉಚಿತವಾಗಿ ಹಂಚುವ ಕಾರ್ಯಕ್ರಮ ನಡೆಯಿತು.

ಪ್ರಗತಿಪರ ಸ್ನೇಹಿತರು, ವಿಜಯನಗರ ಜಿಲ್ಲಾ ಡಾ.ಬಿ.ಆರ್‌.ಅಂಬೇಡ್ಕರ್ ಸಂಘದ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಕಾರ್ಯಕ್ರಮ ನಡೆಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಿಂತಕ ಪೀರ್‌ ಬಾಷಾ ಮಾತನಾಡಿ, “ಬಲಿಷ್ಠ ಸಂಘಟನೆ ಎಂದು ಬಿಂಬಿಸಿಕೊಳ್ಳುವ ಆರ್‌ಎಸ್‌ಎಸ್‌, ಮಾನವತಾವಾದಿ ದೇವನೂರರು ಬರೆದಿರುವ ಈ ಚಿಕ್ಕ ಕೃತಿಯಿಂದಾಗಿ  ನಡುಗಿ ಹೋಗಿದೆ. ಆರ್‌ಎಸ್‌ಎಸ್ ಮುಖ್ಯಸ್ಥರಾದ ಮೋಹನ್‌ ಭಾಗವತ್‌ ಅವರು ಕರ್ನಾಟಕಕ್ಕೆ ಬಂದು ಸಭೆ ಮಾಡುವಷ್ಟು ಆತಂಕ ಆರ್‌ಎಸ್‌ಎಸ್‌ಗೆ ಉಂಟಾಗಿದೆ. ಇದು ದೇವನೂರರಿಗಿರುವ ಶಕ್ತಿ. ಅವರ ವಿಚಾರಗಳಿಗಿರುವ ಶಕ್ತಿ” ಎಂದು ಬಣ್ಣಿಸಿದರು.

“ಆರ್‌ಎಸ್‌ಎಸ್‌ ಹುಟ್ಟಿ ನೂರು ವರ್ಷಗಳಾಗುತ್ತಿದೆ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಬರೆದಿರುವ ಸಂವಿಧಾನವನ್ನು ಆರ್‌ಎಸ್‌ಎಸ್‌ನವರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಹೇಗಾದರೂ ಸರಿ, ಅಂಬೇಡ್ಕರ್‌ ಬರೆದಿರುವ ಸಂವಿಧಾನವನ್ನು ಅಪ್ರಸ್ತುತಗೊಳಿಸಬೇಕು ಎಂದು ಎಲ್ಲ ರೀತಿಯ ಹುನ್ನಾರ ಮಾಡುತ್ತಿರುವುದನ್ನು ದೇವನೂರರು ತಮ್ಮ ಕೃತಿಯಲ್ಲಿ ಬಯಲಿಗೆಳೆದಿದ್ದಾರೆ” ಎಂದು ತಿಳಿಸಿದರು.

ಆರ್‌ಎಸ್‌ಎಸ್‌ ಚಾತುರ್‌ವರ್ಣ ಪದ್ಧತಿಯಲ್ಲಿ ನಂಬಿಕೆ ಇಟ್ಟಿದೆ. ಭಾರತದ ಸಂವಿಧಾನ ಜಾತಿ ವ್ಯವಸ್ಥೆ ಬೇಡ ಎನ್ನುತ್ತದೆ. ಆರ್‌ಎಸ್‌ಎಸ್ ಭಗವಾಧ್ವಜ ಬೇಕು ಎಂದರೆ ಅಂಬೇಡ್ಕರರ ಸಂವಿಧಾನ ತ್ರಿವರ್ಣ ಧ್ವಜದಲ್ಲಿ ನಂಬಿಕೆ ಇಟ್ಟಿದೆ. ನಮ್ಮ ಸಂವಿಧಾನ ಜಾತ್ಯತೀತತೆಯಲ್ಲಿ ನಂಬಿಕೆ ಇಟ್ಟಿದ್ದರೆ, ಆರ್‌ಎಸ್‌ಎಸ್‌ನವರು ಮನುವಾದದಲ್ಲಿ ನಂಬಿಕೆ ಇಟ್ಟಿದ್ದಾರೆ. ಈ ವಿಚಾರಗಳನ್ನು ದೇವನೂರರು ಸರಳವಾಗಿ ವಿವರಿಸಿದ್ದಾರೆ. ಇಲ್ಲಿಯವರೆಗೆ ಈ ಕೃತಿಯ ಒಂದು ಲಕ್ಷ ಪ್ರತಿ ಮಾರಾಟವಾಗಿವೆ. ವಿದ್ಯಾರ್ಥಿಗಳು ಖರೀದಿಸಿ ಓದುತ್ತಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದರು.

ಚಿಂತಕ ಕೆ.ರಮೇಶ್ ಮಾತನಾಡಿ, “ಆರ್‌ಎಸ್‌ಎಸ್‌ನ ನಿಜ ಬಣ್ಣವನ್ನು ದೇವನೂರರು ಬಯಲು ಮಾಡಿದ್ದಾರೆ. ಆರ್‌ಎಸ್‌ಎಸ್‌ ದೇಶದಲ್ಲಿ ಹೇಗೆ ವಿಷಬೀಜವನ್ನು ಬಿತ್ತುತ್ತಿದೆ ಎಂಬ ವಿಚಾರಗಳನ್ನು ಅತ್ಯಂತ ಸ್ಪಷ್ಟವಾಗಿ ಈ ಕೃತಿಯಲ್ಲಿ ವಿವರಿಸಲಾಗಿದೆ. ಈ ಕೃತಿಯನ್ನು ಓದುವ ದೊಡ್ಡ ಆಂದೋಲನ ಆಗಬೇಕಿದೆ” ಎಂದು ಆಶಿಸಿದರು.

ಜಿಲ್ಲಾ ದಲಿತ ಹಕ್ಕುಗಳ ಸಮಿತಿಯ ಮರಡಿ ಜಂಬಯ್ಯ ನಾಯಕ ಮಾತನಾಡಿ, “ಆರ್‌ಎಸ್‌ಎಸ್‌ ಆಳ ಮತ್ತು ಅಗಲ ಕೃತಿಯು ಬಹುಭಾಷೆಗಳಿಗೆ ತರ್ಜುಮೆಯಾಗುತ್ತಿದೆ. ಈ ವಿದ್ಯಮಾನವು ಕೃತಿಯ ಮಹತ್ವವನ್ನು ಹಾಗೂ ಆರ್‌ಎಸ್‌ಎಸ್‌ ಕುರಿತು ತಿಳಿದುಕೊಳ್ಳಬೇಕೆಂಬ ಜನರ ತವಕವನ್ನು ತೋರಿಸುತ್ತದೆ. ದೇಶ ಆತಂಕ ಸ್ಥಿತಿಯಲ್ಲಿರುವ ಸಂದರ್ಭದಲ್ಲಿ ಈ ಕೃತಿ ನಮಗೆ ಮಾರ್ಗದರ್ಶನ ತೋರಿದೆ” ಎಂದು ವಿವರಿಸಿದರು.

ವಿಜಯನಗರ ಬಂಡಾಯ ಸಾಹಿತ್ಯ ಸಂಚಾಲಕರಾದ ಪಿ.ಆರ್. ವೆಂಕಟೇಶ ಮಾತನಾಡಿ, “ಪ್ರಗತಿಪರರು, ಸಮಾನತೆ ಬಯಸುವವರು ವಿದೇಶದ ವಿಚಾರಗಳನ್ನು ತುರುಕುತ್ತಿದ್ದಾರೆಂದು ಆರ್‌ಎಸ್‌ಎಸ್‌ ಹೇಳುತ್ತಿದೆ. ಆದರೆ ಗೋಲ್ವಲ್ಕರ್‌ ಅವರ ಬಂಚ್‌ ಆಫ್ ಥಾಟ್ಸ್‌ ಯಾವ ದೇಶದ್ದು ಎಂದು ದೇವನೂರರು ಕೇಳುತ್ತಿದ್ದಾರೆ. ನಾಜಿ ಸಿದ್ಧಾಂತ ಎಲ್ಲಿಯದ್ದು ಎಂದು ಪ್ರಶ್ನಿಸಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿರಿ: ಆರ್‌ಎಸ್‌ಎಸ್‌ ಅಜೆಂಡಾಗಳನ್ನು ಬಯಲುಗೊಳಿಸುವ ಕನ್ನಡ ಕೃತಿಗಳು

ಬಣ್ಣದ ಮನೆ ಸೋಮಶೇಖರ್ ಮಾತನಾಡಿ, “ದೇವನೂರರ ಆರ್.ಎಸ್.ಎಸ್ ಆಳ ಮತ್ತು ಅಗಲ ಕೃತಿಯಿಂದ ಕೆಲವರ ಎದೆಯಲ್ಲಿ ನಡುಕ ಹುಟ್ಟಿರುವುದು ಸತ್ಯ. ಹೀಗಾಗಿ ಪುಸ್ತಕ ಹಂಚುವ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ಶಾಲಾ ಕಾಲೇಜು ಆವರಣಗಳಲ್ಲಿ ಆಯೋಜಿಸಬೇಕು. ವಿದ್ಯಾರ್ಥಿಗಳೊಂದಿಗೆ ಸಂವಾದ ಏರ್ಪಡಿಸಬೇಕು” ಎಂದು ಆಶಿಸಿದರು.

ಪ್ರಗತಿಪರ ಸಂಘಟನೆಯ ದುರ್ಗಪ್ಪ ಪೂಜಾರಿ, ಆಟೋ ಯುನಿಯನ್ ರಾಮಚಂದ್ರ ಮತ್ತು ಎಮ್.ಆರ್.ಎಮ್ ಮಂಜು, ಸ್ಲಮ್ ಜಾಗೃತಿಯ ವೆಂಕಟೇಶ್‌ ಸೇರಿದಂತೆ ಅನೇಕ ಚಿಂತಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಓದುಕಟ್ಟಿನಲ್ಲಿ ಹಲವಾರು ಕಡೆ ಸಂಸ್ಕೃತ ಪದಗಳಿಗೆ ಕನ್ನಡ ಪದಗಳನ್ನು ಬಳಸಬಹುದಿತ್ತು.

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...