Homeಕರ್ನಾಟಕವಿಜಯನಗರ: ‘ಆರ್‌ಎಸ್‌ಎಸ್‌ ಆಳ ಅಗಲ’ ಕೃತಿ ಉಚಿತವಾಗಿ ಹಂಚಿಕೆ

ವಿಜಯನಗರ: ‘ಆರ್‌ಎಸ್‌ಎಸ್‌ ಆಳ ಅಗಲ’ ಕೃತಿ ಉಚಿತವಾಗಿ ಹಂಚಿಕೆ

ಬಲಿಷ್ಠ ಸಂಘಟನೆ ಎಂದು ಬಿಂಬಿಸಿಕೊಳ್ಳುವ ಆರ್‌ಎಸ್‌ಎಸ್‌, ಮಾನವತಾವಾದಿ ದೇವನೂರರು ಬರೆದಿರುವ ಈ ಚಿಕ್ಕ ಕೃತಿಯಿಂದಾಗಿ  ನಡುಗಿ ಹೋಗಿದೆ: ಪೀರ್‌ ಬಾಷಾ

- Advertisement -
- Advertisement -

ನಾಡಿನ ಸಾಕ್ಷಿ ಪ್ರಜ್ಞೆ, ನೆಲ ಸಂಸ್ಕೃತಿಯ ಪ್ರತಿಪಾದಕರಾದ ದೇವನೂರ ಮಹಾದೇವ ಅವರು ಬರೆದಿರುವ ಆರ್‌ಎಸ್‌ಎಸ್‌ ಆಳ ಮತ್ತು ಅಗಲ ಕೃತಿಯನ್ನು ವಿಜಯನಗರದಲ್ಲಿ ಉಚಿತವಾಗಿ ಹಂಚುವ ಕಾರ್ಯಕ್ರಮ ನಡೆಯಿತು.

ಪ್ರಗತಿಪರ ಸ್ನೇಹಿತರು, ವಿಜಯನಗರ ಜಿಲ್ಲಾ ಡಾ.ಬಿ.ಆರ್‌.ಅಂಬೇಡ್ಕರ್ ಸಂಘದ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಕಾರ್ಯಕ್ರಮ ನಡೆಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಿಂತಕ ಪೀರ್‌ ಬಾಷಾ ಮಾತನಾಡಿ, “ಬಲಿಷ್ಠ ಸಂಘಟನೆ ಎಂದು ಬಿಂಬಿಸಿಕೊಳ್ಳುವ ಆರ್‌ಎಸ್‌ಎಸ್‌, ಮಾನವತಾವಾದಿ ದೇವನೂರರು ಬರೆದಿರುವ ಈ ಚಿಕ್ಕ ಕೃತಿಯಿಂದಾಗಿ  ನಡುಗಿ ಹೋಗಿದೆ. ಆರ್‌ಎಸ್‌ಎಸ್ ಮುಖ್ಯಸ್ಥರಾದ ಮೋಹನ್‌ ಭಾಗವತ್‌ ಅವರು ಕರ್ನಾಟಕಕ್ಕೆ ಬಂದು ಸಭೆ ಮಾಡುವಷ್ಟು ಆತಂಕ ಆರ್‌ಎಸ್‌ಎಸ್‌ಗೆ ಉಂಟಾಗಿದೆ. ಇದು ದೇವನೂರರಿಗಿರುವ ಶಕ್ತಿ. ಅವರ ವಿಚಾರಗಳಿಗಿರುವ ಶಕ್ತಿ” ಎಂದು ಬಣ್ಣಿಸಿದರು.

“ಆರ್‌ಎಸ್‌ಎಸ್‌ ಹುಟ್ಟಿ ನೂರು ವರ್ಷಗಳಾಗುತ್ತಿದೆ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಬರೆದಿರುವ ಸಂವಿಧಾನವನ್ನು ಆರ್‌ಎಸ್‌ಎಸ್‌ನವರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಹೇಗಾದರೂ ಸರಿ, ಅಂಬೇಡ್ಕರ್‌ ಬರೆದಿರುವ ಸಂವಿಧಾನವನ್ನು ಅಪ್ರಸ್ತುತಗೊಳಿಸಬೇಕು ಎಂದು ಎಲ್ಲ ರೀತಿಯ ಹುನ್ನಾರ ಮಾಡುತ್ತಿರುವುದನ್ನು ದೇವನೂರರು ತಮ್ಮ ಕೃತಿಯಲ್ಲಿ ಬಯಲಿಗೆಳೆದಿದ್ದಾರೆ” ಎಂದು ತಿಳಿಸಿದರು.

ಆರ್‌ಎಸ್‌ಎಸ್‌ ಚಾತುರ್‌ವರ್ಣ ಪದ್ಧತಿಯಲ್ಲಿ ನಂಬಿಕೆ ಇಟ್ಟಿದೆ. ಭಾರತದ ಸಂವಿಧಾನ ಜಾತಿ ವ್ಯವಸ್ಥೆ ಬೇಡ ಎನ್ನುತ್ತದೆ. ಆರ್‌ಎಸ್‌ಎಸ್ ಭಗವಾಧ್ವಜ ಬೇಕು ಎಂದರೆ ಅಂಬೇಡ್ಕರರ ಸಂವಿಧಾನ ತ್ರಿವರ್ಣ ಧ್ವಜದಲ್ಲಿ ನಂಬಿಕೆ ಇಟ್ಟಿದೆ. ನಮ್ಮ ಸಂವಿಧಾನ ಜಾತ್ಯತೀತತೆಯಲ್ಲಿ ನಂಬಿಕೆ ಇಟ್ಟಿದ್ದರೆ, ಆರ್‌ಎಸ್‌ಎಸ್‌ನವರು ಮನುವಾದದಲ್ಲಿ ನಂಬಿಕೆ ಇಟ್ಟಿದ್ದಾರೆ. ಈ ವಿಚಾರಗಳನ್ನು ದೇವನೂರರು ಸರಳವಾಗಿ ವಿವರಿಸಿದ್ದಾರೆ. ಇಲ್ಲಿಯವರೆಗೆ ಈ ಕೃತಿಯ ಒಂದು ಲಕ್ಷ ಪ್ರತಿ ಮಾರಾಟವಾಗಿವೆ. ವಿದ್ಯಾರ್ಥಿಗಳು ಖರೀದಿಸಿ ಓದುತ್ತಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದರು.

ಚಿಂತಕ ಕೆ.ರಮೇಶ್ ಮಾತನಾಡಿ, “ಆರ್‌ಎಸ್‌ಎಸ್‌ನ ನಿಜ ಬಣ್ಣವನ್ನು ದೇವನೂರರು ಬಯಲು ಮಾಡಿದ್ದಾರೆ. ಆರ್‌ಎಸ್‌ಎಸ್‌ ದೇಶದಲ್ಲಿ ಹೇಗೆ ವಿಷಬೀಜವನ್ನು ಬಿತ್ತುತ್ತಿದೆ ಎಂಬ ವಿಚಾರಗಳನ್ನು ಅತ್ಯಂತ ಸ್ಪಷ್ಟವಾಗಿ ಈ ಕೃತಿಯಲ್ಲಿ ವಿವರಿಸಲಾಗಿದೆ. ಈ ಕೃತಿಯನ್ನು ಓದುವ ದೊಡ್ಡ ಆಂದೋಲನ ಆಗಬೇಕಿದೆ” ಎಂದು ಆಶಿಸಿದರು.

ಜಿಲ್ಲಾ ದಲಿತ ಹಕ್ಕುಗಳ ಸಮಿತಿಯ ಮರಡಿ ಜಂಬಯ್ಯ ನಾಯಕ ಮಾತನಾಡಿ, “ಆರ್‌ಎಸ್‌ಎಸ್‌ ಆಳ ಮತ್ತು ಅಗಲ ಕೃತಿಯು ಬಹುಭಾಷೆಗಳಿಗೆ ತರ್ಜುಮೆಯಾಗುತ್ತಿದೆ. ಈ ವಿದ್ಯಮಾನವು ಕೃತಿಯ ಮಹತ್ವವನ್ನು ಹಾಗೂ ಆರ್‌ಎಸ್‌ಎಸ್‌ ಕುರಿತು ತಿಳಿದುಕೊಳ್ಳಬೇಕೆಂಬ ಜನರ ತವಕವನ್ನು ತೋರಿಸುತ್ತದೆ. ದೇಶ ಆತಂಕ ಸ್ಥಿತಿಯಲ್ಲಿರುವ ಸಂದರ್ಭದಲ್ಲಿ ಈ ಕೃತಿ ನಮಗೆ ಮಾರ್ಗದರ್ಶನ ತೋರಿದೆ” ಎಂದು ವಿವರಿಸಿದರು.

ವಿಜಯನಗರ ಬಂಡಾಯ ಸಾಹಿತ್ಯ ಸಂಚಾಲಕರಾದ ಪಿ.ಆರ್. ವೆಂಕಟೇಶ ಮಾತನಾಡಿ, “ಪ್ರಗತಿಪರರು, ಸಮಾನತೆ ಬಯಸುವವರು ವಿದೇಶದ ವಿಚಾರಗಳನ್ನು ತುರುಕುತ್ತಿದ್ದಾರೆಂದು ಆರ್‌ಎಸ್‌ಎಸ್‌ ಹೇಳುತ್ತಿದೆ. ಆದರೆ ಗೋಲ್ವಲ್ಕರ್‌ ಅವರ ಬಂಚ್‌ ಆಫ್ ಥಾಟ್ಸ್‌ ಯಾವ ದೇಶದ್ದು ಎಂದು ದೇವನೂರರು ಕೇಳುತ್ತಿದ್ದಾರೆ. ನಾಜಿ ಸಿದ್ಧಾಂತ ಎಲ್ಲಿಯದ್ದು ಎಂದು ಪ್ರಶ್ನಿಸಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿರಿ: ಆರ್‌ಎಸ್‌ಎಸ್‌ ಅಜೆಂಡಾಗಳನ್ನು ಬಯಲುಗೊಳಿಸುವ ಕನ್ನಡ ಕೃತಿಗಳು

ಬಣ್ಣದ ಮನೆ ಸೋಮಶೇಖರ್ ಮಾತನಾಡಿ, “ದೇವನೂರರ ಆರ್.ಎಸ್.ಎಸ್ ಆಳ ಮತ್ತು ಅಗಲ ಕೃತಿಯಿಂದ ಕೆಲವರ ಎದೆಯಲ್ಲಿ ನಡುಕ ಹುಟ್ಟಿರುವುದು ಸತ್ಯ. ಹೀಗಾಗಿ ಪುಸ್ತಕ ಹಂಚುವ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ಶಾಲಾ ಕಾಲೇಜು ಆವರಣಗಳಲ್ಲಿ ಆಯೋಜಿಸಬೇಕು. ವಿದ್ಯಾರ್ಥಿಗಳೊಂದಿಗೆ ಸಂವಾದ ಏರ್ಪಡಿಸಬೇಕು” ಎಂದು ಆಶಿಸಿದರು.

ಪ್ರಗತಿಪರ ಸಂಘಟನೆಯ ದುರ್ಗಪ್ಪ ಪೂಜಾರಿ, ಆಟೋ ಯುನಿಯನ್ ರಾಮಚಂದ್ರ ಮತ್ತು ಎಮ್.ಆರ್.ಎಮ್ ಮಂಜು, ಸ್ಲಮ್ ಜಾಗೃತಿಯ ವೆಂಕಟೇಶ್‌ ಸೇರಿದಂತೆ ಅನೇಕ ಚಿಂತಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಓದುಕಟ್ಟಿನಲ್ಲಿ ಹಲವಾರು ಕಡೆ ಸಂಸ್ಕೃತ ಪದಗಳಿಗೆ ಕನ್ನಡ ಪದಗಳನ್ನು ಬಳಸಬಹುದಿತ್ತು.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...