Homeಕರ್ನಾಟಕವಿಜಯನಗರ: ‘ಆರ್‌ಎಸ್‌ಎಸ್‌ ಆಳ ಅಗಲ’ ಕೃತಿ ಉಚಿತವಾಗಿ ಹಂಚಿಕೆ

ವಿಜಯನಗರ: ‘ಆರ್‌ಎಸ್‌ಎಸ್‌ ಆಳ ಅಗಲ’ ಕೃತಿ ಉಚಿತವಾಗಿ ಹಂಚಿಕೆ

ಬಲಿಷ್ಠ ಸಂಘಟನೆ ಎಂದು ಬಿಂಬಿಸಿಕೊಳ್ಳುವ ಆರ್‌ಎಸ್‌ಎಸ್‌, ಮಾನವತಾವಾದಿ ದೇವನೂರರು ಬರೆದಿರುವ ಈ ಚಿಕ್ಕ ಕೃತಿಯಿಂದಾಗಿ  ನಡುಗಿ ಹೋಗಿದೆ: ಪೀರ್‌ ಬಾಷಾ

- Advertisement -
- Advertisement -

ನಾಡಿನ ಸಾಕ್ಷಿ ಪ್ರಜ್ಞೆ, ನೆಲ ಸಂಸ್ಕೃತಿಯ ಪ್ರತಿಪಾದಕರಾದ ದೇವನೂರ ಮಹಾದೇವ ಅವರು ಬರೆದಿರುವ ಆರ್‌ಎಸ್‌ಎಸ್‌ ಆಳ ಮತ್ತು ಅಗಲ ಕೃತಿಯನ್ನು ವಿಜಯನಗರದಲ್ಲಿ ಉಚಿತವಾಗಿ ಹಂಚುವ ಕಾರ್ಯಕ್ರಮ ನಡೆಯಿತು.

ಪ್ರಗತಿಪರ ಸ್ನೇಹಿತರು, ವಿಜಯನಗರ ಜಿಲ್ಲಾ ಡಾ.ಬಿ.ಆರ್‌.ಅಂಬೇಡ್ಕರ್ ಸಂಘದ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಕಾರ್ಯಕ್ರಮ ನಡೆಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಿಂತಕ ಪೀರ್‌ ಬಾಷಾ ಮಾತನಾಡಿ, “ಬಲಿಷ್ಠ ಸಂಘಟನೆ ಎಂದು ಬಿಂಬಿಸಿಕೊಳ್ಳುವ ಆರ್‌ಎಸ್‌ಎಸ್‌, ಮಾನವತಾವಾದಿ ದೇವನೂರರು ಬರೆದಿರುವ ಈ ಚಿಕ್ಕ ಕೃತಿಯಿಂದಾಗಿ  ನಡುಗಿ ಹೋಗಿದೆ. ಆರ್‌ಎಸ್‌ಎಸ್ ಮುಖ್ಯಸ್ಥರಾದ ಮೋಹನ್‌ ಭಾಗವತ್‌ ಅವರು ಕರ್ನಾಟಕಕ್ಕೆ ಬಂದು ಸಭೆ ಮಾಡುವಷ್ಟು ಆತಂಕ ಆರ್‌ಎಸ್‌ಎಸ್‌ಗೆ ಉಂಟಾಗಿದೆ. ಇದು ದೇವನೂರರಿಗಿರುವ ಶಕ್ತಿ. ಅವರ ವಿಚಾರಗಳಿಗಿರುವ ಶಕ್ತಿ” ಎಂದು ಬಣ್ಣಿಸಿದರು.

“ಆರ್‌ಎಸ್‌ಎಸ್‌ ಹುಟ್ಟಿ ನೂರು ವರ್ಷಗಳಾಗುತ್ತಿದೆ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಬರೆದಿರುವ ಸಂವಿಧಾನವನ್ನು ಆರ್‌ಎಸ್‌ಎಸ್‌ನವರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಹೇಗಾದರೂ ಸರಿ, ಅಂಬೇಡ್ಕರ್‌ ಬರೆದಿರುವ ಸಂವಿಧಾನವನ್ನು ಅಪ್ರಸ್ತುತಗೊಳಿಸಬೇಕು ಎಂದು ಎಲ್ಲ ರೀತಿಯ ಹುನ್ನಾರ ಮಾಡುತ್ತಿರುವುದನ್ನು ದೇವನೂರರು ತಮ್ಮ ಕೃತಿಯಲ್ಲಿ ಬಯಲಿಗೆಳೆದಿದ್ದಾರೆ” ಎಂದು ತಿಳಿಸಿದರು.

ಆರ್‌ಎಸ್‌ಎಸ್‌ ಚಾತುರ್‌ವರ್ಣ ಪದ್ಧತಿಯಲ್ಲಿ ನಂಬಿಕೆ ಇಟ್ಟಿದೆ. ಭಾರತದ ಸಂವಿಧಾನ ಜಾತಿ ವ್ಯವಸ್ಥೆ ಬೇಡ ಎನ್ನುತ್ತದೆ. ಆರ್‌ಎಸ್‌ಎಸ್ ಭಗವಾಧ್ವಜ ಬೇಕು ಎಂದರೆ ಅಂಬೇಡ್ಕರರ ಸಂವಿಧಾನ ತ್ರಿವರ್ಣ ಧ್ವಜದಲ್ಲಿ ನಂಬಿಕೆ ಇಟ್ಟಿದೆ. ನಮ್ಮ ಸಂವಿಧಾನ ಜಾತ್ಯತೀತತೆಯಲ್ಲಿ ನಂಬಿಕೆ ಇಟ್ಟಿದ್ದರೆ, ಆರ್‌ಎಸ್‌ಎಸ್‌ನವರು ಮನುವಾದದಲ್ಲಿ ನಂಬಿಕೆ ಇಟ್ಟಿದ್ದಾರೆ. ಈ ವಿಚಾರಗಳನ್ನು ದೇವನೂರರು ಸರಳವಾಗಿ ವಿವರಿಸಿದ್ದಾರೆ. ಇಲ್ಲಿಯವರೆಗೆ ಈ ಕೃತಿಯ ಒಂದು ಲಕ್ಷ ಪ್ರತಿ ಮಾರಾಟವಾಗಿವೆ. ವಿದ್ಯಾರ್ಥಿಗಳು ಖರೀದಿಸಿ ಓದುತ್ತಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದರು.

ಚಿಂತಕ ಕೆ.ರಮೇಶ್ ಮಾತನಾಡಿ, “ಆರ್‌ಎಸ್‌ಎಸ್‌ನ ನಿಜ ಬಣ್ಣವನ್ನು ದೇವನೂರರು ಬಯಲು ಮಾಡಿದ್ದಾರೆ. ಆರ್‌ಎಸ್‌ಎಸ್‌ ದೇಶದಲ್ಲಿ ಹೇಗೆ ವಿಷಬೀಜವನ್ನು ಬಿತ್ತುತ್ತಿದೆ ಎಂಬ ವಿಚಾರಗಳನ್ನು ಅತ್ಯಂತ ಸ್ಪಷ್ಟವಾಗಿ ಈ ಕೃತಿಯಲ್ಲಿ ವಿವರಿಸಲಾಗಿದೆ. ಈ ಕೃತಿಯನ್ನು ಓದುವ ದೊಡ್ಡ ಆಂದೋಲನ ಆಗಬೇಕಿದೆ” ಎಂದು ಆಶಿಸಿದರು.

ಜಿಲ್ಲಾ ದಲಿತ ಹಕ್ಕುಗಳ ಸಮಿತಿಯ ಮರಡಿ ಜಂಬಯ್ಯ ನಾಯಕ ಮಾತನಾಡಿ, “ಆರ್‌ಎಸ್‌ಎಸ್‌ ಆಳ ಮತ್ತು ಅಗಲ ಕೃತಿಯು ಬಹುಭಾಷೆಗಳಿಗೆ ತರ್ಜುಮೆಯಾಗುತ್ತಿದೆ. ಈ ವಿದ್ಯಮಾನವು ಕೃತಿಯ ಮಹತ್ವವನ್ನು ಹಾಗೂ ಆರ್‌ಎಸ್‌ಎಸ್‌ ಕುರಿತು ತಿಳಿದುಕೊಳ್ಳಬೇಕೆಂಬ ಜನರ ತವಕವನ್ನು ತೋರಿಸುತ್ತದೆ. ದೇಶ ಆತಂಕ ಸ್ಥಿತಿಯಲ್ಲಿರುವ ಸಂದರ್ಭದಲ್ಲಿ ಈ ಕೃತಿ ನಮಗೆ ಮಾರ್ಗದರ್ಶನ ತೋರಿದೆ” ಎಂದು ವಿವರಿಸಿದರು.

ವಿಜಯನಗರ ಬಂಡಾಯ ಸಾಹಿತ್ಯ ಸಂಚಾಲಕರಾದ ಪಿ.ಆರ್. ವೆಂಕಟೇಶ ಮಾತನಾಡಿ, “ಪ್ರಗತಿಪರರು, ಸಮಾನತೆ ಬಯಸುವವರು ವಿದೇಶದ ವಿಚಾರಗಳನ್ನು ತುರುಕುತ್ತಿದ್ದಾರೆಂದು ಆರ್‌ಎಸ್‌ಎಸ್‌ ಹೇಳುತ್ತಿದೆ. ಆದರೆ ಗೋಲ್ವಲ್ಕರ್‌ ಅವರ ಬಂಚ್‌ ಆಫ್ ಥಾಟ್ಸ್‌ ಯಾವ ದೇಶದ್ದು ಎಂದು ದೇವನೂರರು ಕೇಳುತ್ತಿದ್ದಾರೆ. ನಾಜಿ ಸಿದ್ಧಾಂತ ಎಲ್ಲಿಯದ್ದು ಎಂದು ಪ್ರಶ್ನಿಸಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿರಿ: ಆರ್‌ಎಸ್‌ಎಸ್‌ ಅಜೆಂಡಾಗಳನ್ನು ಬಯಲುಗೊಳಿಸುವ ಕನ್ನಡ ಕೃತಿಗಳು

ಬಣ್ಣದ ಮನೆ ಸೋಮಶೇಖರ್ ಮಾತನಾಡಿ, “ದೇವನೂರರ ಆರ್.ಎಸ್.ಎಸ್ ಆಳ ಮತ್ತು ಅಗಲ ಕೃತಿಯಿಂದ ಕೆಲವರ ಎದೆಯಲ್ಲಿ ನಡುಕ ಹುಟ್ಟಿರುವುದು ಸತ್ಯ. ಹೀಗಾಗಿ ಪುಸ್ತಕ ಹಂಚುವ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ಶಾಲಾ ಕಾಲೇಜು ಆವರಣಗಳಲ್ಲಿ ಆಯೋಜಿಸಬೇಕು. ವಿದ್ಯಾರ್ಥಿಗಳೊಂದಿಗೆ ಸಂವಾದ ಏರ್ಪಡಿಸಬೇಕು” ಎಂದು ಆಶಿಸಿದರು.

ಪ್ರಗತಿಪರ ಸಂಘಟನೆಯ ದುರ್ಗಪ್ಪ ಪೂಜಾರಿ, ಆಟೋ ಯುನಿಯನ್ ರಾಮಚಂದ್ರ ಮತ್ತು ಎಮ್.ಆರ್.ಎಮ್ ಮಂಜು, ಸ್ಲಮ್ ಜಾಗೃತಿಯ ವೆಂಕಟೇಶ್‌ ಸೇರಿದಂತೆ ಅನೇಕ ಚಿಂತಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಓದುಕಟ್ಟಿನಲ್ಲಿ ಹಲವಾರು ಕಡೆ ಸಂಸ್ಕೃತ ಪದಗಳಿಗೆ ಕನ್ನಡ ಪದಗಳನ್ನು ಬಳಸಬಹುದಿತ್ತು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...