Homeಕರ್ನಾಟಕವಿಜಯನಗರ: ದೇವದಾಸಿಯಾಗಲು ನಿರಾಕರಿಸಿ ಪೊಲೀಸರಿಗೆ ದೂರು ನೀಡಿದ ದಿಟ್ಟ ಯುವತಿ!

ವಿಜಯನಗರ: ದೇವದಾಸಿಯಾಗಲು ನಿರಾಕರಿಸಿ ಪೊಲೀಸರಿಗೆ ದೂರು ನೀಡಿದ ದಿಟ್ಟ ಯುವತಿ!

ನಿಷೇಧದ ನಡುವೆಯೂ, ದೇವದಾಸಿ ಪದ್ಧತಿ ಉತ್ತರ ಕರ್ನಾಟಕದ ಹಲವಾರು ಭಾಗಗಳಲ್ಲಿ ಇನ್ನೂ ಜಾರಿಯಲ್ಲಿದೆ

- Advertisement -
- Advertisement -

ಕಾನೂನು ಪ್ರಕಾರ ನಿಷೇಧವಾಗಿದ್ದರೂ ದೇವದಾಸಿ ಪದ್ಧತಿ ಉತ್ತರ ಕರ್ನಾಟಕದ ಹಲವಾರು ಭಾಗಗಳಲ್ಲಿ ಇನ್ನೂ ಜಾರಿಯಲ್ಲಿದೆ. ಈ ಅಮಾನವೀಯ ಪದ್ದತಿಗೆ ಬಲಿಯಾಗಬೇಕಿದ್ದ 19 ವರ್ಷದ ಯುವತಿಯೊಬ್ಬಳು ಪೊಲೀಸರಿಗೆ ದೂರು ನೀಡುವ ಮೂಲಕ ದಿಟ್ಟತನ ಮೆರೆದು ಅದರಿಂದ ಪಾರಾಗಿದ್ದಾಳೆ.

ನಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುವ ದೇವದಾಸಿ ನಿರ್ಮೂಲಾನ ಕೇಂದ್ರದ ಜಿಲ್ಲಾಡಳಿತ ಮತ್ತು ಅಧಿಕಾರಿಗಳು ಆ ಬಾಲಕಿಯನ್ನು ರಕ್ಷಿಸಿ ಪೋಷಕರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸಂತ್ರಸ್ತ ಯುವತಿ ನೆರೆಮನೆಯ ಹುಡುಗನನ್ನು ಪ್ರೀತಿಸುತ್ತಿದ್ದರು. ಆದರೆ ಮದುವೆಗೆ ಯುವತಿಯ ಕುಟುಂಬದಿಂದ ತೀವ್ರ ವಿರೋಧವಿತ್ತು. ಏಕೆಂದರೆ ಇಬ್ಬರು ಹೆಣ್ಣು ಮಕ್ಕಳಿದ್ದ ಕುಟುಂಬದ ಆಸ್ತಿ ಸಂತ್ರಸ್ತ ಯುವತಿ ಮತ್ತು ಆಕೆಯ ಪತಿಯ ಪಾಲಾಗುತ್ತದೆ ಎಂದು ಆತಂಕ ಕುಟುಂಬದ್ದಾಗಿತ್ತು. ಹೀಗಾಗಿ, ಆಸ್ತಿ ಯುವತಿಯ ಪಾಲಾಗುತ್ತದೆ ಎಂದು ಆಕೆಯ ಪೋಷಕರು ದೇವದಾಸಿ ಪದ್ದತಿಗೆ ತಳ್ಳಲು ಆಚರಣೆಗಳನ್ನು ಮಾಡುತ್ತಿದ್ದಾರೆಂದು ತಿಳಿದ ನಂತರ ಯುವತಿ ಪೊಲೀಸರಿಗೆ ದೂರು ನಿಡಿ ಸಹಾಯಕ್ಕಾಗಿ ಮನವಿ ಮಾಡಿದ್ದಳು.

“ಹುಡುಗಿಯ ತಾಯಿ ಮಾಜಿ ದೇವದಾಸಿಯಾಗಿದ್ದು, ತನ್ನ ಮಗಳನ್ನು ಅದೇ ಕೆಲಸಕ್ಕೆ ತಳ್ಳಲು ಮುಂದಾಗಿದ್ದರು. ಇದನ್ನು ದೇವತೆಗಳ ಹೆಸರಿನಲ್ಲಿ ಮಾಡಲಾದರೂ, ಯುವತಿಯರು ಉತ್ತಮ ಭವಿಷ್ಯವಿಲ್ಲದೆ ಭವಿಷ್ಯವಿಲ್ಲದೆ ಲೈಂಗಿಕ ಗುಲಾಮರಾಗಿ ನರಳಬೇಕಾಗುತ್ತದೆ. ಸಂತ್ರಸ್ತ ಯುವತಿ ಕಳೆದ ವಾರ ಪೊಲೀಸರನ್ನು ಸಂಪರ್ಕಿಸಿದ ನಂತರ, ನಾವು ದಾಳಿ ಮಾಡಿದೆವು. ದಾಳಿ ನಡೆದ ಮೂರು ದಿನಗಳ ನಂತರ ಎಚ್ಚೆತ್ತುಕೊಂಡ ಆಕೆಯ ಪೋಷಕರು ಮಗಳು ಇಷ್ಟಪಟ್ಟವರೊಡನೆ ಮದುವೆಯಾಗಲು ಒಪ್ಪಿದ್ದಾರೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂತ್ರಸ್ತೆ ಸ್ವತಃ ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ ಪ್ರಕರಣವನ್ನು ಸುಲಭವಾಗಿ ಬಗೆಹರಿಸಲಾಯಿತು. ಯುವತಿಯ ಮದುವೆಗೂ ಮುನ್ನ ಆಕೆಯನ್ನು ಕೆಲವು ದಿನಗಳು ಸರ್ಕಾರಿ ಸೌಲಭ್ಯದಲ್ಲಿ ಮತ್ತು ಕೆಲ ದಿನಗಳು ಸ್ನೇಹಿತೆಯ ಮನೆಯಲ್ಲಿ ಇರಿಸಲಾಗಿದೆ. ಆಕೆಯ ಪೋಷಕರು ತಮ್ಮ ಮನಸ್ಸನ್ನು ಬದಲಾಯಿಸುವುದಿಲ್ಲ ಎಂದು ಪೊಲೀಸರಿಗೆ ಮುಚ್ಚಳಿಕೆ ಪತ್ರ ಬರೆದು ಕೊಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಳ್ಳಾರಿ ಮತ್ತು ಹೊಸದಾಗಿ ರೂಪುಗೊಂಡ ವಿಜಯನಗರ ಜಿಲ್ಲೆಗಳಲ್ಲಿ ದೇವದಾಸಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಲು ಆಡಳಿತ ಮಂಡಳಿಗಳು ತೀವ್ರ ಪ್ರಯತ್ನ ಮಾಡುತ್ತಿವೆ. ಈ ಎರಡೂ ಜಿಲ್ಲೆಗಳಲ್ಲಿ 10,000 ನೋಂದಾಯಿತ ದೇವದಾಸಿಗಳು ಇದ್ದು, ಪ್ರಸ್ತುತ ಸರ್ಕಾರದ ಪುನರ್ವಸತಿ ಯೋಜನೆಗೆ ಒಳಗಾಗಿದ್ದಾರೆ. ರಾಜ್ಯ ಸರ್ಕಾರ ಅವರಿಗೆ ಮಾಸಿಕ 1,500 ರೂ. ನೀಡುತ್ತಿದೆ. ಆದರೆ ಇನ್ನು ಮುಂದೆ ಒಬ್ಬರೂ ಸಹ ದೇವದಾಸಿಗಳಾಗದಂತೆ ತಡೆಯುವ ಸವಾಲು ನಮ್ಮ ಮುಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಇದನ್ನೂ ಓದಿ: ಪಂಜಾಬ್ ಚುನಾವಣೆ: ನನ್ನ ಕುಟುಂಬದವರ ಮತವೇ ನನಗೆ ಬಿದ್ದಿಲ್ಲ ಎಂದ ಬಿಜೆಪಿ ಅಭ್ಯರ್ಥಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...