Homeಕರ್ನಾಟಕವಿಜಯನಗರ: ದೇವದಾಸಿಯಾಗಲು ನಿರಾಕರಿಸಿ ಪೊಲೀಸರಿಗೆ ದೂರು ನೀಡಿದ ದಿಟ್ಟ ಯುವತಿ!

ವಿಜಯನಗರ: ದೇವದಾಸಿಯಾಗಲು ನಿರಾಕರಿಸಿ ಪೊಲೀಸರಿಗೆ ದೂರು ನೀಡಿದ ದಿಟ್ಟ ಯುವತಿ!

ನಿಷೇಧದ ನಡುವೆಯೂ, ದೇವದಾಸಿ ಪದ್ಧತಿ ಉತ್ತರ ಕರ್ನಾಟಕದ ಹಲವಾರು ಭಾಗಗಳಲ್ಲಿ ಇನ್ನೂ ಜಾರಿಯಲ್ಲಿದೆ

- Advertisement -
- Advertisement -

ಕಾನೂನು ಪ್ರಕಾರ ನಿಷೇಧವಾಗಿದ್ದರೂ ದೇವದಾಸಿ ಪದ್ಧತಿ ಉತ್ತರ ಕರ್ನಾಟಕದ ಹಲವಾರು ಭಾಗಗಳಲ್ಲಿ ಇನ್ನೂ ಜಾರಿಯಲ್ಲಿದೆ. ಈ ಅಮಾನವೀಯ ಪದ್ದತಿಗೆ ಬಲಿಯಾಗಬೇಕಿದ್ದ 19 ವರ್ಷದ ಯುವತಿಯೊಬ್ಬಳು ಪೊಲೀಸರಿಗೆ ದೂರು ನೀಡುವ ಮೂಲಕ ದಿಟ್ಟತನ ಮೆರೆದು ಅದರಿಂದ ಪಾರಾಗಿದ್ದಾಳೆ.

ನಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುವ ದೇವದಾಸಿ ನಿರ್ಮೂಲಾನ ಕೇಂದ್ರದ ಜಿಲ್ಲಾಡಳಿತ ಮತ್ತು ಅಧಿಕಾರಿಗಳು ಆ ಬಾಲಕಿಯನ್ನು ರಕ್ಷಿಸಿ ಪೋಷಕರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸಂತ್ರಸ್ತ ಯುವತಿ ನೆರೆಮನೆಯ ಹುಡುಗನನ್ನು ಪ್ರೀತಿಸುತ್ತಿದ್ದರು. ಆದರೆ ಮದುವೆಗೆ ಯುವತಿಯ ಕುಟುಂಬದಿಂದ ತೀವ್ರ ವಿರೋಧವಿತ್ತು. ಏಕೆಂದರೆ ಇಬ್ಬರು ಹೆಣ್ಣು ಮಕ್ಕಳಿದ್ದ ಕುಟುಂಬದ ಆಸ್ತಿ ಸಂತ್ರಸ್ತ ಯುವತಿ ಮತ್ತು ಆಕೆಯ ಪತಿಯ ಪಾಲಾಗುತ್ತದೆ ಎಂದು ಆತಂಕ ಕುಟುಂಬದ್ದಾಗಿತ್ತು. ಹೀಗಾಗಿ, ಆಸ್ತಿ ಯುವತಿಯ ಪಾಲಾಗುತ್ತದೆ ಎಂದು ಆಕೆಯ ಪೋಷಕರು ದೇವದಾಸಿ ಪದ್ದತಿಗೆ ತಳ್ಳಲು ಆಚರಣೆಗಳನ್ನು ಮಾಡುತ್ತಿದ್ದಾರೆಂದು ತಿಳಿದ ನಂತರ ಯುವತಿ ಪೊಲೀಸರಿಗೆ ದೂರು ನಿಡಿ ಸಹಾಯಕ್ಕಾಗಿ ಮನವಿ ಮಾಡಿದ್ದಳು.

“ಹುಡುಗಿಯ ತಾಯಿ ಮಾಜಿ ದೇವದಾಸಿಯಾಗಿದ್ದು, ತನ್ನ ಮಗಳನ್ನು ಅದೇ ಕೆಲಸಕ್ಕೆ ತಳ್ಳಲು ಮುಂದಾಗಿದ್ದರು. ಇದನ್ನು ದೇವತೆಗಳ ಹೆಸರಿನಲ್ಲಿ ಮಾಡಲಾದರೂ, ಯುವತಿಯರು ಉತ್ತಮ ಭವಿಷ್ಯವಿಲ್ಲದೆ ಭವಿಷ್ಯವಿಲ್ಲದೆ ಲೈಂಗಿಕ ಗುಲಾಮರಾಗಿ ನರಳಬೇಕಾಗುತ್ತದೆ. ಸಂತ್ರಸ್ತ ಯುವತಿ ಕಳೆದ ವಾರ ಪೊಲೀಸರನ್ನು ಸಂಪರ್ಕಿಸಿದ ನಂತರ, ನಾವು ದಾಳಿ ಮಾಡಿದೆವು. ದಾಳಿ ನಡೆದ ಮೂರು ದಿನಗಳ ನಂತರ ಎಚ್ಚೆತ್ತುಕೊಂಡ ಆಕೆಯ ಪೋಷಕರು ಮಗಳು ಇಷ್ಟಪಟ್ಟವರೊಡನೆ ಮದುವೆಯಾಗಲು ಒಪ್ಪಿದ್ದಾರೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂತ್ರಸ್ತೆ ಸ್ವತಃ ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ ಪ್ರಕರಣವನ್ನು ಸುಲಭವಾಗಿ ಬಗೆಹರಿಸಲಾಯಿತು. ಯುವತಿಯ ಮದುವೆಗೂ ಮುನ್ನ ಆಕೆಯನ್ನು ಕೆಲವು ದಿನಗಳು ಸರ್ಕಾರಿ ಸೌಲಭ್ಯದಲ್ಲಿ ಮತ್ತು ಕೆಲ ದಿನಗಳು ಸ್ನೇಹಿತೆಯ ಮನೆಯಲ್ಲಿ ಇರಿಸಲಾಗಿದೆ. ಆಕೆಯ ಪೋಷಕರು ತಮ್ಮ ಮನಸ್ಸನ್ನು ಬದಲಾಯಿಸುವುದಿಲ್ಲ ಎಂದು ಪೊಲೀಸರಿಗೆ ಮುಚ್ಚಳಿಕೆ ಪತ್ರ ಬರೆದು ಕೊಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಳ್ಳಾರಿ ಮತ್ತು ಹೊಸದಾಗಿ ರೂಪುಗೊಂಡ ವಿಜಯನಗರ ಜಿಲ್ಲೆಗಳಲ್ಲಿ ದೇವದಾಸಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಲು ಆಡಳಿತ ಮಂಡಳಿಗಳು ತೀವ್ರ ಪ್ರಯತ್ನ ಮಾಡುತ್ತಿವೆ. ಈ ಎರಡೂ ಜಿಲ್ಲೆಗಳಲ್ಲಿ 10,000 ನೋಂದಾಯಿತ ದೇವದಾಸಿಗಳು ಇದ್ದು, ಪ್ರಸ್ತುತ ಸರ್ಕಾರದ ಪುನರ್ವಸತಿ ಯೋಜನೆಗೆ ಒಳಗಾಗಿದ್ದಾರೆ. ರಾಜ್ಯ ಸರ್ಕಾರ ಅವರಿಗೆ ಮಾಸಿಕ 1,500 ರೂ. ನೀಡುತ್ತಿದೆ. ಆದರೆ ಇನ್ನು ಮುಂದೆ ಒಬ್ಬರೂ ಸಹ ದೇವದಾಸಿಗಳಾಗದಂತೆ ತಡೆಯುವ ಸವಾಲು ನಮ್ಮ ಮುಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಇದನ್ನೂ ಓದಿ: ಪಂಜಾಬ್ ಚುನಾವಣೆ: ನನ್ನ ಕುಟುಂಬದವರ ಮತವೇ ನನಗೆ ಬಿದ್ದಿಲ್ಲ ಎಂದ ಬಿಜೆಪಿ ಅಭ್ಯರ್ಥಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...