Homeಕರ್ನಾಟಕವಿಜಯಪುರ ಜಿಪಂ ಲೂಟಿಗೆ ನಿಂತ ಭ್ರಷ್ಟ ಲಮಾಣಿ ಸಹೋದರರು...!

ವಿಜಯಪುರ ಜಿಪಂ ಲೂಟಿಗೆ ನಿಂತ ಭ್ರಷ್ಟ ಲಮಾಣಿ ಸಹೋದರರು…!

- Advertisement -
- Advertisement -

ಸರ್ಕಾರಿ ನೌಕರನಾದ ನಾತು ಶಂಕರ ಲಮಾಣಿ ಹಾಗೂ ಅರಕೇರಿ ಜಿಲ್ಲಾ ಪಂಚಾಯಿತಿ ಸದಸ್ಯನಾದ ರಾಜಶೇಖರ ಶಂಕರ ಲಮಾಣಿ (ಪವಾರ) ಈ ಸಹೋದರ ಕುಳಗಳು, ಬಡವರಿಗೆ ದೊರಕಬೇಕಿರುವ ಜಿಲ್ಲಾ ಪಂಚಾಯಿತಿ ಅಡಿಯ ಎಲ್ಲ ಯೋಜನೆಗಳನ್ನು ತಾವುಗಳೇ ಬೇನಾಮಿಯಾಗಿ ಪಡೆದುಕೊಂಡು ಸರ್ಕಾರಿ ಬೊಕ್ಕಸಕ್ಕೆ ಕನ್ನ ಹಾಕಿದ್ದಾರೆ.

ಸರ್ಕಾರಿ ಯೋಜನೆ, ಬೇನಾಮಿ ಖಜಾನೆ:
ಅಸಲಿಗೆ ಈ ಸಹೋದರರಿಗೆ ಸರ್ಕಾರಿ ಯೋಜನೆ ಪಡೆದುಕೊಳ್ಳುವ ಯಾವ ಅರ್ಹತೆಯೂ ಇಲ್ಲ. ಆಯಕಟ್ಟಿನ ಸರ್ಕಾರಿ ನೌಕರನಾದ ನಾತು ಶಂಕರ ಲಮಾಣಿ ಸದ್ಯ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ನೀರಾವರಿ ನಿಗಮದ ಇಲಾಖೆಗೆ ವರ್ಗಗೊಂಡಿದ್ದಾನೆ. ಈತ ಈ ಹಿಂದೆ ಪಂಚಾಯಿತಿ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರನಾಗಿ ಸೇವೆ ಸಲ್ಲಿಸುತ್ತಿದ್ದ ವೇಳೆ, ವಿಜಯಪುರ ಜಿಲ್ಲೆಯ ಜಾಲಗೇರಿಗೆ ಹೊಂದಿಕೊಂಡಂತೆ ಸರ್ವೇ ನಂ.391/1 ಹತ್ತಿರದ ಹಳ್ಳಕ್ಕೆ ಎಸ್‍ಸಿಪಿ, ಟಿಎಸ್‍ಪಿ ಯೋಜನೆ ಅಡಿ 25 ಲಕ್ಷ ರೂ.ಗಳ ಮೊತ್ತಗಳಲ್ಲಿ ತೆರೆದ ಬಾವಿಯನ್ನು ಮಂಜೂರಾತಿ ಮಾಡಿಸಿಕೊಂಡಿದ್ದು, ಲೋಗಾಂವಿ ಸರಹದ್ದಿನ ಸರ್ವೇ ನಂ.31/1 ರಲ್ಲಿ ಬಾವಿ ತೋಡುತ್ತಿದ್ದಾನೆ. ಬಾವಿ ತೋಡಲು ಮಂಜೂರು ಮಾಡಿಸಿಕೊಂಡ ಜಾಗವೊಂದಾದರೆ, ಇನ್ನು ಬಾವಿ ತೋಡಿರುವ ಜಾಗವೇ ಬೇರೆ. ಆದರೆ ಅಸಲಿಗೆ ಈ ಯೋಜನೆಗೆ ಈತ ಅರ್ಹನಲ್ಲದಿದ್ದರೂ, ತನ್ನ ಅಧಿಕಾರ ಹಾಗೂ ರಾಜಕೀಯ ಬಲವನ್ನು ಬಳಸಿಕೊಂಡು ಬಡವರಿಗೆ ಲಭಿಸಬೇಕಿರುವ ಲಕ್ಷಾಂತರ ರೂ.ಗಳ ಯೋಜನೆಯನ್ನು ತನ್ನ ಹೆಸರಿನಲ್ಲಿ ಮಾಡಿಕೊಂಡು ಸರ್ಕಾರದ ಬೊಕ್ಕಸವನ್ನು ಲೂಟಿ ಮಾಡಿದ್ದಾನೆ.

ಈಗಾಗಲೇ ಇಲ್ಲಿನ ಲೋಗಾಂವಿ ಸರಹದ್ದಿನಲ್ಲಿ ಸರ್ಕಾರದ ಬಾವಿ ಮತ್ತು ಕೊಳವೆ ಬಾವಿಗಳಿದ್ದು, ಇವುಗಳ ಪಕ್ಕದಲ್ಲಿಯೇ ಭ್ರಷ್ಟ ಇಂಜಿನಿಯರ್ ನಾತು ಶಂಕರ ಲಮಾಣಿ (ಪವಾರ) ಬಾವಿ ತೋಡುತ್ತಿದ್ದಾನೆ. ಸರ್ಕಾರದ ಲಕ್ಷಾಂತರ ರೂ.ಗಳ ವೆಚ್ಚದಲ್ಲಿ ಅಕ್ರಮವಾಗಿ ಬಾವಿ ತೋಡುತ್ತಿರುವುದನ್ನು ಕಂಡ ಗ್ರಾಮದ ಜನರು ಈತನ ವಿರುದ್ಧ ಆಕ್ರೋಶಗೊಂಡಿದ್ದಾರೆ. ಈತನ ವಿರುದ್ಧ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತಾರೆ.

ಅಣ್ಣ ಭ್ರಷ್ಟ, ತಮ್ಮ ಪರಮಭ್ರಷ್ಟ:
ನಾತು ಶಂಕರ ಲಮಾಣಿ (ಪವಾರ)ಯ ಖಾಸಾ ತಮ್ಮನಾದ ರಾಜಶೇಖರ ಶಂಕರ ಪವಾರ ಅರಕೇರಿ ಜಿಲ್ಲಾ ಪಂಚಾಯಿತಿ ಮತಕ್ಷೇತ್ರದ ಕಾಂಗ್ರೆಸ್ ಸದಸ್ಯನಾಗಿದ್ದು, ಮತಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡಿರುವುದು ಟಾರ್ಚ್ ಹಾಕಿ ಹುಡುಕಿದರೂ ಸಿಗುವುದಿಲ್ಲ. ತನ್ನ ಅಣ್ಣ ನಾತುನಂತೆಯೇ ಜಾಲಗೇರಿಯ ಸರ್ವೇ ನಂ.394/4 ರಲ್ಲಿ ರಾಜಶೇಖರ ಶಂಕರ ಪವಾರ 25 ಲಕ್ಷ ರೂ.ಗಳ ವೆಚ್ಚದಲ್ಲಿ ಎಸ್‍ಸಿಪಿ, ಟಿಎಸ್‍ಪಿಯಡಿ ತೆರೆದ ಬಾವಿಯನ್ನು ಮಂಜೂರು ಮಾಡಿಕೊಂಡಿದ್ದಾನೆ. ಇದೂ ಕೂಡ ನಿಯಮ ಬಾಹಿರ. ಈ ಕ್ಷೇತ್ರದ ಜಿಪಂ ಸದಸ್ಯನಾಗಿ ಬಡವರಿಗೆ ದೊರಕಿಸಿಕೊಡಬೇಕಾದ ಯೋಜನೆಗಳನ್ನು ವೈಯಕ್ತಿಕವಾಗಿ ತಾನೇ ಬಳಸಿಕೊಂಡಿರುವುದು ಜಿಲ್ಲಾ ಪಂಚಾಯಿತಿ ಆಡಳಿತ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ.
ಈ ಭ್ರಷ್ಟರಿಬ್ಬರಿಗೂ ಮಾಜಿ ಸಚಿವ, ಶಾಸಕ ಎಂ.ಬಿ. ಪಾಟೀಲರ ಅಭಯ ಹಸ್ತ ಇದೆ ಎನ್ನುವ ಗಂಭೀರ ಆರೋಪ ಕೇಳಿ ಬರುತ್ತಿದೆ.

ಅಪರ ಡಿಸಿ ಸೂಚಿಸಿದರು ಕ್ಯಾರೆ ಅನ್ನದ ಸಿಇಒ
ಈ ಕುರಿತು ಸೂಕ್ತ ರೀತಿಯಲ್ಲಿ ತನಿಖೆ ನಡೆಸುವಂತೆ ವಿಜಯಪುರ ಅಪರ ಜಿಲ್ಲಾಧಿಕಾರಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮೇ- 21, 2019 ರಂದು ಸೂಚನೆ ನೀಡಿದ್ದಾರೆ. ಆದರೆ ಅಪರ ಜಿಲ್ಲಾಧಿಕಾರಿ ಸೂಚನೆಗೆ ಜಿ.ಪಂ. ಸಿಇಒ ಕವಡೆ ಕಾಸಿನ ಕಿಮ್ಮತ್ತು ನೀಡಿಲ್ಲ. ಕೂಡಲೇ ಜಿಪಂ ಸಿಇಒ ಕಿಶೋರ ವಿಕಾಸ ಸುರಳಕರ ಎಚ್ಚೆತ್ತುಕೊಂಡು ಈ ಭ್ರಷ್ಟರ ವಿರುದ್ಧದ ತನಿಖೆಗೆ ಮುಂದಾಗಬೇಕೆಂದು ಗ್ರಾಮಸ್ಥರು ಒತ್ತಾಯಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...