Homeಕರ್ನಾಟಕವಿಜಯಪುರ ಜಿಪಂ ಲೂಟಿಗೆ ನಿಂತ ಭ್ರಷ್ಟ ಲಮಾಣಿ ಸಹೋದರರು...!

ವಿಜಯಪುರ ಜಿಪಂ ಲೂಟಿಗೆ ನಿಂತ ಭ್ರಷ್ಟ ಲಮಾಣಿ ಸಹೋದರರು…!

- Advertisement -
- Advertisement -

ಸರ್ಕಾರಿ ನೌಕರನಾದ ನಾತು ಶಂಕರ ಲಮಾಣಿ ಹಾಗೂ ಅರಕೇರಿ ಜಿಲ್ಲಾ ಪಂಚಾಯಿತಿ ಸದಸ್ಯನಾದ ರಾಜಶೇಖರ ಶಂಕರ ಲಮಾಣಿ (ಪವಾರ) ಈ ಸಹೋದರ ಕುಳಗಳು, ಬಡವರಿಗೆ ದೊರಕಬೇಕಿರುವ ಜಿಲ್ಲಾ ಪಂಚಾಯಿತಿ ಅಡಿಯ ಎಲ್ಲ ಯೋಜನೆಗಳನ್ನು ತಾವುಗಳೇ ಬೇನಾಮಿಯಾಗಿ ಪಡೆದುಕೊಂಡು ಸರ್ಕಾರಿ ಬೊಕ್ಕಸಕ್ಕೆ ಕನ್ನ ಹಾಕಿದ್ದಾರೆ.

ಸರ್ಕಾರಿ ಯೋಜನೆ, ಬೇನಾಮಿ ಖಜಾನೆ:
ಅಸಲಿಗೆ ಈ ಸಹೋದರರಿಗೆ ಸರ್ಕಾರಿ ಯೋಜನೆ ಪಡೆದುಕೊಳ್ಳುವ ಯಾವ ಅರ್ಹತೆಯೂ ಇಲ್ಲ. ಆಯಕಟ್ಟಿನ ಸರ್ಕಾರಿ ನೌಕರನಾದ ನಾತು ಶಂಕರ ಲಮಾಣಿ ಸದ್ಯ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ನೀರಾವರಿ ನಿಗಮದ ಇಲಾಖೆಗೆ ವರ್ಗಗೊಂಡಿದ್ದಾನೆ. ಈತ ಈ ಹಿಂದೆ ಪಂಚಾಯಿತಿ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರನಾಗಿ ಸೇವೆ ಸಲ್ಲಿಸುತ್ತಿದ್ದ ವೇಳೆ, ವಿಜಯಪುರ ಜಿಲ್ಲೆಯ ಜಾಲಗೇರಿಗೆ ಹೊಂದಿಕೊಂಡಂತೆ ಸರ್ವೇ ನಂ.391/1 ಹತ್ತಿರದ ಹಳ್ಳಕ್ಕೆ ಎಸ್‍ಸಿಪಿ, ಟಿಎಸ್‍ಪಿ ಯೋಜನೆ ಅಡಿ 25 ಲಕ್ಷ ರೂ.ಗಳ ಮೊತ್ತಗಳಲ್ಲಿ ತೆರೆದ ಬಾವಿಯನ್ನು ಮಂಜೂರಾತಿ ಮಾಡಿಸಿಕೊಂಡಿದ್ದು, ಲೋಗಾಂವಿ ಸರಹದ್ದಿನ ಸರ್ವೇ ನಂ.31/1 ರಲ್ಲಿ ಬಾವಿ ತೋಡುತ್ತಿದ್ದಾನೆ. ಬಾವಿ ತೋಡಲು ಮಂಜೂರು ಮಾಡಿಸಿಕೊಂಡ ಜಾಗವೊಂದಾದರೆ, ಇನ್ನು ಬಾವಿ ತೋಡಿರುವ ಜಾಗವೇ ಬೇರೆ. ಆದರೆ ಅಸಲಿಗೆ ಈ ಯೋಜನೆಗೆ ಈತ ಅರ್ಹನಲ್ಲದಿದ್ದರೂ, ತನ್ನ ಅಧಿಕಾರ ಹಾಗೂ ರಾಜಕೀಯ ಬಲವನ್ನು ಬಳಸಿಕೊಂಡು ಬಡವರಿಗೆ ಲಭಿಸಬೇಕಿರುವ ಲಕ್ಷಾಂತರ ರೂ.ಗಳ ಯೋಜನೆಯನ್ನು ತನ್ನ ಹೆಸರಿನಲ್ಲಿ ಮಾಡಿಕೊಂಡು ಸರ್ಕಾರದ ಬೊಕ್ಕಸವನ್ನು ಲೂಟಿ ಮಾಡಿದ್ದಾನೆ.

ಈಗಾಗಲೇ ಇಲ್ಲಿನ ಲೋಗಾಂವಿ ಸರಹದ್ದಿನಲ್ಲಿ ಸರ್ಕಾರದ ಬಾವಿ ಮತ್ತು ಕೊಳವೆ ಬಾವಿಗಳಿದ್ದು, ಇವುಗಳ ಪಕ್ಕದಲ್ಲಿಯೇ ಭ್ರಷ್ಟ ಇಂಜಿನಿಯರ್ ನಾತು ಶಂಕರ ಲಮಾಣಿ (ಪವಾರ) ಬಾವಿ ತೋಡುತ್ತಿದ್ದಾನೆ. ಸರ್ಕಾರದ ಲಕ್ಷಾಂತರ ರೂ.ಗಳ ವೆಚ್ಚದಲ್ಲಿ ಅಕ್ರಮವಾಗಿ ಬಾವಿ ತೋಡುತ್ತಿರುವುದನ್ನು ಕಂಡ ಗ್ರಾಮದ ಜನರು ಈತನ ವಿರುದ್ಧ ಆಕ್ರೋಶಗೊಂಡಿದ್ದಾರೆ. ಈತನ ವಿರುದ್ಧ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತಾರೆ.

ಅಣ್ಣ ಭ್ರಷ್ಟ, ತಮ್ಮ ಪರಮಭ್ರಷ್ಟ:
ನಾತು ಶಂಕರ ಲಮಾಣಿ (ಪವಾರ)ಯ ಖಾಸಾ ತಮ್ಮನಾದ ರಾಜಶೇಖರ ಶಂಕರ ಪವಾರ ಅರಕೇರಿ ಜಿಲ್ಲಾ ಪಂಚಾಯಿತಿ ಮತಕ್ಷೇತ್ರದ ಕಾಂಗ್ರೆಸ್ ಸದಸ್ಯನಾಗಿದ್ದು, ಮತಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡಿರುವುದು ಟಾರ್ಚ್ ಹಾಕಿ ಹುಡುಕಿದರೂ ಸಿಗುವುದಿಲ್ಲ. ತನ್ನ ಅಣ್ಣ ನಾತುನಂತೆಯೇ ಜಾಲಗೇರಿಯ ಸರ್ವೇ ನಂ.394/4 ರಲ್ಲಿ ರಾಜಶೇಖರ ಶಂಕರ ಪವಾರ 25 ಲಕ್ಷ ರೂ.ಗಳ ವೆಚ್ಚದಲ್ಲಿ ಎಸ್‍ಸಿಪಿ, ಟಿಎಸ್‍ಪಿಯಡಿ ತೆರೆದ ಬಾವಿಯನ್ನು ಮಂಜೂರು ಮಾಡಿಕೊಂಡಿದ್ದಾನೆ. ಇದೂ ಕೂಡ ನಿಯಮ ಬಾಹಿರ. ಈ ಕ್ಷೇತ್ರದ ಜಿಪಂ ಸದಸ್ಯನಾಗಿ ಬಡವರಿಗೆ ದೊರಕಿಸಿಕೊಡಬೇಕಾದ ಯೋಜನೆಗಳನ್ನು ವೈಯಕ್ತಿಕವಾಗಿ ತಾನೇ ಬಳಸಿಕೊಂಡಿರುವುದು ಜಿಲ್ಲಾ ಪಂಚಾಯಿತಿ ಆಡಳಿತ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ.
ಈ ಭ್ರಷ್ಟರಿಬ್ಬರಿಗೂ ಮಾಜಿ ಸಚಿವ, ಶಾಸಕ ಎಂ.ಬಿ. ಪಾಟೀಲರ ಅಭಯ ಹಸ್ತ ಇದೆ ಎನ್ನುವ ಗಂಭೀರ ಆರೋಪ ಕೇಳಿ ಬರುತ್ತಿದೆ.

ಅಪರ ಡಿಸಿ ಸೂಚಿಸಿದರು ಕ್ಯಾರೆ ಅನ್ನದ ಸಿಇಒ
ಈ ಕುರಿತು ಸೂಕ್ತ ರೀತಿಯಲ್ಲಿ ತನಿಖೆ ನಡೆಸುವಂತೆ ವಿಜಯಪುರ ಅಪರ ಜಿಲ್ಲಾಧಿಕಾರಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮೇ- 21, 2019 ರಂದು ಸೂಚನೆ ನೀಡಿದ್ದಾರೆ. ಆದರೆ ಅಪರ ಜಿಲ್ಲಾಧಿಕಾರಿ ಸೂಚನೆಗೆ ಜಿ.ಪಂ. ಸಿಇಒ ಕವಡೆ ಕಾಸಿನ ಕಿಮ್ಮತ್ತು ನೀಡಿಲ್ಲ. ಕೂಡಲೇ ಜಿಪಂ ಸಿಇಒ ಕಿಶೋರ ವಿಕಾಸ ಸುರಳಕರ ಎಚ್ಚೆತ್ತುಕೊಂಡು ಈ ಭ್ರಷ್ಟರ ವಿರುದ್ಧದ ತನಿಖೆಗೆ ಮುಂದಾಗಬೇಕೆಂದು ಗ್ರಾಮಸ್ಥರು ಒತ್ತಾಯಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...