Homeಕರ್ನಾಟಕವಿಜಯಪುರ ಜಿಪಂ ಲೂಟಿಗೆ ನಿಂತ ಭ್ರಷ್ಟ ಲಮಾಣಿ ಸಹೋದರರು...!

ವಿಜಯಪುರ ಜಿಪಂ ಲೂಟಿಗೆ ನಿಂತ ಭ್ರಷ್ಟ ಲಮಾಣಿ ಸಹೋದರರು…!

- Advertisement -
- Advertisement -

ಸರ್ಕಾರಿ ನೌಕರನಾದ ನಾತು ಶಂಕರ ಲಮಾಣಿ ಹಾಗೂ ಅರಕೇರಿ ಜಿಲ್ಲಾ ಪಂಚಾಯಿತಿ ಸದಸ್ಯನಾದ ರಾಜಶೇಖರ ಶಂಕರ ಲಮಾಣಿ (ಪವಾರ) ಈ ಸಹೋದರ ಕುಳಗಳು, ಬಡವರಿಗೆ ದೊರಕಬೇಕಿರುವ ಜಿಲ್ಲಾ ಪಂಚಾಯಿತಿ ಅಡಿಯ ಎಲ್ಲ ಯೋಜನೆಗಳನ್ನು ತಾವುಗಳೇ ಬೇನಾಮಿಯಾಗಿ ಪಡೆದುಕೊಂಡು ಸರ್ಕಾರಿ ಬೊಕ್ಕಸಕ್ಕೆ ಕನ್ನ ಹಾಕಿದ್ದಾರೆ.

ಸರ್ಕಾರಿ ಯೋಜನೆ, ಬೇನಾಮಿ ಖಜಾನೆ:
ಅಸಲಿಗೆ ಈ ಸಹೋದರರಿಗೆ ಸರ್ಕಾರಿ ಯೋಜನೆ ಪಡೆದುಕೊಳ್ಳುವ ಯಾವ ಅರ್ಹತೆಯೂ ಇಲ್ಲ. ಆಯಕಟ್ಟಿನ ಸರ್ಕಾರಿ ನೌಕರನಾದ ನಾತು ಶಂಕರ ಲಮಾಣಿ ಸದ್ಯ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ನೀರಾವರಿ ನಿಗಮದ ಇಲಾಖೆಗೆ ವರ್ಗಗೊಂಡಿದ್ದಾನೆ. ಈತ ಈ ಹಿಂದೆ ಪಂಚಾಯಿತಿ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರನಾಗಿ ಸೇವೆ ಸಲ್ಲಿಸುತ್ತಿದ್ದ ವೇಳೆ, ವಿಜಯಪುರ ಜಿಲ್ಲೆಯ ಜಾಲಗೇರಿಗೆ ಹೊಂದಿಕೊಂಡಂತೆ ಸರ್ವೇ ನಂ.391/1 ಹತ್ತಿರದ ಹಳ್ಳಕ್ಕೆ ಎಸ್‍ಸಿಪಿ, ಟಿಎಸ್‍ಪಿ ಯೋಜನೆ ಅಡಿ 25 ಲಕ್ಷ ರೂ.ಗಳ ಮೊತ್ತಗಳಲ್ಲಿ ತೆರೆದ ಬಾವಿಯನ್ನು ಮಂಜೂರಾತಿ ಮಾಡಿಸಿಕೊಂಡಿದ್ದು, ಲೋಗಾಂವಿ ಸರಹದ್ದಿನ ಸರ್ವೇ ನಂ.31/1 ರಲ್ಲಿ ಬಾವಿ ತೋಡುತ್ತಿದ್ದಾನೆ. ಬಾವಿ ತೋಡಲು ಮಂಜೂರು ಮಾಡಿಸಿಕೊಂಡ ಜಾಗವೊಂದಾದರೆ, ಇನ್ನು ಬಾವಿ ತೋಡಿರುವ ಜಾಗವೇ ಬೇರೆ. ಆದರೆ ಅಸಲಿಗೆ ಈ ಯೋಜನೆಗೆ ಈತ ಅರ್ಹನಲ್ಲದಿದ್ದರೂ, ತನ್ನ ಅಧಿಕಾರ ಹಾಗೂ ರಾಜಕೀಯ ಬಲವನ್ನು ಬಳಸಿಕೊಂಡು ಬಡವರಿಗೆ ಲಭಿಸಬೇಕಿರುವ ಲಕ್ಷಾಂತರ ರೂ.ಗಳ ಯೋಜನೆಯನ್ನು ತನ್ನ ಹೆಸರಿನಲ್ಲಿ ಮಾಡಿಕೊಂಡು ಸರ್ಕಾರದ ಬೊಕ್ಕಸವನ್ನು ಲೂಟಿ ಮಾಡಿದ್ದಾನೆ.

ಈಗಾಗಲೇ ಇಲ್ಲಿನ ಲೋಗಾಂವಿ ಸರಹದ್ದಿನಲ್ಲಿ ಸರ್ಕಾರದ ಬಾವಿ ಮತ್ತು ಕೊಳವೆ ಬಾವಿಗಳಿದ್ದು, ಇವುಗಳ ಪಕ್ಕದಲ್ಲಿಯೇ ಭ್ರಷ್ಟ ಇಂಜಿನಿಯರ್ ನಾತು ಶಂಕರ ಲಮಾಣಿ (ಪವಾರ) ಬಾವಿ ತೋಡುತ್ತಿದ್ದಾನೆ. ಸರ್ಕಾರದ ಲಕ್ಷಾಂತರ ರೂ.ಗಳ ವೆಚ್ಚದಲ್ಲಿ ಅಕ್ರಮವಾಗಿ ಬಾವಿ ತೋಡುತ್ತಿರುವುದನ್ನು ಕಂಡ ಗ್ರಾಮದ ಜನರು ಈತನ ವಿರುದ್ಧ ಆಕ್ರೋಶಗೊಂಡಿದ್ದಾರೆ. ಈತನ ವಿರುದ್ಧ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತಾರೆ.

ಅಣ್ಣ ಭ್ರಷ್ಟ, ತಮ್ಮ ಪರಮಭ್ರಷ್ಟ:
ನಾತು ಶಂಕರ ಲಮಾಣಿ (ಪವಾರ)ಯ ಖಾಸಾ ತಮ್ಮನಾದ ರಾಜಶೇಖರ ಶಂಕರ ಪವಾರ ಅರಕೇರಿ ಜಿಲ್ಲಾ ಪಂಚಾಯಿತಿ ಮತಕ್ಷೇತ್ರದ ಕಾಂಗ್ರೆಸ್ ಸದಸ್ಯನಾಗಿದ್ದು, ಮತಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡಿರುವುದು ಟಾರ್ಚ್ ಹಾಕಿ ಹುಡುಕಿದರೂ ಸಿಗುವುದಿಲ್ಲ. ತನ್ನ ಅಣ್ಣ ನಾತುನಂತೆಯೇ ಜಾಲಗೇರಿಯ ಸರ್ವೇ ನಂ.394/4 ರಲ್ಲಿ ರಾಜಶೇಖರ ಶಂಕರ ಪವಾರ 25 ಲಕ್ಷ ರೂ.ಗಳ ವೆಚ್ಚದಲ್ಲಿ ಎಸ್‍ಸಿಪಿ, ಟಿಎಸ್‍ಪಿಯಡಿ ತೆರೆದ ಬಾವಿಯನ್ನು ಮಂಜೂರು ಮಾಡಿಕೊಂಡಿದ್ದಾನೆ. ಇದೂ ಕೂಡ ನಿಯಮ ಬಾಹಿರ. ಈ ಕ್ಷೇತ್ರದ ಜಿಪಂ ಸದಸ್ಯನಾಗಿ ಬಡವರಿಗೆ ದೊರಕಿಸಿಕೊಡಬೇಕಾದ ಯೋಜನೆಗಳನ್ನು ವೈಯಕ್ತಿಕವಾಗಿ ತಾನೇ ಬಳಸಿಕೊಂಡಿರುವುದು ಜಿಲ್ಲಾ ಪಂಚಾಯಿತಿ ಆಡಳಿತ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ.
ಈ ಭ್ರಷ್ಟರಿಬ್ಬರಿಗೂ ಮಾಜಿ ಸಚಿವ, ಶಾಸಕ ಎಂ.ಬಿ. ಪಾಟೀಲರ ಅಭಯ ಹಸ್ತ ಇದೆ ಎನ್ನುವ ಗಂಭೀರ ಆರೋಪ ಕೇಳಿ ಬರುತ್ತಿದೆ.

ಅಪರ ಡಿಸಿ ಸೂಚಿಸಿದರು ಕ್ಯಾರೆ ಅನ್ನದ ಸಿಇಒ
ಈ ಕುರಿತು ಸೂಕ್ತ ರೀತಿಯಲ್ಲಿ ತನಿಖೆ ನಡೆಸುವಂತೆ ವಿಜಯಪುರ ಅಪರ ಜಿಲ್ಲಾಧಿಕಾರಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮೇ- 21, 2019 ರಂದು ಸೂಚನೆ ನೀಡಿದ್ದಾರೆ. ಆದರೆ ಅಪರ ಜಿಲ್ಲಾಧಿಕಾರಿ ಸೂಚನೆಗೆ ಜಿ.ಪಂ. ಸಿಇಒ ಕವಡೆ ಕಾಸಿನ ಕಿಮ್ಮತ್ತು ನೀಡಿಲ್ಲ. ಕೂಡಲೇ ಜಿಪಂ ಸಿಇಒ ಕಿಶೋರ ವಿಕಾಸ ಸುರಳಕರ ಎಚ್ಚೆತ್ತುಕೊಂಡು ಈ ಭ್ರಷ್ಟರ ವಿರುದ್ಧದ ತನಿಖೆಗೆ ಮುಂದಾಗಬೇಕೆಂದು ಗ್ರಾಮಸ್ಥರು ಒತ್ತಾಯಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...